Homeಮುಖಪುಟತಿರುಪತಿ ದೇವಸ್ಥಾನ: 12.75 ಟನ್‌ ಚಿನ್ನ; ₹16 ಸಾವಿರ ಕೋಟಿ ಠೇವಣಿ; ಒಟ್ಟು ₹2.5 ಲಕ್ಷ...

ತಿರುಪತಿ ದೇವಸ್ಥಾನ: 12.75 ಟನ್‌ ಚಿನ್ನ; ₹16 ಸಾವಿರ ಕೋಟಿ ಠೇವಣಿ; ಒಟ್ಟು ₹2.5 ಲಕ್ಷ ಕೋಟಿಗೂ ಅಧಿಕ ಮೌಲ್ಯದ ಆಸ್ತಿ!

- Advertisement -
- Advertisement -

ಆಂದ್ರಪ್ರದೇಶದ ತಿರುಪತಿಯಲ್ಲಿರುವ ಜಗತ್ಪ್ರಸಿದ್ಧ ವೆಂಕಟೇಶ್ವರ ದೇವಸ್ಥಾನದ ನಿವ್ವಳ ಮೌಲ್ಯ 2.5 ಲಕ್ಷ ಕೋಟಿ ರೂ. ಎಂದು ವರದಿಯಾಗಿದೆ. ಇದು ಐಟಿ ಸೇವಾ ಸಂಸ್ಥೆಯಾದ ವಿಪ್ರೋ, ಆಹಾರ ಮತ್ತು ಪಾನೀಯ ಕಂಪನಿ ನೆಸ್ಲೆ ಮತ್ತು ಸರ್ಕಾರಿ ಸ್ವಾಮ್ಯದ ತೈಲ ಕಂಪೆನಿಯಾದ ಆಯಿಲ್ ಆಂಡ್‌ ನೇಚರ್‌ ಗ್ಯಾಸ್‌‌ ಕಾರ್ಪೊರೇಷನ್ (ONGC) ಮತ್ತು ಇಂಡಿಯನ್ ಆಯಿಲ್ ಕಾರ್ಪೊರೇಷನ್ (IOC)ನ ಮಾರುಕಟ್ಟೆ ಬಂಡವಾಳೀಕರಣಕ್ಕಿಂತ ಹೆಚ್ಚಿನ ಮೌಲ್ಯದ ಆಸ್ತಿಯಾಗಿದೆ.

ತಿರುಪತಿಯ ಪ್ರಧಾನ ದೇವರಿಗೆ ಸಮರ್ಪಿತವಾದ ದೇವಾಲಯದ ‘ತಿರುಮಲ ತಿರುಪತಿ ದೇವಸ್ಥಾನಂ’ ತನ್ನ ನಿವ್ವಳ ಮೌಲ್ಯವನ್ನು 1933 ರಲ್ಲಿ ಮೊದಲ ಬಾರಿಗೆ ಘೋಷಿಸಿತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದೇವಸ್ಥಾನದ ಆಸ್ತಿಯಲ್ಲಿ ಬ್ಯಾಂಕ್‌ಗಳಲ್ಲಿ 10.25 ಟನ್ ಚಿನ್ನದ ಠೇವಣಿ ಮತ್ತು 2.5 ಟನ್ ಚಿನ್ನಾಭರಣ ಇವೆ. ಸುಮಾರು 16 ಸಾವಿರ ಕೋಟಿ ರೂ. ಬ್ಯಾಂಕ್‌ಗಳಲ್ಲಿ ಠೇವಣಿ ಇದ್ದು, ದೇವಸ್ಥಾನಕ್ಕೆ ಭಾರತದಾದ್ಯಂತ 960 ಆಸ್ತಿಗಳು ಇವೆ. ಇವೆಲ್ಲದರ ಒಟ್ಟು ಮೌಲ್ಯ 2.5 ಲಕ್ಷ ಕೋಟಿ ರೂ.ಗೂ ಹೆಚ್ಚು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: 10% ಮೀಸಲಾತಿ: ಆರ್‌‌ಎಸ್‌ಎಸ್‌ ಮಂದಿ ಹಬ್ಬಿಸಿರುವ 100% ಸುಳ್ಳುಗಳು!

ಪ್ರಸ್ತುತ ವ್ಯಾಪಾರಿ ಬೆಲೆಯಲ್ಲಿ ಹೇಳಬಹುದಾದರೆ, ತಿರುಪತಿ ದೇವಸ್ಥಾನದ ನಿವ್ವಳ ಮೌಲ್ಯವು ಭಾರತದ ಹಲವಾರು ದೊಡ್ಡ ಕಾರ್ಪೋರೇಟ್‌ ಕಂಪೆನಿಗಳಿಗಿಂತ ಹಚ್ಚಿನದ್ದಾಗಿದೆ ಎಂದು ಎನ್‌ಡಿಟಿವಿ ತನ್ನ ವರದಿಯಲ್ಲಿ ಉಲ್ಲೇಖಿಸಿದೆ.

ಶುಕ್ರವಾರದ ವಹಿವಾಟಿನ ಮುಕ್ತಾಯಕ್ಕೆ ಬೆಂಗಳೂರು ಮೂಲದ ವಿಪ್ರೋ 2.14 ಲಕ್ಷ ಕೋಟಿ ರೂ. ಗಳಷ್ಟು ಮಾರುಕಟ್ಟೆ ಮೌಲ್ಯವನ್ನು ಹೊಂದಿದ್ದು, ಅಲ್ಟ್ರಾಟೆಕ್ ಸಿಮೆಂಟ್ 1.99 ಲಕ್ಷ ಕೋಟಿ ರೂ.ಗಳ ಮಾರುಕಟ್ಟೆ ಮೌಲ್ಯವನ್ನು ಹೊಂದಿದೆ.

ಸ್ವಿಸ್ ಬಹುರಾಷ್ಟ್ರೀಯ ಆಹಾರ ಮತ್ತು ಪಾನೀಯದ ಪ್ರಮುಖ ಸಂಸ್ಥೆಯಾದ ನೆಸ್ಲೆಯ ಭಾರತದ ಘಟಕವು 1.96 ಲಕ್ಷ ಕೋಟಿ ರೂ.ಗಳ ಮಾರುಕಟ್ಟೆ ಮೌಲ್ಯವನ್ನು ಹೊಂದಿದ್ದು, ತಿರುಪತಿಯ ಆಸ್ತಿಗಿಂತ ಕಡಿಮೆ ಮೌಲ್ಯವನ್ನು ಹೊಂದಿದೆ.

ಇದನ್ನೂ ಓದಿ: ಸಂಪತ್ತು ಅನುಭವಸಿದವರೇ ಮೀಸಲಾತಿ ವಿರೋಧಿಸುತ್ತಿದ್ದಾರೆ: ಸಿದ್ದರಾಮಯ್ಯ ವಿಷಾದ

ಸರ್ಕಾರಿ ಸ್ವಾಮ್ಯದ ತೈಲ ಕಂಪೆನಿಯಾದ ಆಯಿಲ್ ಆಂಡ್‌ ನೇಚರ್‌ ಗ್ಯಾಸ್‌‌ ಕಾರ್ಪೊರೇಷನ್ (ONGC) ಮತ್ತು ಇಂಡಿಯನ್ ಆಯಿಲ್ ಕಾರ್ಪೊರೇಷನ್ (IOC) ಸಹ ದೇವಾಲಯದ ಟ್ರಸ್ಟ್‌ಗಿಂತ ಕಡಿಮೆ ಮೌಲ್ಯವನ್ನು ಹೊಂದಿವೆ.

ದೇಶದಲ್ಲಿ ಕೇವಲ ಎರಡು ಡಜನ್ ಕಂಪನಿಗಳು ಮಾತ್ರ ದೇವಾಲಯದ ಟ್ರಸ್ಟ್‌ನ ಒಟ್ಟು ಮೌಲ್ಯಕ್ಕಿಂತ ಹೆಚ್ಚಿನ ಮಾರುಕಟ್ಟೆ ಮೌಲ್ಯವನ್ನು ಹೊಂದಿವೆ. ಇವುಗಳಲ್ಲಿ ಬಿಲಿಯನೇರ್ ಮುಖೇಶ್ ಅಂಬಾನಿಯ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (17.53 ಲಕ್ಷ ಕೋಟಿ ರೂ.), ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ರೂ. 11.76 ಲಕ್ಷ ಕೋಟಿ), ಎಚ್‌ಡಿಎಫ್‌ಸಿ ಬ್ಯಾಂಕ್ (ರೂ. 8.34 ಲಕ್ಷ ಕೋಟಿ), ಇನ್ಫೋಸಿಸ್ (ರೂ. 6.37 ಲಕ್ಷ ಕೋಟಿ), ಐಸಿಐಸಿಐ ಬ್ಯಾಂಕ್ (ರೂ. 6.31 ಲಕ್ಷ ಕೋಟಿ), ಹಿಂದುಸ್ತಾನ್ ಯೂನಿಲಿವರ್ ಲಿಮಿಟೆಡ್ (5.92 ಲಕ್ಷ ಕೋಟಿ ರೂ.), ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (5.29 ಲಕ್ಷ ಕೋಟಿ ರೂ.), ಭಾರ್ತಿ ಏರ್‌ಟೆಲ್ (ರೂ. 4.54 ಲಕ್ಷ ಕೋಟಿ) ಮತ್ತು ಐಟಿಸಿ (ರೂ. 4.38 ಲಕ್ಷ ಕೋಟಿ) ಸೇರಿವೆ.

ತಿರುಮಲ ತಿರುಪತಿ ದೇವಸ್ಥಾನಗಳು (ಟಿಟಿಡಿ) ಮತ್ತೆ ಮತ್ತೆ ಶ್ರೀಮಂತವಾಗಿ ಬೆಳೆಯುತ್ತಿದ್ದು, ದೇವಸ್ಥಾನದಲ್ಲಿ ಭಕ್ತರು ನೀಡುವ ನಗದು ಮತ್ತು ಚಿನ್ನದ ಕಾಣಿಕೆಗಳು ಹೆಚ್ಚುತ್ತಲೇ ಇವೆ. ಬಡ್ಡಿದರಗಳ ಹೆಚ್ಚಳದ ದೃಷ್ಟಿಯಿಂದ ಬ್ಯಾಂಕ್‌ಗಳಲ್ಲಿನ ಸ್ಥಿರ ಠೇವಣಿಗಳು ಕೂಡಾ ಹೆಚ್ಚಿನ ಆದಾಯವನ್ನು ಗಳಿಸುತ್ತಿವೆ ಎಂದು ದೇವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಮಹಿಳಾ ಮೀಸಲಾತಿ ಜಾರಿಯಾಗದಿರಲು ‘ಉತ್ತರ ಭಾರತದ ಮನಸ್ಥಿತಿಯೆ’ ಕಾರಣ: ಶರದ್ ಪವಾರ್

ಟಿಟಿಡಿ ಒಡೆತನದ ಆಸ್ತಿಗಳಲ್ಲಿ ಭೂಮಿ, ಕಟ್ಟಡಗಳು, ಬ್ಯಾಂಕ್‌ಗಳಲ್ಲಿನ ನಗದು ಮತ್ತು ಚಿನ್ನದ ಠೇವಣಿಗಳು ಸೇರಿವೆ, ಇದನ್ನು ಭಕ್ತರು ದೇವಸ್ಥಾನಕ್ಕೆ ಕಾಣಿಕೆಯಾಗಿ ನೀಡುತ್ತಾರೆ.

ಭಕ್ತರಿಗೆ ಸೌಕರ್ಯಗಳನ್ನು ಒದಗಿಸುವ ಏಳು ಬೆಟ್ಟಗಳ ಮೇಲಿನ ಕಾಟೇಜ್‌ಗಳು ಮತ್ತು ಅತಿಥಿ ಗೃಹಗಳು ಸೇರಿದಂತೆ ಬೆಲೆಬಾಳುವ ಪುರಾತನ ಆಭರಣಗಳು ಮತ್ತು ಆಸ್ತಿಗಳಿಗೆ ಮೌಲ್ಯವನ್ನು ನಿಗದಿಪಡಿಸುವುದು ತಪ್ಪುದಾರಿಗೆಳೆಯುವಂತಿದೆ ಎಂದು ದೇವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ವಿಸ್ತಾರವಾದ ಏಳು ಬೆಟ್ಟಗಳನ್ನು ಭಕ್ತರು ಪವಿತ್ರ ಮತ್ತು ವೆಂಕಟೇಶ್ವರನ ವಾಸಸ್ಥಾನವೆಂದು ಪರಿಗಣಿಸುತ್ತಾರೆ. ಫೆಬ್ರವರಿಯಲ್ಲಿ ಮಂಡಿಸಿದ 2022-23ರ ಸುಮಾರು 3,100 ಕೋಟಿ ರೂ. ವಾರ್ಷಿಕ ಬಜೆಟ್‌ನಲ್ಲಿ, ಟಿಟಿಡಿ ಬ್ಯಾಂಕ್‌ಗಳಲ್ಲಿನ ನಗದು ಠೇವಣಿಗಳಿಂದ ಬಡ್ಡಿಯ ರೂಪದಲ್ಲಿ 668 ಕೋಟಿ ರೂ. ಗಿಂತ ಹೆಚ್ಚಿನ ಆದಾಯವನ್ನು ಯೋಜಿಸಿದೆ. ಅಲ್ಲದೆ, ಬೆಟ್ಟದ ದೇವಸ್ಥಾನದ ಹುಂಡಿಯಲ್ಲಿ ಸುಮಾರು 2.5 ಕೋಟಿ ಭಕ್ತರಿಂದ ನಗದು ಕಾಣಿಕೆ ರೂಪದಲ್ಲಿ 1,000 ಕೋಟಿ ರೂ. ಆದಾಯ ಬರಲಿದೆ.

ಇದನ್ನೂ ಓದಿ: ಮೀಸಲಾತಿ ಹೆಚ್ಚಳ ಮತ್ತು ಬಿಜೆಪಿಯ ಎರಡು ನಾಲಗೆ

ಟಿಟಿಡಿ ಆಂಧ್ರಪ್ರದೇಶ, ತಮಿಳುನಾಡು, ತೆಲಂಗಾಣ, ಒಡಿಶಾ, ಹರಿಯಾಣ, ಮಹಾರಾಷ್ಟ್ರ ಮತ್ತು ನವದೆಹಲಿಯಲ್ಲಿ ಹೆಚ್ಚಿನ ಸಂಖ್ಯೆಯ ದೇವಾಲಯಗಳನ್ನು ನಿರ್ವಹಿಸುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...