Homeಮುಖಪುಟತಿರುಪತಿ ಕಾಲ್ತುಳಿತ: ಸಂತ್ರಸ್ತರ ಕುಟುಂಬಗಳಿಗೆ ತಲಾ ₹25 ಲಕ್ಷ ಪರಿಹಾರ ಘೋಷಿಸಿದ ಆಂಧ್ರ ಸರ್ಕಾರ

ತಿರುಪತಿ ಕಾಲ್ತುಳಿತ: ಸಂತ್ರಸ್ತರ ಕುಟುಂಬಗಳಿಗೆ ತಲಾ ₹25 ಲಕ್ಷ ಪರಿಹಾರ ಘೋಷಿಸಿದ ಆಂಧ್ರ ಸರ್ಕಾರ

- Advertisement -
- Advertisement -

ಬುಧವಾರ ರಾತ್ರಿ (ಜನವರಿ 8) ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ನಡೆದ ಪವಿತ್ರ ಕಾರ್ಯಕ್ರಮದ ಟಿಕೆಟ್ ವಿತರಣೆಯ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟ ಆರು ಭಕ್ತರ ಕುಟುಂಬಗಳಿಗೆ ಆಂಧ್ರ ಪ್ರದೇಶ ಸರ್ಕಾರ ಗುರುವಾರ (ಜನವರಿ 9) ತಲಾ ₹25 ಲಕ್ಷ ಪರಿಹಾರ ಘೋಷಿಸಿದೆ.

ಆಂಧ್ರ ಪ್ರದೇಶದ ಕಂದಾಯ ಸಚಿವ ಅನಗಣಿ ಸತ್ಯ ಪ್ರಸಾದ್, “ನಾವು ಜೀವವನ್ನು ಬೇರೆ ಯಾವುದರಿಂದಲೂ ಬದಲಾಯಿಸಲು ಸಾಧ್ಯವಿಲ್ಲ. ಆದರೆ, ಕುಟುಂಬಗಳಿಗೆ ಬೆಂಬಲ ನೀಡುತ್ತೇವೆ. ನಾವು ₹25 ಲಕ್ಷಗಳನ್ನು ಘೋಷಿಸಿದ್ದೇವೆ. ಮುಖ್ಯಮಂತ್ರಿ ಗಾಯಗೊಂಡ ಜನರೊಂದಿಗೆ ಮಾತನಾಡುತ್ತಾರೆ” ಎಂದು ಹೇಳಿದರು.

ಸಚಿವರ ತಂಡವು ರುಯಾ ಆಸ್ಪತ್ರೆಯಲ್ಲಿ ಮೃತರ ಕುಟುಂಬಗಳನ್ನು ಭೇಟಿ ಮಾಡಿದ ನಂತರ ಕಂದಾಯ ಸಚಿವ ಸತ್ಯ ಪ್ರಸಾದ್ ಈ ಘೋಷಣೆ ಮಾಡಿದರು. ಸಚಿವರಾದ ಅನಿತಾ, ಪಾರ್ಥಸಾರಥಿ ಮತ್ತು ಅನಮ್ ರಾಮನಾರಾಯಣ ರೆಡ್ಡಿ ಅವರನ್ನೊಳಗೊಂಡ ನಿಯೋಗವು ಎಸ್‌ವಿಐಎಂಎಸ್‌ ಆಸ್ಪತ್ರೆಯಲ್ಲಿ ಗಾಯಾಳುಗಳನ್ನು ಭೇಟಿ ಮಾಡಿತು.

ಸಚಿವರು ಈ ಘಟನೆಯನ್ನು ದುರದೃಷ್ಟಕರ ಎಂದು ಬಣ್ಣಿಸಿದರು. ಈ ಘಟನೆಯು ಯಾವುದೇ ಆತುರದ ಕ್ರಮ ಅಥವಾ ಸಮನ್ವಯದ ಕೊರತೆಯಿಂದ ಉಂಟಾಗಿದೆಯೇ ಎಂದು ಕಂಡುಹಿಡಿಯಲು ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದರು. ಇದು ಅಪಘಾತವೋ ಅಥವಾ ಪಿತೂರಿಯೋ ಎಂಬುದನ್ನು ಖಚಿತಪಡಿಸಿಕೊಳ್ಳಲು ತನಿಖೆ ನಡೆಯುತ್ತಿದೆ ಎಂದು ಗೃಹ ಸಚಿವೆ ಅನಿತಾ ಹೇಳಿದರು.

ಸಿಸಿಟಿವಿ ದೃಶ್ಯಾವಳಿಗಳು ಯಾರ ತಪ್ಪುಗಳಿಂದ ಈ ದುರಂತ ಸಂಭವಿಸಿದೆ ಎಂಬುದನ್ನು ಬಹಿರಂಗಪಡಿಸುತ್ತದೆ. ನಿರ್ಲಕ್ಷ್ಯ ತೋರಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವರು ಹೇಳಿದರು. ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು. ಮೃತರ ಶವಗಳನ್ನು ಶವಪರೀಕ್ಷೆಯ ನಂತರ ಆಯಾ ಪಟ್ಟಣಗಳಿಗೆ ಕಳುಹಿಸಲಾಗುತ್ತಿದೆ ಎಂದು ಸಚಿವರು ಹೇಳಿದರು.

ಮೃತರಲ್ಲಿ ಮೂವರು ವಿಶಾಖಪಟ್ಟಣಂನವರು ಮತ್ತು ಒಬ್ಬರು ನರಸಿಪಟ್ಟಣಂನವರು. ಉಳಿದ ಇಬ್ಬರು ಬಲಿಪಶುಗಳು ತಮಿಳುನಾಡು ಮತ್ತು ಕೇರಳದವರು.

ಜನವರಿ 10 ರಂದು ಪ್ರಾರಂಭವಾಗುವ ವಾರ್ಷಿಕ ವೈಕುಂಠ ಏಕಾದಶಿ ಉತ್ಸವದ ಸಮಯದಲ್ಲಿ ವೈಕುಂಠ ದ್ವಾರ ದರ್ಶನಕ್ಕಾಗಿ ಟೋಕನ್ ವಿತರಿಸಲು ತಿರುಮಲ ತಿರುಪತಿ ದೇವಸ್ಥಾನಗಳು (ಟಿಟಿಡಿ) ಕೌಂಟರ್‌ಗಳನ್ನು ಸ್ಥಾಪಿಸಿದ್ದ ತಿರುಪತಿಯ ವಿಷ್ಣು ನಿವಾಸಂ ದೇವಾಲಯದ ಬಳಿ ಕಾಲ್ತುಳಿತ ಸಂಭವಿಸಿದೆ.

10 ದಿನಗಳ ಈ ಕಾರ್ಯಕ್ರಮದಲ್ಲಿ, ಭಕ್ತರಿಗೆ ಉತ್ತರ ದ್ವಾರದ ಮೂಲಕ ದೇವರ ವಿಶೇಷ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ಗುರುವಾರ ಬೆಳಿಗ್ಗೆ ಟೋಕನ್ ವಿತರಣೆ ಆರಂಭವಾಗಬೇಕಿದ್ದರೂ ಬುಧವಾರ ಸಂಜೆಯಿಂದಲೇ ವಿವಿಧ ರಾಜ್ಯಗಳಿಂದ ಸಾವಿರಾರು ಭಕ್ತರು ಕೌಂಟರ್‌ಗಳಲ್ಲಿ ಸಾಲುಗಟ್ಟಿ ನಿಂತಿದ್ದರು. ತೊಂದರೆಗೀಡಾದ ಮಹಿಳೆಗೆ ಸಹಾಯ ಮಾಡಲು ಒಂದು ಗೇಟ್ ತೆರೆದಾಗ, ಭಕ್ತರು ಮುಂದೆ ದೌಡಾಯಿಸಿದ್ದರಿಂದ ಕಾಲ್ತುಳಿತ ಸಂಭವಿಸಿತು.

ಹಬ್ಬದ ಮೊದಲ ಮೂರು ದಿನಗಳವರೆಗೆ (ಜನವರಿ 10–12) 1.20 ಲಕ್ಷ ಟೋಕನ್‌ಗಳ ವಿತರಣೆಗೆ ಟಿಟಿಡಿ ವ್ಯವಸ್ಥೆ ಮಾಡಿತ್ತು. ತಿರುಪತಿಯ 94 ಸ್ಥಳಗಳಲ್ಲಿ ವಿಶೇಷ ಕೌಂಟರ್‌ಗಳನ್ನು ಸ್ಥಾಪಿಸಲಾಗಿತ್ತು.

ಇದನ್ನೂ ಓದಿ; ತಿರುಪತಿ ಕಾಲ್ತುಳಿತ ದುರಂತ : ಮೃತರ ಸಂಖ್ಯೆ 7ಕ್ಕೆ ಏರಿಕೆ; 40ಕ್ಕೂ ಅಧಿಕ ಜನರಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...