Homeಮುಖಪುಟತಿರುಪತಿ ದೇವಸ್ಥಾನ: 12.75 ಟನ್‌ ಚಿನ್ನ; ₹16 ಸಾವಿರ ಕೋಟಿ ಠೇವಣಿ; ಒಟ್ಟು ₹2.5 ಲಕ್ಷ...

ತಿರುಪತಿ ದೇವಸ್ಥಾನ: 12.75 ಟನ್‌ ಚಿನ್ನ; ₹16 ಸಾವಿರ ಕೋಟಿ ಠೇವಣಿ; ಒಟ್ಟು ₹2.5 ಲಕ್ಷ ಕೋಟಿಗೂ ಅಧಿಕ ಮೌಲ್ಯದ ಆಸ್ತಿ!

- Advertisement -
- Advertisement -

ಆಂದ್ರಪ್ರದೇಶದ ತಿರುಪತಿಯಲ್ಲಿರುವ ಜಗತ್ಪ್ರಸಿದ್ಧ ವೆಂಕಟೇಶ್ವರ ದೇವಸ್ಥಾನದ ನಿವ್ವಳ ಮೌಲ್ಯ 2.5 ಲಕ್ಷ ಕೋಟಿ ರೂ. ಎಂದು ವರದಿಯಾಗಿದೆ. ಇದು ಐಟಿ ಸೇವಾ ಸಂಸ್ಥೆಯಾದ ವಿಪ್ರೋ, ಆಹಾರ ಮತ್ತು ಪಾನೀಯ ಕಂಪನಿ ನೆಸ್ಲೆ ಮತ್ತು ಸರ್ಕಾರಿ ಸ್ವಾಮ್ಯದ ತೈಲ ಕಂಪೆನಿಯಾದ ಆಯಿಲ್ ಆಂಡ್‌ ನೇಚರ್‌ ಗ್ಯಾಸ್‌‌ ಕಾರ್ಪೊರೇಷನ್ (ONGC) ಮತ್ತು ಇಂಡಿಯನ್ ಆಯಿಲ್ ಕಾರ್ಪೊರೇಷನ್ (IOC)ನ ಮಾರುಕಟ್ಟೆ ಬಂಡವಾಳೀಕರಣಕ್ಕಿಂತ ಹೆಚ್ಚಿನ ಮೌಲ್ಯದ ಆಸ್ತಿಯಾಗಿದೆ.

ತಿರುಪತಿಯ ಪ್ರಧಾನ ದೇವರಿಗೆ ಸಮರ್ಪಿತವಾದ ದೇವಾಲಯದ ‘ತಿರುಮಲ ತಿರುಪತಿ ದೇವಸ್ಥಾನಂ’ ತನ್ನ ನಿವ್ವಳ ಮೌಲ್ಯವನ್ನು 1933 ರಲ್ಲಿ ಮೊದಲ ಬಾರಿಗೆ ಘೋಷಿಸಿತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದೇವಸ್ಥಾನದ ಆಸ್ತಿಯಲ್ಲಿ ಬ್ಯಾಂಕ್‌ಗಳಲ್ಲಿ 10.25 ಟನ್ ಚಿನ್ನದ ಠೇವಣಿ ಮತ್ತು 2.5 ಟನ್ ಚಿನ್ನಾಭರಣ ಇವೆ. ಸುಮಾರು 16 ಸಾವಿರ ಕೋಟಿ ರೂ. ಬ್ಯಾಂಕ್‌ಗಳಲ್ಲಿ ಠೇವಣಿ ಇದ್ದು, ದೇವಸ್ಥಾನಕ್ಕೆ ಭಾರತದಾದ್ಯಂತ 960 ಆಸ್ತಿಗಳು ಇವೆ. ಇವೆಲ್ಲದರ ಒಟ್ಟು ಮೌಲ್ಯ 2.5 ಲಕ್ಷ ಕೋಟಿ ರೂ.ಗೂ ಹೆಚ್ಚು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: 10% ಮೀಸಲಾತಿ: ಆರ್‌‌ಎಸ್‌ಎಸ್‌ ಮಂದಿ ಹಬ್ಬಿಸಿರುವ 100% ಸುಳ್ಳುಗಳು!

ಪ್ರಸ್ತುತ ವ್ಯಾಪಾರಿ ಬೆಲೆಯಲ್ಲಿ ಹೇಳಬಹುದಾದರೆ, ತಿರುಪತಿ ದೇವಸ್ಥಾನದ ನಿವ್ವಳ ಮೌಲ್ಯವು ಭಾರತದ ಹಲವಾರು ದೊಡ್ಡ ಕಾರ್ಪೋರೇಟ್‌ ಕಂಪೆನಿಗಳಿಗಿಂತ ಹಚ್ಚಿನದ್ದಾಗಿದೆ ಎಂದು ಎನ್‌ಡಿಟಿವಿ ತನ್ನ ವರದಿಯಲ್ಲಿ ಉಲ್ಲೇಖಿಸಿದೆ.

ಶುಕ್ರವಾರದ ವಹಿವಾಟಿನ ಮುಕ್ತಾಯಕ್ಕೆ ಬೆಂಗಳೂರು ಮೂಲದ ವಿಪ್ರೋ 2.14 ಲಕ್ಷ ಕೋಟಿ ರೂ. ಗಳಷ್ಟು ಮಾರುಕಟ್ಟೆ ಮೌಲ್ಯವನ್ನು ಹೊಂದಿದ್ದು, ಅಲ್ಟ್ರಾಟೆಕ್ ಸಿಮೆಂಟ್ 1.99 ಲಕ್ಷ ಕೋಟಿ ರೂ.ಗಳ ಮಾರುಕಟ್ಟೆ ಮೌಲ್ಯವನ್ನು ಹೊಂದಿದೆ.

ಸ್ವಿಸ್ ಬಹುರಾಷ್ಟ್ರೀಯ ಆಹಾರ ಮತ್ತು ಪಾನೀಯದ ಪ್ರಮುಖ ಸಂಸ್ಥೆಯಾದ ನೆಸ್ಲೆಯ ಭಾರತದ ಘಟಕವು 1.96 ಲಕ್ಷ ಕೋಟಿ ರೂ.ಗಳ ಮಾರುಕಟ್ಟೆ ಮೌಲ್ಯವನ್ನು ಹೊಂದಿದ್ದು, ತಿರುಪತಿಯ ಆಸ್ತಿಗಿಂತ ಕಡಿಮೆ ಮೌಲ್ಯವನ್ನು ಹೊಂದಿದೆ.

ಇದನ್ನೂ ಓದಿ: ಸಂಪತ್ತು ಅನುಭವಸಿದವರೇ ಮೀಸಲಾತಿ ವಿರೋಧಿಸುತ್ತಿದ್ದಾರೆ: ಸಿದ್ದರಾಮಯ್ಯ ವಿಷಾದ

ಸರ್ಕಾರಿ ಸ್ವಾಮ್ಯದ ತೈಲ ಕಂಪೆನಿಯಾದ ಆಯಿಲ್ ಆಂಡ್‌ ನೇಚರ್‌ ಗ್ಯಾಸ್‌‌ ಕಾರ್ಪೊರೇಷನ್ (ONGC) ಮತ್ತು ಇಂಡಿಯನ್ ಆಯಿಲ್ ಕಾರ್ಪೊರೇಷನ್ (IOC) ಸಹ ದೇವಾಲಯದ ಟ್ರಸ್ಟ್‌ಗಿಂತ ಕಡಿಮೆ ಮೌಲ್ಯವನ್ನು ಹೊಂದಿವೆ.

ದೇಶದಲ್ಲಿ ಕೇವಲ ಎರಡು ಡಜನ್ ಕಂಪನಿಗಳು ಮಾತ್ರ ದೇವಾಲಯದ ಟ್ರಸ್ಟ್‌ನ ಒಟ್ಟು ಮೌಲ್ಯಕ್ಕಿಂತ ಹೆಚ್ಚಿನ ಮಾರುಕಟ್ಟೆ ಮೌಲ್ಯವನ್ನು ಹೊಂದಿವೆ. ಇವುಗಳಲ್ಲಿ ಬಿಲಿಯನೇರ್ ಮುಖೇಶ್ ಅಂಬಾನಿಯ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (17.53 ಲಕ್ಷ ಕೋಟಿ ರೂ.), ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ರೂ. 11.76 ಲಕ್ಷ ಕೋಟಿ), ಎಚ್‌ಡಿಎಫ್‌ಸಿ ಬ್ಯಾಂಕ್ (ರೂ. 8.34 ಲಕ್ಷ ಕೋಟಿ), ಇನ್ಫೋಸಿಸ್ (ರೂ. 6.37 ಲಕ್ಷ ಕೋಟಿ), ಐಸಿಐಸಿಐ ಬ್ಯಾಂಕ್ (ರೂ. 6.31 ಲಕ್ಷ ಕೋಟಿ), ಹಿಂದುಸ್ತಾನ್ ಯೂನಿಲಿವರ್ ಲಿಮಿಟೆಡ್ (5.92 ಲಕ್ಷ ಕೋಟಿ ರೂ.), ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (5.29 ಲಕ್ಷ ಕೋಟಿ ರೂ.), ಭಾರ್ತಿ ಏರ್‌ಟೆಲ್ (ರೂ. 4.54 ಲಕ್ಷ ಕೋಟಿ) ಮತ್ತು ಐಟಿಸಿ (ರೂ. 4.38 ಲಕ್ಷ ಕೋಟಿ) ಸೇರಿವೆ.

ತಿರುಮಲ ತಿರುಪತಿ ದೇವಸ್ಥಾನಗಳು (ಟಿಟಿಡಿ) ಮತ್ತೆ ಮತ್ತೆ ಶ್ರೀಮಂತವಾಗಿ ಬೆಳೆಯುತ್ತಿದ್ದು, ದೇವಸ್ಥಾನದಲ್ಲಿ ಭಕ್ತರು ನೀಡುವ ನಗದು ಮತ್ತು ಚಿನ್ನದ ಕಾಣಿಕೆಗಳು ಹೆಚ್ಚುತ್ತಲೇ ಇವೆ. ಬಡ್ಡಿದರಗಳ ಹೆಚ್ಚಳದ ದೃಷ್ಟಿಯಿಂದ ಬ್ಯಾಂಕ್‌ಗಳಲ್ಲಿನ ಸ್ಥಿರ ಠೇವಣಿಗಳು ಕೂಡಾ ಹೆಚ್ಚಿನ ಆದಾಯವನ್ನು ಗಳಿಸುತ್ತಿವೆ ಎಂದು ದೇವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಮಹಿಳಾ ಮೀಸಲಾತಿ ಜಾರಿಯಾಗದಿರಲು ‘ಉತ್ತರ ಭಾರತದ ಮನಸ್ಥಿತಿಯೆ’ ಕಾರಣ: ಶರದ್ ಪವಾರ್

ಟಿಟಿಡಿ ಒಡೆತನದ ಆಸ್ತಿಗಳಲ್ಲಿ ಭೂಮಿ, ಕಟ್ಟಡಗಳು, ಬ್ಯಾಂಕ್‌ಗಳಲ್ಲಿನ ನಗದು ಮತ್ತು ಚಿನ್ನದ ಠೇವಣಿಗಳು ಸೇರಿವೆ, ಇದನ್ನು ಭಕ್ತರು ದೇವಸ್ಥಾನಕ್ಕೆ ಕಾಣಿಕೆಯಾಗಿ ನೀಡುತ್ತಾರೆ.

ಭಕ್ತರಿಗೆ ಸೌಕರ್ಯಗಳನ್ನು ಒದಗಿಸುವ ಏಳು ಬೆಟ್ಟಗಳ ಮೇಲಿನ ಕಾಟೇಜ್‌ಗಳು ಮತ್ತು ಅತಿಥಿ ಗೃಹಗಳು ಸೇರಿದಂತೆ ಬೆಲೆಬಾಳುವ ಪುರಾತನ ಆಭರಣಗಳು ಮತ್ತು ಆಸ್ತಿಗಳಿಗೆ ಮೌಲ್ಯವನ್ನು ನಿಗದಿಪಡಿಸುವುದು ತಪ್ಪುದಾರಿಗೆಳೆಯುವಂತಿದೆ ಎಂದು ದೇವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ವಿಸ್ತಾರವಾದ ಏಳು ಬೆಟ್ಟಗಳನ್ನು ಭಕ್ತರು ಪವಿತ್ರ ಮತ್ತು ವೆಂಕಟೇಶ್ವರನ ವಾಸಸ್ಥಾನವೆಂದು ಪರಿಗಣಿಸುತ್ತಾರೆ. ಫೆಬ್ರವರಿಯಲ್ಲಿ ಮಂಡಿಸಿದ 2022-23ರ ಸುಮಾರು 3,100 ಕೋಟಿ ರೂ. ವಾರ್ಷಿಕ ಬಜೆಟ್‌ನಲ್ಲಿ, ಟಿಟಿಡಿ ಬ್ಯಾಂಕ್‌ಗಳಲ್ಲಿನ ನಗದು ಠೇವಣಿಗಳಿಂದ ಬಡ್ಡಿಯ ರೂಪದಲ್ಲಿ 668 ಕೋಟಿ ರೂ. ಗಿಂತ ಹೆಚ್ಚಿನ ಆದಾಯವನ್ನು ಯೋಜಿಸಿದೆ. ಅಲ್ಲದೆ, ಬೆಟ್ಟದ ದೇವಸ್ಥಾನದ ಹುಂಡಿಯಲ್ಲಿ ಸುಮಾರು 2.5 ಕೋಟಿ ಭಕ್ತರಿಂದ ನಗದು ಕಾಣಿಕೆ ರೂಪದಲ್ಲಿ 1,000 ಕೋಟಿ ರೂ. ಆದಾಯ ಬರಲಿದೆ.

ಇದನ್ನೂ ಓದಿ: ಮೀಸಲಾತಿ ಹೆಚ್ಚಳ ಮತ್ತು ಬಿಜೆಪಿಯ ಎರಡು ನಾಲಗೆ

ಟಿಟಿಡಿ ಆಂಧ್ರಪ್ರದೇಶ, ತಮಿಳುನಾಡು, ತೆಲಂಗಾಣ, ಒಡಿಶಾ, ಹರಿಯಾಣ, ಮಹಾರಾಷ್ಟ್ರ ಮತ್ತು ನವದೆಹಲಿಯಲ್ಲಿ ಹೆಚ್ಚಿನ ಸಂಖ್ಯೆಯ ದೇವಾಲಯಗಳನ್ನು ನಿರ್ವಹಿಸುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....