Homeಮುಖಪುಟತಿರುಪತಿ ವರ್ಸಸ್‌ ತಬ್ಲಿಘಿ: ಸಾಂಕ್ರಾಮಿಕದ ಕೋಮುವಾದೀಕರಣಕ್ಕೆ ಸ್ಪಷ್ಟ ಉದಾಹರಣೆ

ತಿರುಪತಿ ವರ್ಸಸ್‌ ತಬ್ಲಿಘಿ: ಸಾಂಕ್ರಾಮಿಕದ ಕೋಮುವಾದೀಕರಣಕ್ಕೆ ಸ್ಪಷ್ಟ ಉದಾಹರಣೆ

ಕೋವಿಡ್ 19 ಅನ್ನು ಕೋಮುಸಾಧನವನ್ನಾಗಿ ಬಳಸಿಕೊಂಡಿದ್ದು ಸಾಂಕ್ರಾಮಿಕದ ವಿರುದ್ಧದ ಹೋರಾಟವನ್ನು  ದುರ್ಬಲಗೊಳಿಸಿತು ಎನ್ನಬಹುದು.

- Advertisement -
- Advertisement -

ರಾಷ್ಟ್ರವ್ಯಾಪಿ ಅನ್‌ಲಾಕ್ ಭಾಗವಾಗಿ ಜೂನ್ 11 ರಂದು ದೇವಾಲಯಗಳನ್ನು ಮತ್ತೆ ತೆರೆಯಲಾಯಿತು. ಅದರಂತೆ ಆಂಧ್ರಪ್ರದೇಶದ ತಿರುಪತಿ ದೇವಾಲಯವನ್ನು ತೆರೆಯಲಾಯಿತು. ಭಕ್ತಾದಿಗಳು ನುಗ್ಗಿಬಂದರು. ಜುಲೈ ತಿಂಗಳೊಂದರಲ್ಲಿಯೇ 2.38 ಲಕ್ಷ ಭಕ್ತಾದಿಗಳು ದೇವಾಲಯಕ್ಕೆ ಬಂದಿದ್ದಾರೆ. ಅಗತ್ಯ ಮುನ್ನಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳದ ಕಾರಣ ತಿರುಪತಿ ದೇವಾಲಯವೀಗ ಕೊರೊನಾ ಹಾಟ್‌ಸ್ಪಾಟ್‌ ಕೇಂದ್ರವಾಗಿ ಮಾರ್ಪಟ್ಟಿದೆ.

ಈ ಎರಡು ತಿಂಗಳಿನಲ್ಲಿ ದೇವಸ್ಥಾನದ ಅರ್ಚಕರು ಸೇರಿದಂತೆ 743 ಜನಕ್ಕೆ ಕೊರೊನಾ ಸೋಂಕು ತಗುಲಿದೆ. ಮೂರು ಜನ ಸಾವನಪ್ಪಿದ್ದಾರೆ. ಇನ್ನು ದೇವಾಲಯಕ್ಕೆ ಭೇಟಿ ನೀಡಿದ ಎಷ್ಟು ಭಕ್ತರಿಗೆ ಕೊರೊನಾ ಸೋಂಕು ಹರಡಿದೆ ಎಂಬುದರ ಕುರಿತು ಮಾಹಿತಿ ಲಭ್ಯವಿಲ್ಲ.

ಆಶ್ಚರ್ಯವೆಂದರೆ ಇಷ್ಟೆಲ್ಲಾ ಅನಾಹುತದ ನಂತರವೂ ದೇವಾಲಯವನ್ನು ಸೀಲ್‌ಡೌನ್‌ ಮಾಡಿಲ್ಲ. ಜುಲೈ 17 ರಂದು ಮಾಜಿ ಮುಖ್ಯ ಅರ್ಚಕ ಕೊರೊನಾದಿಂದ ಮೃತಪಟ್ಟ ನಂತರ ಹಲವಾರು ಜನ ದೇವಾಲಯವನ್ನು ಕೆಲ ಸಮಯ ಮುಚ್ಚಬೇಕೆಂದು ಒತ್ತಾಯಿಸಿದ್ದರು. ಕೇವಲ ಹಣ ಬರುತ್ತದೆಯೆಂದು ಸಾವಿರಾರು ಜನರನ್ನು ಬಲಿಕೊಡಲು ಸಾಧ್ಯವಿಲ್ಲ ಎಂದು ಆಗ್ರಹಿಸಿದ್ದರು. ಅದೆಲ್ಲದರ ಹೊರತಾಗಿಯೂ ಇಂದಿಗೂ ದೇವಾಲಯಕ್ಕೆ ಇನ್ನೂ ಭಕ್ತಾದಿಗಳು ಬರುತ್ತಿದ್ದಾರೆ.. ಪೂಜೆ ನಡೆಯುತ್ತಿದೆ ಮತ್ತು ಕೊರೊನಾ ಹರಡುತ್ತಲೇ ಇದೆ. ಆಂಧ್ರಪ್ರದೇಶ ರಾಜ್ಯವು ದೇಶದ ಅತಿಹೆಚ್ಚು ಕೊರೊನಾ ಸೋಂಕಿತ ಪ್ರಕರಣಗಳಲ್ಲಿ ಮೂರನೇ ಸ್ಥಾನಕ್ಕೆ ಏರಿದೆ.

ಸಾಂಕ್ರಾಮಿಕದ ಆರಂಭದ ದಿನಗಳಲ್ಲಿ ಕೋವಿಡ್ ಹಾಟ್‌ಸ್ಪಾಟ್‌ ಆಗಿ ಹೊರಹೊಮ್ಮಿದ ದೆಹಲಿಯ ತಬ್ಲಿಘಿ ಜಮಾತ್‌ಗೆ ತಿರುಪತಿಯನ್ನು ಹೋಲಿಕೆ ಮಾಡದಿರಲು ಸಾಧ್ಯವಿಲ್ಲ. ಮಾರ್ಚ್ ಕೊನೆಯಲ್ಲಿ ಬಹುಪಾಲು ಮಾಧ್ಯಮಗಳು ತಬ್ಲಿಘಿ ಜಮಾತ್ ವಿರುದ್ಧ ಅತ್ಯಂತ ಕೆಟ್ಟ ಅಭಿಯಾನ ನಡೆಸಿದ್ದವು. ಜಮಾತ್ ಉದ್ದೇಶಪೂರ್ವಕವಾಗಿ ರೋಗವನ್ನು ಹರಡುತ್ತಿದೆ ಎಂದು ಆರೋಪಿಸಿದ್ದರು. ಆಗಿನ್ನೂ ವೈರಸ್‌ ಅಪಾಯ ಅತಿಯಾಗಿರಲಿಲ್ಲ ಮಾತ್ರವಲ್ಲ ತಬ್ಲಿಘಿ ಜಮಾತ್ ಸಭೆ ಸೇರುವ ಕೆಲವೇ ದಿನಗಳ ಮುಂಚೆ ದೇಶದ ಅತ್ಯುನ್ನತ ಪ್ರಜಾಪ್ರಭುತ್ವ ಸಂಸ್ಥೆ ಎಂದು ಕರೆಸಿಕೊಳ್ಳುವ ‘ಸಂಸತ್’ ಅಧಿವೇಶನ ನಡೆಸುತ್ತಿತ್ತು. ಜಮಾತ್‌ ಸಾಂಕ್ರಾಮಿಕ ಕಾಲದಲ್ಲಿ ಸಭೆ ನಡೆಸಿದ್ದು ತಪ್ಪೇ ಇದ್ದರೂ ಸಹ ಸರ್ಕಾರವು ಪ್ರತಿ ದಿನ ಜಮಾತ್‌ನಿಂದ ಹರಡಿದ ವೈರಸ್‌ ಪ್ರಕರಣಗಳನ್ನು ಬಿಡುಗಡೆ ಮಾಡುತ್ತಿತ್ತು. ಇದು ಜಮಾತ್ ಪ್ರಭಾವನ್ನು ತಿರುಚಲು ಸಹಕಾರಿಯಾಯಿತು. ಆಗ ಜಮಾತ್ ಸಭೆಯಲ್ಲಿ ಭಾಗವಹಿಸಿದವರೆಲ್ಲಾ ಪರೀಕ್ಷೆಗೆ ಒಳಗಾದರೆ, ಇತರ ಭಾರತದಲ್ಲಿ ಕೊರೊನಾ ಪರೀಕ್ಷೆಯ ದರ ತೀರಾ ಕೆಳಮಟ್ಟದಲ್ಲಿತ್ತು ಎನ್ನುವುದನ್ನು ನಾವು ಮರೆಯಬಾರದು. ಹಾಗಾಗಿ ತಬ್ಲಿಘಿಯ ಸಂಖ್ಯೆಗಳು ಅತಿ ಹೆಚ್ಚು ಎಂದು ಬಿಂಬಿತವಾದವು.

ಅಲ್ಲಿಂದ ದೆಹಲಿಯನ್ನೇ ಹಾಟ್‌ಸ್ಪಾಟ್‌ ಎನ್ನಲಾಯಿತು. ಜಮಾತ್ ಕೇಂದ್ರ ಕಚೇರಿಯನ್ನು ಸೀಲ್‌ಡೌನ್ ಮಾಡಲಾಯಿತು. ಜಮಾತ್ ಸದಸ್ಯರನ್ನು ಹಿಡಿಯಲು ಯೋಜನೆ ಸಿದ್ಧವಾಯಿತು. ಹಲವಾರು ಜಮಾತ್ ಸದಸ್ಯರನ್ನು ಜೈಲಿಗೆ ಕಳಿಸಲಾಯಿತು.

ಆದರೆ ಈಗ ಈ ಯಾವ ಮಾನದಂಡಗಳನ್ನು ತಿರುಪತಿಗೆ ಅಳವಡಿಸಲಾಗುತ್ತಿಲ್ಲ. ದೇವಾಲಯವನ್ನು ಸೀಲ್‌ಡೌನ್‌ ಮಾಡಿಲ್ಲ. ದೇವಾಲಯಕ್ಕೆ ಭೇಟಿ ನೀಡಿದವರನ್ನು ಪತ್ತೆ ಹಚ್ಚಲಾಗುತ್ತಿಲ್ಲ! ಯಾರಿಗೂ ದೇವಾಲಯ ಇನ್ನು ತೆರೆದಿರುವುದರ ಕುರಿತು ಕೋಪ, ಆಕ್ರೋಶಗಳಿಲ್ಲ.

ತಬ್ಲಿಘಿ ಮತ್ತು ತಿರುಪತಿ ನಡುವೆ ಇರುವ ವ್ಯತ್ಯಾಸವು ಸಾಂಕ್ರಾಮಿಕ ರೋಗವನ್ನು ಕೋಮುವಾದೀಕರಿಸಿರುವ ಅಹಿತಕರ ಸತ್ಯವನ್ನು ಸೂಚಿಸುತ್ತದೆ: ಕೋವಿಡ್ -19 ಅನ್ನು ಭಾರತದಲ್ಲಿ ಬಹುಸಂಖ್ಯಾತ ರಾಜಕೀಯಕ್ಕೆ ಬಳಸಲಾಗಿದೆ.

ಇದೊಂದೆ ಉದಾಹರಣ ಮಾತ್ರವಲ್ಲ. ನರೇಂದ್ರ ಮೋದಿಯವರು ಮಾರ್ಚ್ 25ರಿಂದ ದೇಶಾದ್ಯಂತ ಲಾಕ್‌ಡೌನ್‌ ಹೇರಿ, ಧಾರ್ಮಿಕ ಕ್ಷೇತ್ರಗಳಿಗೆ ನಿಷೇಧ ಹೇರಿದರೂ ಸಹ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ರವರು ಈ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ ಅಯೋಧ್ಯೆಯಲ್ಲಿ ಉದ್ದೇಶಿತ ರಾಮಮಂದಿರ ಪೂಜೆಯಲ್ಲಿ ಪಾಲ್ಗೊಂಡಿದ್ದರು.

ಕೊರೊನಾ ಆರಂಭದ ಸಮಯದಲ್ಲಿ ಜನರಿಗೆ ವಿಪರೀತ ಭಯ, ಭೀತಿ ಇತ್ತು. ಆಗ ಸಾಂಕ್ರಾಮಿಕವನ್ನು ಬಳಸಿಕೊಂಡು ಭಾರತದ ಮುಸ್ಲಿಂ ಅಲ್ಪಸಂಖ್ಯಾತರರ ಬಗ್ಗೆ ಆಕ್ರಮಣ ಮಾಡಲಾಯಿತು. ಇದು ಅನೈತಿಕವಾದುದು. ಕೋವಿಡ್ 19 ಅನ್ನು ಕೋಮುಸಾಧನವನ್ನಾಗಿ ಬಳಸಿಕೊಂಡಿದ್ದು ಸಾಂಕ್ರಾಮಿಕದ ವಿರುದ್ಧದ ಹೋರಾಟವನ್ನು  ದುರ್ಬಲಗೊಳಿಸಿತು ಎನ್ನಬಹುದು. ಅಧಿಕಾರಿಗಳು ಉತ್ತಮ ನಂಬಿಕೆಯಿಂದ ಕಾರ್ಯನಿರ್ವಹಿಸುತ್ತಿಲ್ಲ ಎಂದು ಯಾರಾದರೂ ತಿಳಿದರೆ ಅವರು ನೀತಿ ನಿಯಮಗಳನ್ನು ಪಾಲಿಸುವುದನ್ನು ನಿಲ್ಲಿಸುತ್ತಾರೆ ಅಲ್ಲವೇ?

ಕಳೆದ ಐದು ದಿನಗಳಲ್ಲಿ ಭಾರತವು ಪ್ರಪಂಚದ ಇತರ ದೇಶಗಳಿಗಿಂತ ಅತಿ ಹೆಚ್ಚಿನ ಕೊರೊನಾ ಪ್ರಕರಣಗಳನ್ನು ದಾಖಲಿಸಿದೆ. ಅಮೆರಿಕ ಮತ್ತು ಬ್ರೆಜಿಲ್‌ನಲ್ಲಿ ದಿನನಿತ್ಯದ ಪ್ರಕರಣಗಳು ಕುಸಿಯುತ್ತಿದ್ದರೆ ಭಾರತದಲ್ಲಿ ಮಾತ್ರ ನಿರಂತರವಾಗಿ ಏರುತ್ತಲೇ ಇದೆ.

ಕೋವಿಡ್ ಸಮಯವನ್ನು ಬಹುಸಂಖ್ಯಾತವಾದಕ್ಕೆ ಬಳಸಿಕೊಳ್ಳಲಾಗಿದೆ ಎಂದು ಭಾರತ ಅರಿತುಕೊಳ್ಳಬೇಕು. ನಮ್ಮ ಗುರಿಯು ಸಾಂಕ್ರಾಮಿಕವನ್ನು ನಿರ್ಮೂಲನೆ ಮಾಡಲು ಅಗತ್ಯವಾಗಿ ಕೈಗೊಳ್ಳಬೇಕಾದ ಕ್ರಮಗಳ ಮೇಲೆ ಕೇಂದ್ರೀಕರಿಸಬೇಕಿದೆ.


ಇದನ್ನೂ ಓದಿ: ಬಿಎಸ್‌ಎನ್‌ಎಲ್‌ನಲ್ಲಿ ದೇಶದ್ರೋಹಿಗಳಿದ್ದಾರೆ: ಅನಂತ್‌ ಕುಮಾರ್ ಹೆಗಡೆ ಹೇಳಿಕೆಗೆ ತೀವ್ರ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...