Homeಮುಖಪುಟತಿರುಚ್ಚಿ: ಮಂಗಳಮುಖಿಗೆ ಪ್ರವೇಶಾತಿ ನೀಡಿ ಲಿಂಗಾಧಾರಿತ ಕಳಂಕ ಬದಿಗೊತ್ತಿದ 'ಶಿವಾನಂದ' ಶಾಲೆ

ತಿರುಚ್ಚಿ: ಮಂಗಳಮುಖಿಗೆ ಪ್ರವೇಶಾತಿ ನೀಡಿ ಲಿಂಗಾಧಾರಿತ ಕಳಂಕ ಬದಿಗೊತ್ತಿದ ‘ಶಿವಾನಂದ’ ಶಾಲೆ

ನಾವು ಹರಿಣಿಗೆ ಮೊದಲ ಪ್ರವೇಶವನ್ನು ನೀಡಿದ್ದೇವೆ. ಆಕೆಯ ಪೋಷಕರು ಅವಳನ್ನು ಮನೆಯಿಂದ ಹೊರಹಾಕಿದ್ದಾರೆ. ನಿರ್ದಿಷ್ಟವಾಗಿ ಇಂತಹ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಕಾರಣಕ್ಕೆ ಈ ಹಾಸ್ಟಲ್‌ ಅನ್ನು ಸ್ಥಾಪಿಸಿದ್ದೇವೆ"

- Advertisement -
- Advertisement -

ಮಂಗಳಮುಖಿ ಅಥವಾ ಲೈಂಗಿಕ ಅಲ್ಪಸಂಖ್ಯಾತರು ಇಂದಿಗೂ ಮುಖ್ಯವಾಹಿನಿಗೆ ಬಂದು ಎಲ್ಲರಂತೆ ಬದುಕಲು ಹೆಣಗಾಡುತ್ತಿದ್ದಾರೆ. ಆದರೆ ನಮ್ಮ ಸಮಾಜ ಇನ್ನೂ ಈ ಪ್ರಕ್ರಿಯೆಗೆ ಮುಕ್ತವಾಗಿಲ್ಲ. ಆದರೆ ತಮಿಳುನಾಡಿನ ತಿರುಚ್ಚಿ ಯಲ್ಲಿ ಆಶಾದಾಯಕ ಬೆಳವಣಿಗೆಯೊಂದು ನಡೆದಿದ್ದು, ಯುವ ಮಂಗಳಮುಖಿಯನ್ನು ಶಾಲೆಯೊಂದರಲ್ಲಿ ದಾಖಲು ಮಾಡಿಕೊಳ್ಳಲಾಗಿದೆ.

ತನ್ನ ದೇಹದಲ್ಲಾದ ಬದಲಾವಣೆಗಳು ಬೆಳಕಿಗೆ ಬಂದಾಗ ಹರಿಹರನ್‌ಗೆ 10 ವರ್ಷ. 5 ನೇ ತರಗತಿಯಲ್ಲಿ ಓದುತ್ತಿದ್ದ ಹುಡುಗನಲ್ಲಿನ ಬದಲಾವಣೆಗಳನ್ನು ಕುಟುಂಬ ಸ್ವೀಕರಿಸಿರಲಿಲ್ಲ. ಹಾಗಾಗಿ ಪೋಷಕರು ತೀವ್ರ ಹಿಂಸೆ ನೀಡುತ್ತಿದ್ದರು. ನಂತರ ಪೊಲೀಸರಿಂದ ರಕ್ಷಿಸಲ್ಪಟ್ಟ ಹರಿಹರನ್‌ ಭವಿಷ್ಯದಲ್ಲಿ ತಾನೂ ಪೊಲೀಸ್ ಆಗಬೇಕು ಎಂದು ನಿರ್ಧರಿಸಿ, ತನ್ನ ನೆರೆಯಲ್ಲಿದ್ದ ಮಂಗಳಮುಖಿಯ ಆಶ್ರಯದಲ್ಲಿ ಬೆಳೆದು ಈಗ 11 ನೇ ತರಗತಿಯ ವ್ಯಾಸಾಂಗಕ್ಕೆಂದು ಶ್ರೀ ಶಿವಾನಂದ ಶಾಲೆಗೆ ದಾಖಲಾಗಿದ್ದಾ’ಳೆ’. ಅಂದಹಾಗೆ ಈಗ ಹರಿಹರನ್ ‘ಹರಿಣಿ’ಯಾಗಿದ್ದಾಳೆ.

ಇದನ್ನೂ ಓದಿ: ‘She Man’: ನೋಯ್ಡಾ ಮೆಟ್ರೋ ಸ್ಟೇಷನ್ ಹೆಸರಿಗೆ ಟ್ರಾನ್ಸ್‌ಜೆಂಡರ್ ಸಮುದಾಯದ ವಿರೋಧ

“ನಾನು ನನ್ನ ತಾಯಿಯ ಸೀರೆ ಧರಿಸುತ್ತಿದ್ದೆ. ಮಸ್ಕರಾ, ಲಿಪ್‌ಸ್ಟಿಕ್ ಹಾಕಿಕೊಳ್ಳುತ್ತಿದ್ದೆ. ನೃತ್ಯವನ್ನು ತುಂಬಾ ಇಷ್ಟಪಡುತ್ತಿದ್ದೆ. ಹೀಗಿರುವಾಗ ನಾನು ನನ್ನನ್ನು ಹೆಚ್ಚಾಗಿ ಇಷ್ಟಪಡುತ್ತಿದ್ದೆ. ಜೊತೆಗೆ ವಾಸ್ತವಿಕವಾಗಿ ಇದು ‘ನಾನು’ ಎಂದು ತಿಳಿದಿದ್ದೆ. ಕ್ರಮೇಣ ನನ್ನ ದೇಹ ಮತ್ತು ಭಾವನೆಗಳು ಬದಲಾಗಲಾರಂಭಿಸಿತು. ಆದರೆ ನನ್ನ ಕುಟುಂಬ ಅದನ್ನು ಗಮನಿಸಲಿಲ್ಲ. ಕಳೆದ ಎರಡು ವರ್ಷಗಳಲ್ಲಿ ನಾನು ಟ್ರಾನ್ಸ್‌ಜೆಂಡರ್ ಎಂದು ಅರಿತುಕೊಂಡೆ. ಆದರೆ ನನ್ನ ಕುಟುಂಬ ಇದನ್ನು ಸ್ವೀಕರಿಸಲಿಲ್ಲ. ನನ್ನ ಹಿರಿಯ ಸಹೋದರ ಮತ್ತು ಇತರ ಕುಟುಂಬ ಸದಸ್ಯರು ನನ್ನನ್ನು ಹಿಂಸಿಸುತ್ತಿದ್ದರು. ನಾನು ಹುಡುಗನಂತೆ ಇರಬೇಕು ಎಂದು ಬಲವಂತ ಮಾಡುತ್ತಿದ್ದರು” ಎಂದು ಹರಿಣಿ ಹೇಳುತ್ತಾಳೆ.

ಮನೆಯಲ್ಲಿ ಹಿಂಸೆ ಹೆಚ್ಚಾದಾಗ, ಹತ್ತಿರದಲ್ಲಿಯೇ ವಾಸಿಸುತ್ತಿದ್ದ ಮತ್ತೊಬ್ಬ ಮಂಗಳಮುಖಿ ಏಂಜಲ್ ಎಂಬುವವರು‌ ಹರಿಣಿಯನ್ನು ತನ್ನ ತೆಕ್ಕೆಗೆ ತೆಗೆದುಕೊಂಡರು. ಹರಿಣಿಯ ಜೀವನವು ತನ್ನ ಜೀವನದಂತೆ ಆಗಬಾರದು ಎಂದು ನಿರ್ಧರಿಸಿ ಆಕೆಗೆ ಶಿಕ್ಷಣ ನೀಡಲು ಮುಂದಾದರು. ಈ ಸಂದರ್ಭದಲ್ಲಿ ಶಿವಾನಂದ ರೆಸಿಡೆನ್ಶಿಯಲ್ ಶಾಲೆಯ ಬಗ್ಗೆ ತಿಳಿದ ಏಂಜೆಲ್ ಹರಿಣಿಯನ್ನು ನಿನ್ನೆ ಶಾಲೆಗೆ ಸೇರಿಸಿದ್ದಾರೆ.

ಇದನ್ನೂ ಓದಿ: ಟ್ರಾನ್ಸ್‌ಜೆಂಡರ್ ಸಮುದಾಯದ ಅರಿವಿನ ಲೋಕ ವಿಸ್ತರಿಸುತ್ತಿರುವ ಉಮಾ

ನಿವೃತ್ತ ಮೇಜರ್ ಜನರಲ್ ಎನ್‌ಆರ್‌ಕೆ ಬಾಬು ಅವರ ಕನಸಿನ ಕೂಸಾಗಿದ್ದ ಈ ಶಾಲೆಯ ಹಾಸ್ಟಲ್‌ನಲ್ಲಿ ಹರಿಣಿಗೆ ಮೊದಲ ಪ್ರವೇಶಾತಿಯನ್ನು ನೀಡಲಾಗಿದೆ. ಇದನ್ನು ಕಳೆದ ವರ್ಷವಷ್ಟೆ ನಿರ್ಮಿಸಲಾಗಿತ್ತು.

“ನಾವು ಹರಿಣಿಗೆ ಮೊದಲ ಪ್ರವೇಶವನ್ನು ನೀಡಿದ್ದೇವೆ. ಆಕೆಯ ಪೋಷಕರು ಅವಳನ್ನು ಮನೆಯಿಂದ ಹೊರಹಾಕಿದ್ದಾರೆ. ನಿರ್ದಿಷ್ಟವಾಗಿ ಇಂತಹ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಕಾರಣಕ್ಕೆ ಈ ಹಾಸ್ಟಲ್‌ ಅನ್ನು ಸ್ಥಾಪಿಸಿದ್ದೇವೆ. ಶೀಘ್ರದಲ್ಲೇ ಹೆಚ್ಚಿನ ಮಕ್ಕಳು ಇಲ್ಲಿಗೆ ಸೇರಬೇಕೆಂದು ಬಯಸುತ್ತೇವೆ” ಎಂದು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಹೇಳಿದ್ದಾರೆ.

ಇದನ್ನೂ ಓದಿ: ಸ್ಥಳೀಯ ಚುನಾವಣೆಯಲ್ಲಿ ಸ್ಪರ್ಧೆ; ಇತರೆ ಅಭ್ಯರ್ಥಿಗಳಿಗೆ ಸವಾಲು ಹಾಕಿದ ಮಂಗಳಮುಖಿಯರು!

ಹರಿಣಿಗೆ ಸರಿಯಾದ ಜೀವನವನ್ನು ರೂಪಿಸಿಕೊಡಲು ಶ್ರಮಪಡುತ್ತಿರುವ ಏಂಜೆಲ್, “ನನಗೆ 9 ನೇ ತರಗತಿಯ ನಂತರ ಓದಲು ಸಾಧ್ಯವಾಗಲಿಲ್ಲ. ನನ್ನ ಕುಟುಂಬ ನನ್ನನ್ನು ನಿರಾಕರಿಸಿತು. ಕೊನೆಗೆ ನಾನು ಭಿಕ್ಷೆ ಬೇಡಿ ಜೀವನ ಸಾಗಿಸಬೇಕಾಯಿತು. ಹಾಗಾಗಿ ಹರಿಣಿಯ ಜೀವನ ನನ್ನಂತಾಗಬಾರದು ಎಂದು ನಿರ್ಧರಿಸಿದೆ. ನಂತರ ಈ ಶಿವಾನಂದ ಬಾಲಾಲಯದ ಬಗ್ಗೆ ತಿಳಿದುಕೊಂಡು ಬಾಬು ಸರ್ ಅವರನ್ನು ಸಂಪರ್ಕಿಸಿದೆ” ಎಂದು ಹೇಳಿದರು.

ಹರಿಣಿಯು ಸಬ್‌ ಇನ್ಸ್‌ಪೆಕ್ಟರ್ ಆಗಬೇಕೆಂದು ಬಯಸಿದ್ದು, ತನಗೆ 18 ವರ್ಷ ತುಂಬಿದ ನಂತರ ಶಸ್ತ್ರ ಚಿಕಿತ್ಸೆಯ ಮೂಲಕ ಲಿಂಗಪರಿವರ್ತನೆ ಮಾಡಿಸಿಕೊಳ್ಳುವುದಾಗಿ ಹೇಳಿದ್ದಾಳೆ.


ಇದನ್ನೂ ಓದಿ: ಕೇರಳ: ಸಾಕ್ಷರತಾ ಮಿಷನ್ ಅಡಿಯಲ್ಲಿ 18 ಮಂಗಳಮುಖಿಯರು ಉನ್ನತ ವ್ಯಾಸಾಂಗಕ್ಕೆ ಆಯ್ಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...