Homeಮುಖಪುಟತಿರುಚ್ಚಿ: ಮಂಗಳಮುಖಿಗೆ ಪ್ರವೇಶಾತಿ ನೀಡಿ ಲಿಂಗಾಧಾರಿತ ಕಳಂಕ ಬದಿಗೊತ್ತಿದ 'ಶಿವಾನಂದ' ಶಾಲೆ

ತಿರುಚ್ಚಿ: ಮಂಗಳಮುಖಿಗೆ ಪ್ರವೇಶಾತಿ ನೀಡಿ ಲಿಂಗಾಧಾರಿತ ಕಳಂಕ ಬದಿಗೊತ್ತಿದ ‘ಶಿವಾನಂದ’ ಶಾಲೆ

ನಾವು ಹರಿಣಿಗೆ ಮೊದಲ ಪ್ರವೇಶವನ್ನು ನೀಡಿದ್ದೇವೆ. ಆಕೆಯ ಪೋಷಕರು ಅವಳನ್ನು ಮನೆಯಿಂದ ಹೊರಹಾಕಿದ್ದಾರೆ. ನಿರ್ದಿಷ್ಟವಾಗಿ ಇಂತಹ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಕಾರಣಕ್ಕೆ ಈ ಹಾಸ್ಟಲ್‌ ಅನ್ನು ಸ್ಥಾಪಿಸಿದ್ದೇವೆ"

- Advertisement -
- Advertisement -

ಮಂಗಳಮುಖಿ ಅಥವಾ ಲೈಂಗಿಕ ಅಲ್ಪಸಂಖ್ಯಾತರು ಇಂದಿಗೂ ಮುಖ್ಯವಾಹಿನಿಗೆ ಬಂದು ಎಲ್ಲರಂತೆ ಬದುಕಲು ಹೆಣಗಾಡುತ್ತಿದ್ದಾರೆ. ಆದರೆ ನಮ್ಮ ಸಮಾಜ ಇನ್ನೂ ಈ ಪ್ರಕ್ರಿಯೆಗೆ ಮುಕ್ತವಾಗಿಲ್ಲ. ಆದರೆ ತಮಿಳುನಾಡಿನ ತಿರುಚ್ಚಿ ಯಲ್ಲಿ ಆಶಾದಾಯಕ ಬೆಳವಣಿಗೆಯೊಂದು ನಡೆದಿದ್ದು, ಯುವ ಮಂಗಳಮುಖಿಯನ್ನು ಶಾಲೆಯೊಂದರಲ್ಲಿ ದಾಖಲು ಮಾಡಿಕೊಳ್ಳಲಾಗಿದೆ.

ತನ್ನ ದೇಹದಲ್ಲಾದ ಬದಲಾವಣೆಗಳು ಬೆಳಕಿಗೆ ಬಂದಾಗ ಹರಿಹರನ್‌ಗೆ 10 ವರ್ಷ. 5 ನೇ ತರಗತಿಯಲ್ಲಿ ಓದುತ್ತಿದ್ದ ಹುಡುಗನಲ್ಲಿನ ಬದಲಾವಣೆಗಳನ್ನು ಕುಟುಂಬ ಸ್ವೀಕರಿಸಿರಲಿಲ್ಲ. ಹಾಗಾಗಿ ಪೋಷಕರು ತೀವ್ರ ಹಿಂಸೆ ನೀಡುತ್ತಿದ್ದರು. ನಂತರ ಪೊಲೀಸರಿಂದ ರಕ್ಷಿಸಲ್ಪಟ್ಟ ಹರಿಹರನ್‌ ಭವಿಷ್ಯದಲ್ಲಿ ತಾನೂ ಪೊಲೀಸ್ ಆಗಬೇಕು ಎಂದು ನಿರ್ಧರಿಸಿ, ತನ್ನ ನೆರೆಯಲ್ಲಿದ್ದ ಮಂಗಳಮುಖಿಯ ಆಶ್ರಯದಲ್ಲಿ ಬೆಳೆದು ಈಗ 11 ನೇ ತರಗತಿಯ ವ್ಯಾಸಾಂಗಕ್ಕೆಂದು ಶ್ರೀ ಶಿವಾನಂದ ಶಾಲೆಗೆ ದಾಖಲಾಗಿದ್ದಾ’ಳೆ’. ಅಂದಹಾಗೆ ಈಗ ಹರಿಹರನ್ ‘ಹರಿಣಿ’ಯಾಗಿದ್ದಾಳೆ.

ಇದನ್ನೂ ಓದಿ: ‘She Man’: ನೋಯ್ಡಾ ಮೆಟ್ರೋ ಸ್ಟೇಷನ್ ಹೆಸರಿಗೆ ಟ್ರಾನ್ಸ್‌ಜೆಂಡರ್ ಸಮುದಾಯದ ವಿರೋಧ

“ನಾನು ನನ್ನ ತಾಯಿಯ ಸೀರೆ ಧರಿಸುತ್ತಿದ್ದೆ. ಮಸ್ಕರಾ, ಲಿಪ್‌ಸ್ಟಿಕ್ ಹಾಕಿಕೊಳ್ಳುತ್ತಿದ್ದೆ. ನೃತ್ಯವನ್ನು ತುಂಬಾ ಇಷ್ಟಪಡುತ್ತಿದ್ದೆ. ಹೀಗಿರುವಾಗ ನಾನು ನನ್ನನ್ನು ಹೆಚ್ಚಾಗಿ ಇಷ್ಟಪಡುತ್ತಿದ್ದೆ. ಜೊತೆಗೆ ವಾಸ್ತವಿಕವಾಗಿ ಇದು ‘ನಾನು’ ಎಂದು ತಿಳಿದಿದ್ದೆ. ಕ್ರಮೇಣ ನನ್ನ ದೇಹ ಮತ್ತು ಭಾವನೆಗಳು ಬದಲಾಗಲಾರಂಭಿಸಿತು. ಆದರೆ ನನ್ನ ಕುಟುಂಬ ಅದನ್ನು ಗಮನಿಸಲಿಲ್ಲ. ಕಳೆದ ಎರಡು ವರ್ಷಗಳಲ್ಲಿ ನಾನು ಟ್ರಾನ್ಸ್‌ಜೆಂಡರ್ ಎಂದು ಅರಿತುಕೊಂಡೆ. ಆದರೆ ನನ್ನ ಕುಟುಂಬ ಇದನ್ನು ಸ್ವೀಕರಿಸಲಿಲ್ಲ. ನನ್ನ ಹಿರಿಯ ಸಹೋದರ ಮತ್ತು ಇತರ ಕುಟುಂಬ ಸದಸ್ಯರು ನನ್ನನ್ನು ಹಿಂಸಿಸುತ್ತಿದ್ದರು. ನಾನು ಹುಡುಗನಂತೆ ಇರಬೇಕು ಎಂದು ಬಲವಂತ ಮಾಡುತ್ತಿದ್ದರು” ಎಂದು ಹರಿಣಿ ಹೇಳುತ್ತಾಳೆ.

ಮನೆಯಲ್ಲಿ ಹಿಂಸೆ ಹೆಚ್ಚಾದಾಗ, ಹತ್ತಿರದಲ್ಲಿಯೇ ವಾಸಿಸುತ್ತಿದ್ದ ಮತ್ತೊಬ್ಬ ಮಂಗಳಮುಖಿ ಏಂಜಲ್ ಎಂಬುವವರು‌ ಹರಿಣಿಯನ್ನು ತನ್ನ ತೆಕ್ಕೆಗೆ ತೆಗೆದುಕೊಂಡರು. ಹರಿಣಿಯ ಜೀವನವು ತನ್ನ ಜೀವನದಂತೆ ಆಗಬಾರದು ಎಂದು ನಿರ್ಧರಿಸಿ ಆಕೆಗೆ ಶಿಕ್ಷಣ ನೀಡಲು ಮುಂದಾದರು. ಈ ಸಂದರ್ಭದಲ್ಲಿ ಶಿವಾನಂದ ರೆಸಿಡೆನ್ಶಿಯಲ್ ಶಾಲೆಯ ಬಗ್ಗೆ ತಿಳಿದ ಏಂಜೆಲ್ ಹರಿಣಿಯನ್ನು ನಿನ್ನೆ ಶಾಲೆಗೆ ಸೇರಿಸಿದ್ದಾರೆ.

ಇದನ್ನೂ ಓದಿ: ಟ್ರಾನ್ಸ್‌ಜೆಂಡರ್ ಸಮುದಾಯದ ಅರಿವಿನ ಲೋಕ ವಿಸ್ತರಿಸುತ್ತಿರುವ ಉಮಾ

ನಿವೃತ್ತ ಮೇಜರ್ ಜನರಲ್ ಎನ್‌ಆರ್‌ಕೆ ಬಾಬು ಅವರ ಕನಸಿನ ಕೂಸಾಗಿದ್ದ ಈ ಶಾಲೆಯ ಹಾಸ್ಟಲ್‌ನಲ್ಲಿ ಹರಿಣಿಗೆ ಮೊದಲ ಪ್ರವೇಶಾತಿಯನ್ನು ನೀಡಲಾಗಿದೆ. ಇದನ್ನು ಕಳೆದ ವರ್ಷವಷ್ಟೆ ನಿರ್ಮಿಸಲಾಗಿತ್ತು.

“ನಾವು ಹರಿಣಿಗೆ ಮೊದಲ ಪ್ರವೇಶವನ್ನು ನೀಡಿದ್ದೇವೆ. ಆಕೆಯ ಪೋಷಕರು ಅವಳನ್ನು ಮನೆಯಿಂದ ಹೊರಹಾಕಿದ್ದಾರೆ. ನಿರ್ದಿಷ್ಟವಾಗಿ ಇಂತಹ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಕಾರಣಕ್ಕೆ ಈ ಹಾಸ್ಟಲ್‌ ಅನ್ನು ಸ್ಥಾಪಿಸಿದ್ದೇವೆ. ಶೀಘ್ರದಲ್ಲೇ ಹೆಚ್ಚಿನ ಮಕ್ಕಳು ಇಲ್ಲಿಗೆ ಸೇರಬೇಕೆಂದು ಬಯಸುತ್ತೇವೆ” ಎಂದು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಹೇಳಿದ್ದಾರೆ.

ಇದನ್ನೂ ಓದಿ: ಸ್ಥಳೀಯ ಚುನಾವಣೆಯಲ್ಲಿ ಸ್ಪರ್ಧೆ; ಇತರೆ ಅಭ್ಯರ್ಥಿಗಳಿಗೆ ಸವಾಲು ಹಾಕಿದ ಮಂಗಳಮುಖಿಯರು!

ಹರಿಣಿಗೆ ಸರಿಯಾದ ಜೀವನವನ್ನು ರೂಪಿಸಿಕೊಡಲು ಶ್ರಮಪಡುತ್ತಿರುವ ಏಂಜೆಲ್, “ನನಗೆ 9 ನೇ ತರಗತಿಯ ನಂತರ ಓದಲು ಸಾಧ್ಯವಾಗಲಿಲ್ಲ. ನನ್ನ ಕುಟುಂಬ ನನ್ನನ್ನು ನಿರಾಕರಿಸಿತು. ಕೊನೆಗೆ ನಾನು ಭಿಕ್ಷೆ ಬೇಡಿ ಜೀವನ ಸಾಗಿಸಬೇಕಾಯಿತು. ಹಾಗಾಗಿ ಹರಿಣಿಯ ಜೀವನ ನನ್ನಂತಾಗಬಾರದು ಎಂದು ನಿರ್ಧರಿಸಿದೆ. ನಂತರ ಈ ಶಿವಾನಂದ ಬಾಲಾಲಯದ ಬಗ್ಗೆ ತಿಳಿದುಕೊಂಡು ಬಾಬು ಸರ್ ಅವರನ್ನು ಸಂಪರ್ಕಿಸಿದೆ” ಎಂದು ಹೇಳಿದರು.

ಹರಿಣಿಯು ಸಬ್‌ ಇನ್ಸ್‌ಪೆಕ್ಟರ್ ಆಗಬೇಕೆಂದು ಬಯಸಿದ್ದು, ತನಗೆ 18 ವರ್ಷ ತುಂಬಿದ ನಂತರ ಶಸ್ತ್ರ ಚಿಕಿತ್ಸೆಯ ಮೂಲಕ ಲಿಂಗಪರಿವರ್ತನೆ ಮಾಡಿಸಿಕೊಳ್ಳುವುದಾಗಿ ಹೇಳಿದ್ದಾಳೆ.


ಇದನ್ನೂ ಓದಿ: ಕೇರಳ: ಸಾಕ್ಷರತಾ ಮಿಷನ್ ಅಡಿಯಲ್ಲಿ 18 ಮಂಗಳಮುಖಿಯರು ಉನ್ನತ ವ್ಯಾಸಾಂಗಕ್ಕೆ ಆಯ್ಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...