Homeಮುಖಪುಟತಿರುಪತಿ ವರ್ಸಸ್‌ ತಬ್ಲಿಘಿ: ಸಾಂಕ್ರಾಮಿಕದ ಕೋಮುವಾದೀಕರಣಕ್ಕೆ ಸ್ಪಷ್ಟ ಉದಾಹರಣೆ

ತಿರುಪತಿ ವರ್ಸಸ್‌ ತಬ್ಲಿಘಿ: ಸಾಂಕ್ರಾಮಿಕದ ಕೋಮುವಾದೀಕರಣಕ್ಕೆ ಸ್ಪಷ್ಟ ಉದಾಹರಣೆ

ಕೋವಿಡ್ 19 ಅನ್ನು ಕೋಮುಸಾಧನವನ್ನಾಗಿ ಬಳಸಿಕೊಂಡಿದ್ದು ಸಾಂಕ್ರಾಮಿಕದ ವಿರುದ್ಧದ ಹೋರಾಟವನ್ನು  ದುರ್ಬಲಗೊಳಿಸಿತು ಎನ್ನಬಹುದು.

- Advertisement -
- Advertisement -

ರಾಷ್ಟ್ರವ್ಯಾಪಿ ಅನ್‌ಲಾಕ್ ಭಾಗವಾಗಿ ಜೂನ್ 11 ರಂದು ದೇವಾಲಯಗಳನ್ನು ಮತ್ತೆ ತೆರೆಯಲಾಯಿತು. ಅದರಂತೆ ಆಂಧ್ರಪ್ರದೇಶದ ತಿರುಪತಿ ದೇವಾಲಯವನ್ನು ತೆರೆಯಲಾಯಿತು. ಭಕ್ತಾದಿಗಳು ನುಗ್ಗಿಬಂದರು. ಜುಲೈ ತಿಂಗಳೊಂದರಲ್ಲಿಯೇ 2.38 ಲಕ್ಷ ಭಕ್ತಾದಿಗಳು ದೇವಾಲಯಕ್ಕೆ ಬಂದಿದ್ದಾರೆ. ಅಗತ್ಯ ಮುನ್ನಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳದ ಕಾರಣ ತಿರುಪತಿ ದೇವಾಲಯವೀಗ ಕೊರೊನಾ ಹಾಟ್‌ಸ್ಪಾಟ್‌ ಕೇಂದ್ರವಾಗಿ ಮಾರ್ಪಟ್ಟಿದೆ.

ಈ ಎರಡು ತಿಂಗಳಿನಲ್ಲಿ ದೇವಸ್ಥಾನದ ಅರ್ಚಕರು ಸೇರಿದಂತೆ 743 ಜನಕ್ಕೆ ಕೊರೊನಾ ಸೋಂಕು ತಗುಲಿದೆ. ಮೂರು ಜನ ಸಾವನಪ್ಪಿದ್ದಾರೆ. ಇನ್ನು ದೇವಾಲಯಕ್ಕೆ ಭೇಟಿ ನೀಡಿದ ಎಷ್ಟು ಭಕ್ತರಿಗೆ ಕೊರೊನಾ ಸೋಂಕು ಹರಡಿದೆ ಎಂಬುದರ ಕುರಿತು ಮಾಹಿತಿ ಲಭ್ಯವಿಲ್ಲ.

ಆಶ್ಚರ್ಯವೆಂದರೆ ಇಷ್ಟೆಲ್ಲಾ ಅನಾಹುತದ ನಂತರವೂ ದೇವಾಲಯವನ್ನು ಸೀಲ್‌ಡೌನ್‌ ಮಾಡಿಲ್ಲ. ಜುಲೈ 17 ರಂದು ಮಾಜಿ ಮುಖ್ಯ ಅರ್ಚಕ ಕೊರೊನಾದಿಂದ ಮೃತಪಟ್ಟ ನಂತರ ಹಲವಾರು ಜನ ದೇವಾಲಯವನ್ನು ಕೆಲ ಸಮಯ ಮುಚ್ಚಬೇಕೆಂದು ಒತ್ತಾಯಿಸಿದ್ದರು. ಕೇವಲ ಹಣ ಬರುತ್ತದೆಯೆಂದು ಸಾವಿರಾರು ಜನರನ್ನು ಬಲಿಕೊಡಲು ಸಾಧ್ಯವಿಲ್ಲ ಎಂದು ಆಗ್ರಹಿಸಿದ್ದರು. ಅದೆಲ್ಲದರ ಹೊರತಾಗಿಯೂ ಇಂದಿಗೂ ದೇವಾಲಯಕ್ಕೆ ಇನ್ನೂ ಭಕ್ತಾದಿಗಳು ಬರುತ್ತಿದ್ದಾರೆ.. ಪೂಜೆ ನಡೆಯುತ್ತಿದೆ ಮತ್ತು ಕೊರೊನಾ ಹರಡುತ್ತಲೇ ಇದೆ. ಆಂಧ್ರಪ್ರದೇಶ ರಾಜ್ಯವು ದೇಶದ ಅತಿಹೆಚ್ಚು ಕೊರೊನಾ ಸೋಂಕಿತ ಪ್ರಕರಣಗಳಲ್ಲಿ ಮೂರನೇ ಸ್ಥಾನಕ್ಕೆ ಏರಿದೆ.

ಸಾಂಕ್ರಾಮಿಕದ ಆರಂಭದ ದಿನಗಳಲ್ಲಿ ಕೋವಿಡ್ ಹಾಟ್‌ಸ್ಪಾಟ್‌ ಆಗಿ ಹೊರಹೊಮ್ಮಿದ ದೆಹಲಿಯ ತಬ್ಲಿಘಿ ಜಮಾತ್‌ಗೆ ತಿರುಪತಿಯನ್ನು ಹೋಲಿಕೆ ಮಾಡದಿರಲು ಸಾಧ್ಯವಿಲ್ಲ. ಮಾರ್ಚ್ ಕೊನೆಯಲ್ಲಿ ಬಹುಪಾಲು ಮಾಧ್ಯಮಗಳು ತಬ್ಲಿಘಿ ಜಮಾತ್ ವಿರುದ್ಧ ಅತ್ಯಂತ ಕೆಟ್ಟ ಅಭಿಯಾನ ನಡೆಸಿದ್ದವು. ಜಮಾತ್ ಉದ್ದೇಶಪೂರ್ವಕವಾಗಿ ರೋಗವನ್ನು ಹರಡುತ್ತಿದೆ ಎಂದು ಆರೋಪಿಸಿದ್ದರು. ಆಗಿನ್ನೂ ವೈರಸ್‌ ಅಪಾಯ ಅತಿಯಾಗಿರಲಿಲ್ಲ ಮಾತ್ರವಲ್ಲ ತಬ್ಲಿಘಿ ಜಮಾತ್ ಸಭೆ ಸೇರುವ ಕೆಲವೇ ದಿನಗಳ ಮುಂಚೆ ದೇಶದ ಅತ್ಯುನ್ನತ ಪ್ರಜಾಪ್ರಭುತ್ವ ಸಂಸ್ಥೆ ಎಂದು ಕರೆಸಿಕೊಳ್ಳುವ ‘ಸಂಸತ್’ ಅಧಿವೇಶನ ನಡೆಸುತ್ತಿತ್ತು. ಜಮಾತ್‌ ಸಾಂಕ್ರಾಮಿಕ ಕಾಲದಲ್ಲಿ ಸಭೆ ನಡೆಸಿದ್ದು ತಪ್ಪೇ ಇದ್ದರೂ ಸಹ ಸರ್ಕಾರವು ಪ್ರತಿ ದಿನ ಜಮಾತ್‌ನಿಂದ ಹರಡಿದ ವೈರಸ್‌ ಪ್ರಕರಣಗಳನ್ನು ಬಿಡುಗಡೆ ಮಾಡುತ್ತಿತ್ತು. ಇದು ಜಮಾತ್ ಪ್ರಭಾವನ್ನು ತಿರುಚಲು ಸಹಕಾರಿಯಾಯಿತು. ಆಗ ಜಮಾತ್ ಸಭೆಯಲ್ಲಿ ಭಾಗವಹಿಸಿದವರೆಲ್ಲಾ ಪರೀಕ್ಷೆಗೆ ಒಳಗಾದರೆ, ಇತರ ಭಾರತದಲ್ಲಿ ಕೊರೊನಾ ಪರೀಕ್ಷೆಯ ದರ ತೀರಾ ಕೆಳಮಟ್ಟದಲ್ಲಿತ್ತು ಎನ್ನುವುದನ್ನು ನಾವು ಮರೆಯಬಾರದು. ಹಾಗಾಗಿ ತಬ್ಲಿಘಿಯ ಸಂಖ್ಯೆಗಳು ಅತಿ ಹೆಚ್ಚು ಎಂದು ಬಿಂಬಿತವಾದವು.

ಅಲ್ಲಿಂದ ದೆಹಲಿಯನ್ನೇ ಹಾಟ್‌ಸ್ಪಾಟ್‌ ಎನ್ನಲಾಯಿತು. ಜಮಾತ್ ಕೇಂದ್ರ ಕಚೇರಿಯನ್ನು ಸೀಲ್‌ಡೌನ್ ಮಾಡಲಾಯಿತು. ಜಮಾತ್ ಸದಸ್ಯರನ್ನು ಹಿಡಿಯಲು ಯೋಜನೆ ಸಿದ್ಧವಾಯಿತು. ಹಲವಾರು ಜಮಾತ್ ಸದಸ್ಯರನ್ನು ಜೈಲಿಗೆ ಕಳಿಸಲಾಯಿತು.

ಆದರೆ ಈಗ ಈ ಯಾವ ಮಾನದಂಡಗಳನ್ನು ತಿರುಪತಿಗೆ ಅಳವಡಿಸಲಾಗುತ್ತಿಲ್ಲ. ದೇವಾಲಯವನ್ನು ಸೀಲ್‌ಡೌನ್‌ ಮಾಡಿಲ್ಲ. ದೇವಾಲಯಕ್ಕೆ ಭೇಟಿ ನೀಡಿದವರನ್ನು ಪತ್ತೆ ಹಚ್ಚಲಾಗುತ್ತಿಲ್ಲ! ಯಾರಿಗೂ ದೇವಾಲಯ ಇನ್ನು ತೆರೆದಿರುವುದರ ಕುರಿತು ಕೋಪ, ಆಕ್ರೋಶಗಳಿಲ್ಲ.

ತಬ್ಲಿಘಿ ಮತ್ತು ತಿರುಪತಿ ನಡುವೆ ಇರುವ ವ್ಯತ್ಯಾಸವು ಸಾಂಕ್ರಾಮಿಕ ರೋಗವನ್ನು ಕೋಮುವಾದೀಕರಿಸಿರುವ ಅಹಿತಕರ ಸತ್ಯವನ್ನು ಸೂಚಿಸುತ್ತದೆ: ಕೋವಿಡ್ -19 ಅನ್ನು ಭಾರತದಲ್ಲಿ ಬಹುಸಂಖ್ಯಾತ ರಾಜಕೀಯಕ್ಕೆ ಬಳಸಲಾಗಿದೆ.

ಇದೊಂದೆ ಉದಾಹರಣ ಮಾತ್ರವಲ್ಲ. ನರೇಂದ್ರ ಮೋದಿಯವರು ಮಾರ್ಚ್ 25ರಿಂದ ದೇಶಾದ್ಯಂತ ಲಾಕ್‌ಡೌನ್‌ ಹೇರಿ, ಧಾರ್ಮಿಕ ಕ್ಷೇತ್ರಗಳಿಗೆ ನಿಷೇಧ ಹೇರಿದರೂ ಸಹ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ರವರು ಈ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ ಅಯೋಧ್ಯೆಯಲ್ಲಿ ಉದ್ದೇಶಿತ ರಾಮಮಂದಿರ ಪೂಜೆಯಲ್ಲಿ ಪಾಲ್ಗೊಂಡಿದ್ದರು.

ಕೊರೊನಾ ಆರಂಭದ ಸಮಯದಲ್ಲಿ ಜನರಿಗೆ ವಿಪರೀತ ಭಯ, ಭೀತಿ ಇತ್ತು. ಆಗ ಸಾಂಕ್ರಾಮಿಕವನ್ನು ಬಳಸಿಕೊಂಡು ಭಾರತದ ಮುಸ್ಲಿಂ ಅಲ್ಪಸಂಖ್ಯಾತರರ ಬಗ್ಗೆ ಆಕ್ರಮಣ ಮಾಡಲಾಯಿತು. ಇದು ಅನೈತಿಕವಾದುದು. ಕೋವಿಡ್ 19 ಅನ್ನು ಕೋಮುಸಾಧನವನ್ನಾಗಿ ಬಳಸಿಕೊಂಡಿದ್ದು ಸಾಂಕ್ರಾಮಿಕದ ವಿರುದ್ಧದ ಹೋರಾಟವನ್ನು  ದುರ್ಬಲಗೊಳಿಸಿತು ಎನ್ನಬಹುದು. ಅಧಿಕಾರಿಗಳು ಉತ್ತಮ ನಂಬಿಕೆಯಿಂದ ಕಾರ್ಯನಿರ್ವಹಿಸುತ್ತಿಲ್ಲ ಎಂದು ಯಾರಾದರೂ ತಿಳಿದರೆ ಅವರು ನೀತಿ ನಿಯಮಗಳನ್ನು ಪಾಲಿಸುವುದನ್ನು ನಿಲ್ಲಿಸುತ್ತಾರೆ ಅಲ್ಲವೇ?

ಕಳೆದ ಐದು ದಿನಗಳಲ್ಲಿ ಭಾರತವು ಪ್ರಪಂಚದ ಇತರ ದೇಶಗಳಿಗಿಂತ ಅತಿ ಹೆಚ್ಚಿನ ಕೊರೊನಾ ಪ್ರಕರಣಗಳನ್ನು ದಾಖಲಿಸಿದೆ. ಅಮೆರಿಕ ಮತ್ತು ಬ್ರೆಜಿಲ್‌ನಲ್ಲಿ ದಿನನಿತ್ಯದ ಪ್ರಕರಣಗಳು ಕುಸಿಯುತ್ತಿದ್ದರೆ ಭಾರತದಲ್ಲಿ ಮಾತ್ರ ನಿರಂತರವಾಗಿ ಏರುತ್ತಲೇ ಇದೆ.

ಕೋವಿಡ್ ಸಮಯವನ್ನು ಬಹುಸಂಖ್ಯಾತವಾದಕ್ಕೆ ಬಳಸಿಕೊಳ್ಳಲಾಗಿದೆ ಎಂದು ಭಾರತ ಅರಿತುಕೊಳ್ಳಬೇಕು. ನಮ್ಮ ಗುರಿಯು ಸಾಂಕ್ರಾಮಿಕವನ್ನು ನಿರ್ಮೂಲನೆ ಮಾಡಲು ಅಗತ್ಯವಾಗಿ ಕೈಗೊಳ್ಳಬೇಕಾದ ಕ್ರಮಗಳ ಮೇಲೆ ಕೇಂದ್ರೀಕರಿಸಬೇಕಿದೆ.


ಇದನ್ನೂ ಓದಿ: ಬಿಎಸ್‌ಎನ್‌ಎಲ್‌ನಲ್ಲಿ ದೇಶದ್ರೋಹಿಗಳಿದ್ದಾರೆ: ಅನಂತ್‌ ಕುಮಾರ್ ಹೆಗಡೆ ಹೇಳಿಕೆಗೆ ತೀವ್ರ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...