Homeಮುಖಪುಟತಿರುಪತಿ ದೇವಸ್ಥಾನ: 12.75 ಟನ್‌ ಚಿನ್ನ; ₹16 ಸಾವಿರ ಕೋಟಿ ಠೇವಣಿ; ಒಟ್ಟು ₹2.5 ಲಕ್ಷ...

ತಿರುಪತಿ ದೇವಸ್ಥಾನ: 12.75 ಟನ್‌ ಚಿನ್ನ; ₹16 ಸಾವಿರ ಕೋಟಿ ಠೇವಣಿ; ಒಟ್ಟು ₹2.5 ಲಕ್ಷ ಕೋಟಿಗೂ ಅಧಿಕ ಮೌಲ್ಯದ ಆಸ್ತಿ!

- Advertisement -
- Advertisement -

ಆಂದ್ರಪ್ರದೇಶದ ತಿರುಪತಿಯಲ್ಲಿರುವ ಜಗತ್ಪ್ರಸಿದ್ಧ ವೆಂಕಟೇಶ್ವರ ದೇವಸ್ಥಾನದ ನಿವ್ವಳ ಮೌಲ್ಯ 2.5 ಲಕ್ಷ ಕೋಟಿ ರೂ. ಎಂದು ವರದಿಯಾಗಿದೆ. ಇದು ಐಟಿ ಸೇವಾ ಸಂಸ್ಥೆಯಾದ ವಿಪ್ರೋ, ಆಹಾರ ಮತ್ತು ಪಾನೀಯ ಕಂಪನಿ ನೆಸ್ಲೆ ಮತ್ತು ಸರ್ಕಾರಿ ಸ್ವಾಮ್ಯದ ತೈಲ ಕಂಪೆನಿಯಾದ ಆಯಿಲ್ ಆಂಡ್‌ ನೇಚರ್‌ ಗ್ಯಾಸ್‌‌ ಕಾರ್ಪೊರೇಷನ್ (ONGC) ಮತ್ತು ಇಂಡಿಯನ್ ಆಯಿಲ್ ಕಾರ್ಪೊರೇಷನ್ (IOC)ನ ಮಾರುಕಟ್ಟೆ ಬಂಡವಾಳೀಕರಣಕ್ಕಿಂತ ಹೆಚ್ಚಿನ ಮೌಲ್ಯದ ಆಸ್ತಿಯಾಗಿದೆ.

ತಿರುಪತಿಯ ಪ್ರಧಾನ ದೇವರಿಗೆ ಸಮರ್ಪಿತವಾದ ದೇವಾಲಯದ ‘ತಿರುಮಲ ತಿರುಪತಿ ದೇವಸ್ಥಾನಂ’ ತನ್ನ ನಿವ್ವಳ ಮೌಲ್ಯವನ್ನು 1933 ರಲ್ಲಿ ಮೊದಲ ಬಾರಿಗೆ ಘೋಷಿಸಿತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದೇವಸ್ಥಾನದ ಆಸ್ತಿಯಲ್ಲಿ ಬ್ಯಾಂಕ್‌ಗಳಲ್ಲಿ 10.25 ಟನ್ ಚಿನ್ನದ ಠೇವಣಿ ಮತ್ತು 2.5 ಟನ್ ಚಿನ್ನಾಭರಣ ಇವೆ. ಸುಮಾರು 16 ಸಾವಿರ ಕೋಟಿ ರೂ. ಬ್ಯಾಂಕ್‌ಗಳಲ್ಲಿ ಠೇವಣಿ ಇದ್ದು, ದೇವಸ್ಥಾನಕ್ಕೆ ಭಾರತದಾದ್ಯಂತ 960 ಆಸ್ತಿಗಳು ಇವೆ. ಇವೆಲ್ಲದರ ಒಟ್ಟು ಮೌಲ್ಯ 2.5 ಲಕ್ಷ ಕೋಟಿ ರೂ.ಗೂ ಹೆಚ್ಚು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: 10% ಮೀಸಲಾತಿ: ಆರ್‌‌ಎಸ್‌ಎಸ್‌ ಮಂದಿ ಹಬ್ಬಿಸಿರುವ 100% ಸುಳ್ಳುಗಳು!

ಪ್ರಸ್ತುತ ವ್ಯಾಪಾರಿ ಬೆಲೆಯಲ್ಲಿ ಹೇಳಬಹುದಾದರೆ, ತಿರುಪತಿ ದೇವಸ್ಥಾನದ ನಿವ್ವಳ ಮೌಲ್ಯವು ಭಾರತದ ಹಲವಾರು ದೊಡ್ಡ ಕಾರ್ಪೋರೇಟ್‌ ಕಂಪೆನಿಗಳಿಗಿಂತ ಹಚ್ಚಿನದ್ದಾಗಿದೆ ಎಂದು ಎನ್‌ಡಿಟಿವಿ ತನ್ನ ವರದಿಯಲ್ಲಿ ಉಲ್ಲೇಖಿಸಿದೆ.

ಶುಕ್ರವಾರದ ವಹಿವಾಟಿನ ಮುಕ್ತಾಯಕ್ಕೆ ಬೆಂಗಳೂರು ಮೂಲದ ವಿಪ್ರೋ 2.14 ಲಕ್ಷ ಕೋಟಿ ರೂ. ಗಳಷ್ಟು ಮಾರುಕಟ್ಟೆ ಮೌಲ್ಯವನ್ನು ಹೊಂದಿದ್ದು, ಅಲ್ಟ್ರಾಟೆಕ್ ಸಿಮೆಂಟ್ 1.99 ಲಕ್ಷ ಕೋಟಿ ರೂ.ಗಳ ಮಾರುಕಟ್ಟೆ ಮೌಲ್ಯವನ್ನು ಹೊಂದಿದೆ.

ಸ್ವಿಸ್ ಬಹುರಾಷ್ಟ್ರೀಯ ಆಹಾರ ಮತ್ತು ಪಾನೀಯದ ಪ್ರಮುಖ ಸಂಸ್ಥೆಯಾದ ನೆಸ್ಲೆಯ ಭಾರತದ ಘಟಕವು 1.96 ಲಕ್ಷ ಕೋಟಿ ರೂ.ಗಳ ಮಾರುಕಟ್ಟೆ ಮೌಲ್ಯವನ್ನು ಹೊಂದಿದ್ದು, ತಿರುಪತಿಯ ಆಸ್ತಿಗಿಂತ ಕಡಿಮೆ ಮೌಲ್ಯವನ್ನು ಹೊಂದಿದೆ.

ಇದನ್ನೂ ಓದಿ: ಸಂಪತ್ತು ಅನುಭವಸಿದವರೇ ಮೀಸಲಾತಿ ವಿರೋಧಿಸುತ್ತಿದ್ದಾರೆ: ಸಿದ್ದರಾಮಯ್ಯ ವಿಷಾದ

ಸರ್ಕಾರಿ ಸ್ವಾಮ್ಯದ ತೈಲ ಕಂಪೆನಿಯಾದ ಆಯಿಲ್ ಆಂಡ್‌ ನೇಚರ್‌ ಗ್ಯಾಸ್‌‌ ಕಾರ್ಪೊರೇಷನ್ (ONGC) ಮತ್ತು ಇಂಡಿಯನ್ ಆಯಿಲ್ ಕಾರ್ಪೊರೇಷನ್ (IOC) ಸಹ ದೇವಾಲಯದ ಟ್ರಸ್ಟ್‌ಗಿಂತ ಕಡಿಮೆ ಮೌಲ್ಯವನ್ನು ಹೊಂದಿವೆ.

ದೇಶದಲ್ಲಿ ಕೇವಲ ಎರಡು ಡಜನ್ ಕಂಪನಿಗಳು ಮಾತ್ರ ದೇವಾಲಯದ ಟ್ರಸ್ಟ್‌ನ ಒಟ್ಟು ಮೌಲ್ಯಕ್ಕಿಂತ ಹೆಚ್ಚಿನ ಮಾರುಕಟ್ಟೆ ಮೌಲ್ಯವನ್ನು ಹೊಂದಿವೆ. ಇವುಗಳಲ್ಲಿ ಬಿಲಿಯನೇರ್ ಮುಖೇಶ್ ಅಂಬಾನಿಯ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (17.53 ಲಕ್ಷ ಕೋಟಿ ರೂ.), ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ರೂ. 11.76 ಲಕ್ಷ ಕೋಟಿ), ಎಚ್‌ಡಿಎಫ್‌ಸಿ ಬ್ಯಾಂಕ್ (ರೂ. 8.34 ಲಕ್ಷ ಕೋಟಿ), ಇನ್ಫೋಸಿಸ್ (ರೂ. 6.37 ಲಕ್ಷ ಕೋಟಿ), ಐಸಿಐಸಿಐ ಬ್ಯಾಂಕ್ (ರೂ. 6.31 ಲಕ್ಷ ಕೋಟಿ), ಹಿಂದುಸ್ತಾನ್ ಯೂನಿಲಿವರ್ ಲಿಮಿಟೆಡ್ (5.92 ಲಕ್ಷ ಕೋಟಿ ರೂ.), ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (5.29 ಲಕ್ಷ ಕೋಟಿ ರೂ.), ಭಾರ್ತಿ ಏರ್‌ಟೆಲ್ (ರೂ. 4.54 ಲಕ್ಷ ಕೋಟಿ) ಮತ್ತು ಐಟಿಸಿ (ರೂ. 4.38 ಲಕ್ಷ ಕೋಟಿ) ಸೇರಿವೆ.

ತಿರುಮಲ ತಿರುಪತಿ ದೇವಸ್ಥಾನಗಳು (ಟಿಟಿಡಿ) ಮತ್ತೆ ಮತ್ತೆ ಶ್ರೀಮಂತವಾಗಿ ಬೆಳೆಯುತ್ತಿದ್ದು, ದೇವಸ್ಥಾನದಲ್ಲಿ ಭಕ್ತರು ನೀಡುವ ನಗದು ಮತ್ತು ಚಿನ್ನದ ಕಾಣಿಕೆಗಳು ಹೆಚ್ಚುತ್ತಲೇ ಇವೆ. ಬಡ್ಡಿದರಗಳ ಹೆಚ್ಚಳದ ದೃಷ್ಟಿಯಿಂದ ಬ್ಯಾಂಕ್‌ಗಳಲ್ಲಿನ ಸ್ಥಿರ ಠೇವಣಿಗಳು ಕೂಡಾ ಹೆಚ್ಚಿನ ಆದಾಯವನ್ನು ಗಳಿಸುತ್ತಿವೆ ಎಂದು ದೇವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಮಹಿಳಾ ಮೀಸಲಾತಿ ಜಾರಿಯಾಗದಿರಲು ‘ಉತ್ತರ ಭಾರತದ ಮನಸ್ಥಿತಿಯೆ’ ಕಾರಣ: ಶರದ್ ಪವಾರ್

ಟಿಟಿಡಿ ಒಡೆತನದ ಆಸ್ತಿಗಳಲ್ಲಿ ಭೂಮಿ, ಕಟ್ಟಡಗಳು, ಬ್ಯಾಂಕ್‌ಗಳಲ್ಲಿನ ನಗದು ಮತ್ತು ಚಿನ್ನದ ಠೇವಣಿಗಳು ಸೇರಿವೆ, ಇದನ್ನು ಭಕ್ತರು ದೇವಸ್ಥಾನಕ್ಕೆ ಕಾಣಿಕೆಯಾಗಿ ನೀಡುತ್ತಾರೆ.

ಭಕ್ತರಿಗೆ ಸೌಕರ್ಯಗಳನ್ನು ಒದಗಿಸುವ ಏಳು ಬೆಟ್ಟಗಳ ಮೇಲಿನ ಕಾಟೇಜ್‌ಗಳು ಮತ್ತು ಅತಿಥಿ ಗೃಹಗಳು ಸೇರಿದಂತೆ ಬೆಲೆಬಾಳುವ ಪುರಾತನ ಆಭರಣಗಳು ಮತ್ತು ಆಸ್ತಿಗಳಿಗೆ ಮೌಲ್ಯವನ್ನು ನಿಗದಿಪಡಿಸುವುದು ತಪ್ಪುದಾರಿಗೆಳೆಯುವಂತಿದೆ ಎಂದು ದೇವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ವಿಸ್ತಾರವಾದ ಏಳು ಬೆಟ್ಟಗಳನ್ನು ಭಕ್ತರು ಪವಿತ್ರ ಮತ್ತು ವೆಂಕಟೇಶ್ವರನ ವಾಸಸ್ಥಾನವೆಂದು ಪರಿಗಣಿಸುತ್ತಾರೆ. ಫೆಬ್ರವರಿಯಲ್ಲಿ ಮಂಡಿಸಿದ 2022-23ರ ಸುಮಾರು 3,100 ಕೋಟಿ ರೂ. ವಾರ್ಷಿಕ ಬಜೆಟ್‌ನಲ್ಲಿ, ಟಿಟಿಡಿ ಬ್ಯಾಂಕ್‌ಗಳಲ್ಲಿನ ನಗದು ಠೇವಣಿಗಳಿಂದ ಬಡ್ಡಿಯ ರೂಪದಲ್ಲಿ 668 ಕೋಟಿ ರೂ. ಗಿಂತ ಹೆಚ್ಚಿನ ಆದಾಯವನ್ನು ಯೋಜಿಸಿದೆ. ಅಲ್ಲದೆ, ಬೆಟ್ಟದ ದೇವಸ್ಥಾನದ ಹುಂಡಿಯಲ್ಲಿ ಸುಮಾರು 2.5 ಕೋಟಿ ಭಕ್ತರಿಂದ ನಗದು ಕಾಣಿಕೆ ರೂಪದಲ್ಲಿ 1,000 ಕೋಟಿ ರೂ. ಆದಾಯ ಬರಲಿದೆ.

ಇದನ್ನೂ ಓದಿ: ಮೀಸಲಾತಿ ಹೆಚ್ಚಳ ಮತ್ತು ಬಿಜೆಪಿಯ ಎರಡು ನಾಲಗೆ

ಟಿಟಿಡಿ ಆಂಧ್ರಪ್ರದೇಶ, ತಮಿಳುನಾಡು, ತೆಲಂಗಾಣ, ಒಡಿಶಾ, ಹರಿಯಾಣ, ಮಹಾರಾಷ್ಟ್ರ ಮತ್ತು ನವದೆಹಲಿಯಲ್ಲಿ ಹೆಚ್ಚಿನ ಸಂಖ್ಯೆಯ ದೇವಾಲಯಗಳನ್ನು ನಿರ್ವಹಿಸುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...