Homeಮುಖಪುಟಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟಿಸಿದ ವಿದ್ಯಾರ್ಥಿಯನ್ನು ಅಮಾನತುಗೊಳಿಸಿದ ಟಿಐಎಸ್‌ಎಸ್‌

ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟಿಸಿದ ವಿದ್ಯಾರ್ಥಿಯನ್ನು ಅಮಾನತುಗೊಳಿಸಿದ ಟಿಐಎಸ್‌ಎಸ್‌

- Advertisement -
- Advertisement -

ಕೇಂದ್ರ ಸರ್ಕಾರದ ನೀತಿಗಳ ವಿರುದ್ಧದ ಪ್ರತಿಭಟನೆಯಲ್ಲಿ ಪಾಲ್ಗೊಂಡ ದಲಿತ ವಿದ್ಯಾರ್ಥಿಯನ್ನು ಮುಂಬೈನ ಟಾಟಾ ಇನ್ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಎರಡು ವರ್ಷಗಳ ಅವಧಿಗೆ ಅಮಾನತು ಮಾಡಿದೆ ಎಂದು ತಿಳಿದು ಬಂದಿದೆ.

ಪಿಹೆಚ್‌ಡಿ ಸಂಶೋಧನಾ ವಿದ್ಯಾರ್ಥಿ ರಾಮದಾಸ್ ಪ್ರಿನಿ ಶಿವಾನಂದ ಅಮಾನತುಗೊಂಡವರು. ಇವರ ವಿರುದ್ದ ‘ಪುನರಾವರ್ತಿತ ದುರ್ನಡತೆ ಮತ್ತು ದೇಶವಿರೋಧಿ ಚಟುವಟಿಕೆ’ಗಳ ಆರೋಪ ಹೊರಿಸಲಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಶಿವಾನಂದ ಅವರು ಕಳೆದ ಜನವರಿಯಲ್ಲಿ ಕೇಂದ್ರ ಸರ್ಕಾರದ ನೂತನ ಶಿಕ್ಷಣ ನೀತಿ ಅಥವಾ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ವಿರುದ್ದ ದೆಹಲಿಯ ಜಂತರ್‌ ಮಂತರ್‌ನಲ್ಲಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಅಲ್ಲಿ ಅವರು ಪ್ರೊಗ್ರೇಸಿವ್ ಸ್ಟೂಡೆಂಟ್ಸ್ ಪೋರಂ (ಪಿಎಸ್‌ಎಫ್) ಸಂಘಟನೆಯನ್ನು ಪ್ರತಿನಿಧಿಸಿದ್ದರು ಎಂದು ವರದಿಗಳು ಹೇಳಿವೆ.

ಟಿಐಎಸ್‌ಎಸ್‌-ಪಿಎಸ್‌ಎಫ್ ಎಂಬ ಬ್ಯಾನರ್ ಅಡಿಯಲ್ಲಿ ಶಿವಾನಂದ ಅವರು ವಿದ್ಯಾರ್ಥಿ ಸಂಘಟನೆಗಳ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಪಿಎಸ್‌ಎಫ್ ಸಂಘಟನೆ ಟಿಐಎಸ್‌ಎಸ್‌ನ ಅಧಿಕೃತ ಸಂಘಟನೆಯಲ್ಲ. ಶಿವಾನಂದ ಅವರು ಸಂಘಟನೆಯ ಹೆಸರಿನ ಜೊತೆ ಸಂಸ್ಥೆಯ ಹೆಸರನ್ನು ದುರ್ಬಳಕೆ ಮಾಡಿಕೊಂಡು ಶಿಸ್ತು ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಟಿಐಎಸ್‌ಎಸ್‌ ಆರೋಪಿಸಿದೆ.

ಏಪ್ರಿಲ್ 18ರಂದು ಶಿವಾನಂದ ಅವರನ್ನು ಅಮಾನತುಗೊಳಿಸಿ ಆದೇಶಿಸಿರುವುದಾಗಿ ಹೇಳಿರುವ ಟಿಐಎಸ್‌ಎಸ್‌, ಪ್ರತಿಭಟನೆಯಲ್ಲಿ ಪಾಲ್ಗೊಂಡ ಸಂಬಂಧ ಉತ್ತರ ಕೇಳಿ ಮಾರ್ಚ್ 7ರಂದು ಅವರಿಗೆ ಶೋಕಾಸ್ ನೋಟಿಸ್ ನೀಡಲಾಗಿತ್ತು ಎಂದಿದೆ. ಅಮಾನತು ಮಾಡುವ ಮೂಲಕ ಟಿಐಎಸ್‌ಎಸ್‌ನ ಎಲ್ಲಾ ಕ್ಯಾಂಪಸ್‌ಗಳಿಗೆ ಶಿವಾನಂದ ಅವರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.

ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) 2020ರ ವಿರುದ್ಧ 16 ವಿದ್ಯಾರ್ಥಿ ಸಂಘಟನೆಗಳ ಜಂಟಿ ವೇದಿಕೆಯಾದ ಯುನೈಟೆಡ್ ಸ್ಟೂಡೆಂಟ್ಸ್ ಆಫ್ ಇಂಡಿಯಾದ ಬ್ಯಾನರ್ ಅಡಿಯಲ್ಲಿ “ಶಿಕ್ಷಣವನ್ನು ಉಳಿಸಿ, ಎನ್‌ಇಪಿ ತಿರಸ್ಕರಿಸಿ, ಭಾರತವನ್ನು ಉಳಿಸಿ, ಬಿಜೆಪಿಯನ್ನು ತಿರಸ್ಕರಿಸಿ” ಎಂಬ ಘೋಷಣೆಯೊಂದಿಗೆ ಜನವರಿಯಲ್ಲಿ ಸಂಸತ್ತಿಗೆ ಮೆರವಣಿಗೆ ಆಯೋಜಿಸಲಾಗಿತ್ತು.

ಶಿವಾನಂದ ಅವರ ಅಮಾನತು ಆದೇಶದ ಕುರಿತು ಪ್ರತಿಕ್ರಿಯಿಸಿರುವ ಪಿಎಸ್‌ಎಫ್ ಸಂಘಟನೆ, “ಮೆರವಣಿಗೆ ಆಯೋಜಿಸಿರುವ ಮೂಲಕ ಆಡಳಿತಾರೂಢ ಬಿಜೆಪಿ ಮತ್ತು ಅದರ ವಿದ್ಯಾರ್ಥಿ ವಿರೋಧಿ ನೀತಿಗಳನ್ನು ವಿದ್ಯಾರ್ಥಿಗಳು ಪ್ರಶ್ನಿಸಿದ್ದರು. ಆದರೆ, ವಿದ್ಯಾರ್ಥಿಯನ್ನು ಅಮಾನತುಗೊಳಿಸಿ, ಎರಡು ವರ್ಷಗಳ ಕಾಲ ಟಿಐಎಸ್‌ಎಸ್‌ನ ಯಾವುದೇ ಕ್ಯಾಂಪಸ್‌ಗೆ ಪ್ರವೇಶಿಸದಂತೆ ತಡೆದಿರುವುದು ಟಿಐಎಸ್‌ಎಸ್ ಆಡಳಿತ ಪರೋಕ್ಷವಾಗಿ ಬಿಜೆಪಿ ಸರ್ಕಾರದ ವಿರುದ್ಧದ ಎಲ್ಲಾ ಭಿನ್ನಾಭಿಪ್ರಾಯಗಳನ್ನು ತಡೆಯಲು ಪ್ರಯತ್ನಿಸುತ್ತಿದೆ ಎಂಬುವುದನ್ನು ತೋರಿಸುತ್ತದೆ” ಎಂದಿದೆ.

ಟಿಐಎಸ್‌ಎಸ್‌ ಮಾರ್ಚ್ 7 ರಂದು ಶಿವಾನಂದ ಅವರಿಗೆ ನೀಡಿರುವ ಶೋಕಾಸ್ ನೋಟಿಸ್‌ನಲ್ಲಿ, ಜನವರಿಯಿಂದ ಶಿವಾನಂದ ಅವರು ಸಾಮಾಜಿಕ ಮಾಧ್ಯಮಗಳಲ್ಲಿ ಹಾಕಿರುವ ಪೋಸ್ಟ್‌ಗಳಿಗೆ ಆಕ್ಷೇಪಣೆಗಳನ್ನು ಎತ್ತಿದೆ. ಜನವರಿ 26 ರಂದು ‘ರಾಮ್ ಕೆ ನಾಮ್’ ಸಾಕ್ಷ್ಯಚಿತ್ರದ ಪ್ರದರ್ಶನಕ್ಕೆ ಸೇರಲು ವಿದ್ಯಾರ್ಥಿಗಳಿಗೆ ಕರೆ ನೀಡಿದನ್ನು ‘ಅಗೌರವದ ಗುರುತು’ ಮತ್ತು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯ ವಿರುದ್ಧದ ಪ್ರತಿಭಟನೆ ಎಂದು ಕರೆದಿದೆ. ‘ರಾಮ್ ಕೆ ನಾಮ್’ ಆನಂದ್ ಪಟವರ್ಧನ್ ಅವರ ರಾಷ್ಟ್ರೀಯ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರವಾಗಿದೆ.

ದಲಿತ ಸಮುದಾಯದ ಪಿಎಚ್‌ಡಿ ವಿದ್ಯಾರ್ಥಿಯಾದ ಶಿವಾನಂದ ಅವರು ಪಿಎಸ್‌ಎಫ್‌ನ ಮಾಜಿ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ. ಅವರು ಪ್ರಸ್ತುತ ಪಿಎಸ್‌ಎಫ್‌ನ ಮಾತೃ ಸಂಸ್ಥೆಯಾದ ಸ್ಟೂಡೆಂಟ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ) ಕೇಂದ್ರ ಕಾರ್ಯಕಾರಿ ಸಮಿತಿಯ ಸದಸ್ಯರಾಗಿದ್ದಾರೆ. ಎಸ್‌ಎಫ್‌ಐ ಮಹಾರಾಷ್ಟ್ರ ರಾಜ್ಯ ಸಮಿತಿಯ ಜಂಟಿ ಕಾರ್ಯದರ್ಶಿಯೂ ಆಗಿದ್ದಾರೆ.

ಇದನ್ನೂ ಓದಿ : ಪ್ರತ್ಯೇಕ ರಾಜ್ಯದ ಬೇಡಿಕೆ: ನಾಗಾಲ್ಯಾಂಡ್‌ನ 6 ಜಿಲ್ಲೆಗಳಲ್ಲಿ ಶೂನ್ಯ ಮತದಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Idiot central team actual values of studies all gone no quality of education just going back to God and civilization. Bjp also dont want to improve scientifically they want to slavery system and they are creating value less(respect less) jobs modi have to change this 2024

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...