Homeಮುಖಪುಟಟಿಎಂ ಕೃಷ್ಣ ಅವರನ್ನು ಎಂಎಸ್ ಸುಬ್ಬುಲಕ್ಷ್ಮಿ ಪ್ರಶಸ್ತಿ ಪುರಸ್ಕೃತ ಎಂದು ಗುರುತಿಸಬಾರದು - ಸುಪ್ರೀಂ ಕೋರ್ಟ್

ಟಿಎಂ ಕೃಷ್ಣ ಅವರನ್ನು ಎಂಎಸ್ ಸುಬ್ಬುಲಕ್ಷ್ಮಿ ಪ್ರಶಸ್ತಿ ಪುರಸ್ಕೃತ ಎಂದು ಗುರುತಿಸಬಾರದು – ಸುಪ್ರೀಂ ಕೋರ್ಟ್

- Advertisement -
- Advertisement -

ಕರ್ನಾಟಕ ಸಂಗೀತ ಗಾಯಕ ಮತ್ತು ಹೋರಾಟಗಾರ ಟಿಎಂ ಕೃಷ್ಣ ಅವರನ್ನು ಸಂಗೀತ ಕಲಾನಿಧಿ ಎಂ.ಎಸ್. ಸುಬ್ಬುಲಕ್ಷ್ಮಿ ಪ್ರಶಸ್ತಿ ಪುರಸ್ಕೃತರಾಗಿ ಗುರುತಿಸಬಾರದು ಎಂದು ಸುಪ್ರೀಂ ಕೋರ್ಟ್ ಸೋಮವಾರ ಮಧ್ಯಂತರ ಆದೇಶವನ್ನು ನೀಡಿದೆ ಎಂದು ಲೈವ್ ಲಾ ವರದಿ ಮಾಡಿದೆ. ಚೆನ್ನೈನ ಮ್ಯೂಸಿಕ್ ಅಕಾಡೆಮಿ ಭಾನುವಾರ ನಡೆದ 98ನೇ ವಾರ್ಷಿಕ ಸಮಾರಂಭದಲ್ಲಿ ಕೃಷ್ಣ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿತು.

ಸೋಮವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಹೃಷಿಕೇಶ್ ರಾಯ್ ಮತ್ತು ಎಸ್‌ವಿಎನ್ ಭಟ್ಟಿ ಅವರನ್ನೊಳಗೊಂಡ ಪೀಠವು, ಕೃಷ್ಣ ಅವರು ತನ್ನನ್ನು ಪ್ರಶಸ್ತಿ ಸ್ವೀಕರಿಸುವವರೆಂದು ತೋರಿಸಿಕೊಳ್ಳುವುದನ್ನು ನಿರ್ಬಂಧಿಸಲಾಗಿದೆ ಎಂದು ಹೇಳಿದೆ. ಕೃಷ್ಣ ಅವರಿಗೆ ಸಂಗೀತ ಕಲಾನಿಧಿ ಪ್ರಶಸ್ತಿ ನೀಡಲು ಅನುಮತಿ ನೀಡಿದ ಮದ್ರಾಸ್ ಹೈಕೋರ್ಟ್ ಆದೇಶದ ವಿರುದ್ಧ ಸುಬ್ಬುಲಕ್ಷ್ಮಿ ಅವರ ಮೊಮ್ಮಗ ವಿ ಶ್ರೀನಿವಾಸನ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಪೀಠ ನಡೆಸಿತು. ಟಿಎಂ ಕೃಷ್ಣ ಅವರನ್ನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸುಬ್ಬುಲಕ್ಷ್ಮಿ ಅವರ ಬಗ್ಗೆ ಟೀಕೆಗಳು, ಸಾಮಾಜಿಕ ಮಾಧ್ಯಮಗಳಲ್ಲಿ ಮತ್ತು ಲೇಖನಗಳಲ್ಲಿ ಅವರು ಮಾಡಿದ ಟೀಕೆಗಳು ಸೇರಿದಂತೆ, ಅವರ ಹೆಸರನ್ನು ಹೊಂದಿರುವ ಪ್ರಶಸ್ತಿಯನ್ನು ಸ್ವೀಕರಿಸಲು ಅವರನ್ನು ಅನರ್ಹಗೊಳಿಸಬೇಕು ಎಂದು ಶ್ರೀನಿವಾಸನ್ ವಾದಿಸಿದ್ದಾರೆ.

ಕೃಷ್ಣ ಅವರು ಅನಾಮಧೇಯ ಉಲ್ಲೇಖದ ಮೂಲಕ ಸುಬ್ಬುಲಕ್ಷ್ಮಿಯನ್ನು “ಇಪ್ಪತ್ತನೇ ಶತಮಾನದ ಮಹಾನ್ ವಂಚಕಿ” ಎಂದು ವಿವರಿಸಿದ್ದಾರೆ ಮತ್ತು ತನ್ನ ವ್ಯಾಖ್ಯಾನದಲ್ಲಿ ಅವರನ್ನು “ಸೈನ್‌ಟ್ಲಿ ಬಾರ್ಬಿ ಡಾಲ್” ಎಂದು ಕರೆದಿದ್ದಾರೆ ಎಂದು ಅರ್ಜಿ ಆರೋಪಿಸಿತ್ತು. ಕೃಷ್ಣ ಅವರ ಈ ಹೇಳಿಕೆಗಳು ಸುಬ್ಬುಲಕ್ಷ್ಮಿ ಅವರ ಗೌರವವನ್ನು ಕೆಡಿಸುವ ಪ್ರಯತ್ನಗಳು ಮತ್ತು ಕರ್ನಾಟಕ ಸಂಗೀತಕ್ಕೆ ಅವರ ಕೊಡುಗೆಗಳನ್ನು ದುರ್ಬಲಗೊಳಿಸುವ ಪ್ರಯತ್ನಗಳಾಗಿವೆ ಎಂದು ಶ್ರೀನಿವಾಸನ್ ಅರ್ಜಿಯಲ್ಲಿ ಹೇಳಿದ್ದಾರೆ.

ನವೆಂಬರ್ 19 ರಂದು, ಹೈಕೋರ್ಟ್‌ನ ಏಕಸದಸ್ಯ ಪೀಠವು ಕೃಷ್ಣ ಅವರಿಗೆ ಪ್ರಶಸ್ತಿ ಪ್ರದಾನ ಮಾಡದಂತೆ ಮದ್ರಾಸ್ ಸಂಗೀತ ಅಕಾಡೆಮಿಗೆ ತಡೆಯಾಜ್ಞೆ ನೀಡಿತ್ತು. ಮ್ಯೂಸಿಕ್ ಅಕಾಡೆಮಿಯು ಕೃಷ್ಣ ಅವರಿಗೆ ಪ್ರಶಸ್ತಿ ಮತ್ತು ನಗದು ಬಹುಮಾನ ನೀಡಬಹುದಾದರೂ, ಪ್ರಶಸ್ತಿಗೆ ಸುಬ್ಬುಲಕ್ಷ್ಮಿ ಹೆಸರಿಡಬಾರದು, ಇದು ಅಪ್ರತಿಮ ಗಾಯಕನ ಇಚ್ಛೆಯನ್ನು ಉಲ್ಲಂಘಿಸುತ್ತದೆ ಎಂದು ನ್ಯಾಯಮೂರ್ತಿ ಜಿ ಜಯಚಂದ್ರನ್ ಹೇಳಿದ್ದಾರೆ. ಆದರೆ, ಡಿಸೆಂಬರ್ 13 ರಂದು ಹೈಕೋರ್ಟ್ ವಿಭಾಗೀಯ ಪೀಠವು ಜಯಚಂದ್ರನ್ ಅವರ ಆದೇಶವನ್ನು ರದ್ದುಗೊಳಿಸಿತು.

ಸುಬ್ಬುಲಕ್ಷ್ಮಿ ಅವರ ಹೆಸರಿನಲ್ಲಿ ಯಾವುದೇ ಟ್ರಸ್ಟ್, ಸ್ಮಾರಕ ಅಥವಾ ಪ್ರತಿಷ್ಠಾನವನ್ನು ಸ್ಥಾಪಿಸಬಾರದು ಮತ್ತು ಅಂತಹ ಉದ್ದೇಶಗಳಿಗಾಗಿ ಯಾವುದೇ ಹಣವನ್ನು ಸಂಗ್ರಹಿಸಬಾರದು ಎಂದು 1997 ರಲ್ಲಿ ತಮ್ಮ ಉಯಿಲಿನಲ್ಲಿ ತಿಳಿಸಿದ್ದರು.

ಸಂಗೀತ ಕಲಾನಿಧಿ ಎಂಎಸ್ ಸುಬ್ಬುಲಕ್ಷ್ಮಿ ಪ್ರಶಸ್ತಿಯನ್ನು 2005 ರಲ್ಲಿ ದಿ ಹಿಂದೂ ಗ್ರೂಪ್ ಪ್ರಾರಂಭಿಸಿತ್ತು ಮತ್ತು ಇದನ್ನು ವಾರ್ಷಿಕವಾಗಿ ಸಂಗೀತ ಕಲಾನಿಧಿ-ನಿಯೋಜಿತರಿಗೆ ರೂ 1 ಲಕ್ಷ ನಗದು ಬಹುಮಾನದೊಂದಿಗೆ ನೀಡಲಾಗುತ್ತದೆ.

ರಾಮನ್ ಮ್ಯಾಗ್ಸೆಸೆ ಪ್ರಶಸ್ತಿ ವಿಜೇತ ಗಾಯಕ ಕೃಷ್ಣ ಅವರು, ಸಾಂಪ್ರದಾಯಿಕ ರೂಢಿಗಳಿಗೆ ಸವಾಲು ಹಾಕಿ ಕಲಾ ಪ್ರಕಾರದೊಳಗೆ ಜಾತಿ-ಸಂಬಂಧಿತ ಅಸಮಾನತೆಗಳನ್ನು ಪರಿಹರಿಸುವ ಕೆಲಸಗಳನ್ನು ಮಾಡುತ್ತಿದ್ದಾರೆ. ಕರ್ನಾಟಕ ಸಂಗೀತದಲ್ಲಿಅವರು ಪ್ರಮುಖ ವ್ಯಕ್ತಿಯಾಗಿದ್ದಾರೆ.

ಈ ವರ್ಷದ ಸಂಗೀತ ಕಲಾನಿಧಿ ಪ್ರಶಸ್ತಿಗೆ ಕೃಷ್ಣ ಅವರ ಆಯ್ಕೆ ಕರ್ನಾಟಕ ಸಂಗೀತ ಸಮುದಾಯದಲ್ಲಿ ವಿವಾದವಾಗಿತ್ತು. ಜಾತಿ ಮತ್ತು ಸಾಮಾಜಿಕ ಸುಧಾರಣೆಯ ಕುರಿತಾದ ಅವರ ಬಹಿರಂಗ ಅಭಿಪ್ರಾಯಗಳು ಬೆಂಬಲ ಸೇರಿದಂತೆ ಟೀಕೆ ಕೂಡಾ ವ್ಯಕ್ತವಾಗಿತ್ತು. ಕೆಲವು ಸಂಗೀತಗಾರರು ಅವರನ್ನು ಗೌರವಿಸುವ ಕಾರ್ಯಕ್ರಮಗಳನ್ನು ಬಹಿಷ್ಕರಿಸಲು ಕೂಡಾ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ತಮಿಳುನಾಡು| ದೇವಸ್ಥಾನದ ಮಂಟಪ ಪ್ರವೇಶಿಸದಂತೆ ಇಳಯರಾಜ ಅವರನ್ನು ತಡೆದ ಸಿಬ್ಬಂದಿ; ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

ತಮಿಳುನಾಡು| ದೇವಸ್ಥಾನದ ಮಂಟಪ ಪ್ರವೇಶಿಸದಂತೆ ಇಳಯರಾಜ ಅವರನ್ನು ತಡೆದ ಸಿಬ್ಬಂದಿ; ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...