Homeಮುಖಪುಟತಿರುಪತಿ ದೇವಸ್ಥಾನ: 12.75 ಟನ್‌ ಚಿನ್ನ; ₹16 ಸಾವಿರ ಕೋಟಿ ಠೇವಣಿ; ಒಟ್ಟು ₹2.5 ಲಕ್ಷ...

ತಿರುಪತಿ ದೇವಸ್ಥಾನ: 12.75 ಟನ್‌ ಚಿನ್ನ; ₹16 ಸಾವಿರ ಕೋಟಿ ಠೇವಣಿ; ಒಟ್ಟು ₹2.5 ಲಕ್ಷ ಕೋಟಿಗೂ ಅಧಿಕ ಮೌಲ್ಯದ ಆಸ್ತಿ!

- Advertisement -
- Advertisement -

ಆಂದ್ರಪ್ರದೇಶದ ತಿರುಪತಿಯಲ್ಲಿರುವ ಜಗತ್ಪ್ರಸಿದ್ಧ ವೆಂಕಟೇಶ್ವರ ದೇವಸ್ಥಾನದ ನಿವ್ವಳ ಮೌಲ್ಯ 2.5 ಲಕ್ಷ ಕೋಟಿ ರೂ. ಎಂದು ವರದಿಯಾಗಿದೆ. ಇದು ಐಟಿ ಸೇವಾ ಸಂಸ್ಥೆಯಾದ ವಿಪ್ರೋ, ಆಹಾರ ಮತ್ತು ಪಾನೀಯ ಕಂಪನಿ ನೆಸ್ಲೆ ಮತ್ತು ಸರ್ಕಾರಿ ಸ್ವಾಮ್ಯದ ತೈಲ ಕಂಪೆನಿಯಾದ ಆಯಿಲ್ ಆಂಡ್‌ ನೇಚರ್‌ ಗ್ಯಾಸ್‌‌ ಕಾರ್ಪೊರೇಷನ್ (ONGC) ಮತ್ತು ಇಂಡಿಯನ್ ಆಯಿಲ್ ಕಾರ್ಪೊರೇಷನ್ (IOC)ನ ಮಾರುಕಟ್ಟೆ ಬಂಡವಾಳೀಕರಣಕ್ಕಿಂತ ಹೆಚ್ಚಿನ ಮೌಲ್ಯದ ಆಸ್ತಿಯಾಗಿದೆ.

ತಿರುಪತಿಯ ಪ್ರಧಾನ ದೇವರಿಗೆ ಸಮರ್ಪಿತವಾದ ದೇವಾಲಯದ ‘ತಿರುಮಲ ತಿರುಪತಿ ದೇವಸ್ಥಾನಂ’ ತನ್ನ ನಿವ್ವಳ ಮೌಲ್ಯವನ್ನು 1933 ರಲ್ಲಿ ಮೊದಲ ಬಾರಿಗೆ ಘೋಷಿಸಿತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದೇವಸ್ಥಾನದ ಆಸ್ತಿಯಲ್ಲಿ ಬ್ಯಾಂಕ್‌ಗಳಲ್ಲಿ 10.25 ಟನ್ ಚಿನ್ನದ ಠೇವಣಿ ಮತ್ತು 2.5 ಟನ್ ಚಿನ್ನಾಭರಣ ಇವೆ. ಸುಮಾರು 16 ಸಾವಿರ ಕೋಟಿ ರೂ. ಬ್ಯಾಂಕ್‌ಗಳಲ್ಲಿ ಠೇವಣಿ ಇದ್ದು, ದೇವಸ್ಥಾನಕ್ಕೆ ಭಾರತದಾದ್ಯಂತ 960 ಆಸ್ತಿಗಳು ಇವೆ. ಇವೆಲ್ಲದರ ಒಟ್ಟು ಮೌಲ್ಯ 2.5 ಲಕ್ಷ ಕೋಟಿ ರೂ.ಗೂ ಹೆಚ್ಚು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: 10% ಮೀಸಲಾತಿ: ಆರ್‌‌ಎಸ್‌ಎಸ್‌ ಮಂದಿ ಹಬ್ಬಿಸಿರುವ 100% ಸುಳ್ಳುಗಳು!

ಪ್ರಸ್ತುತ ವ್ಯಾಪಾರಿ ಬೆಲೆಯಲ್ಲಿ ಹೇಳಬಹುದಾದರೆ, ತಿರುಪತಿ ದೇವಸ್ಥಾನದ ನಿವ್ವಳ ಮೌಲ್ಯವು ಭಾರತದ ಹಲವಾರು ದೊಡ್ಡ ಕಾರ್ಪೋರೇಟ್‌ ಕಂಪೆನಿಗಳಿಗಿಂತ ಹಚ್ಚಿನದ್ದಾಗಿದೆ ಎಂದು ಎನ್‌ಡಿಟಿವಿ ತನ್ನ ವರದಿಯಲ್ಲಿ ಉಲ್ಲೇಖಿಸಿದೆ.

ಶುಕ್ರವಾರದ ವಹಿವಾಟಿನ ಮುಕ್ತಾಯಕ್ಕೆ ಬೆಂಗಳೂರು ಮೂಲದ ವಿಪ್ರೋ 2.14 ಲಕ್ಷ ಕೋಟಿ ರೂ. ಗಳಷ್ಟು ಮಾರುಕಟ್ಟೆ ಮೌಲ್ಯವನ್ನು ಹೊಂದಿದ್ದು, ಅಲ್ಟ್ರಾಟೆಕ್ ಸಿಮೆಂಟ್ 1.99 ಲಕ್ಷ ಕೋಟಿ ರೂ.ಗಳ ಮಾರುಕಟ್ಟೆ ಮೌಲ್ಯವನ್ನು ಹೊಂದಿದೆ.

ಸ್ವಿಸ್ ಬಹುರಾಷ್ಟ್ರೀಯ ಆಹಾರ ಮತ್ತು ಪಾನೀಯದ ಪ್ರಮುಖ ಸಂಸ್ಥೆಯಾದ ನೆಸ್ಲೆಯ ಭಾರತದ ಘಟಕವು 1.96 ಲಕ್ಷ ಕೋಟಿ ರೂ.ಗಳ ಮಾರುಕಟ್ಟೆ ಮೌಲ್ಯವನ್ನು ಹೊಂದಿದ್ದು, ತಿರುಪತಿಯ ಆಸ್ತಿಗಿಂತ ಕಡಿಮೆ ಮೌಲ್ಯವನ್ನು ಹೊಂದಿದೆ.

ಇದನ್ನೂ ಓದಿ: ಸಂಪತ್ತು ಅನುಭವಸಿದವರೇ ಮೀಸಲಾತಿ ವಿರೋಧಿಸುತ್ತಿದ್ದಾರೆ: ಸಿದ್ದರಾಮಯ್ಯ ವಿಷಾದ

ಸರ್ಕಾರಿ ಸ್ವಾಮ್ಯದ ತೈಲ ಕಂಪೆನಿಯಾದ ಆಯಿಲ್ ಆಂಡ್‌ ನೇಚರ್‌ ಗ್ಯಾಸ್‌‌ ಕಾರ್ಪೊರೇಷನ್ (ONGC) ಮತ್ತು ಇಂಡಿಯನ್ ಆಯಿಲ್ ಕಾರ್ಪೊರೇಷನ್ (IOC) ಸಹ ದೇವಾಲಯದ ಟ್ರಸ್ಟ್‌ಗಿಂತ ಕಡಿಮೆ ಮೌಲ್ಯವನ್ನು ಹೊಂದಿವೆ.

ದೇಶದಲ್ಲಿ ಕೇವಲ ಎರಡು ಡಜನ್ ಕಂಪನಿಗಳು ಮಾತ್ರ ದೇವಾಲಯದ ಟ್ರಸ್ಟ್‌ನ ಒಟ್ಟು ಮೌಲ್ಯಕ್ಕಿಂತ ಹೆಚ್ಚಿನ ಮಾರುಕಟ್ಟೆ ಮೌಲ್ಯವನ್ನು ಹೊಂದಿವೆ. ಇವುಗಳಲ್ಲಿ ಬಿಲಿಯನೇರ್ ಮುಖೇಶ್ ಅಂಬಾನಿಯ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (17.53 ಲಕ್ಷ ಕೋಟಿ ರೂ.), ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ರೂ. 11.76 ಲಕ್ಷ ಕೋಟಿ), ಎಚ್‌ಡಿಎಫ್‌ಸಿ ಬ್ಯಾಂಕ್ (ರೂ. 8.34 ಲಕ್ಷ ಕೋಟಿ), ಇನ್ಫೋಸಿಸ್ (ರೂ. 6.37 ಲಕ್ಷ ಕೋಟಿ), ಐಸಿಐಸಿಐ ಬ್ಯಾಂಕ್ (ರೂ. 6.31 ಲಕ್ಷ ಕೋಟಿ), ಹಿಂದುಸ್ತಾನ್ ಯೂನಿಲಿವರ್ ಲಿಮಿಟೆಡ್ (5.92 ಲಕ್ಷ ಕೋಟಿ ರೂ.), ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (5.29 ಲಕ್ಷ ಕೋಟಿ ರೂ.), ಭಾರ್ತಿ ಏರ್‌ಟೆಲ್ (ರೂ. 4.54 ಲಕ್ಷ ಕೋಟಿ) ಮತ್ತು ಐಟಿಸಿ (ರೂ. 4.38 ಲಕ್ಷ ಕೋಟಿ) ಸೇರಿವೆ.

ತಿರುಮಲ ತಿರುಪತಿ ದೇವಸ್ಥಾನಗಳು (ಟಿಟಿಡಿ) ಮತ್ತೆ ಮತ್ತೆ ಶ್ರೀಮಂತವಾಗಿ ಬೆಳೆಯುತ್ತಿದ್ದು, ದೇವಸ್ಥಾನದಲ್ಲಿ ಭಕ್ತರು ನೀಡುವ ನಗದು ಮತ್ತು ಚಿನ್ನದ ಕಾಣಿಕೆಗಳು ಹೆಚ್ಚುತ್ತಲೇ ಇವೆ. ಬಡ್ಡಿದರಗಳ ಹೆಚ್ಚಳದ ದೃಷ್ಟಿಯಿಂದ ಬ್ಯಾಂಕ್‌ಗಳಲ್ಲಿನ ಸ್ಥಿರ ಠೇವಣಿಗಳು ಕೂಡಾ ಹೆಚ್ಚಿನ ಆದಾಯವನ್ನು ಗಳಿಸುತ್ತಿವೆ ಎಂದು ದೇವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಮಹಿಳಾ ಮೀಸಲಾತಿ ಜಾರಿಯಾಗದಿರಲು ‘ಉತ್ತರ ಭಾರತದ ಮನಸ್ಥಿತಿಯೆ’ ಕಾರಣ: ಶರದ್ ಪವಾರ್

ಟಿಟಿಡಿ ಒಡೆತನದ ಆಸ್ತಿಗಳಲ್ಲಿ ಭೂಮಿ, ಕಟ್ಟಡಗಳು, ಬ್ಯಾಂಕ್‌ಗಳಲ್ಲಿನ ನಗದು ಮತ್ತು ಚಿನ್ನದ ಠೇವಣಿಗಳು ಸೇರಿವೆ, ಇದನ್ನು ಭಕ್ತರು ದೇವಸ್ಥಾನಕ್ಕೆ ಕಾಣಿಕೆಯಾಗಿ ನೀಡುತ್ತಾರೆ.

ಭಕ್ತರಿಗೆ ಸೌಕರ್ಯಗಳನ್ನು ಒದಗಿಸುವ ಏಳು ಬೆಟ್ಟಗಳ ಮೇಲಿನ ಕಾಟೇಜ್‌ಗಳು ಮತ್ತು ಅತಿಥಿ ಗೃಹಗಳು ಸೇರಿದಂತೆ ಬೆಲೆಬಾಳುವ ಪುರಾತನ ಆಭರಣಗಳು ಮತ್ತು ಆಸ್ತಿಗಳಿಗೆ ಮೌಲ್ಯವನ್ನು ನಿಗದಿಪಡಿಸುವುದು ತಪ್ಪುದಾರಿಗೆಳೆಯುವಂತಿದೆ ಎಂದು ದೇವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ವಿಸ್ತಾರವಾದ ಏಳು ಬೆಟ್ಟಗಳನ್ನು ಭಕ್ತರು ಪವಿತ್ರ ಮತ್ತು ವೆಂಕಟೇಶ್ವರನ ವಾಸಸ್ಥಾನವೆಂದು ಪರಿಗಣಿಸುತ್ತಾರೆ. ಫೆಬ್ರವರಿಯಲ್ಲಿ ಮಂಡಿಸಿದ 2022-23ರ ಸುಮಾರು 3,100 ಕೋಟಿ ರೂ. ವಾರ್ಷಿಕ ಬಜೆಟ್‌ನಲ್ಲಿ, ಟಿಟಿಡಿ ಬ್ಯಾಂಕ್‌ಗಳಲ್ಲಿನ ನಗದು ಠೇವಣಿಗಳಿಂದ ಬಡ್ಡಿಯ ರೂಪದಲ್ಲಿ 668 ಕೋಟಿ ರೂ. ಗಿಂತ ಹೆಚ್ಚಿನ ಆದಾಯವನ್ನು ಯೋಜಿಸಿದೆ. ಅಲ್ಲದೆ, ಬೆಟ್ಟದ ದೇವಸ್ಥಾನದ ಹುಂಡಿಯಲ್ಲಿ ಸುಮಾರು 2.5 ಕೋಟಿ ಭಕ್ತರಿಂದ ನಗದು ಕಾಣಿಕೆ ರೂಪದಲ್ಲಿ 1,000 ಕೋಟಿ ರೂ. ಆದಾಯ ಬರಲಿದೆ.

ಇದನ್ನೂ ಓದಿ: ಮೀಸಲಾತಿ ಹೆಚ್ಚಳ ಮತ್ತು ಬಿಜೆಪಿಯ ಎರಡು ನಾಲಗೆ

ಟಿಟಿಡಿ ಆಂಧ್ರಪ್ರದೇಶ, ತಮಿಳುನಾಡು, ತೆಲಂಗಾಣ, ಒಡಿಶಾ, ಹರಿಯಾಣ, ಮಹಾರಾಷ್ಟ್ರ ಮತ್ತು ನವದೆಹಲಿಯಲ್ಲಿ ಹೆಚ್ಚಿನ ಸಂಖ್ಯೆಯ ದೇವಾಲಯಗಳನ್ನು ನಿರ್ವಹಿಸುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...