Homeಮುಖಪುಟಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟಿಸಿದ ವಿದ್ಯಾರ್ಥಿಯನ್ನು ಅಮಾನತುಗೊಳಿಸಿದ ಟಿಐಎಸ್‌ಎಸ್‌

ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟಿಸಿದ ವಿದ್ಯಾರ್ಥಿಯನ್ನು ಅಮಾನತುಗೊಳಿಸಿದ ಟಿಐಎಸ್‌ಎಸ್‌

- Advertisement -
- Advertisement -

ಕೇಂದ್ರ ಸರ್ಕಾರದ ನೀತಿಗಳ ವಿರುದ್ಧದ ಪ್ರತಿಭಟನೆಯಲ್ಲಿ ಪಾಲ್ಗೊಂಡ ದಲಿತ ವಿದ್ಯಾರ್ಥಿಯನ್ನು ಮುಂಬೈನ ಟಾಟಾ ಇನ್ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಎರಡು ವರ್ಷಗಳ ಅವಧಿಗೆ ಅಮಾನತು ಮಾಡಿದೆ ಎಂದು ತಿಳಿದು ಬಂದಿದೆ.

ಪಿಹೆಚ್‌ಡಿ ಸಂಶೋಧನಾ ವಿದ್ಯಾರ್ಥಿ ರಾಮದಾಸ್ ಪ್ರಿನಿ ಶಿವಾನಂದ ಅಮಾನತುಗೊಂಡವರು. ಇವರ ವಿರುದ್ದ ‘ಪುನರಾವರ್ತಿತ ದುರ್ನಡತೆ ಮತ್ತು ದೇಶವಿರೋಧಿ ಚಟುವಟಿಕೆ’ಗಳ ಆರೋಪ ಹೊರಿಸಲಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಶಿವಾನಂದ ಅವರು ಕಳೆದ ಜನವರಿಯಲ್ಲಿ ಕೇಂದ್ರ ಸರ್ಕಾರದ ನೂತನ ಶಿಕ್ಷಣ ನೀತಿ ಅಥವಾ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ವಿರುದ್ದ ದೆಹಲಿಯ ಜಂತರ್‌ ಮಂತರ್‌ನಲ್ಲಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಅಲ್ಲಿ ಅವರು ಪ್ರೊಗ್ರೇಸಿವ್ ಸ್ಟೂಡೆಂಟ್ಸ್ ಪೋರಂ (ಪಿಎಸ್‌ಎಫ್) ಸಂಘಟನೆಯನ್ನು ಪ್ರತಿನಿಧಿಸಿದ್ದರು ಎಂದು ವರದಿಗಳು ಹೇಳಿವೆ.

ಟಿಐಎಸ್‌ಎಸ್‌-ಪಿಎಸ್‌ಎಫ್ ಎಂಬ ಬ್ಯಾನರ್ ಅಡಿಯಲ್ಲಿ ಶಿವಾನಂದ ಅವರು ವಿದ್ಯಾರ್ಥಿ ಸಂಘಟನೆಗಳ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಪಿಎಸ್‌ಎಫ್ ಸಂಘಟನೆ ಟಿಐಎಸ್‌ಎಸ್‌ನ ಅಧಿಕೃತ ಸಂಘಟನೆಯಲ್ಲ. ಶಿವಾನಂದ ಅವರು ಸಂಘಟನೆಯ ಹೆಸರಿನ ಜೊತೆ ಸಂಸ್ಥೆಯ ಹೆಸರನ್ನು ದುರ್ಬಳಕೆ ಮಾಡಿಕೊಂಡು ಶಿಸ್ತು ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಟಿಐಎಸ್‌ಎಸ್‌ ಆರೋಪಿಸಿದೆ.

ಏಪ್ರಿಲ್ 18ರಂದು ಶಿವಾನಂದ ಅವರನ್ನು ಅಮಾನತುಗೊಳಿಸಿ ಆದೇಶಿಸಿರುವುದಾಗಿ ಹೇಳಿರುವ ಟಿಐಎಸ್‌ಎಸ್‌, ಪ್ರತಿಭಟನೆಯಲ್ಲಿ ಪಾಲ್ಗೊಂಡ ಸಂಬಂಧ ಉತ್ತರ ಕೇಳಿ ಮಾರ್ಚ್ 7ರಂದು ಅವರಿಗೆ ಶೋಕಾಸ್ ನೋಟಿಸ್ ನೀಡಲಾಗಿತ್ತು ಎಂದಿದೆ. ಅಮಾನತು ಮಾಡುವ ಮೂಲಕ ಟಿಐಎಸ್‌ಎಸ್‌ನ ಎಲ್ಲಾ ಕ್ಯಾಂಪಸ್‌ಗಳಿಗೆ ಶಿವಾನಂದ ಅವರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.

ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) 2020ರ ವಿರುದ್ಧ 16 ವಿದ್ಯಾರ್ಥಿ ಸಂಘಟನೆಗಳ ಜಂಟಿ ವೇದಿಕೆಯಾದ ಯುನೈಟೆಡ್ ಸ್ಟೂಡೆಂಟ್ಸ್ ಆಫ್ ಇಂಡಿಯಾದ ಬ್ಯಾನರ್ ಅಡಿಯಲ್ಲಿ “ಶಿಕ್ಷಣವನ್ನು ಉಳಿಸಿ, ಎನ್‌ಇಪಿ ತಿರಸ್ಕರಿಸಿ, ಭಾರತವನ್ನು ಉಳಿಸಿ, ಬಿಜೆಪಿಯನ್ನು ತಿರಸ್ಕರಿಸಿ” ಎಂಬ ಘೋಷಣೆಯೊಂದಿಗೆ ಜನವರಿಯಲ್ಲಿ ಸಂಸತ್ತಿಗೆ ಮೆರವಣಿಗೆ ಆಯೋಜಿಸಲಾಗಿತ್ತು.

ಶಿವಾನಂದ ಅವರ ಅಮಾನತು ಆದೇಶದ ಕುರಿತು ಪ್ರತಿಕ್ರಿಯಿಸಿರುವ ಪಿಎಸ್‌ಎಫ್ ಸಂಘಟನೆ, “ಮೆರವಣಿಗೆ ಆಯೋಜಿಸಿರುವ ಮೂಲಕ ಆಡಳಿತಾರೂಢ ಬಿಜೆಪಿ ಮತ್ತು ಅದರ ವಿದ್ಯಾರ್ಥಿ ವಿರೋಧಿ ನೀತಿಗಳನ್ನು ವಿದ್ಯಾರ್ಥಿಗಳು ಪ್ರಶ್ನಿಸಿದ್ದರು. ಆದರೆ, ವಿದ್ಯಾರ್ಥಿಯನ್ನು ಅಮಾನತುಗೊಳಿಸಿ, ಎರಡು ವರ್ಷಗಳ ಕಾಲ ಟಿಐಎಸ್‌ಎಸ್‌ನ ಯಾವುದೇ ಕ್ಯಾಂಪಸ್‌ಗೆ ಪ್ರವೇಶಿಸದಂತೆ ತಡೆದಿರುವುದು ಟಿಐಎಸ್‌ಎಸ್ ಆಡಳಿತ ಪರೋಕ್ಷವಾಗಿ ಬಿಜೆಪಿ ಸರ್ಕಾರದ ವಿರುದ್ಧದ ಎಲ್ಲಾ ಭಿನ್ನಾಭಿಪ್ರಾಯಗಳನ್ನು ತಡೆಯಲು ಪ್ರಯತ್ನಿಸುತ್ತಿದೆ ಎಂಬುವುದನ್ನು ತೋರಿಸುತ್ತದೆ” ಎಂದಿದೆ.

ಟಿಐಎಸ್‌ಎಸ್‌ ಮಾರ್ಚ್ 7 ರಂದು ಶಿವಾನಂದ ಅವರಿಗೆ ನೀಡಿರುವ ಶೋಕಾಸ್ ನೋಟಿಸ್‌ನಲ್ಲಿ, ಜನವರಿಯಿಂದ ಶಿವಾನಂದ ಅವರು ಸಾಮಾಜಿಕ ಮಾಧ್ಯಮಗಳಲ್ಲಿ ಹಾಕಿರುವ ಪೋಸ್ಟ್‌ಗಳಿಗೆ ಆಕ್ಷೇಪಣೆಗಳನ್ನು ಎತ್ತಿದೆ. ಜನವರಿ 26 ರಂದು ‘ರಾಮ್ ಕೆ ನಾಮ್’ ಸಾಕ್ಷ್ಯಚಿತ್ರದ ಪ್ರದರ್ಶನಕ್ಕೆ ಸೇರಲು ವಿದ್ಯಾರ್ಥಿಗಳಿಗೆ ಕರೆ ನೀಡಿದನ್ನು ‘ಅಗೌರವದ ಗುರುತು’ ಮತ್ತು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯ ವಿರುದ್ಧದ ಪ್ರತಿಭಟನೆ ಎಂದು ಕರೆದಿದೆ. ‘ರಾಮ್ ಕೆ ನಾಮ್’ ಆನಂದ್ ಪಟವರ್ಧನ್ ಅವರ ರಾಷ್ಟ್ರೀಯ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರವಾಗಿದೆ.

ದಲಿತ ಸಮುದಾಯದ ಪಿಎಚ್‌ಡಿ ವಿದ್ಯಾರ್ಥಿಯಾದ ಶಿವಾನಂದ ಅವರು ಪಿಎಸ್‌ಎಫ್‌ನ ಮಾಜಿ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ. ಅವರು ಪ್ರಸ್ತುತ ಪಿಎಸ್‌ಎಫ್‌ನ ಮಾತೃ ಸಂಸ್ಥೆಯಾದ ಸ್ಟೂಡೆಂಟ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ) ಕೇಂದ್ರ ಕಾರ್ಯಕಾರಿ ಸಮಿತಿಯ ಸದಸ್ಯರಾಗಿದ್ದಾರೆ. ಎಸ್‌ಎಫ್‌ಐ ಮಹಾರಾಷ್ಟ್ರ ರಾಜ್ಯ ಸಮಿತಿಯ ಜಂಟಿ ಕಾರ್ಯದರ್ಶಿಯೂ ಆಗಿದ್ದಾರೆ.

ಇದನ್ನೂ ಓದಿ : ಪ್ರತ್ಯೇಕ ರಾಜ್ಯದ ಬೇಡಿಕೆ: ನಾಗಾಲ್ಯಾಂಡ್‌ನ 6 ಜಿಲ್ಲೆಗಳಲ್ಲಿ ಶೂನ್ಯ ಮತದಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Idiot central team actual values of studies all gone no quality of education just going back to God and civilization. Bjp also dont want to improve scientifically they want to slavery system and they are creating value less(respect less) jobs modi have to change this 2024

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...