Homeಮುಖಪುಟತಿರುಪತಿ ದೇವಸ್ಥಾನ: 12.75 ಟನ್‌ ಚಿನ್ನ; ₹16 ಸಾವಿರ ಕೋಟಿ ಠೇವಣಿ; ಒಟ್ಟು ₹2.5 ಲಕ್ಷ...

ತಿರುಪತಿ ದೇವಸ್ಥಾನ: 12.75 ಟನ್‌ ಚಿನ್ನ; ₹16 ಸಾವಿರ ಕೋಟಿ ಠೇವಣಿ; ಒಟ್ಟು ₹2.5 ಲಕ್ಷ ಕೋಟಿಗೂ ಅಧಿಕ ಮೌಲ್ಯದ ಆಸ್ತಿ!

- Advertisement -
- Advertisement -

ಆಂದ್ರಪ್ರದೇಶದ ತಿರುಪತಿಯಲ್ಲಿರುವ ಜಗತ್ಪ್ರಸಿದ್ಧ ವೆಂಕಟೇಶ್ವರ ದೇವಸ್ಥಾನದ ನಿವ್ವಳ ಮೌಲ್ಯ 2.5 ಲಕ್ಷ ಕೋಟಿ ರೂ. ಎಂದು ವರದಿಯಾಗಿದೆ. ಇದು ಐಟಿ ಸೇವಾ ಸಂಸ್ಥೆಯಾದ ವಿಪ್ರೋ, ಆಹಾರ ಮತ್ತು ಪಾನೀಯ ಕಂಪನಿ ನೆಸ್ಲೆ ಮತ್ತು ಸರ್ಕಾರಿ ಸ್ವಾಮ್ಯದ ತೈಲ ಕಂಪೆನಿಯಾದ ಆಯಿಲ್ ಆಂಡ್‌ ನೇಚರ್‌ ಗ್ಯಾಸ್‌‌ ಕಾರ್ಪೊರೇಷನ್ (ONGC) ಮತ್ತು ಇಂಡಿಯನ್ ಆಯಿಲ್ ಕಾರ್ಪೊರೇಷನ್ (IOC)ನ ಮಾರುಕಟ್ಟೆ ಬಂಡವಾಳೀಕರಣಕ್ಕಿಂತ ಹೆಚ್ಚಿನ ಮೌಲ್ಯದ ಆಸ್ತಿಯಾಗಿದೆ.

ತಿರುಪತಿಯ ಪ್ರಧಾನ ದೇವರಿಗೆ ಸಮರ್ಪಿತವಾದ ದೇವಾಲಯದ ‘ತಿರುಮಲ ತಿರುಪತಿ ದೇವಸ್ಥಾನಂ’ ತನ್ನ ನಿವ್ವಳ ಮೌಲ್ಯವನ್ನು 1933 ರಲ್ಲಿ ಮೊದಲ ಬಾರಿಗೆ ಘೋಷಿಸಿತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದೇವಸ್ಥಾನದ ಆಸ್ತಿಯಲ್ಲಿ ಬ್ಯಾಂಕ್‌ಗಳಲ್ಲಿ 10.25 ಟನ್ ಚಿನ್ನದ ಠೇವಣಿ ಮತ್ತು 2.5 ಟನ್ ಚಿನ್ನಾಭರಣ ಇವೆ. ಸುಮಾರು 16 ಸಾವಿರ ಕೋಟಿ ರೂ. ಬ್ಯಾಂಕ್‌ಗಳಲ್ಲಿ ಠೇವಣಿ ಇದ್ದು, ದೇವಸ್ಥಾನಕ್ಕೆ ಭಾರತದಾದ್ಯಂತ 960 ಆಸ್ತಿಗಳು ಇವೆ. ಇವೆಲ್ಲದರ ಒಟ್ಟು ಮೌಲ್ಯ 2.5 ಲಕ್ಷ ಕೋಟಿ ರೂ.ಗೂ ಹೆಚ್ಚು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: 10% ಮೀಸಲಾತಿ: ಆರ್‌‌ಎಸ್‌ಎಸ್‌ ಮಂದಿ ಹಬ್ಬಿಸಿರುವ 100% ಸುಳ್ಳುಗಳು!

ಪ್ರಸ್ತುತ ವ್ಯಾಪಾರಿ ಬೆಲೆಯಲ್ಲಿ ಹೇಳಬಹುದಾದರೆ, ತಿರುಪತಿ ದೇವಸ್ಥಾನದ ನಿವ್ವಳ ಮೌಲ್ಯವು ಭಾರತದ ಹಲವಾರು ದೊಡ್ಡ ಕಾರ್ಪೋರೇಟ್‌ ಕಂಪೆನಿಗಳಿಗಿಂತ ಹಚ್ಚಿನದ್ದಾಗಿದೆ ಎಂದು ಎನ್‌ಡಿಟಿವಿ ತನ್ನ ವರದಿಯಲ್ಲಿ ಉಲ್ಲೇಖಿಸಿದೆ.

ಶುಕ್ರವಾರದ ವಹಿವಾಟಿನ ಮುಕ್ತಾಯಕ್ಕೆ ಬೆಂಗಳೂರು ಮೂಲದ ವಿಪ್ರೋ 2.14 ಲಕ್ಷ ಕೋಟಿ ರೂ. ಗಳಷ್ಟು ಮಾರುಕಟ್ಟೆ ಮೌಲ್ಯವನ್ನು ಹೊಂದಿದ್ದು, ಅಲ್ಟ್ರಾಟೆಕ್ ಸಿಮೆಂಟ್ 1.99 ಲಕ್ಷ ಕೋಟಿ ರೂ.ಗಳ ಮಾರುಕಟ್ಟೆ ಮೌಲ್ಯವನ್ನು ಹೊಂದಿದೆ.

ಸ್ವಿಸ್ ಬಹುರಾಷ್ಟ್ರೀಯ ಆಹಾರ ಮತ್ತು ಪಾನೀಯದ ಪ್ರಮುಖ ಸಂಸ್ಥೆಯಾದ ನೆಸ್ಲೆಯ ಭಾರತದ ಘಟಕವು 1.96 ಲಕ್ಷ ಕೋಟಿ ರೂ.ಗಳ ಮಾರುಕಟ್ಟೆ ಮೌಲ್ಯವನ್ನು ಹೊಂದಿದ್ದು, ತಿರುಪತಿಯ ಆಸ್ತಿಗಿಂತ ಕಡಿಮೆ ಮೌಲ್ಯವನ್ನು ಹೊಂದಿದೆ.

ಇದನ್ನೂ ಓದಿ: ಸಂಪತ್ತು ಅನುಭವಸಿದವರೇ ಮೀಸಲಾತಿ ವಿರೋಧಿಸುತ್ತಿದ್ದಾರೆ: ಸಿದ್ದರಾಮಯ್ಯ ವಿಷಾದ

ಸರ್ಕಾರಿ ಸ್ವಾಮ್ಯದ ತೈಲ ಕಂಪೆನಿಯಾದ ಆಯಿಲ್ ಆಂಡ್‌ ನೇಚರ್‌ ಗ್ಯಾಸ್‌‌ ಕಾರ್ಪೊರೇಷನ್ (ONGC) ಮತ್ತು ಇಂಡಿಯನ್ ಆಯಿಲ್ ಕಾರ್ಪೊರೇಷನ್ (IOC) ಸಹ ದೇವಾಲಯದ ಟ್ರಸ್ಟ್‌ಗಿಂತ ಕಡಿಮೆ ಮೌಲ್ಯವನ್ನು ಹೊಂದಿವೆ.

ದೇಶದಲ್ಲಿ ಕೇವಲ ಎರಡು ಡಜನ್ ಕಂಪನಿಗಳು ಮಾತ್ರ ದೇವಾಲಯದ ಟ್ರಸ್ಟ್‌ನ ಒಟ್ಟು ಮೌಲ್ಯಕ್ಕಿಂತ ಹೆಚ್ಚಿನ ಮಾರುಕಟ್ಟೆ ಮೌಲ್ಯವನ್ನು ಹೊಂದಿವೆ. ಇವುಗಳಲ್ಲಿ ಬಿಲಿಯನೇರ್ ಮುಖೇಶ್ ಅಂಬಾನಿಯ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (17.53 ಲಕ್ಷ ಕೋಟಿ ರೂ.), ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ರೂ. 11.76 ಲಕ್ಷ ಕೋಟಿ), ಎಚ್‌ಡಿಎಫ್‌ಸಿ ಬ್ಯಾಂಕ್ (ರೂ. 8.34 ಲಕ್ಷ ಕೋಟಿ), ಇನ್ಫೋಸಿಸ್ (ರೂ. 6.37 ಲಕ್ಷ ಕೋಟಿ), ಐಸಿಐಸಿಐ ಬ್ಯಾಂಕ್ (ರೂ. 6.31 ಲಕ್ಷ ಕೋಟಿ), ಹಿಂದುಸ್ತಾನ್ ಯೂನಿಲಿವರ್ ಲಿಮಿಟೆಡ್ (5.92 ಲಕ್ಷ ಕೋಟಿ ರೂ.), ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (5.29 ಲಕ್ಷ ಕೋಟಿ ರೂ.), ಭಾರ್ತಿ ಏರ್‌ಟೆಲ್ (ರೂ. 4.54 ಲಕ್ಷ ಕೋಟಿ) ಮತ್ತು ಐಟಿಸಿ (ರೂ. 4.38 ಲಕ್ಷ ಕೋಟಿ) ಸೇರಿವೆ.

ತಿರುಮಲ ತಿರುಪತಿ ದೇವಸ್ಥಾನಗಳು (ಟಿಟಿಡಿ) ಮತ್ತೆ ಮತ್ತೆ ಶ್ರೀಮಂತವಾಗಿ ಬೆಳೆಯುತ್ತಿದ್ದು, ದೇವಸ್ಥಾನದಲ್ಲಿ ಭಕ್ತರು ನೀಡುವ ನಗದು ಮತ್ತು ಚಿನ್ನದ ಕಾಣಿಕೆಗಳು ಹೆಚ್ಚುತ್ತಲೇ ಇವೆ. ಬಡ್ಡಿದರಗಳ ಹೆಚ್ಚಳದ ದೃಷ್ಟಿಯಿಂದ ಬ್ಯಾಂಕ್‌ಗಳಲ್ಲಿನ ಸ್ಥಿರ ಠೇವಣಿಗಳು ಕೂಡಾ ಹೆಚ್ಚಿನ ಆದಾಯವನ್ನು ಗಳಿಸುತ್ತಿವೆ ಎಂದು ದೇವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಮಹಿಳಾ ಮೀಸಲಾತಿ ಜಾರಿಯಾಗದಿರಲು ‘ಉತ್ತರ ಭಾರತದ ಮನಸ್ಥಿತಿಯೆ’ ಕಾರಣ: ಶರದ್ ಪವಾರ್

ಟಿಟಿಡಿ ಒಡೆತನದ ಆಸ್ತಿಗಳಲ್ಲಿ ಭೂಮಿ, ಕಟ್ಟಡಗಳು, ಬ್ಯಾಂಕ್‌ಗಳಲ್ಲಿನ ನಗದು ಮತ್ತು ಚಿನ್ನದ ಠೇವಣಿಗಳು ಸೇರಿವೆ, ಇದನ್ನು ಭಕ್ತರು ದೇವಸ್ಥಾನಕ್ಕೆ ಕಾಣಿಕೆಯಾಗಿ ನೀಡುತ್ತಾರೆ.

ಭಕ್ತರಿಗೆ ಸೌಕರ್ಯಗಳನ್ನು ಒದಗಿಸುವ ಏಳು ಬೆಟ್ಟಗಳ ಮೇಲಿನ ಕಾಟೇಜ್‌ಗಳು ಮತ್ತು ಅತಿಥಿ ಗೃಹಗಳು ಸೇರಿದಂತೆ ಬೆಲೆಬಾಳುವ ಪುರಾತನ ಆಭರಣಗಳು ಮತ್ತು ಆಸ್ತಿಗಳಿಗೆ ಮೌಲ್ಯವನ್ನು ನಿಗದಿಪಡಿಸುವುದು ತಪ್ಪುದಾರಿಗೆಳೆಯುವಂತಿದೆ ಎಂದು ದೇವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ವಿಸ್ತಾರವಾದ ಏಳು ಬೆಟ್ಟಗಳನ್ನು ಭಕ್ತರು ಪವಿತ್ರ ಮತ್ತು ವೆಂಕಟೇಶ್ವರನ ವಾಸಸ್ಥಾನವೆಂದು ಪರಿಗಣಿಸುತ್ತಾರೆ. ಫೆಬ್ರವರಿಯಲ್ಲಿ ಮಂಡಿಸಿದ 2022-23ರ ಸುಮಾರು 3,100 ಕೋಟಿ ರೂ. ವಾರ್ಷಿಕ ಬಜೆಟ್‌ನಲ್ಲಿ, ಟಿಟಿಡಿ ಬ್ಯಾಂಕ್‌ಗಳಲ್ಲಿನ ನಗದು ಠೇವಣಿಗಳಿಂದ ಬಡ್ಡಿಯ ರೂಪದಲ್ಲಿ 668 ಕೋಟಿ ರೂ. ಗಿಂತ ಹೆಚ್ಚಿನ ಆದಾಯವನ್ನು ಯೋಜಿಸಿದೆ. ಅಲ್ಲದೆ, ಬೆಟ್ಟದ ದೇವಸ್ಥಾನದ ಹುಂಡಿಯಲ್ಲಿ ಸುಮಾರು 2.5 ಕೋಟಿ ಭಕ್ತರಿಂದ ನಗದು ಕಾಣಿಕೆ ರೂಪದಲ್ಲಿ 1,000 ಕೋಟಿ ರೂ. ಆದಾಯ ಬರಲಿದೆ.

ಇದನ್ನೂ ಓದಿ: ಮೀಸಲಾತಿ ಹೆಚ್ಚಳ ಮತ್ತು ಬಿಜೆಪಿಯ ಎರಡು ನಾಲಗೆ

ಟಿಟಿಡಿ ಆಂಧ್ರಪ್ರದೇಶ, ತಮಿಳುನಾಡು, ತೆಲಂಗಾಣ, ಒಡಿಶಾ, ಹರಿಯಾಣ, ಮಹಾರಾಷ್ಟ್ರ ಮತ್ತು ನವದೆಹಲಿಯಲ್ಲಿ ಹೆಚ್ಚಿನ ಸಂಖ್ಯೆಯ ದೇವಾಲಯಗಳನ್ನು ನಿರ್ವಹಿಸುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...