Homeಮುಖಪುಟನರೇಂದ್ರ ಮೋದಿಯನ್ನು 'ವಲಸೆ ರಾಜಕಾರಣಿ' ಎಂದ TMC!

ನರೇಂದ್ರ ಮೋದಿಯನ್ನು ‘ವಲಸೆ ರಾಜಕಾರಣಿ’ ಎಂದ TMC!

ತನ್ನ ಶತಮಾನೋತ್ಸವ ಆಚರಿಸುತ್ತಿರುವ ಪಶ್ಚಿಮ ಬಂಗಾಳದ ವಿಶ್ವ-ಭಾರತಿ ವಿಶ್ವವಿದ್ಯಾಲಯವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದರು.

- Advertisement -
- Advertisement -

ತನ್ನ ಶತಮಾನೋತ್ಸವ ಆಚರಿಸುತ್ತಿರುವ ಪಶ್ಚಿಮ ಬಂಗಾಳದ ವಿಶ್ವ-ಭಾರತಿ ವಿಶ್ವವಿದ್ಯಾಲಯವನ್ನು ಉದ್ದೇಶಿಸಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ, ವಿದ್ಯಾಲಯದ ಸಂಸ್ಥಾಪಕ ಮತ್ತು ನೊಬೆಲ್ ಪ್ರಶಸ್ತಿ ವಿಜೇತ ರವೀಂದ್ರನಾಥ ಟಾಗೋರ್ ಅವರ ದೃಷ್ಟಿಕೋನ “ಆತ್ಮನಿರ್ಭರ ಭಾರತ” ಆಗಿತ್ತು ಎಂಬ ಹೇಳಿಕೆಗೆ, ತೃಣಮೂಲ ಕಾಂಗ್ರೆಸ್ ತಿರುಗೇಟು ನೀಡಿದ್ದು, “ವಲಸೆ ರಾಜಕಾರಣಿಗಳು ಟಾಗೋರ್ ಮತ್ತು ಅವರ ತತ್ವಗಳ ಬಗ್ಗೆ ಮಾತನಾಡುವ ಮೊದಲು ಅವರ ತತ್ತ್ವಶಾಸ್ತ್ರದ ಬಗ್ಗೆ ಆಳವಾದ ತಿಳುವಳಿಕೆಯನ್ನು ಹೊಂದಿರಬೇಕು” ಎಂದು ಹೇಳಿದೆ.

ವಿಶ್ವವಿದ್ಯಾನಿಲಯದ ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಭಾರತದ ಸ್ವಾತಂತ್ರ್ಯ ಚಳವಳಿಯಲ್ಲಿ ವಿಶ್ವ-ಭಾರತಿ ಹೇಗೆ ಪ್ರಮುಖ ಪಾತ್ರ ವಹಿಸಿತು ಎಂಬುದರ ಕುರಿತು ಹೇಳಿದ್ದರು. “ವಿಶ್ವ ಭಾರತಿಗೆ ಟಾಗೋರ್‌ ಅವರ ದೃಷ್ಟಿಕೋನವು ಆತ್ಮನಿರ್ಭರ ಭಾರತವಾಗಿದೆ. ಆತ್ಮನಿರ್ಭರ ಭಾರತ ಕೇವಲ ಭಾರತ ಅಭಿವೃದ್ದಿ ಮಾತ್ರವಲ್ಲ ವಿಶ್ವದ ಅಭಿವೃದ್ಧಿಗೆ ಭಾರತದ ಹಾದಿಯಾಗಿದೆ” ಎಂದ ಮೋದಿ ನವದೆಹಲಿಯಿಂದ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಸಭೆಗೆ ತಿಳಿಸಿದ್ದರು.

ಇದನ್ನೂ ಓದಿ: ಪ.ಬಂಗಾಳದಲ್ಲಿ BJP ಎರಡಂಕಿ ದಾಟುವುದಿಲ್ಲ: ಒಂದು ವೇಳೆ ಗೆದ್ದರೆ ರಾಜಕೀಯ ತ್ಯಜಿಸುತ್ತೇನೆ- ಪ್ರಶಾಂತ್ ಕಿಶೋರ್

ಪ್ರಧಾನಿ ಮೋದಿ ಭಾಷಣ ಮಾಡಿದ ಸ್ವಲ್ಪ ಸಮಯದಲ್ಲೇ ಪ್ರತಿಕ್ರಿಯೆ ನೀಡಿದ ತೃಣಮೂಲ ಕಾಂಗ್ರೆಸ್, “ಸ್ವಾತಂತ್ರ್ಯ ಚಳವಳಿಗೆ ನೀಡಿದ ಕೊಡುಗೆಗಾಗಿ ದೇಶದ ಎಲ್ಲಾ ವಿಶ್ವವಿದ್ಯಾಲಯಗಳನ್ನು ಪ್ರಧಾನಿ ಪ್ರಸ್ತಾಪಿಸಿದ್ದಾರೆ, ಆದರೆ 1857 ರಲ್ಲಿ ಸ್ಥಾಪಿಸಲಾದ ದೇಶದ ಮೊದಲ ವಿಶ್ವವಿದ್ಯಾಲಯವಾದ ಕಲ್ಕತ್ತಾ ವಿಶ್ವವಿದ್ಯಾಲಯವನ್ನು ತೊರೆದರು” ಎಂದು ಹೇಳಿದೆ.

“ಟಾಗೋರ್ ಬಗ್ಗೆ ಮಾತನಾಡುವಾಗ ಪದೇ ಪದೇ ಗುಜರಾತ್‌ ಉಲ್ಲೇಖಗಳು ಯಾಕೆ ಬಂದವು ಎಂದು ಅರ್ಥವಾಗಲಿಲ್ಲ, ಜೊತೆಗೆ ಮೋದಿ ಹೇಳಿದ ಕೆಲವು ವಿಷಯಗಳು ವಾಸ್ತವಿಕವಾಗಿ ತಪ್ಪಾಗಿವೆ. ಅಲ್ಲದೆ ಮೋದಿ ಮತ್ತು ಬಿಜೆಪಿಯು ಪಶ್ಚಿಮ ಬಂಗಾಳ ಮತ್ತು ಬಂಗಾಳಿಗಳನ್ನು ಕೆಳಮಟ್ಟದಲ್ಲಿ ತೋರಿಸುತ್ತಿದ್ದಾರೆ” ಎಂದಿರುವ ಟಿಎಂಸಿ, ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯನ್ನು ಆಹ್ವಾನಿಸಿಲ್ಲ ಎಂದು ಆರೋಪಿಸಿದೆ.

ವಿಶ್ವ-ಭಾರತಿಯನ್ನು 1951 ರಲ್ಲಿ ಸಂಸತ್ತಿನ ಕಾಯಿದೆಯ ಮೂಲಕ ಕೇಂದ್ರ ವಿಶ್ವವಿದ್ಯಾಲಯ ಮತ್ತು ರಾಷ್ಟ್ರೀಯ ಪ್ರಾಮುಖ್ಯತೆಯ ಸಂಸ್ಥೆ ಎಂದು ಘೋಷಿಸಲಾಯಿತು. ರವೀಂದ್ರನಾಥ ಟಾಗೋರ್ ಇದನ್ನು 1921 ರಲ್ಲಿ ಸ್ಥಾಪಿಸಿದ್ದರು.

ಇದನ್ನೂ ಓದಿ: ಪ.ಬಂಗಾಳ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿಗೆ ಬೆಂಬಲ: ಗೂರ್ಖಾ ಜನಮುಕ್ತಿ ಮೋರ್ಚಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...