Homeಮುಖಪುಟತಿರುಚ್ಚಿ: ಮಂಗಳಮುಖಿಗೆ ಪ್ರವೇಶಾತಿ ನೀಡಿ ಲಿಂಗಾಧಾರಿತ ಕಳಂಕ ಬದಿಗೊತ್ತಿದ 'ಶಿವಾನಂದ' ಶಾಲೆ

ತಿರುಚ್ಚಿ: ಮಂಗಳಮುಖಿಗೆ ಪ್ರವೇಶಾತಿ ನೀಡಿ ಲಿಂಗಾಧಾರಿತ ಕಳಂಕ ಬದಿಗೊತ್ತಿದ ‘ಶಿವಾನಂದ’ ಶಾಲೆ

ನಾವು ಹರಿಣಿಗೆ ಮೊದಲ ಪ್ರವೇಶವನ್ನು ನೀಡಿದ್ದೇವೆ. ಆಕೆಯ ಪೋಷಕರು ಅವಳನ್ನು ಮನೆಯಿಂದ ಹೊರಹಾಕಿದ್ದಾರೆ. ನಿರ್ದಿಷ್ಟವಾಗಿ ಇಂತಹ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಕಾರಣಕ್ಕೆ ಈ ಹಾಸ್ಟಲ್‌ ಅನ್ನು ಸ್ಥಾಪಿಸಿದ್ದೇವೆ"

- Advertisement -
- Advertisement -

ಮಂಗಳಮುಖಿ ಅಥವಾ ಲೈಂಗಿಕ ಅಲ್ಪಸಂಖ್ಯಾತರು ಇಂದಿಗೂ ಮುಖ್ಯವಾಹಿನಿಗೆ ಬಂದು ಎಲ್ಲರಂತೆ ಬದುಕಲು ಹೆಣಗಾಡುತ್ತಿದ್ದಾರೆ. ಆದರೆ ನಮ್ಮ ಸಮಾಜ ಇನ್ನೂ ಈ ಪ್ರಕ್ರಿಯೆಗೆ ಮುಕ್ತವಾಗಿಲ್ಲ. ಆದರೆ ತಮಿಳುನಾಡಿನ ತಿರುಚ್ಚಿ ಯಲ್ಲಿ ಆಶಾದಾಯಕ ಬೆಳವಣಿಗೆಯೊಂದು ನಡೆದಿದ್ದು, ಯುವ ಮಂಗಳಮುಖಿಯನ್ನು ಶಾಲೆಯೊಂದರಲ್ಲಿ ದಾಖಲು ಮಾಡಿಕೊಳ್ಳಲಾಗಿದೆ.

ತನ್ನ ದೇಹದಲ್ಲಾದ ಬದಲಾವಣೆಗಳು ಬೆಳಕಿಗೆ ಬಂದಾಗ ಹರಿಹರನ್‌ಗೆ 10 ವರ್ಷ. 5 ನೇ ತರಗತಿಯಲ್ಲಿ ಓದುತ್ತಿದ್ದ ಹುಡುಗನಲ್ಲಿನ ಬದಲಾವಣೆಗಳನ್ನು ಕುಟುಂಬ ಸ್ವೀಕರಿಸಿರಲಿಲ್ಲ. ಹಾಗಾಗಿ ಪೋಷಕರು ತೀವ್ರ ಹಿಂಸೆ ನೀಡುತ್ತಿದ್ದರು. ನಂತರ ಪೊಲೀಸರಿಂದ ರಕ್ಷಿಸಲ್ಪಟ್ಟ ಹರಿಹರನ್‌ ಭವಿಷ್ಯದಲ್ಲಿ ತಾನೂ ಪೊಲೀಸ್ ಆಗಬೇಕು ಎಂದು ನಿರ್ಧರಿಸಿ, ತನ್ನ ನೆರೆಯಲ್ಲಿದ್ದ ಮಂಗಳಮುಖಿಯ ಆಶ್ರಯದಲ್ಲಿ ಬೆಳೆದು ಈಗ 11 ನೇ ತರಗತಿಯ ವ್ಯಾಸಾಂಗಕ್ಕೆಂದು ಶ್ರೀ ಶಿವಾನಂದ ಶಾಲೆಗೆ ದಾಖಲಾಗಿದ್ದಾ’ಳೆ’. ಅಂದಹಾಗೆ ಈಗ ಹರಿಹರನ್ ‘ಹರಿಣಿ’ಯಾಗಿದ್ದಾಳೆ.

ಇದನ್ನೂ ಓದಿ: ‘She Man’: ನೋಯ್ಡಾ ಮೆಟ್ರೋ ಸ್ಟೇಷನ್ ಹೆಸರಿಗೆ ಟ್ರಾನ್ಸ್‌ಜೆಂಡರ್ ಸಮುದಾಯದ ವಿರೋಧ

“ನಾನು ನನ್ನ ತಾಯಿಯ ಸೀರೆ ಧರಿಸುತ್ತಿದ್ದೆ. ಮಸ್ಕರಾ, ಲಿಪ್‌ಸ್ಟಿಕ್ ಹಾಕಿಕೊಳ್ಳುತ್ತಿದ್ದೆ. ನೃತ್ಯವನ್ನು ತುಂಬಾ ಇಷ್ಟಪಡುತ್ತಿದ್ದೆ. ಹೀಗಿರುವಾಗ ನಾನು ನನ್ನನ್ನು ಹೆಚ್ಚಾಗಿ ಇಷ್ಟಪಡುತ್ತಿದ್ದೆ. ಜೊತೆಗೆ ವಾಸ್ತವಿಕವಾಗಿ ಇದು ‘ನಾನು’ ಎಂದು ತಿಳಿದಿದ್ದೆ. ಕ್ರಮೇಣ ನನ್ನ ದೇಹ ಮತ್ತು ಭಾವನೆಗಳು ಬದಲಾಗಲಾರಂಭಿಸಿತು. ಆದರೆ ನನ್ನ ಕುಟುಂಬ ಅದನ್ನು ಗಮನಿಸಲಿಲ್ಲ. ಕಳೆದ ಎರಡು ವರ್ಷಗಳಲ್ಲಿ ನಾನು ಟ್ರಾನ್ಸ್‌ಜೆಂಡರ್ ಎಂದು ಅರಿತುಕೊಂಡೆ. ಆದರೆ ನನ್ನ ಕುಟುಂಬ ಇದನ್ನು ಸ್ವೀಕರಿಸಲಿಲ್ಲ. ನನ್ನ ಹಿರಿಯ ಸಹೋದರ ಮತ್ತು ಇತರ ಕುಟುಂಬ ಸದಸ್ಯರು ನನ್ನನ್ನು ಹಿಂಸಿಸುತ್ತಿದ್ದರು. ನಾನು ಹುಡುಗನಂತೆ ಇರಬೇಕು ಎಂದು ಬಲವಂತ ಮಾಡುತ್ತಿದ್ದರು” ಎಂದು ಹರಿಣಿ ಹೇಳುತ್ತಾಳೆ.

ಮನೆಯಲ್ಲಿ ಹಿಂಸೆ ಹೆಚ್ಚಾದಾಗ, ಹತ್ತಿರದಲ್ಲಿಯೇ ವಾಸಿಸುತ್ತಿದ್ದ ಮತ್ತೊಬ್ಬ ಮಂಗಳಮುಖಿ ಏಂಜಲ್ ಎಂಬುವವರು‌ ಹರಿಣಿಯನ್ನು ತನ್ನ ತೆಕ್ಕೆಗೆ ತೆಗೆದುಕೊಂಡರು. ಹರಿಣಿಯ ಜೀವನವು ತನ್ನ ಜೀವನದಂತೆ ಆಗಬಾರದು ಎಂದು ನಿರ್ಧರಿಸಿ ಆಕೆಗೆ ಶಿಕ್ಷಣ ನೀಡಲು ಮುಂದಾದರು. ಈ ಸಂದರ್ಭದಲ್ಲಿ ಶಿವಾನಂದ ರೆಸಿಡೆನ್ಶಿಯಲ್ ಶಾಲೆಯ ಬಗ್ಗೆ ತಿಳಿದ ಏಂಜೆಲ್ ಹರಿಣಿಯನ್ನು ನಿನ್ನೆ ಶಾಲೆಗೆ ಸೇರಿಸಿದ್ದಾರೆ.

ಇದನ್ನೂ ಓದಿ: ಟ್ರಾನ್ಸ್‌ಜೆಂಡರ್ ಸಮುದಾಯದ ಅರಿವಿನ ಲೋಕ ವಿಸ್ತರಿಸುತ್ತಿರುವ ಉಮಾ

ನಿವೃತ್ತ ಮೇಜರ್ ಜನರಲ್ ಎನ್‌ಆರ್‌ಕೆ ಬಾಬು ಅವರ ಕನಸಿನ ಕೂಸಾಗಿದ್ದ ಈ ಶಾಲೆಯ ಹಾಸ್ಟಲ್‌ನಲ್ಲಿ ಹರಿಣಿಗೆ ಮೊದಲ ಪ್ರವೇಶಾತಿಯನ್ನು ನೀಡಲಾಗಿದೆ. ಇದನ್ನು ಕಳೆದ ವರ್ಷವಷ್ಟೆ ನಿರ್ಮಿಸಲಾಗಿತ್ತು.

“ನಾವು ಹರಿಣಿಗೆ ಮೊದಲ ಪ್ರವೇಶವನ್ನು ನೀಡಿದ್ದೇವೆ. ಆಕೆಯ ಪೋಷಕರು ಅವಳನ್ನು ಮನೆಯಿಂದ ಹೊರಹಾಕಿದ್ದಾರೆ. ನಿರ್ದಿಷ್ಟವಾಗಿ ಇಂತಹ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಕಾರಣಕ್ಕೆ ಈ ಹಾಸ್ಟಲ್‌ ಅನ್ನು ಸ್ಥಾಪಿಸಿದ್ದೇವೆ. ಶೀಘ್ರದಲ್ಲೇ ಹೆಚ್ಚಿನ ಮಕ್ಕಳು ಇಲ್ಲಿಗೆ ಸೇರಬೇಕೆಂದು ಬಯಸುತ್ತೇವೆ” ಎಂದು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಹೇಳಿದ್ದಾರೆ.

ಇದನ್ನೂ ಓದಿ: ಸ್ಥಳೀಯ ಚುನಾವಣೆಯಲ್ಲಿ ಸ್ಪರ್ಧೆ; ಇತರೆ ಅಭ್ಯರ್ಥಿಗಳಿಗೆ ಸವಾಲು ಹಾಕಿದ ಮಂಗಳಮುಖಿಯರು!

ಹರಿಣಿಗೆ ಸರಿಯಾದ ಜೀವನವನ್ನು ರೂಪಿಸಿಕೊಡಲು ಶ್ರಮಪಡುತ್ತಿರುವ ಏಂಜೆಲ್, “ನನಗೆ 9 ನೇ ತರಗತಿಯ ನಂತರ ಓದಲು ಸಾಧ್ಯವಾಗಲಿಲ್ಲ. ನನ್ನ ಕುಟುಂಬ ನನ್ನನ್ನು ನಿರಾಕರಿಸಿತು. ಕೊನೆಗೆ ನಾನು ಭಿಕ್ಷೆ ಬೇಡಿ ಜೀವನ ಸಾಗಿಸಬೇಕಾಯಿತು. ಹಾಗಾಗಿ ಹರಿಣಿಯ ಜೀವನ ನನ್ನಂತಾಗಬಾರದು ಎಂದು ನಿರ್ಧರಿಸಿದೆ. ನಂತರ ಈ ಶಿವಾನಂದ ಬಾಲಾಲಯದ ಬಗ್ಗೆ ತಿಳಿದುಕೊಂಡು ಬಾಬು ಸರ್ ಅವರನ್ನು ಸಂಪರ್ಕಿಸಿದೆ” ಎಂದು ಹೇಳಿದರು.

ಹರಿಣಿಯು ಸಬ್‌ ಇನ್ಸ್‌ಪೆಕ್ಟರ್ ಆಗಬೇಕೆಂದು ಬಯಸಿದ್ದು, ತನಗೆ 18 ವರ್ಷ ತುಂಬಿದ ನಂತರ ಶಸ್ತ್ರ ಚಿಕಿತ್ಸೆಯ ಮೂಲಕ ಲಿಂಗಪರಿವರ್ತನೆ ಮಾಡಿಸಿಕೊಳ್ಳುವುದಾಗಿ ಹೇಳಿದ್ದಾಳೆ.


ಇದನ್ನೂ ಓದಿ: ಕೇರಳ: ಸಾಕ್ಷರತಾ ಮಿಷನ್ ಅಡಿಯಲ್ಲಿ 18 ಮಂಗಳಮುಖಿಯರು ಉನ್ನತ ವ್ಯಾಸಾಂಗಕ್ಕೆ ಆಯ್ಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...