Homeಮುಖಪುಟತಿರುಪತಿ ವರ್ಸಸ್‌ ತಬ್ಲಿಘಿ: ಸಾಂಕ್ರಾಮಿಕದ ಕೋಮುವಾದೀಕರಣಕ್ಕೆ ಸ್ಪಷ್ಟ ಉದಾಹರಣೆ

ತಿರುಪತಿ ವರ್ಸಸ್‌ ತಬ್ಲಿಘಿ: ಸಾಂಕ್ರಾಮಿಕದ ಕೋಮುವಾದೀಕರಣಕ್ಕೆ ಸ್ಪಷ್ಟ ಉದಾಹರಣೆ

ಕೋವಿಡ್ 19 ಅನ್ನು ಕೋಮುಸಾಧನವನ್ನಾಗಿ ಬಳಸಿಕೊಂಡಿದ್ದು ಸಾಂಕ್ರಾಮಿಕದ ವಿರುದ್ಧದ ಹೋರಾಟವನ್ನು  ದುರ್ಬಲಗೊಳಿಸಿತು ಎನ್ನಬಹುದು.

- Advertisement -
- Advertisement -

ರಾಷ್ಟ್ರವ್ಯಾಪಿ ಅನ್‌ಲಾಕ್ ಭಾಗವಾಗಿ ಜೂನ್ 11 ರಂದು ದೇವಾಲಯಗಳನ್ನು ಮತ್ತೆ ತೆರೆಯಲಾಯಿತು. ಅದರಂತೆ ಆಂಧ್ರಪ್ರದೇಶದ ತಿರುಪತಿ ದೇವಾಲಯವನ್ನು ತೆರೆಯಲಾಯಿತು. ಭಕ್ತಾದಿಗಳು ನುಗ್ಗಿಬಂದರು. ಜುಲೈ ತಿಂಗಳೊಂದರಲ್ಲಿಯೇ 2.38 ಲಕ್ಷ ಭಕ್ತಾದಿಗಳು ದೇವಾಲಯಕ್ಕೆ ಬಂದಿದ್ದಾರೆ. ಅಗತ್ಯ ಮುನ್ನಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳದ ಕಾರಣ ತಿರುಪತಿ ದೇವಾಲಯವೀಗ ಕೊರೊನಾ ಹಾಟ್‌ಸ್ಪಾಟ್‌ ಕೇಂದ್ರವಾಗಿ ಮಾರ್ಪಟ್ಟಿದೆ.

ಈ ಎರಡು ತಿಂಗಳಿನಲ್ಲಿ ದೇವಸ್ಥಾನದ ಅರ್ಚಕರು ಸೇರಿದಂತೆ 743 ಜನಕ್ಕೆ ಕೊರೊನಾ ಸೋಂಕು ತಗುಲಿದೆ. ಮೂರು ಜನ ಸಾವನಪ್ಪಿದ್ದಾರೆ. ಇನ್ನು ದೇವಾಲಯಕ್ಕೆ ಭೇಟಿ ನೀಡಿದ ಎಷ್ಟು ಭಕ್ತರಿಗೆ ಕೊರೊನಾ ಸೋಂಕು ಹರಡಿದೆ ಎಂಬುದರ ಕುರಿತು ಮಾಹಿತಿ ಲಭ್ಯವಿಲ್ಲ.

ಆಶ್ಚರ್ಯವೆಂದರೆ ಇಷ್ಟೆಲ್ಲಾ ಅನಾಹುತದ ನಂತರವೂ ದೇವಾಲಯವನ್ನು ಸೀಲ್‌ಡೌನ್‌ ಮಾಡಿಲ್ಲ. ಜುಲೈ 17 ರಂದು ಮಾಜಿ ಮುಖ್ಯ ಅರ್ಚಕ ಕೊರೊನಾದಿಂದ ಮೃತಪಟ್ಟ ನಂತರ ಹಲವಾರು ಜನ ದೇವಾಲಯವನ್ನು ಕೆಲ ಸಮಯ ಮುಚ್ಚಬೇಕೆಂದು ಒತ್ತಾಯಿಸಿದ್ದರು. ಕೇವಲ ಹಣ ಬರುತ್ತದೆಯೆಂದು ಸಾವಿರಾರು ಜನರನ್ನು ಬಲಿಕೊಡಲು ಸಾಧ್ಯವಿಲ್ಲ ಎಂದು ಆಗ್ರಹಿಸಿದ್ದರು. ಅದೆಲ್ಲದರ ಹೊರತಾಗಿಯೂ ಇಂದಿಗೂ ದೇವಾಲಯಕ್ಕೆ ಇನ್ನೂ ಭಕ್ತಾದಿಗಳು ಬರುತ್ತಿದ್ದಾರೆ.. ಪೂಜೆ ನಡೆಯುತ್ತಿದೆ ಮತ್ತು ಕೊರೊನಾ ಹರಡುತ್ತಲೇ ಇದೆ. ಆಂಧ್ರಪ್ರದೇಶ ರಾಜ್ಯವು ದೇಶದ ಅತಿಹೆಚ್ಚು ಕೊರೊನಾ ಸೋಂಕಿತ ಪ್ರಕರಣಗಳಲ್ಲಿ ಮೂರನೇ ಸ್ಥಾನಕ್ಕೆ ಏರಿದೆ.

ಸಾಂಕ್ರಾಮಿಕದ ಆರಂಭದ ದಿನಗಳಲ್ಲಿ ಕೋವಿಡ್ ಹಾಟ್‌ಸ್ಪಾಟ್‌ ಆಗಿ ಹೊರಹೊಮ್ಮಿದ ದೆಹಲಿಯ ತಬ್ಲಿಘಿ ಜಮಾತ್‌ಗೆ ತಿರುಪತಿಯನ್ನು ಹೋಲಿಕೆ ಮಾಡದಿರಲು ಸಾಧ್ಯವಿಲ್ಲ. ಮಾರ್ಚ್ ಕೊನೆಯಲ್ಲಿ ಬಹುಪಾಲು ಮಾಧ್ಯಮಗಳು ತಬ್ಲಿಘಿ ಜಮಾತ್ ವಿರುದ್ಧ ಅತ್ಯಂತ ಕೆಟ್ಟ ಅಭಿಯಾನ ನಡೆಸಿದ್ದವು. ಜಮಾತ್ ಉದ್ದೇಶಪೂರ್ವಕವಾಗಿ ರೋಗವನ್ನು ಹರಡುತ್ತಿದೆ ಎಂದು ಆರೋಪಿಸಿದ್ದರು. ಆಗಿನ್ನೂ ವೈರಸ್‌ ಅಪಾಯ ಅತಿಯಾಗಿರಲಿಲ್ಲ ಮಾತ್ರವಲ್ಲ ತಬ್ಲಿಘಿ ಜಮಾತ್ ಸಭೆ ಸೇರುವ ಕೆಲವೇ ದಿನಗಳ ಮುಂಚೆ ದೇಶದ ಅತ್ಯುನ್ನತ ಪ್ರಜಾಪ್ರಭುತ್ವ ಸಂಸ್ಥೆ ಎಂದು ಕರೆಸಿಕೊಳ್ಳುವ ‘ಸಂಸತ್’ ಅಧಿವೇಶನ ನಡೆಸುತ್ತಿತ್ತು. ಜಮಾತ್‌ ಸಾಂಕ್ರಾಮಿಕ ಕಾಲದಲ್ಲಿ ಸಭೆ ನಡೆಸಿದ್ದು ತಪ್ಪೇ ಇದ್ದರೂ ಸಹ ಸರ್ಕಾರವು ಪ್ರತಿ ದಿನ ಜಮಾತ್‌ನಿಂದ ಹರಡಿದ ವೈರಸ್‌ ಪ್ರಕರಣಗಳನ್ನು ಬಿಡುಗಡೆ ಮಾಡುತ್ತಿತ್ತು. ಇದು ಜಮಾತ್ ಪ್ರಭಾವನ್ನು ತಿರುಚಲು ಸಹಕಾರಿಯಾಯಿತು. ಆಗ ಜಮಾತ್ ಸಭೆಯಲ್ಲಿ ಭಾಗವಹಿಸಿದವರೆಲ್ಲಾ ಪರೀಕ್ಷೆಗೆ ಒಳಗಾದರೆ, ಇತರ ಭಾರತದಲ್ಲಿ ಕೊರೊನಾ ಪರೀಕ್ಷೆಯ ದರ ತೀರಾ ಕೆಳಮಟ್ಟದಲ್ಲಿತ್ತು ಎನ್ನುವುದನ್ನು ನಾವು ಮರೆಯಬಾರದು. ಹಾಗಾಗಿ ತಬ್ಲಿಘಿಯ ಸಂಖ್ಯೆಗಳು ಅತಿ ಹೆಚ್ಚು ಎಂದು ಬಿಂಬಿತವಾದವು.

ಅಲ್ಲಿಂದ ದೆಹಲಿಯನ್ನೇ ಹಾಟ್‌ಸ್ಪಾಟ್‌ ಎನ್ನಲಾಯಿತು. ಜಮಾತ್ ಕೇಂದ್ರ ಕಚೇರಿಯನ್ನು ಸೀಲ್‌ಡೌನ್ ಮಾಡಲಾಯಿತು. ಜಮಾತ್ ಸದಸ್ಯರನ್ನು ಹಿಡಿಯಲು ಯೋಜನೆ ಸಿದ್ಧವಾಯಿತು. ಹಲವಾರು ಜಮಾತ್ ಸದಸ್ಯರನ್ನು ಜೈಲಿಗೆ ಕಳಿಸಲಾಯಿತು.

ಆದರೆ ಈಗ ಈ ಯಾವ ಮಾನದಂಡಗಳನ್ನು ತಿರುಪತಿಗೆ ಅಳವಡಿಸಲಾಗುತ್ತಿಲ್ಲ. ದೇವಾಲಯವನ್ನು ಸೀಲ್‌ಡೌನ್‌ ಮಾಡಿಲ್ಲ. ದೇವಾಲಯಕ್ಕೆ ಭೇಟಿ ನೀಡಿದವರನ್ನು ಪತ್ತೆ ಹಚ್ಚಲಾಗುತ್ತಿಲ್ಲ! ಯಾರಿಗೂ ದೇವಾಲಯ ಇನ್ನು ತೆರೆದಿರುವುದರ ಕುರಿತು ಕೋಪ, ಆಕ್ರೋಶಗಳಿಲ್ಲ.

ತಬ್ಲಿಘಿ ಮತ್ತು ತಿರುಪತಿ ನಡುವೆ ಇರುವ ವ್ಯತ್ಯಾಸವು ಸಾಂಕ್ರಾಮಿಕ ರೋಗವನ್ನು ಕೋಮುವಾದೀಕರಿಸಿರುವ ಅಹಿತಕರ ಸತ್ಯವನ್ನು ಸೂಚಿಸುತ್ತದೆ: ಕೋವಿಡ್ -19 ಅನ್ನು ಭಾರತದಲ್ಲಿ ಬಹುಸಂಖ್ಯಾತ ರಾಜಕೀಯಕ್ಕೆ ಬಳಸಲಾಗಿದೆ.

ಇದೊಂದೆ ಉದಾಹರಣ ಮಾತ್ರವಲ್ಲ. ನರೇಂದ್ರ ಮೋದಿಯವರು ಮಾರ್ಚ್ 25ರಿಂದ ದೇಶಾದ್ಯಂತ ಲಾಕ್‌ಡೌನ್‌ ಹೇರಿ, ಧಾರ್ಮಿಕ ಕ್ಷೇತ್ರಗಳಿಗೆ ನಿಷೇಧ ಹೇರಿದರೂ ಸಹ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ರವರು ಈ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ ಅಯೋಧ್ಯೆಯಲ್ಲಿ ಉದ್ದೇಶಿತ ರಾಮಮಂದಿರ ಪೂಜೆಯಲ್ಲಿ ಪಾಲ್ಗೊಂಡಿದ್ದರು.

ಕೊರೊನಾ ಆರಂಭದ ಸಮಯದಲ್ಲಿ ಜನರಿಗೆ ವಿಪರೀತ ಭಯ, ಭೀತಿ ಇತ್ತು. ಆಗ ಸಾಂಕ್ರಾಮಿಕವನ್ನು ಬಳಸಿಕೊಂಡು ಭಾರತದ ಮುಸ್ಲಿಂ ಅಲ್ಪಸಂಖ್ಯಾತರರ ಬಗ್ಗೆ ಆಕ್ರಮಣ ಮಾಡಲಾಯಿತು. ಇದು ಅನೈತಿಕವಾದುದು. ಕೋವಿಡ್ 19 ಅನ್ನು ಕೋಮುಸಾಧನವನ್ನಾಗಿ ಬಳಸಿಕೊಂಡಿದ್ದು ಸಾಂಕ್ರಾಮಿಕದ ವಿರುದ್ಧದ ಹೋರಾಟವನ್ನು  ದುರ್ಬಲಗೊಳಿಸಿತು ಎನ್ನಬಹುದು. ಅಧಿಕಾರಿಗಳು ಉತ್ತಮ ನಂಬಿಕೆಯಿಂದ ಕಾರ್ಯನಿರ್ವಹಿಸುತ್ತಿಲ್ಲ ಎಂದು ಯಾರಾದರೂ ತಿಳಿದರೆ ಅವರು ನೀತಿ ನಿಯಮಗಳನ್ನು ಪಾಲಿಸುವುದನ್ನು ನಿಲ್ಲಿಸುತ್ತಾರೆ ಅಲ್ಲವೇ?

ಕಳೆದ ಐದು ದಿನಗಳಲ್ಲಿ ಭಾರತವು ಪ್ರಪಂಚದ ಇತರ ದೇಶಗಳಿಗಿಂತ ಅತಿ ಹೆಚ್ಚಿನ ಕೊರೊನಾ ಪ್ರಕರಣಗಳನ್ನು ದಾಖಲಿಸಿದೆ. ಅಮೆರಿಕ ಮತ್ತು ಬ್ರೆಜಿಲ್‌ನಲ್ಲಿ ದಿನನಿತ್ಯದ ಪ್ರಕರಣಗಳು ಕುಸಿಯುತ್ತಿದ್ದರೆ ಭಾರತದಲ್ಲಿ ಮಾತ್ರ ನಿರಂತರವಾಗಿ ಏರುತ್ತಲೇ ಇದೆ.

ಕೋವಿಡ್ ಸಮಯವನ್ನು ಬಹುಸಂಖ್ಯಾತವಾದಕ್ಕೆ ಬಳಸಿಕೊಳ್ಳಲಾಗಿದೆ ಎಂದು ಭಾರತ ಅರಿತುಕೊಳ್ಳಬೇಕು. ನಮ್ಮ ಗುರಿಯು ಸಾಂಕ್ರಾಮಿಕವನ್ನು ನಿರ್ಮೂಲನೆ ಮಾಡಲು ಅಗತ್ಯವಾಗಿ ಕೈಗೊಳ್ಳಬೇಕಾದ ಕ್ರಮಗಳ ಮೇಲೆ ಕೇಂದ್ರೀಕರಿಸಬೇಕಿದೆ.


ಇದನ್ನೂ ಓದಿ: ಬಿಎಸ್‌ಎನ್‌ಎಲ್‌ನಲ್ಲಿ ದೇಶದ್ರೋಹಿಗಳಿದ್ದಾರೆ: ಅನಂತ್‌ ಕುಮಾರ್ ಹೆಗಡೆ ಹೇಳಿಕೆಗೆ ತೀವ್ರ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...