Homeಮುಖಪುಟತಿರುಪತಿ ದೇಣಿಗೆ ಕಳ್ಳತನ ಪ್ರಕರಣ: ಕಾನೂನು ಕ್ರಮ ತೆಗೆದುಕೊಳ್ಳವಂತೆ 'ಸಿಐಡಿ-ಎಸಿಬಿ'ಗೆ ಹೈಕೋರ್ಟ್ ನಿರ್ದೇಶನ

ತಿರುಪತಿ ದೇಣಿಗೆ ಕಳ್ಳತನ ಪ್ರಕರಣ: ಕಾನೂನು ಕ್ರಮ ತೆಗೆದುಕೊಳ್ಳವಂತೆ ‘ಸಿಐಡಿ-ಎಸಿಬಿ’ಗೆ ಹೈಕೋರ್ಟ್ ನಿರ್ದೇಶನ

- Advertisement -
- Advertisement -

ತಿರುಮಲ ತಿರುಪತಿ ದೇವಸ್ಥಾನದ ಪರಕಮಣಿ (ದೇಣಿಗೆ ಪೆಟ್ಟಿಗೆ) ಕಳ್ಳತನ ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಆಂಧ್ರಪ್ರದೇಶ ಹೈಕೋರ್ಟ್ ರಾಜ್ಯದ ಅಪರಾಧ ತನಿಖಾ ಇಲಾಖೆ (ಸಿಐಡಿ) ಮತ್ತು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಕ್ಕೆ ನಿರ್ದೇಶನ ನೀಡಿದೆ.

ಕಳ್ಳತನ ಮತ್ತು ಶಂಕಿತನ ಆಸ್ತಿಗಳನ್ನು ಮಾತ್ರವಲ್ಲದೆ ಲೋಕ ಅದಾಲತ್‌ನಲ್ಲಿ ಹಿಂದಿನ ಇತ್ಯರ್ಥಗಳ ಬಗ್ಗೆಯೂ ತನಿಖೆ ಮುಂದುವರಿಸಲು ಸಿಐಡಿ ಮತ್ತು ಎಸಿಬಿಗೆ ಸೂಚಿಸಲಾಗಿದೆ.

ಹೈಕೋರ್ಟ್ ನಿರ್ದೇಶಿಸಿದ ಸಮಗ್ರ ತನಿಖೆಗೆ ಬೆಂಬಲ ನೀಡಲು ಏಜೆನ್ಸಿಗಳು ತಮ್ಮ ನಡುವೆ ಸಂಗ್ರಹಿಸಿದ ಮಾಹಿತಿಯನ್ನು ಹಂಚಿಕೊಳ್ಳಬೇಕು. ಅಗತ್ಯವಿದ್ದರೆ ಆದಾಯ ತೆರಿಗೆ ಇಲಾಖೆ ಮತ್ತು ಜಾರಿ ನಿರ್ದೇಶನಾಲಯದೊಂದಿಗೂ (ಇಡಿ) ಹಂಚಿಕೊಳ್ಳಬೇಕು ಎಂದು ಹೇಳಿದೆ.

ನವೆಂಬರ್ 14 ರಂದು ಅನಂತಪುರ ಜಿಲ್ಲೆಯ ರೈಲ್ವೆ ಹಳಿಯ ಪಕ್ಕದಲ್ಲಿ ಮೃತದೇಹ ಪತ್ತೆಯಾಗಿದ್ದ ಆ ಸಮಯದಲ್ಲಿ ಟಿಟಿಡಿ ಜಾಗೃತ ಇಲಾಖೆಯೊಂದಿಗೆ ಕೆಲಸ ಮಾಡಿದ್ದ ಮತ್ತು ಪ್ರಕರಣದಲ್ಲಿ ವಾಸ್ತವಿಕ ದೂರುದಾರ ವೈ ಸತೀಶ್ ಕುಮಾರ್ ಅವರ ಅನುಮಾನಾಸ್ಪದ ಸಾವಿನ ಪ್ರಕರಣವನ್ನು ಗಮನದಲ್ಲಿಟ್ಟುಕೊಂಡು, ನ್ಯಾಯಾಲಯವು ಸಿಐಡಿಗೆ ಮೊಹರು ಮಾಡಿದ ಕವರ್‌ನಲ್ಲಿ ಮರಣೋತ್ತರ ಪರೀಕ್ಷೆಯ ವರದಿಯನ್ನು ಮೂರು ದಿನಗಳಲ್ಲಿ ಸಲ್ಲಿಸುವಂತೆ ನಿರ್ದೇಶಿಸಿದೆ. ಹೈಕೋರ್ಟ್ ಮುಂದಿನ ವಿಚಾರಣೆಯನ್ನು ಡಿಸೆಂಬರ್ 16 ಕ್ಕೆ ನಿಗದಿಪಡಿಸಿದೆ.

ಸಿಐಡಿ ಈಗಾಗಲೇ ಆಗಿನ ಟಿಟಿಡಿ ಅಧ್ಯಕ್ಷ ಮತ್ತು ವೈಎಸ್‌ಆರ್‌ಸಿಪಿ ಶಾಸಕ ಬಿ. ಕರುಣಾಕರ್ ರೆಡ್ಡಿ, ಮಾಜಿ ಟಿಟಿಡಿ ಅಧ್ಯಕ್ಷ ಮತ್ತು ವೈಎಸ್‌ಆರ್‌ಸಿಪಿ ಸಂಸದ ವೈ.ವಿ. ಸುಬ್ಬಾ ರೆಡ್ಡಿ ಮತ್ತು ಆಗಿನ ಟಿಟಿಡಿ ಕಾರ್ಯನಿರ್ವಾಹಕ ಅಧಿಕಾರಿ ಎ.ವಿ. ಧರ್ಮ ರೆಡ್ಡಿ ಅವರನ್ನು ಪ್ರಶ್ನಿಸಿದೆ.

ಈ ಪ್ರಕರಣವು ಏಪ್ರಿಲ್ 29, 2023 ರಂದು ಟಿಟಿಡಿಯೊಂದಿಗೆ ಸಂಯೋಜಿತವಾಗಿರುವ ಮಠದ ಉದ್ಯೋಗಿ ಸಿ.ವಿ. ರವಿ ಕುಮಾರ್ ಅವರು ಪರಕಮಣಿ ಸಭಾಂಗಣದಿಂದ (ದೇವಾಲಯದ ದೇಣಿಗೆ ಎಣಿಕೆ ಕೇಂದ್ರ) ದೇಣಿಗೆ ಕದ್ದಿದ್ದಾಗ ಸಿಕ್ಕಿಬಿದ್ದಿದ್ದರು. ಕಳ್ಳತನದ ಪ್ರಕರಣವನ್ನು ಆರಂಭದಲ್ಲಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿತ್ತು.

ಆದರೆ, ಶೀಘ್ರದಲ್ಲೇ ಲೋಕ ಅದಾಲತ್‌ನಲ್ಲಿ ಮಧ್ಯಸ್ಥಿಕೆಯ ಮೂಲಕ ‘ರಾಜಿ’ ಇತ್ಯರ್ಥಕ್ಕೆ ತಿರುಗಿಸಲಾಯಿತು. ಈ ಇತ್ಯರ್ಥದಡಿಯಲ್ಲಿ, ರವಿ ಕುಮಾರ್ ತಿರುಪತಿ ಮತ್ತು ಚೆನ್ನೈನಲ್ಲಿರುವ ಏಳು ಆಸ್ತಿಗಳನ್ನು (ಸುಮಾರು 40 ಕೋಟಿ ರೂ. ಮೌಲ್ಯದ) ಟಿಟಿಡಿಗೆ ‘ಪರಿಹಾರ’ವಾಗಿ ದಾನ ಮಾಡಲು ಮುಂದಾದರು ಎಂದು ಆರೋಪಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...