Homeಮುಖಪುಟತಿರುಪತಿ ವರ್ಸಸ್‌ ತಬ್ಲಿಘಿ: ಸಾಂಕ್ರಾಮಿಕದ ಕೋಮುವಾದೀಕರಣಕ್ಕೆ ಸ್ಪಷ್ಟ ಉದಾಹರಣೆ

ತಿರುಪತಿ ವರ್ಸಸ್‌ ತಬ್ಲಿಘಿ: ಸಾಂಕ್ರಾಮಿಕದ ಕೋಮುವಾದೀಕರಣಕ್ಕೆ ಸ್ಪಷ್ಟ ಉದಾಹರಣೆ

ಕೋವಿಡ್ 19 ಅನ್ನು ಕೋಮುಸಾಧನವನ್ನಾಗಿ ಬಳಸಿಕೊಂಡಿದ್ದು ಸಾಂಕ್ರಾಮಿಕದ ವಿರುದ್ಧದ ಹೋರಾಟವನ್ನು  ದುರ್ಬಲಗೊಳಿಸಿತು ಎನ್ನಬಹುದು.

- Advertisement -
- Advertisement -

ರಾಷ್ಟ್ರವ್ಯಾಪಿ ಅನ್‌ಲಾಕ್ ಭಾಗವಾಗಿ ಜೂನ್ 11 ರಂದು ದೇವಾಲಯಗಳನ್ನು ಮತ್ತೆ ತೆರೆಯಲಾಯಿತು. ಅದರಂತೆ ಆಂಧ್ರಪ್ರದೇಶದ ತಿರುಪತಿ ದೇವಾಲಯವನ್ನು ತೆರೆಯಲಾಯಿತು. ಭಕ್ತಾದಿಗಳು ನುಗ್ಗಿಬಂದರು. ಜುಲೈ ತಿಂಗಳೊಂದರಲ್ಲಿಯೇ 2.38 ಲಕ್ಷ ಭಕ್ತಾದಿಗಳು ದೇವಾಲಯಕ್ಕೆ ಬಂದಿದ್ದಾರೆ. ಅಗತ್ಯ ಮುನ್ನಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳದ ಕಾರಣ ತಿರುಪತಿ ದೇವಾಲಯವೀಗ ಕೊರೊನಾ ಹಾಟ್‌ಸ್ಪಾಟ್‌ ಕೇಂದ್ರವಾಗಿ ಮಾರ್ಪಟ್ಟಿದೆ.

ಈ ಎರಡು ತಿಂಗಳಿನಲ್ಲಿ ದೇವಸ್ಥಾನದ ಅರ್ಚಕರು ಸೇರಿದಂತೆ 743 ಜನಕ್ಕೆ ಕೊರೊನಾ ಸೋಂಕು ತಗುಲಿದೆ. ಮೂರು ಜನ ಸಾವನಪ್ಪಿದ್ದಾರೆ. ಇನ್ನು ದೇವಾಲಯಕ್ಕೆ ಭೇಟಿ ನೀಡಿದ ಎಷ್ಟು ಭಕ್ತರಿಗೆ ಕೊರೊನಾ ಸೋಂಕು ಹರಡಿದೆ ಎಂಬುದರ ಕುರಿತು ಮಾಹಿತಿ ಲಭ್ಯವಿಲ್ಲ.

ಆಶ್ಚರ್ಯವೆಂದರೆ ಇಷ್ಟೆಲ್ಲಾ ಅನಾಹುತದ ನಂತರವೂ ದೇವಾಲಯವನ್ನು ಸೀಲ್‌ಡೌನ್‌ ಮಾಡಿಲ್ಲ. ಜುಲೈ 17 ರಂದು ಮಾಜಿ ಮುಖ್ಯ ಅರ್ಚಕ ಕೊರೊನಾದಿಂದ ಮೃತಪಟ್ಟ ನಂತರ ಹಲವಾರು ಜನ ದೇವಾಲಯವನ್ನು ಕೆಲ ಸಮಯ ಮುಚ್ಚಬೇಕೆಂದು ಒತ್ತಾಯಿಸಿದ್ದರು. ಕೇವಲ ಹಣ ಬರುತ್ತದೆಯೆಂದು ಸಾವಿರಾರು ಜನರನ್ನು ಬಲಿಕೊಡಲು ಸಾಧ್ಯವಿಲ್ಲ ಎಂದು ಆಗ್ರಹಿಸಿದ್ದರು. ಅದೆಲ್ಲದರ ಹೊರತಾಗಿಯೂ ಇಂದಿಗೂ ದೇವಾಲಯಕ್ಕೆ ಇನ್ನೂ ಭಕ್ತಾದಿಗಳು ಬರುತ್ತಿದ್ದಾರೆ.. ಪೂಜೆ ನಡೆಯುತ್ತಿದೆ ಮತ್ತು ಕೊರೊನಾ ಹರಡುತ್ತಲೇ ಇದೆ. ಆಂಧ್ರಪ್ರದೇಶ ರಾಜ್ಯವು ದೇಶದ ಅತಿಹೆಚ್ಚು ಕೊರೊನಾ ಸೋಂಕಿತ ಪ್ರಕರಣಗಳಲ್ಲಿ ಮೂರನೇ ಸ್ಥಾನಕ್ಕೆ ಏರಿದೆ.

ಸಾಂಕ್ರಾಮಿಕದ ಆರಂಭದ ದಿನಗಳಲ್ಲಿ ಕೋವಿಡ್ ಹಾಟ್‌ಸ್ಪಾಟ್‌ ಆಗಿ ಹೊರಹೊಮ್ಮಿದ ದೆಹಲಿಯ ತಬ್ಲಿಘಿ ಜಮಾತ್‌ಗೆ ತಿರುಪತಿಯನ್ನು ಹೋಲಿಕೆ ಮಾಡದಿರಲು ಸಾಧ್ಯವಿಲ್ಲ. ಮಾರ್ಚ್ ಕೊನೆಯಲ್ಲಿ ಬಹುಪಾಲು ಮಾಧ್ಯಮಗಳು ತಬ್ಲಿಘಿ ಜಮಾತ್ ವಿರುದ್ಧ ಅತ್ಯಂತ ಕೆಟ್ಟ ಅಭಿಯಾನ ನಡೆಸಿದ್ದವು. ಜಮಾತ್ ಉದ್ದೇಶಪೂರ್ವಕವಾಗಿ ರೋಗವನ್ನು ಹರಡುತ್ತಿದೆ ಎಂದು ಆರೋಪಿಸಿದ್ದರು. ಆಗಿನ್ನೂ ವೈರಸ್‌ ಅಪಾಯ ಅತಿಯಾಗಿರಲಿಲ್ಲ ಮಾತ್ರವಲ್ಲ ತಬ್ಲಿಘಿ ಜಮಾತ್ ಸಭೆ ಸೇರುವ ಕೆಲವೇ ದಿನಗಳ ಮುಂಚೆ ದೇಶದ ಅತ್ಯುನ್ನತ ಪ್ರಜಾಪ್ರಭುತ್ವ ಸಂಸ್ಥೆ ಎಂದು ಕರೆಸಿಕೊಳ್ಳುವ ‘ಸಂಸತ್’ ಅಧಿವೇಶನ ನಡೆಸುತ್ತಿತ್ತು. ಜಮಾತ್‌ ಸಾಂಕ್ರಾಮಿಕ ಕಾಲದಲ್ಲಿ ಸಭೆ ನಡೆಸಿದ್ದು ತಪ್ಪೇ ಇದ್ದರೂ ಸಹ ಸರ್ಕಾರವು ಪ್ರತಿ ದಿನ ಜಮಾತ್‌ನಿಂದ ಹರಡಿದ ವೈರಸ್‌ ಪ್ರಕರಣಗಳನ್ನು ಬಿಡುಗಡೆ ಮಾಡುತ್ತಿತ್ತು. ಇದು ಜಮಾತ್ ಪ್ರಭಾವನ್ನು ತಿರುಚಲು ಸಹಕಾರಿಯಾಯಿತು. ಆಗ ಜಮಾತ್ ಸಭೆಯಲ್ಲಿ ಭಾಗವಹಿಸಿದವರೆಲ್ಲಾ ಪರೀಕ್ಷೆಗೆ ಒಳಗಾದರೆ, ಇತರ ಭಾರತದಲ್ಲಿ ಕೊರೊನಾ ಪರೀಕ್ಷೆಯ ದರ ತೀರಾ ಕೆಳಮಟ್ಟದಲ್ಲಿತ್ತು ಎನ್ನುವುದನ್ನು ನಾವು ಮರೆಯಬಾರದು. ಹಾಗಾಗಿ ತಬ್ಲಿಘಿಯ ಸಂಖ್ಯೆಗಳು ಅತಿ ಹೆಚ್ಚು ಎಂದು ಬಿಂಬಿತವಾದವು.

ಅಲ್ಲಿಂದ ದೆಹಲಿಯನ್ನೇ ಹಾಟ್‌ಸ್ಪಾಟ್‌ ಎನ್ನಲಾಯಿತು. ಜಮಾತ್ ಕೇಂದ್ರ ಕಚೇರಿಯನ್ನು ಸೀಲ್‌ಡೌನ್ ಮಾಡಲಾಯಿತು. ಜಮಾತ್ ಸದಸ್ಯರನ್ನು ಹಿಡಿಯಲು ಯೋಜನೆ ಸಿದ್ಧವಾಯಿತು. ಹಲವಾರು ಜಮಾತ್ ಸದಸ್ಯರನ್ನು ಜೈಲಿಗೆ ಕಳಿಸಲಾಯಿತು.

ಆದರೆ ಈಗ ಈ ಯಾವ ಮಾನದಂಡಗಳನ್ನು ತಿರುಪತಿಗೆ ಅಳವಡಿಸಲಾಗುತ್ತಿಲ್ಲ. ದೇವಾಲಯವನ್ನು ಸೀಲ್‌ಡೌನ್‌ ಮಾಡಿಲ್ಲ. ದೇವಾಲಯಕ್ಕೆ ಭೇಟಿ ನೀಡಿದವರನ್ನು ಪತ್ತೆ ಹಚ್ಚಲಾಗುತ್ತಿಲ್ಲ! ಯಾರಿಗೂ ದೇವಾಲಯ ಇನ್ನು ತೆರೆದಿರುವುದರ ಕುರಿತು ಕೋಪ, ಆಕ್ರೋಶಗಳಿಲ್ಲ.

ತಬ್ಲಿಘಿ ಮತ್ತು ತಿರುಪತಿ ನಡುವೆ ಇರುವ ವ್ಯತ್ಯಾಸವು ಸಾಂಕ್ರಾಮಿಕ ರೋಗವನ್ನು ಕೋಮುವಾದೀಕರಿಸಿರುವ ಅಹಿತಕರ ಸತ್ಯವನ್ನು ಸೂಚಿಸುತ್ತದೆ: ಕೋವಿಡ್ -19 ಅನ್ನು ಭಾರತದಲ್ಲಿ ಬಹುಸಂಖ್ಯಾತ ರಾಜಕೀಯಕ್ಕೆ ಬಳಸಲಾಗಿದೆ.

ಇದೊಂದೆ ಉದಾಹರಣ ಮಾತ್ರವಲ್ಲ. ನರೇಂದ್ರ ಮೋದಿಯವರು ಮಾರ್ಚ್ 25ರಿಂದ ದೇಶಾದ್ಯಂತ ಲಾಕ್‌ಡೌನ್‌ ಹೇರಿ, ಧಾರ್ಮಿಕ ಕ್ಷೇತ್ರಗಳಿಗೆ ನಿಷೇಧ ಹೇರಿದರೂ ಸಹ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ರವರು ಈ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ ಅಯೋಧ್ಯೆಯಲ್ಲಿ ಉದ್ದೇಶಿತ ರಾಮಮಂದಿರ ಪೂಜೆಯಲ್ಲಿ ಪಾಲ್ಗೊಂಡಿದ್ದರು.

ಕೊರೊನಾ ಆರಂಭದ ಸಮಯದಲ್ಲಿ ಜನರಿಗೆ ವಿಪರೀತ ಭಯ, ಭೀತಿ ಇತ್ತು. ಆಗ ಸಾಂಕ್ರಾಮಿಕವನ್ನು ಬಳಸಿಕೊಂಡು ಭಾರತದ ಮುಸ್ಲಿಂ ಅಲ್ಪಸಂಖ್ಯಾತರರ ಬಗ್ಗೆ ಆಕ್ರಮಣ ಮಾಡಲಾಯಿತು. ಇದು ಅನೈತಿಕವಾದುದು. ಕೋವಿಡ್ 19 ಅನ್ನು ಕೋಮುಸಾಧನವನ್ನಾಗಿ ಬಳಸಿಕೊಂಡಿದ್ದು ಸಾಂಕ್ರಾಮಿಕದ ವಿರುದ್ಧದ ಹೋರಾಟವನ್ನು  ದುರ್ಬಲಗೊಳಿಸಿತು ಎನ್ನಬಹುದು. ಅಧಿಕಾರಿಗಳು ಉತ್ತಮ ನಂಬಿಕೆಯಿಂದ ಕಾರ್ಯನಿರ್ವಹಿಸುತ್ತಿಲ್ಲ ಎಂದು ಯಾರಾದರೂ ತಿಳಿದರೆ ಅವರು ನೀತಿ ನಿಯಮಗಳನ್ನು ಪಾಲಿಸುವುದನ್ನು ನಿಲ್ಲಿಸುತ್ತಾರೆ ಅಲ್ಲವೇ?

ಕಳೆದ ಐದು ದಿನಗಳಲ್ಲಿ ಭಾರತವು ಪ್ರಪಂಚದ ಇತರ ದೇಶಗಳಿಗಿಂತ ಅತಿ ಹೆಚ್ಚಿನ ಕೊರೊನಾ ಪ್ರಕರಣಗಳನ್ನು ದಾಖಲಿಸಿದೆ. ಅಮೆರಿಕ ಮತ್ತು ಬ್ರೆಜಿಲ್‌ನಲ್ಲಿ ದಿನನಿತ್ಯದ ಪ್ರಕರಣಗಳು ಕುಸಿಯುತ್ತಿದ್ದರೆ ಭಾರತದಲ್ಲಿ ಮಾತ್ರ ನಿರಂತರವಾಗಿ ಏರುತ್ತಲೇ ಇದೆ.

ಕೋವಿಡ್ ಸಮಯವನ್ನು ಬಹುಸಂಖ್ಯಾತವಾದಕ್ಕೆ ಬಳಸಿಕೊಳ್ಳಲಾಗಿದೆ ಎಂದು ಭಾರತ ಅರಿತುಕೊಳ್ಳಬೇಕು. ನಮ್ಮ ಗುರಿಯು ಸಾಂಕ್ರಾಮಿಕವನ್ನು ನಿರ್ಮೂಲನೆ ಮಾಡಲು ಅಗತ್ಯವಾಗಿ ಕೈಗೊಳ್ಳಬೇಕಾದ ಕ್ರಮಗಳ ಮೇಲೆ ಕೇಂದ್ರೀಕರಿಸಬೇಕಿದೆ.


ಇದನ್ನೂ ಓದಿ: ಬಿಎಸ್‌ಎನ್‌ಎಲ್‌ನಲ್ಲಿ ದೇಶದ್ರೋಹಿಗಳಿದ್ದಾರೆ: ಅನಂತ್‌ ಕುಮಾರ್ ಹೆಗಡೆ ಹೇಳಿಕೆಗೆ ತೀವ್ರ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...