Homeಮುಖಪುಟತಿರುಚ್ಚಿ: ಮಂಗಳಮುಖಿಗೆ ಪ್ರವೇಶಾತಿ ನೀಡಿ ಲಿಂಗಾಧಾರಿತ ಕಳಂಕ ಬದಿಗೊತ್ತಿದ 'ಶಿವಾನಂದ' ಶಾಲೆ

ತಿರುಚ್ಚಿ: ಮಂಗಳಮುಖಿಗೆ ಪ್ರವೇಶಾತಿ ನೀಡಿ ಲಿಂಗಾಧಾರಿತ ಕಳಂಕ ಬದಿಗೊತ್ತಿದ ‘ಶಿವಾನಂದ’ ಶಾಲೆ

ನಾವು ಹರಿಣಿಗೆ ಮೊದಲ ಪ್ರವೇಶವನ್ನು ನೀಡಿದ್ದೇವೆ. ಆಕೆಯ ಪೋಷಕರು ಅವಳನ್ನು ಮನೆಯಿಂದ ಹೊರಹಾಕಿದ್ದಾರೆ. ನಿರ್ದಿಷ್ಟವಾಗಿ ಇಂತಹ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಕಾರಣಕ್ಕೆ ಈ ಹಾಸ್ಟಲ್‌ ಅನ್ನು ಸ್ಥಾಪಿಸಿದ್ದೇವೆ"

- Advertisement -
- Advertisement -

ಮಂಗಳಮುಖಿ ಅಥವಾ ಲೈಂಗಿಕ ಅಲ್ಪಸಂಖ್ಯಾತರು ಇಂದಿಗೂ ಮುಖ್ಯವಾಹಿನಿಗೆ ಬಂದು ಎಲ್ಲರಂತೆ ಬದುಕಲು ಹೆಣಗಾಡುತ್ತಿದ್ದಾರೆ. ಆದರೆ ನಮ್ಮ ಸಮಾಜ ಇನ್ನೂ ಈ ಪ್ರಕ್ರಿಯೆಗೆ ಮುಕ್ತವಾಗಿಲ್ಲ. ಆದರೆ ತಮಿಳುನಾಡಿನ ತಿರುಚ್ಚಿ ಯಲ್ಲಿ ಆಶಾದಾಯಕ ಬೆಳವಣಿಗೆಯೊಂದು ನಡೆದಿದ್ದು, ಯುವ ಮಂಗಳಮುಖಿಯನ್ನು ಶಾಲೆಯೊಂದರಲ್ಲಿ ದಾಖಲು ಮಾಡಿಕೊಳ್ಳಲಾಗಿದೆ.

ತನ್ನ ದೇಹದಲ್ಲಾದ ಬದಲಾವಣೆಗಳು ಬೆಳಕಿಗೆ ಬಂದಾಗ ಹರಿಹರನ್‌ಗೆ 10 ವರ್ಷ. 5 ನೇ ತರಗತಿಯಲ್ಲಿ ಓದುತ್ತಿದ್ದ ಹುಡುಗನಲ್ಲಿನ ಬದಲಾವಣೆಗಳನ್ನು ಕುಟುಂಬ ಸ್ವೀಕರಿಸಿರಲಿಲ್ಲ. ಹಾಗಾಗಿ ಪೋಷಕರು ತೀವ್ರ ಹಿಂಸೆ ನೀಡುತ್ತಿದ್ದರು. ನಂತರ ಪೊಲೀಸರಿಂದ ರಕ್ಷಿಸಲ್ಪಟ್ಟ ಹರಿಹರನ್‌ ಭವಿಷ್ಯದಲ್ಲಿ ತಾನೂ ಪೊಲೀಸ್ ಆಗಬೇಕು ಎಂದು ನಿರ್ಧರಿಸಿ, ತನ್ನ ನೆರೆಯಲ್ಲಿದ್ದ ಮಂಗಳಮುಖಿಯ ಆಶ್ರಯದಲ್ಲಿ ಬೆಳೆದು ಈಗ 11 ನೇ ತರಗತಿಯ ವ್ಯಾಸಾಂಗಕ್ಕೆಂದು ಶ್ರೀ ಶಿವಾನಂದ ಶಾಲೆಗೆ ದಾಖಲಾಗಿದ್ದಾ’ಳೆ’. ಅಂದಹಾಗೆ ಈಗ ಹರಿಹರನ್ ‘ಹರಿಣಿ’ಯಾಗಿದ್ದಾಳೆ.

ಇದನ್ನೂ ಓದಿ: ‘She Man’: ನೋಯ್ಡಾ ಮೆಟ್ರೋ ಸ್ಟೇಷನ್ ಹೆಸರಿಗೆ ಟ್ರಾನ್ಸ್‌ಜೆಂಡರ್ ಸಮುದಾಯದ ವಿರೋಧ

“ನಾನು ನನ್ನ ತಾಯಿಯ ಸೀರೆ ಧರಿಸುತ್ತಿದ್ದೆ. ಮಸ್ಕರಾ, ಲಿಪ್‌ಸ್ಟಿಕ್ ಹಾಕಿಕೊಳ್ಳುತ್ತಿದ್ದೆ. ನೃತ್ಯವನ್ನು ತುಂಬಾ ಇಷ್ಟಪಡುತ್ತಿದ್ದೆ. ಹೀಗಿರುವಾಗ ನಾನು ನನ್ನನ್ನು ಹೆಚ್ಚಾಗಿ ಇಷ್ಟಪಡುತ್ತಿದ್ದೆ. ಜೊತೆಗೆ ವಾಸ್ತವಿಕವಾಗಿ ಇದು ‘ನಾನು’ ಎಂದು ತಿಳಿದಿದ್ದೆ. ಕ್ರಮೇಣ ನನ್ನ ದೇಹ ಮತ್ತು ಭಾವನೆಗಳು ಬದಲಾಗಲಾರಂಭಿಸಿತು. ಆದರೆ ನನ್ನ ಕುಟುಂಬ ಅದನ್ನು ಗಮನಿಸಲಿಲ್ಲ. ಕಳೆದ ಎರಡು ವರ್ಷಗಳಲ್ಲಿ ನಾನು ಟ್ರಾನ್ಸ್‌ಜೆಂಡರ್ ಎಂದು ಅರಿತುಕೊಂಡೆ. ಆದರೆ ನನ್ನ ಕುಟುಂಬ ಇದನ್ನು ಸ್ವೀಕರಿಸಲಿಲ್ಲ. ನನ್ನ ಹಿರಿಯ ಸಹೋದರ ಮತ್ತು ಇತರ ಕುಟುಂಬ ಸದಸ್ಯರು ನನ್ನನ್ನು ಹಿಂಸಿಸುತ್ತಿದ್ದರು. ನಾನು ಹುಡುಗನಂತೆ ಇರಬೇಕು ಎಂದು ಬಲವಂತ ಮಾಡುತ್ತಿದ್ದರು” ಎಂದು ಹರಿಣಿ ಹೇಳುತ್ತಾಳೆ.

ಮನೆಯಲ್ಲಿ ಹಿಂಸೆ ಹೆಚ್ಚಾದಾಗ, ಹತ್ತಿರದಲ್ಲಿಯೇ ವಾಸಿಸುತ್ತಿದ್ದ ಮತ್ತೊಬ್ಬ ಮಂಗಳಮುಖಿ ಏಂಜಲ್ ಎಂಬುವವರು‌ ಹರಿಣಿಯನ್ನು ತನ್ನ ತೆಕ್ಕೆಗೆ ತೆಗೆದುಕೊಂಡರು. ಹರಿಣಿಯ ಜೀವನವು ತನ್ನ ಜೀವನದಂತೆ ಆಗಬಾರದು ಎಂದು ನಿರ್ಧರಿಸಿ ಆಕೆಗೆ ಶಿಕ್ಷಣ ನೀಡಲು ಮುಂದಾದರು. ಈ ಸಂದರ್ಭದಲ್ಲಿ ಶಿವಾನಂದ ರೆಸಿಡೆನ್ಶಿಯಲ್ ಶಾಲೆಯ ಬಗ್ಗೆ ತಿಳಿದ ಏಂಜೆಲ್ ಹರಿಣಿಯನ್ನು ನಿನ್ನೆ ಶಾಲೆಗೆ ಸೇರಿಸಿದ್ದಾರೆ.

ಇದನ್ನೂ ಓದಿ: ಟ್ರಾನ್ಸ್‌ಜೆಂಡರ್ ಸಮುದಾಯದ ಅರಿವಿನ ಲೋಕ ವಿಸ್ತರಿಸುತ್ತಿರುವ ಉಮಾ

ನಿವೃತ್ತ ಮೇಜರ್ ಜನರಲ್ ಎನ್‌ಆರ್‌ಕೆ ಬಾಬು ಅವರ ಕನಸಿನ ಕೂಸಾಗಿದ್ದ ಈ ಶಾಲೆಯ ಹಾಸ್ಟಲ್‌ನಲ್ಲಿ ಹರಿಣಿಗೆ ಮೊದಲ ಪ್ರವೇಶಾತಿಯನ್ನು ನೀಡಲಾಗಿದೆ. ಇದನ್ನು ಕಳೆದ ವರ್ಷವಷ್ಟೆ ನಿರ್ಮಿಸಲಾಗಿತ್ತು.

“ನಾವು ಹರಿಣಿಗೆ ಮೊದಲ ಪ್ರವೇಶವನ್ನು ನೀಡಿದ್ದೇವೆ. ಆಕೆಯ ಪೋಷಕರು ಅವಳನ್ನು ಮನೆಯಿಂದ ಹೊರಹಾಕಿದ್ದಾರೆ. ನಿರ್ದಿಷ್ಟವಾಗಿ ಇಂತಹ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಕಾರಣಕ್ಕೆ ಈ ಹಾಸ್ಟಲ್‌ ಅನ್ನು ಸ್ಥಾಪಿಸಿದ್ದೇವೆ. ಶೀಘ್ರದಲ್ಲೇ ಹೆಚ್ಚಿನ ಮಕ್ಕಳು ಇಲ್ಲಿಗೆ ಸೇರಬೇಕೆಂದು ಬಯಸುತ್ತೇವೆ” ಎಂದು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಹೇಳಿದ್ದಾರೆ.

ಇದನ್ನೂ ಓದಿ: ಸ್ಥಳೀಯ ಚುನಾವಣೆಯಲ್ಲಿ ಸ್ಪರ್ಧೆ; ಇತರೆ ಅಭ್ಯರ್ಥಿಗಳಿಗೆ ಸವಾಲು ಹಾಕಿದ ಮಂಗಳಮುಖಿಯರು!

ಹರಿಣಿಗೆ ಸರಿಯಾದ ಜೀವನವನ್ನು ರೂಪಿಸಿಕೊಡಲು ಶ್ರಮಪಡುತ್ತಿರುವ ಏಂಜೆಲ್, “ನನಗೆ 9 ನೇ ತರಗತಿಯ ನಂತರ ಓದಲು ಸಾಧ್ಯವಾಗಲಿಲ್ಲ. ನನ್ನ ಕುಟುಂಬ ನನ್ನನ್ನು ನಿರಾಕರಿಸಿತು. ಕೊನೆಗೆ ನಾನು ಭಿಕ್ಷೆ ಬೇಡಿ ಜೀವನ ಸಾಗಿಸಬೇಕಾಯಿತು. ಹಾಗಾಗಿ ಹರಿಣಿಯ ಜೀವನ ನನ್ನಂತಾಗಬಾರದು ಎಂದು ನಿರ್ಧರಿಸಿದೆ. ನಂತರ ಈ ಶಿವಾನಂದ ಬಾಲಾಲಯದ ಬಗ್ಗೆ ತಿಳಿದುಕೊಂಡು ಬಾಬು ಸರ್ ಅವರನ್ನು ಸಂಪರ್ಕಿಸಿದೆ” ಎಂದು ಹೇಳಿದರು.

ಹರಿಣಿಯು ಸಬ್‌ ಇನ್ಸ್‌ಪೆಕ್ಟರ್ ಆಗಬೇಕೆಂದು ಬಯಸಿದ್ದು, ತನಗೆ 18 ವರ್ಷ ತುಂಬಿದ ನಂತರ ಶಸ್ತ್ರ ಚಿಕಿತ್ಸೆಯ ಮೂಲಕ ಲಿಂಗಪರಿವರ್ತನೆ ಮಾಡಿಸಿಕೊಳ್ಳುವುದಾಗಿ ಹೇಳಿದ್ದಾಳೆ.


ಇದನ್ನೂ ಓದಿ: ಕೇರಳ: ಸಾಕ್ಷರತಾ ಮಿಷನ್ ಅಡಿಯಲ್ಲಿ 18 ಮಂಗಳಮುಖಿಯರು ಉನ್ನತ ವ್ಯಾಸಾಂಗಕ್ಕೆ ಆಯ್ಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...