Homeಮುಖಪುಟಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟಿಸಿದ ವಿದ್ಯಾರ್ಥಿಯನ್ನು ಅಮಾನತುಗೊಳಿಸಿದ ಟಿಐಎಸ್‌ಎಸ್‌

ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟಿಸಿದ ವಿದ್ಯಾರ್ಥಿಯನ್ನು ಅಮಾನತುಗೊಳಿಸಿದ ಟಿಐಎಸ್‌ಎಸ್‌

- Advertisement -
- Advertisement -

ಕೇಂದ್ರ ಸರ್ಕಾರದ ನೀತಿಗಳ ವಿರುದ್ಧದ ಪ್ರತಿಭಟನೆಯಲ್ಲಿ ಪಾಲ್ಗೊಂಡ ದಲಿತ ವಿದ್ಯಾರ್ಥಿಯನ್ನು ಮುಂಬೈನ ಟಾಟಾ ಇನ್ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಎರಡು ವರ್ಷಗಳ ಅವಧಿಗೆ ಅಮಾನತು ಮಾಡಿದೆ ಎಂದು ತಿಳಿದು ಬಂದಿದೆ.

ಪಿಹೆಚ್‌ಡಿ ಸಂಶೋಧನಾ ವಿದ್ಯಾರ್ಥಿ ರಾಮದಾಸ್ ಪ್ರಿನಿ ಶಿವಾನಂದ ಅಮಾನತುಗೊಂಡವರು. ಇವರ ವಿರುದ್ದ ‘ಪುನರಾವರ್ತಿತ ದುರ್ನಡತೆ ಮತ್ತು ದೇಶವಿರೋಧಿ ಚಟುವಟಿಕೆ’ಗಳ ಆರೋಪ ಹೊರಿಸಲಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಶಿವಾನಂದ ಅವರು ಕಳೆದ ಜನವರಿಯಲ್ಲಿ ಕೇಂದ್ರ ಸರ್ಕಾರದ ನೂತನ ಶಿಕ್ಷಣ ನೀತಿ ಅಥವಾ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ವಿರುದ್ದ ದೆಹಲಿಯ ಜಂತರ್‌ ಮಂತರ್‌ನಲ್ಲಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಅಲ್ಲಿ ಅವರು ಪ್ರೊಗ್ರೇಸಿವ್ ಸ್ಟೂಡೆಂಟ್ಸ್ ಪೋರಂ (ಪಿಎಸ್‌ಎಫ್) ಸಂಘಟನೆಯನ್ನು ಪ್ರತಿನಿಧಿಸಿದ್ದರು ಎಂದು ವರದಿಗಳು ಹೇಳಿವೆ.

ಟಿಐಎಸ್‌ಎಸ್‌-ಪಿಎಸ್‌ಎಫ್ ಎಂಬ ಬ್ಯಾನರ್ ಅಡಿಯಲ್ಲಿ ಶಿವಾನಂದ ಅವರು ವಿದ್ಯಾರ್ಥಿ ಸಂಘಟನೆಗಳ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಪಿಎಸ್‌ಎಫ್ ಸಂಘಟನೆ ಟಿಐಎಸ್‌ಎಸ್‌ನ ಅಧಿಕೃತ ಸಂಘಟನೆಯಲ್ಲ. ಶಿವಾನಂದ ಅವರು ಸಂಘಟನೆಯ ಹೆಸರಿನ ಜೊತೆ ಸಂಸ್ಥೆಯ ಹೆಸರನ್ನು ದುರ್ಬಳಕೆ ಮಾಡಿಕೊಂಡು ಶಿಸ್ತು ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಟಿಐಎಸ್‌ಎಸ್‌ ಆರೋಪಿಸಿದೆ.

ಏಪ್ರಿಲ್ 18ರಂದು ಶಿವಾನಂದ ಅವರನ್ನು ಅಮಾನತುಗೊಳಿಸಿ ಆದೇಶಿಸಿರುವುದಾಗಿ ಹೇಳಿರುವ ಟಿಐಎಸ್‌ಎಸ್‌, ಪ್ರತಿಭಟನೆಯಲ್ಲಿ ಪಾಲ್ಗೊಂಡ ಸಂಬಂಧ ಉತ್ತರ ಕೇಳಿ ಮಾರ್ಚ್ 7ರಂದು ಅವರಿಗೆ ಶೋಕಾಸ್ ನೋಟಿಸ್ ನೀಡಲಾಗಿತ್ತು ಎಂದಿದೆ. ಅಮಾನತು ಮಾಡುವ ಮೂಲಕ ಟಿಐಎಸ್‌ಎಸ್‌ನ ಎಲ್ಲಾ ಕ್ಯಾಂಪಸ್‌ಗಳಿಗೆ ಶಿವಾನಂದ ಅವರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.

ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) 2020ರ ವಿರುದ್ಧ 16 ವಿದ್ಯಾರ್ಥಿ ಸಂಘಟನೆಗಳ ಜಂಟಿ ವೇದಿಕೆಯಾದ ಯುನೈಟೆಡ್ ಸ್ಟೂಡೆಂಟ್ಸ್ ಆಫ್ ಇಂಡಿಯಾದ ಬ್ಯಾನರ್ ಅಡಿಯಲ್ಲಿ “ಶಿಕ್ಷಣವನ್ನು ಉಳಿಸಿ, ಎನ್‌ಇಪಿ ತಿರಸ್ಕರಿಸಿ, ಭಾರತವನ್ನು ಉಳಿಸಿ, ಬಿಜೆಪಿಯನ್ನು ತಿರಸ್ಕರಿಸಿ” ಎಂಬ ಘೋಷಣೆಯೊಂದಿಗೆ ಜನವರಿಯಲ್ಲಿ ಸಂಸತ್ತಿಗೆ ಮೆರವಣಿಗೆ ಆಯೋಜಿಸಲಾಗಿತ್ತು.

ಶಿವಾನಂದ ಅವರ ಅಮಾನತು ಆದೇಶದ ಕುರಿತು ಪ್ರತಿಕ್ರಿಯಿಸಿರುವ ಪಿಎಸ್‌ಎಫ್ ಸಂಘಟನೆ, “ಮೆರವಣಿಗೆ ಆಯೋಜಿಸಿರುವ ಮೂಲಕ ಆಡಳಿತಾರೂಢ ಬಿಜೆಪಿ ಮತ್ತು ಅದರ ವಿದ್ಯಾರ್ಥಿ ವಿರೋಧಿ ನೀತಿಗಳನ್ನು ವಿದ್ಯಾರ್ಥಿಗಳು ಪ್ರಶ್ನಿಸಿದ್ದರು. ಆದರೆ, ವಿದ್ಯಾರ್ಥಿಯನ್ನು ಅಮಾನತುಗೊಳಿಸಿ, ಎರಡು ವರ್ಷಗಳ ಕಾಲ ಟಿಐಎಸ್‌ಎಸ್‌ನ ಯಾವುದೇ ಕ್ಯಾಂಪಸ್‌ಗೆ ಪ್ರವೇಶಿಸದಂತೆ ತಡೆದಿರುವುದು ಟಿಐಎಸ್‌ಎಸ್ ಆಡಳಿತ ಪರೋಕ್ಷವಾಗಿ ಬಿಜೆಪಿ ಸರ್ಕಾರದ ವಿರುದ್ಧದ ಎಲ್ಲಾ ಭಿನ್ನಾಭಿಪ್ರಾಯಗಳನ್ನು ತಡೆಯಲು ಪ್ರಯತ್ನಿಸುತ್ತಿದೆ ಎಂಬುವುದನ್ನು ತೋರಿಸುತ್ತದೆ” ಎಂದಿದೆ.

ಟಿಐಎಸ್‌ಎಸ್‌ ಮಾರ್ಚ್ 7 ರಂದು ಶಿವಾನಂದ ಅವರಿಗೆ ನೀಡಿರುವ ಶೋಕಾಸ್ ನೋಟಿಸ್‌ನಲ್ಲಿ, ಜನವರಿಯಿಂದ ಶಿವಾನಂದ ಅವರು ಸಾಮಾಜಿಕ ಮಾಧ್ಯಮಗಳಲ್ಲಿ ಹಾಕಿರುವ ಪೋಸ್ಟ್‌ಗಳಿಗೆ ಆಕ್ಷೇಪಣೆಗಳನ್ನು ಎತ್ತಿದೆ. ಜನವರಿ 26 ರಂದು ‘ರಾಮ್ ಕೆ ನಾಮ್’ ಸಾಕ್ಷ್ಯಚಿತ್ರದ ಪ್ರದರ್ಶನಕ್ಕೆ ಸೇರಲು ವಿದ್ಯಾರ್ಥಿಗಳಿಗೆ ಕರೆ ನೀಡಿದನ್ನು ‘ಅಗೌರವದ ಗುರುತು’ ಮತ್ತು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯ ವಿರುದ್ಧದ ಪ್ರತಿಭಟನೆ ಎಂದು ಕರೆದಿದೆ. ‘ರಾಮ್ ಕೆ ನಾಮ್’ ಆನಂದ್ ಪಟವರ್ಧನ್ ಅವರ ರಾಷ್ಟ್ರೀಯ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರವಾಗಿದೆ.

ದಲಿತ ಸಮುದಾಯದ ಪಿಎಚ್‌ಡಿ ವಿದ್ಯಾರ್ಥಿಯಾದ ಶಿವಾನಂದ ಅವರು ಪಿಎಸ್‌ಎಫ್‌ನ ಮಾಜಿ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ. ಅವರು ಪ್ರಸ್ತುತ ಪಿಎಸ್‌ಎಫ್‌ನ ಮಾತೃ ಸಂಸ್ಥೆಯಾದ ಸ್ಟೂಡೆಂಟ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ) ಕೇಂದ್ರ ಕಾರ್ಯಕಾರಿ ಸಮಿತಿಯ ಸದಸ್ಯರಾಗಿದ್ದಾರೆ. ಎಸ್‌ಎಫ್‌ಐ ಮಹಾರಾಷ್ಟ್ರ ರಾಜ್ಯ ಸಮಿತಿಯ ಜಂಟಿ ಕಾರ್ಯದರ್ಶಿಯೂ ಆಗಿದ್ದಾರೆ.

ಇದನ್ನೂ ಓದಿ : ಪ್ರತ್ಯೇಕ ರಾಜ್ಯದ ಬೇಡಿಕೆ: ನಾಗಾಲ್ಯಾಂಡ್‌ನ 6 ಜಿಲ್ಲೆಗಳಲ್ಲಿ ಶೂನ್ಯ ಮತದಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Idiot central team actual values of studies all gone no quality of education just going back to God and civilization. Bjp also dont want to improve scientifically they want to slavery system and they are creating value less(respect less) jobs modi have to change this 2024

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...