Homeಮುಖಪುಟತಿರುಪತಿ ದೇವಸ್ಥಾನ: 12.75 ಟನ್‌ ಚಿನ್ನ; ₹16 ಸಾವಿರ ಕೋಟಿ ಠೇವಣಿ; ಒಟ್ಟು ₹2.5 ಲಕ್ಷ...

ತಿರುಪತಿ ದೇವಸ್ಥಾನ: 12.75 ಟನ್‌ ಚಿನ್ನ; ₹16 ಸಾವಿರ ಕೋಟಿ ಠೇವಣಿ; ಒಟ್ಟು ₹2.5 ಲಕ್ಷ ಕೋಟಿಗೂ ಅಧಿಕ ಮೌಲ್ಯದ ಆಸ್ತಿ!

- Advertisement -
- Advertisement -

ಆಂದ್ರಪ್ರದೇಶದ ತಿರುಪತಿಯಲ್ಲಿರುವ ಜಗತ್ಪ್ರಸಿದ್ಧ ವೆಂಕಟೇಶ್ವರ ದೇವಸ್ಥಾನದ ನಿವ್ವಳ ಮೌಲ್ಯ 2.5 ಲಕ್ಷ ಕೋಟಿ ರೂ. ಎಂದು ವರದಿಯಾಗಿದೆ. ಇದು ಐಟಿ ಸೇವಾ ಸಂಸ್ಥೆಯಾದ ವಿಪ್ರೋ, ಆಹಾರ ಮತ್ತು ಪಾನೀಯ ಕಂಪನಿ ನೆಸ್ಲೆ ಮತ್ತು ಸರ್ಕಾರಿ ಸ್ವಾಮ್ಯದ ತೈಲ ಕಂಪೆನಿಯಾದ ಆಯಿಲ್ ಆಂಡ್‌ ನೇಚರ್‌ ಗ್ಯಾಸ್‌‌ ಕಾರ್ಪೊರೇಷನ್ (ONGC) ಮತ್ತು ಇಂಡಿಯನ್ ಆಯಿಲ್ ಕಾರ್ಪೊರೇಷನ್ (IOC)ನ ಮಾರುಕಟ್ಟೆ ಬಂಡವಾಳೀಕರಣಕ್ಕಿಂತ ಹೆಚ್ಚಿನ ಮೌಲ್ಯದ ಆಸ್ತಿಯಾಗಿದೆ.

ತಿರುಪತಿಯ ಪ್ರಧಾನ ದೇವರಿಗೆ ಸಮರ್ಪಿತವಾದ ದೇವಾಲಯದ ‘ತಿರುಮಲ ತಿರುಪತಿ ದೇವಸ್ಥಾನಂ’ ತನ್ನ ನಿವ್ವಳ ಮೌಲ್ಯವನ್ನು 1933 ರಲ್ಲಿ ಮೊದಲ ಬಾರಿಗೆ ಘೋಷಿಸಿತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದೇವಸ್ಥಾನದ ಆಸ್ತಿಯಲ್ಲಿ ಬ್ಯಾಂಕ್‌ಗಳಲ್ಲಿ 10.25 ಟನ್ ಚಿನ್ನದ ಠೇವಣಿ ಮತ್ತು 2.5 ಟನ್ ಚಿನ್ನಾಭರಣ ಇವೆ. ಸುಮಾರು 16 ಸಾವಿರ ಕೋಟಿ ರೂ. ಬ್ಯಾಂಕ್‌ಗಳಲ್ಲಿ ಠೇವಣಿ ಇದ್ದು, ದೇವಸ್ಥಾನಕ್ಕೆ ಭಾರತದಾದ್ಯಂತ 960 ಆಸ್ತಿಗಳು ಇವೆ. ಇವೆಲ್ಲದರ ಒಟ್ಟು ಮೌಲ್ಯ 2.5 ಲಕ್ಷ ಕೋಟಿ ರೂ.ಗೂ ಹೆಚ್ಚು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: 10% ಮೀಸಲಾತಿ: ಆರ್‌‌ಎಸ್‌ಎಸ್‌ ಮಂದಿ ಹಬ್ಬಿಸಿರುವ 100% ಸುಳ್ಳುಗಳು!

ಪ್ರಸ್ತುತ ವ್ಯಾಪಾರಿ ಬೆಲೆಯಲ್ಲಿ ಹೇಳಬಹುದಾದರೆ, ತಿರುಪತಿ ದೇವಸ್ಥಾನದ ನಿವ್ವಳ ಮೌಲ್ಯವು ಭಾರತದ ಹಲವಾರು ದೊಡ್ಡ ಕಾರ್ಪೋರೇಟ್‌ ಕಂಪೆನಿಗಳಿಗಿಂತ ಹಚ್ಚಿನದ್ದಾಗಿದೆ ಎಂದು ಎನ್‌ಡಿಟಿವಿ ತನ್ನ ವರದಿಯಲ್ಲಿ ಉಲ್ಲೇಖಿಸಿದೆ.

ಶುಕ್ರವಾರದ ವಹಿವಾಟಿನ ಮುಕ್ತಾಯಕ್ಕೆ ಬೆಂಗಳೂರು ಮೂಲದ ವಿಪ್ರೋ 2.14 ಲಕ್ಷ ಕೋಟಿ ರೂ. ಗಳಷ್ಟು ಮಾರುಕಟ್ಟೆ ಮೌಲ್ಯವನ್ನು ಹೊಂದಿದ್ದು, ಅಲ್ಟ್ರಾಟೆಕ್ ಸಿಮೆಂಟ್ 1.99 ಲಕ್ಷ ಕೋಟಿ ರೂ.ಗಳ ಮಾರುಕಟ್ಟೆ ಮೌಲ್ಯವನ್ನು ಹೊಂದಿದೆ.

ಸ್ವಿಸ್ ಬಹುರಾಷ್ಟ್ರೀಯ ಆಹಾರ ಮತ್ತು ಪಾನೀಯದ ಪ್ರಮುಖ ಸಂಸ್ಥೆಯಾದ ನೆಸ್ಲೆಯ ಭಾರತದ ಘಟಕವು 1.96 ಲಕ್ಷ ಕೋಟಿ ರೂ.ಗಳ ಮಾರುಕಟ್ಟೆ ಮೌಲ್ಯವನ್ನು ಹೊಂದಿದ್ದು, ತಿರುಪತಿಯ ಆಸ್ತಿಗಿಂತ ಕಡಿಮೆ ಮೌಲ್ಯವನ್ನು ಹೊಂದಿದೆ.

ಇದನ್ನೂ ಓದಿ: ಸಂಪತ್ತು ಅನುಭವಸಿದವರೇ ಮೀಸಲಾತಿ ವಿರೋಧಿಸುತ್ತಿದ್ದಾರೆ: ಸಿದ್ದರಾಮಯ್ಯ ವಿಷಾದ

ಸರ್ಕಾರಿ ಸ್ವಾಮ್ಯದ ತೈಲ ಕಂಪೆನಿಯಾದ ಆಯಿಲ್ ಆಂಡ್‌ ನೇಚರ್‌ ಗ್ಯಾಸ್‌‌ ಕಾರ್ಪೊರೇಷನ್ (ONGC) ಮತ್ತು ಇಂಡಿಯನ್ ಆಯಿಲ್ ಕಾರ್ಪೊರೇಷನ್ (IOC) ಸಹ ದೇವಾಲಯದ ಟ್ರಸ್ಟ್‌ಗಿಂತ ಕಡಿಮೆ ಮೌಲ್ಯವನ್ನು ಹೊಂದಿವೆ.

ದೇಶದಲ್ಲಿ ಕೇವಲ ಎರಡು ಡಜನ್ ಕಂಪನಿಗಳು ಮಾತ್ರ ದೇವಾಲಯದ ಟ್ರಸ್ಟ್‌ನ ಒಟ್ಟು ಮೌಲ್ಯಕ್ಕಿಂತ ಹೆಚ್ಚಿನ ಮಾರುಕಟ್ಟೆ ಮೌಲ್ಯವನ್ನು ಹೊಂದಿವೆ. ಇವುಗಳಲ್ಲಿ ಬಿಲಿಯನೇರ್ ಮುಖೇಶ್ ಅಂಬಾನಿಯ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (17.53 ಲಕ್ಷ ಕೋಟಿ ರೂ.), ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ರೂ. 11.76 ಲಕ್ಷ ಕೋಟಿ), ಎಚ್‌ಡಿಎಫ್‌ಸಿ ಬ್ಯಾಂಕ್ (ರೂ. 8.34 ಲಕ್ಷ ಕೋಟಿ), ಇನ್ಫೋಸಿಸ್ (ರೂ. 6.37 ಲಕ್ಷ ಕೋಟಿ), ಐಸಿಐಸಿಐ ಬ್ಯಾಂಕ್ (ರೂ. 6.31 ಲಕ್ಷ ಕೋಟಿ), ಹಿಂದುಸ್ತಾನ್ ಯೂನಿಲಿವರ್ ಲಿಮಿಟೆಡ್ (5.92 ಲಕ್ಷ ಕೋಟಿ ರೂ.), ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (5.29 ಲಕ್ಷ ಕೋಟಿ ರೂ.), ಭಾರ್ತಿ ಏರ್‌ಟೆಲ್ (ರೂ. 4.54 ಲಕ್ಷ ಕೋಟಿ) ಮತ್ತು ಐಟಿಸಿ (ರೂ. 4.38 ಲಕ್ಷ ಕೋಟಿ) ಸೇರಿವೆ.

ತಿರುಮಲ ತಿರುಪತಿ ದೇವಸ್ಥಾನಗಳು (ಟಿಟಿಡಿ) ಮತ್ತೆ ಮತ್ತೆ ಶ್ರೀಮಂತವಾಗಿ ಬೆಳೆಯುತ್ತಿದ್ದು, ದೇವಸ್ಥಾನದಲ್ಲಿ ಭಕ್ತರು ನೀಡುವ ನಗದು ಮತ್ತು ಚಿನ್ನದ ಕಾಣಿಕೆಗಳು ಹೆಚ್ಚುತ್ತಲೇ ಇವೆ. ಬಡ್ಡಿದರಗಳ ಹೆಚ್ಚಳದ ದೃಷ್ಟಿಯಿಂದ ಬ್ಯಾಂಕ್‌ಗಳಲ್ಲಿನ ಸ್ಥಿರ ಠೇವಣಿಗಳು ಕೂಡಾ ಹೆಚ್ಚಿನ ಆದಾಯವನ್ನು ಗಳಿಸುತ್ತಿವೆ ಎಂದು ದೇವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಮಹಿಳಾ ಮೀಸಲಾತಿ ಜಾರಿಯಾಗದಿರಲು ‘ಉತ್ತರ ಭಾರತದ ಮನಸ್ಥಿತಿಯೆ’ ಕಾರಣ: ಶರದ್ ಪವಾರ್

ಟಿಟಿಡಿ ಒಡೆತನದ ಆಸ್ತಿಗಳಲ್ಲಿ ಭೂಮಿ, ಕಟ್ಟಡಗಳು, ಬ್ಯಾಂಕ್‌ಗಳಲ್ಲಿನ ನಗದು ಮತ್ತು ಚಿನ್ನದ ಠೇವಣಿಗಳು ಸೇರಿವೆ, ಇದನ್ನು ಭಕ್ತರು ದೇವಸ್ಥಾನಕ್ಕೆ ಕಾಣಿಕೆಯಾಗಿ ನೀಡುತ್ತಾರೆ.

ಭಕ್ತರಿಗೆ ಸೌಕರ್ಯಗಳನ್ನು ಒದಗಿಸುವ ಏಳು ಬೆಟ್ಟಗಳ ಮೇಲಿನ ಕಾಟೇಜ್‌ಗಳು ಮತ್ತು ಅತಿಥಿ ಗೃಹಗಳು ಸೇರಿದಂತೆ ಬೆಲೆಬಾಳುವ ಪುರಾತನ ಆಭರಣಗಳು ಮತ್ತು ಆಸ್ತಿಗಳಿಗೆ ಮೌಲ್ಯವನ್ನು ನಿಗದಿಪಡಿಸುವುದು ತಪ್ಪುದಾರಿಗೆಳೆಯುವಂತಿದೆ ಎಂದು ದೇವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ವಿಸ್ತಾರವಾದ ಏಳು ಬೆಟ್ಟಗಳನ್ನು ಭಕ್ತರು ಪವಿತ್ರ ಮತ್ತು ವೆಂಕಟೇಶ್ವರನ ವಾಸಸ್ಥಾನವೆಂದು ಪರಿಗಣಿಸುತ್ತಾರೆ. ಫೆಬ್ರವರಿಯಲ್ಲಿ ಮಂಡಿಸಿದ 2022-23ರ ಸುಮಾರು 3,100 ಕೋಟಿ ರೂ. ವಾರ್ಷಿಕ ಬಜೆಟ್‌ನಲ್ಲಿ, ಟಿಟಿಡಿ ಬ್ಯಾಂಕ್‌ಗಳಲ್ಲಿನ ನಗದು ಠೇವಣಿಗಳಿಂದ ಬಡ್ಡಿಯ ರೂಪದಲ್ಲಿ 668 ಕೋಟಿ ರೂ. ಗಿಂತ ಹೆಚ್ಚಿನ ಆದಾಯವನ್ನು ಯೋಜಿಸಿದೆ. ಅಲ್ಲದೆ, ಬೆಟ್ಟದ ದೇವಸ್ಥಾನದ ಹುಂಡಿಯಲ್ಲಿ ಸುಮಾರು 2.5 ಕೋಟಿ ಭಕ್ತರಿಂದ ನಗದು ಕಾಣಿಕೆ ರೂಪದಲ್ಲಿ 1,000 ಕೋಟಿ ರೂ. ಆದಾಯ ಬರಲಿದೆ.

ಇದನ್ನೂ ಓದಿ: ಮೀಸಲಾತಿ ಹೆಚ್ಚಳ ಮತ್ತು ಬಿಜೆಪಿಯ ಎರಡು ನಾಲಗೆ

ಟಿಟಿಡಿ ಆಂಧ್ರಪ್ರದೇಶ, ತಮಿಳುನಾಡು, ತೆಲಂಗಾಣ, ಒಡಿಶಾ, ಹರಿಯಾಣ, ಮಹಾರಾಷ್ಟ್ರ ಮತ್ತು ನವದೆಹಲಿಯಲ್ಲಿ ಹೆಚ್ಚಿನ ಸಂಖ್ಯೆಯ ದೇವಾಲಯಗಳನ್ನು ನಿರ್ವಹಿಸುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...