Homeಮುಖಪುಟತಿರುಚ್ಚಿ: ಮಂಗಳಮುಖಿಗೆ ಪ್ರವೇಶಾತಿ ನೀಡಿ ಲಿಂಗಾಧಾರಿತ ಕಳಂಕ ಬದಿಗೊತ್ತಿದ 'ಶಿವಾನಂದ' ಶಾಲೆ

ತಿರುಚ್ಚಿ: ಮಂಗಳಮುಖಿಗೆ ಪ್ರವೇಶಾತಿ ನೀಡಿ ಲಿಂಗಾಧಾರಿತ ಕಳಂಕ ಬದಿಗೊತ್ತಿದ ‘ಶಿವಾನಂದ’ ಶಾಲೆ

ನಾವು ಹರಿಣಿಗೆ ಮೊದಲ ಪ್ರವೇಶವನ್ನು ನೀಡಿದ್ದೇವೆ. ಆಕೆಯ ಪೋಷಕರು ಅವಳನ್ನು ಮನೆಯಿಂದ ಹೊರಹಾಕಿದ್ದಾರೆ. ನಿರ್ದಿಷ್ಟವಾಗಿ ಇಂತಹ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಕಾರಣಕ್ಕೆ ಈ ಹಾಸ್ಟಲ್‌ ಅನ್ನು ಸ್ಥಾಪಿಸಿದ್ದೇವೆ"

- Advertisement -
- Advertisement -

ಮಂಗಳಮುಖಿ ಅಥವಾ ಲೈಂಗಿಕ ಅಲ್ಪಸಂಖ್ಯಾತರು ಇಂದಿಗೂ ಮುಖ್ಯವಾಹಿನಿಗೆ ಬಂದು ಎಲ್ಲರಂತೆ ಬದುಕಲು ಹೆಣಗಾಡುತ್ತಿದ್ದಾರೆ. ಆದರೆ ನಮ್ಮ ಸಮಾಜ ಇನ್ನೂ ಈ ಪ್ರಕ್ರಿಯೆಗೆ ಮುಕ್ತವಾಗಿಲ್ಲ. ಆದರೆ ತಮಿಳುನಾಡಿನ ತಿರುಚ್ಚಿ ಯಲ್ಲಿ ಆಶಾದಾಯಕ ಬೆಳವಣಿಗೆಯೊಂದು ನಡೆದಿದ್ದು, ಯುವ ಮಂಗಳಮುಖಿಯನ್ನು ಶಾಲೆಯೊಂದರಲ್ಲಿ ದಾಖಲು ಮಾಡಿಕೊಳ್ಳಲಾಗಿದೆ.

ತನ್ನ ದೇಹದಲ್ಲಾದ ಬದಲಾವಣೆಗಳು ಬೆಳಕಿಗೆ ಬಂದಾಗ ಹರಿಹರನ್‌ಗೆ 10 ವರ್ಷ. 5 ನೇ ತರಗತಿಯಲ್ಲಿ ಓದುತ್ತಿದ್ದ ಹುಡುಗನಲ್ಲಿನ ಬದಲಾವಣೆಗಳನ್ನು ಕುಟುಂಬ ಸ್ವೀಕರಿಸಿರಲಿಲ್ಲ. ಹಾಗಾಗಿ ಪೋಷಕರು ತೀವ್ರ ಹಿಂಸೆ ನೀಡುತ್ತಿದ್ದರು. ನಂತರ ಪೊಲೀಸರಿಂದ ರಕ್ಷಿಸಲ್ಪಟ್ಟ ಹರಿಹರನ್‌ ಭವಿಷ್ಯದಲ್ಲಿ ತಾನೂ ಪೊಲೀಸ್ ಆಗಬೇಕು ಎಂದು ನಿರ್ಧರಿಸಿ, ತನ್ನ ನೆರೆಯಲ್ಲಿದ್ದ ಮಂಗಳಮುಖಿಯ ಆಶ್ರಯದಲ್ಲಿ ಬೆಳೆದು ಈಗ 11 ನೇ ತರಗತಿಯ ವ್ಯಾಸಾಂಗಕ್ಕೆಂದು ಶ್ರೀ ಶಿವಾನಂದ ಶಾಲೆಗೆ ದಾಖಲಾಗಿದ್ದಾ’ಳೆ’. ಅಂದಹಾಗೆ ಈಗ ಹರಿಹರನ್ ‘ಹರಿಣಿ’ಯಾಗಿದ್ದಾಳೆ.

ಇದನ್ನೂ ಓದಿ: ‘She Man’: ನೋಯ್ಡಾ ಮೆಟ್ರೋ ಸ್ಟೇಷನ್ ಹೆಸರಿಗೆ ಟ್ರಾನ್ಸ್‌ಜೆಂಡರ್ ಸಮುದಾಯದ ವಿರೋಧ

“ನಾನು ನನ್ನ ತಾಯಿಯ ಸೀರೆ ಧರಿಸುತ್ತಿದ್ದೆ. ಮಸ್ಕರಾ, ಲಿಪ್‌ಸ್ಟಿಕ್ ಹಾಕಿಕೊಳ್ಳುತ್ತಿದ್ದೆ. ನೃತ್ಯವನ್ನು ತುಂಬಾ ಇಷ್ಟಪಡುತ್ತಿದ್ದೆ. ಹೀಗಿರುವಾಗ ನಾನು ನನ್ನನ್ನು ಹೆಚ್ಚಾಗಿ ಇಷ್ಟಪಡುತ್ತಿದ್ದೆ. ಜೊತೆಗೆ ವಾಸ್ತವಿಕವಾಗಿ ಇದು ‘ನಾನು’ ಎಂದು ತಿಳಿದಿದ್ದೆ. ಕ್ರಮೇಣ ನನ್ನ ದೇಹ ಮತ್ತು ಭಾವನೆಗಳು ಬದಲಾಗಲಾರಂಭಿಸಿತು. ಆದರೆ ನನ್ನ ಕುಟುಂಬ ಅದನ್ನು ಗಮನಿಸಲಿಲ್ಲ. ಕಳೆದ ಎರಡು ವರ್ಷಗಳಲ್ಲಿ ನಾನು ಟ್ರಾನ್ಸ್‌ಜೆಂಡರ್ ಎಂದು ಅರಿತುಕೊಂಡೆ. ಆದರೆ ನನ್ನ ಕುಟುಂಬ ಇದನ್ನು ಸ್ವೀಕರಿಸಲಿಲ್ಲ. ನನ್ನ ಹಿರಿಯ ಸಹೋದರ ಮತ್ತು ಇತರ ಕುಟುಂಬ ಸದಸ್ಯರು ನನ್ನನ್ನು ಹಿಂಸಿಸುತ್ತಿದ್ದರು. ನಾನು ಹುಡುಗನಂತೆ ಇರಬೇಕು ಎಂದು ಬಲವಂತ ಮಾಡುತ್ತಿದ್ದರು” ಎಂದು ಹರಿಣಿ ಹೇಳುತ್ತಾಳೆ.

ಮನೆಯಲ್ಲಿ ಹಿಂಸೆ ಹೆಚ್ಚಾದಾಗ, ಹತ್ತಿರದಲ್ಲಿಯೇ ವಾಸಿಸುತ್ತಿದ್ದ ಮತ್ತೊಬ್ಬ ಮಂಗಳಮುಖಿ ಏಂಜಲ್ ಎಂಬುವವರು‌ ಹರಿಣಿಯನ್ನು ತನ್ನ ತೆಕ್ಕೆಗೆ ತೆಗೆದುಕೊಂಡರು. ಹರಿಣಿಯ ಜೀವನವು ತನ್ನ ಜೀವನದಂತೆ ಆಗಬಾರದು ಎಂದು ನಿರ್ಧರಿಸಿ ಆಕೆಗೆ ಶಿಕ್ಷಣ ನೀಡಲು ಮುಂದಾದರು. ಈ ಸಂದರ್ಭದಲ್ಲಿ ಶಿವಾನಂದ ರೆಸಿಡೆನ್ಶಿಯಲ್ ಶಾಲೆಯ ಬಗ್ಗೆ ತಿಳಿದ ಏಂಜೆಲ್ ಹರಿಣಿಯನ್ನು ನಿನ್ನೆ ಶಾಲೆಗೆ ಸೇರಿಸಿದ್ದಾರೆ.

ಇದನ್ನೂ ಓದಿ: ಟ್ರಾನ್ಸ್‌ಜೆಂಡರ್ ಸಮುದಾಯದ ಅರಿವಿನ ಲೋಕ ವಿಸ್ತರಿಸುತ್ತಿರುವ ಉಮಾ

ನಿವೃತ್ತ ಮೇಜರ್ ಜನರಲ್ ಎನ್‌ಆರ್‌ಕೆ ಬಾಬು ಅವರ ಕನಸಿನ ಕೂಸಾಗಿದ್ದ ಈ ಶಾಲೆಯ ಹಾಸ್ಟಲ್‌ನಲ್ಲಿ ಹರಿಣಿಗೆ ಮೊದಲ ಪ್ರವೇಶಾತಿಯನ್ನು ನೀಡಲಾಗಿದೆ. ಇದನ್ನು ಕಳೆದ ವರ್ಷವಷ್ಟೆ ನಿರ್ಮಿಸಲಾಗಿತ್ತು.

“ನಾವು ಹರಿಣಿಗೆ ಮೊದಲ ಪ್ರವೇಶವನ್ನು ನೀಡಿದ್ದೇವೆ. ಆಕೆಯ ಪೋಷಕರು ಅವಳನ್ನು ಮನೆಯಿಂದ ಹೊರಹಾಕಿದ್ದಾರೆ. ನಿರ್ದಿಷ್ಟವಾಗಿ ಇಂತಹ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಕಾರಣಕ್ಕೆ ಈ ಹಾಸ್ಟಲ್‌ ಅನ್ನು ಸ್ಥಾಪಿಸಿದ್ದೇವೆ. ಶೀಘ್ರದಲ್ಲೇ ಹೆಚ್ಚಿನ ಮಕ್ಕಳು ಇಲ್ಲಿಗೆ ಸೇರಬೇಕೆಂದು ಬಯಸುತ್ತೇವೆ” ಎಂದು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಹೇಳಿದ್ದಾರೆ.

ಇದನ್ನೂ ಓದಿ: ಸ್ಥಳೀಯ ಚುನಾವಣೆಯಲ್ಲಿ ಸ್ಪರ್ಧೆ; ಇತರೆ ಅಭ್ಯರ್ಥಿಗಳಿಗೆ ಸವಾಲು ಹಾಕಿದ ಮಂಗಳಮುಖಿಯರು!

ಹರಿಣಿಗೆ ಸರಿಯಾದ ಜೀವನವನ್ನು ರೂಪಿಸಿಕೊಡಲು ಶ್ರಮಪಡುತ್ತಿರುವ ಏಂಜೆಲ್, “ನನಗೆ 9 ನೇ ತರಗತಿಯ ನಂತರ ಓದಲು ಸಾಧ್ಯವಾಗಲಿಲ್ಲ. ನನ್ನ ಕುಟುಂಬ ನನ್ನನ್ನು ನಿರಾಕರಿಸಿತು. ಕೊನೆಗೆ ನಾನು ಭಿಕ್ಷೆ ಬೇಡಿ ಜೀವನ ಸಾಗಿಸಬೇಕಾಯಿತು. ಹಾಗಾಗಿ ಹರಿಣಿಯ ಜೀವನ ನನ್ನಂತಾಗಬಾರದು ಎಂದು ನಿರ್ಧರಿಸಿದೆ. ನಂತರ ಈ ಶಿವಾನಂದ ಬಾಲಾಲಯದ ಬಗ್ಗೆ ತಿಳಿದುಕೊಂಡು ಬಾಬು ಸರ್ ಅವರನ್ನು ಸಂಪರ್ಕಿಸಿದೆ” ಎಂದು ಹೇಳಿದರು.

ಹರಿಣಿಯು ಸಬ್‌ ಇನ್ಸ್‌ಪೆಕ್ಟರ್ ಆಗಬೇಕೆಂದು ಬಯಸಿದ್ದು, ತನಗೆ 18 ವರ್ಷ ತುಂಬಿದ ನಂತರ ಶಸ್ತ್ರ ಚಿಕಿತ್ಸೆಯ ಮೂಲಕ ಲಿಂಗಪರಿವರ್ತನೆ ಮಾಡಿಸಿಕೊಳ್ಳುವುದಾಗಿ ಹೇಳಿದ್ದಾಳೆ.


ಇದನ್ನೂ ಓದಿ: ಕೇರಳ: ಸಾಕ್ಷರತಾ ಮಿಷನ್ ಅಡಿಯಲ್ಲಿ 18 ಮಂಗಳಮುಖಿಯರು ಉನ್ನತ ವ್ಯಾಸಾಂಗಕ್ಕೆ ಆಯ್ಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...