Homeಮುಖಪುಟತಿರುಚ್ಚಿ: ಮಂಗಳಮುಖಿಗೆ ಪ್ರವೇಶಾತಿ ನೀಡಿ ಲಿಂಗಾಧಾರಿತ ಕಳಂಕ ಬದಿಗೊತ್ತಿದ 'ಶಿವಾನಂದ' ಶಾಲೆ

ತಿರುಚ್ಚಿ: ಮಂಗಳಮುಖಿಗೆ ಪ್ರವೇಶಾತಿ ನೀಡಿ ಲಿಂಗಾಧಾರಿತ ಕಳಂಕ ಬದಿಗೊತ್ತಿದ ‘ಶಿವಾನಂದ’ ಶಾಲೆ

ನಾವು ಹರಿಣಿಗೆ ಮೊದಲ ಪ್ರವೇಶವನ್ನು ನೀಡಿದ್ದೇವೆ. ಆಕೆಯ ಪೋಷಕರು ಅವಳನ್ನು ಮನೆಯಿಂದ ಹೊರಹಾಕಿದ್ದಾರೆ. ನಿರ್ದಿಷ್ಟವಾಗಿ ಇಂತಹ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಕಾರಣಕ್ಕೆ ಈ ಹಾಸ್ಟಲ್‌ ಅನ್ನು ಸ್ಥಾಪಿಸಿದ್ದೇವೆ"

- Advertisement -
- Advertisement -

ಮಂಗಳಮುಖಿ ಅಥವಾ ಲೈಂಗಿಕ ಅಲ್ಪಸಂಖ್ಯಾತರು ಇಂದಿಗೂ ಮುಖ್ಯವಾಹಿನಿಗೆ ಬಂದು ಎಲ್ಲರಂತೆ ಬದುಕಲು ಹೆಣಗಾಡುತ್ತಿದ್ದಾರೆ. ಆದರೆ ನಮ್ಮ ಸಮಾಜ ಇನ್ನೂ ಈ ಪ್ರಕ್ರಿಯೆಗೆ ಮುಕ್ತವಾಗಿಲ್ಲ. ಆದರೆ ತಮಿಳುನಾಡಿನ ತಿರುಚ್ಚಿ ಯಲ್ಲಿ ಆಶಾದಾಯಕ ಬೆಳವಣಿಗೆಯೊಂದು ನಡೆದಿದ್ದು, ಯುವ ಮಂಗಳಮುಖಿಯನ್ನು ಶಾಲೆಯೊಂದರಲ್ಲಿ ದಾಖಲು ಮಾಡಿಕೊಳ್ಳಲಾಗಿದೆ.

ತನ್ನ ದೇಹದಲ್ಲಾದ ಬದಲಾವಣೆಗಳು ಬೆಳಕಿಗೆ ಬಂದಾಗ ಹರಿಹರನ್‌ಗೆ 10 ವರ್ಷ. 5 ನೇ ತರಗತಿಯಲ್ಲಿ ಓದುತ್ತಿದ್ದ ಹುಡುಗನಲ್ಲಿನ ಬದಲಾವಣೆಗಳನ್ನು ಕುಟುಂಬ ಸ್ವೀಕರಿಸಿರಲಿಲ್ಲ. ಹಾಗಾಗಿ ಪೋಷಕರು ತೀವ್ರ ಹಿಂಸೆ ನೀಡುತ್ತಿದ್ದರು. ನಂತರ ಪೊಲೀಸರಿಂದ ರಕ್ಷಿಸಲ್ಪಟ್ಟ ಹರಿಹರನ್‌ ಭವಿಷ್ಯದಲ್ಲಿ ತಾನೂ ಪೊಲೀಸ್ ಆಗಬೇಕು ಎಂದು ನಿರ್ಧರಿಸಿ, ತನ್ನ ನೆರೆಯಲ್ಲಿದ್ದ ಮಂಗಳಮುಖಿಯ ಆಶ್ರಯದಲ್ಲಿ ಬೆಳೆದು ಈಗ 11 ನೇ ತರಗತಿಯ ವ್ಯಾಸಾಂಗಕ್ಕೆಂದು ಶ್ರೀ ಶಿವಾನಂದ ಶಾಲೆಗೆ ದಾಖಲಾಗಿದ್ದಾ’ಳೆ’. ಅಂದಹಾಗೆ ಈಗ ಹರಿಹರನ್ ‘ಹರಿಣಿ’ಯಾಗಿದ್ದಾಳೆ.

ಇದನ್ನೂ ಓದಿ: ‘She Man’: ನೋಯ್ಡಾ ಮೆಟ್ರೋ ಸ್ಟೇಷನ್ ಹೆಸರಿಗೆ ಟ್ರಾನ್ಸ್‌ಜೆಂಡರ್ ಸಮುದಾಯದ ವಿರೋಧ

“ನಾನು ನನ್ನ ತಾಯಿಯ ಸೀರೆ ಧರಿಸುತ್ತಿದ್ದೆ. ಮಸ್ಕರಾ, ಲಿಪ್‌ಸ್ಟಿಕ್ ಹಾಕಿಕೊಳ್ಳುತ್ತಿದ್ದೆ. ನೃತ್ಯವನ್ನು ತುಂಬಾ ಇಷ್ಟಪಡುತ್ತಿದ್ದೆ. ಹೀಗಿರುವಾಗ ನಾನು ನನ್ನನ್ನು ಹೆಚ್ಚಾಗಿ ಇಷ್ಟಪಡುತ್ತಿದ್ದೆ. ಜೊತೆಗೆ ವಾಸ್ತವಿಕವಾಗಿ ಇದು ‘ನಾನು’ ಎಂದು ತಿಳಿದಿದ್ದೆ. ಕ್ರಮೇಣ ನನ್ನ ದೇಹ ಮತ್ತು ಭಾವನೆಗಳು ಬದಲಾಗಲಾರಂಭಿಸಿತು. ಆದರೆ ನನ್ನ ಕುಟುಂಬ ಅದನ್ನು ಗಮನಿಸಲಿಲ್ಲ. ಕಳೆದ ಎರಡು ವರ್ಷಗಳಲ್ಲಿ ನಾನು ಟ್ರಾನ್ಸ್‌ಜೆಂಡರ್ ಎಂದು ಅರಿತುಕೊಂಡೆ. ಆದರೆ ನನ್ನ ಕುಟುಂಬ ಇದನ್ನು ಸ್ವೀಕರಿಸಲಿಲ್ಲ. ನನ್ನ ಹಿರಿಯ ಸಹೋದರ ಮತ್ತು ಇತರ ಕುಟುಂಬ ಸದಸ್ಯರು ನನ್ನನ್ನು ಹಿಂಸಿಸುತ್ತಿದ್ದರು. ನಾನು ಹುಡುಗನಂತೆ ಇರಬೇಕು ಎಂದು ಬಲವಂತ ಮಾಡುತ್ತಿದ್ದರು” ಎಂದು ಹರಿಣಿ ಹೇಳುತ್ತಾಳೆ.

ಮನೆಯಲ್ಲಿ ಹಿಂಸೆ ಹೆಚ್ಚಾದಾಗ, ಹತ್ತಿರದಲ್ಲಿಯೇ ವಾಸಿಸುತ್ತಿದ್ದ ಮತ್ತೊಬ್ಬ ಮಂಗಳಮುಖಿ ಏಂಜಲ್ ಎಂಬುವವರು‌ ಹರಿಣಿಯನ್ನು ತನ್ನ ತೆಕ್ಕೆಗೆ ತೆಗೆದುಕೊಂಡರು. ಹರಿಣಿಯ ಜೀವನವು ತನ್ನ ಜೀವನದಂತೆ ಆಗಬಾರದು ಎಂದು ನಿರ್ಧರಿಸಿ ಆಕೆಗೆ ಶಿಕ್ಷಣ ನೀಡಲು ಮುಂದಾದರು. ಈ ಸಂದರ್ಭದಲ್ಲಿ ಶಿವಾನಂದ ರೆಸಿಡೆನ್ಶಿಯಲ್ ಶಾಲೆಯ ಬಗ್ಗೆ ತಿಳಿದ ಏಂಜೆಲ್ ಹರಿಣಿಯನ್ನು ನಿನ್ನೆ ಶಾಲೆಗೆ ಸೇರಿಸಿದ್ದಾರೆ.

ಇದನ್ನೂ ಓದಿ: ಟ್ರಾನ್ಸ್‌ಜೆಂಡರ್ ಸಮುದಾಯದ ಅರಿವಿನ ಲೋಕ ವಿಸ್ತರಿಸುತ್ತಿರುವ ಉಮಾ

ನಿವೃತ್ತ ಮೇಜರ್ ಜನರಲ್ ಎನ್‌ಆರ್‌ಕೆ ಬಾಬು ಅವರ ಕನಸಿನ ಕೂಸಾಗಿದ್ದ ಈ ಶಾಲೆಯ ಹಾಸ್ಟಲ್‌ನಲ್ಲಿ ಹರಿಣಿಗೆ ಮೊದಲ ಪ್ರವೇಶಾತಿಯನ್ನು ನೀಡಲಾಗಿದೆ. ಇದನ್ನು ಕಳೆದ ವರ್ಷವಷ್ಟೆ ನಿರ್ಮಿಸಲಾಗಿತ್ತು.

“ನಾವು ಹರಿಣಿಗೆ ಮೊದಲ ಪ್ರವೇಶವನ್ನು ನೀಡಿದ್ದೇವೆ. ಆಕೆಯ ಪೋಷಕರು ಅವಳನ್ನು ಮನೆಯಿಂದ ಹೊರಹಾಕಿದ್ದಾರೆ. ನಿರ್ದಿಷ್ಟವಾಗಿ ಇಂತಹ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಕಾರಣಕ್ಕೆ ಈ ಹಾಸ್ಟಲ್‌ ಅನ್ನು ಸ್ಥಾಪಿಸಿದ್ದೇವೆ. ಶೀಘ್ರದಲ್ಲೇ ಹೆಚ್ಚಿನ ಮಕ್ಕಳು ಇಲ್ಲಿಗೆ ಸೇರಬೇಕೆಂದು ಬಯಸುತ್ತೇವೆ” ಎಂದು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಹೇಳಿದ್ದಾರೆ.

ಇದನ್ನೂ ಓದಿ: ಸ್ಥಳೀಯ ಚುನಾವಣೆಯಲ್ಲಿ ಸ್ಪರ್ಧೆ; ಇತರೆ ಅಭ್ಯರ್ಥಿಗಳಿಗೆ ಸವಾಲು ಹಾಕಿದ ಮಂಗಳಮುಖಿಯರು!

ಹರಿಣಿಗೆ ಸರಿಯಾದ ಜೀವನವನ್ನು ರೂಪಿಸಿಕೊಡಲು ಶ್ರಮಪಡುತ್ತಿರುವ ಏಂಜೆಲ್, “ನನಗೆ 9 ನೇ ತರಗತಿಯ ನಂತರ ಓದಲು ಸಾಧ್ಯವಾಗಲಿಲ್ಲ. ನನ್ನ ಕುಟುಂಬ ನನ್ನನ್ನು ನಿರಾಕರಿಸಿತು. ಕೊನೆಗೆ ನಾನು ಭಿಕ್ಷೆ ಬೇಡಿ ಜೀವನ ಸಾಗಿಸಬೇಕಾಯಿತು. ಹಾಗಾಗಿ ಹರಿಣಿಯ ಜೀವನ ನನ್ನಂತಾಗಬಾರದು ಎಂದು ನಿರ್ಧರಿಸಿದೆ. ನಂತರ ಈ ಶಿವಾನಂದ ಬಾಲಾಲಯದ ಬಗ್ಗೆ ತಿಳಿದುಕೊಂಡು ಬಾಬು ಸರ್ ಅವರನ್ನು ಸಂಪರ್ಕಿಸಿದೆ” ಎಂದು ಹೇಳಿದರು.

ಹರಿಣಿಯು ಸಬ್‌ ಇನ್ಸ್‌ಪೆಕ್ಟರ್ ಆಗಬೇಕೆಂದು ಬಯಸಿದ್ದು, ತನಗೆ 18 ವರ್ಷ ತುಂಬಿದ ನಂತರ ಶಸ್ತ್ರ ಚಿಕಿತ್ಸೆಯ ಮೂಲಕ ಲಿಂಗಪರಿವರ್ತನೆ ಮಾಡಿಸಿಕೊಳ್ಳುವುದಾಗಿ ಹೇಳಿದ್ದಾಳೆ.


ಇದನ್ನೂ ಓದಿ: ಕೇರಳ: ಸಾಕ್ಷರತಾ ಮಿಷನ್ ಅಡಿಯಲ್ಲಿ 18 ಮಂಗಳಮುಖಿಯರು ಉನ್ನತ ವ್ಯಾಸಾಂಗಕ್ಕೆ ಆಯ್ಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...