Homeಮುಖಪುಟನರೇಂದ್ರ ಮೋದಿಯನ್ನು 'ವಲಸೆ ರಾಜಕಾರಣಿ' ಎಂದ TMC!

ನರೇಂದ್ರ ಮೋದಿಯನ್ನು ‘ವಲಸೆ ರಾಜಕಾರಣಿ’ ಎಂದ TMC!

ತನ್ನ ಶತಮಾನೋತ್ಸವ ಆಚರಿಸುತ್ತಿರುವ ಪಶ್ಚಿಮ ಬಂಗಾಳದ ವಿಶ್ವ-ಭಾರತಿ ವಿಶ್ವವಿದ್ಯಾಲಯವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದರು.

- Advertisement -
- Advertisement -

ತನ್ನ ಶತಮಾನೋತ್ಸವ ಆಚರಿಸುತ್ತಿರುವ ಪಶ್ಚಿಮ ಬಂಗಾಳದ ವಿಶ್ವ-ಭಾರತಿ ವಿಶ್ವವಿದ್ಯಾಲಯವನ್ನು ಉದ್ದೇಶಿಸಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ, ವಿದ್ಯಾಲಯದ ಸಂಸ್ಥಾಪಕ ಮತ್ತು ನೊಬೆಲ್ ಪ್ರಶಸ್ತಿ ವಿಜೇತ ರವೀಂದ್ರನಾಥ ಟಾಗೋರ್ ಅವರ ದೃಷ್ಟಿಕೋನ “ಆತ್ಮನಿರ್ಭರ ಭಾರತ” ಆಗಿತ್ತು ಎಂಬ ಹೇಳಿಕೆಗೆ, ತೃಣಮೂಲ ಕಾಂಗ್ರೆಸ್ ತಿರುಗೇಟು ನೀಡಿದ್ದು, “ವಲಸೆ ರಾಜಕಾರಣಿಗಳು ಟಾಗೋರ್ ಮತ್ತು ಅವರ ತತ್ವಗಳ ಬಗ್ಗೆ ಮಾತನಾಡುವ ಮೊದಲು ಅವರ ತತ್ತ್ವಶಾಸ್ತ್ರದ ಬಗ್ಗೆ ಆಳವಾದ ತಿಳುವಳಿಕೆಯನ್ನು ಹೊಂದಿರಬೇಕು” ಎಂದು ಹೇಳಿದೆ.

ವಿಶ್ವವಿದ್ಯಾನಿಲಯದ ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಭಾರತದ ಸ್ವಾತಂತ್ರ್ಯ ಚಳವಳಿಯಲ್ಲಿ ವಿಶ್ವ-ಭಾರತಿ ಹೇಗೆ ಪ್ರಮುಖ ಪಾತ್ರ ವಹಿಸಿತು ಎಂಬುದರ ಕುರಿತು ಹೇಳಿದ್ದರು. “ವಿಶ್ವ ಭಾರತಿಗೆ ಟಾಗೋರ್‌ ಅವರ ದೃಷ್ಟಿಕೋನವು ಆತ್ಮನಿರ್ಭರ ಭಾರತವಾಗಿದೆ. ಆತ್ಮನಿರ್ಭರ ಭಾರತ ಕೇವಲ ಭಾರತ ಅಭಿವೃದ್ದಿ ಮಾತ್ರವಲ್ಲ ವಿಶ್ವದ ಅಭಿವೃದ್ಧಿಗೆ ಭಾರತದ ಹಾದಿಯಾಗಿದೆ” ಎಂದ ಮೋದಿ ನವದೆಹಲಿಯಿಂದ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಸಭೆಗೆ ತಿಳಿಸಿದ್ದರು.

ಇದನ್ನೂ ಓದಿ: ಪ.ಬಂಗಾಳದಲ್ಲಿ BJP ಎರಡಂಕಿ ದಾಟುವುದಿಲ್ಲ: ಒಂದು ವೇಳೆ ಗೆದ್ದರೆ ರಾಜಕೀಯ ತ್ಯಜಿಸುತ್ತೇನೆ- ಪ್ರಶಾಂತ್ ಕಿಶೋರ್

ಪ್ರಧಾನಿ ಮೋದಿ ಭಾಷಣ ಮಾಡಿದ ಸ್ವಲ್ಪ ಸಮಯದಲ್ಲೇ ಪ್ರತಿಕ್ರಿಯೆ ನೀಡಿದ ತೃಣಮೂಲ ಕಾಂಗ್ರೆಸ್, “ಸ್ವಾತಂತ್ರ್ಯ ಚಳವಳಿಗೆ ನೀಡಿದ ಕೊಡುಗೆಗಾಗಿ ದೇಶದ ಎಲ್ಲಾ ವಿಶ್ವವಿದ್ಯಾಲಯಗಳನ್ನು ಪ್ರಧಾನಿ ಪ್ರಸ್ತಾಪಿಸಿದ್ದಾರೆ, ಆದರೆ 1857 ರಲ್ಲಿ ಸ್ಥಾಪಿಸಲಾದ ದೇಶದ ಮೊದಲ ವಿಶ್ವವಿದ್ಯಾಲಯವಾದ ಕಲ್ಕತ್ತಾ ವಿಶ್ವವಿದ್ಯಾಲಯವನ್ನು ತೊರೆದರು” ಎಂದು ಹೇಳಿದೆ.

“ಟಾಗೋರ್ ಬಗ್ಗೆ ಮಾತನಾಡುವಾಗ ಪದೇ ಪದೇ ಗುಜರಾತ್‌ ಉಲ್ಲೇಖಗಳು ಯಾಕೆ ಬಂದವು ಎಂದು ಅರ್ಥವಾಗಲಿಲ್ಲ, ಜೊತೆಗೆ ಮೋದಿ ಹೇಳಿದ ಕೆಲವು ವಿಷಯಗಳು ವಾಸ್ತವಿಕವಾಗಿ ತಪ್ಪಾಗಿವೆ. ಅಲ್ಲದೆ ಮೋದಿ ಮತ್ತು ಬಿಜೆಪಿಯು ಪಶ್ಚಿಮ ಬಂಗಾಳ ಮತ್ತು ಬಂಗಾಳಿಗಳನ್ನು ಕೆಳಮಟ್ಟದಲ್ಲಿ ತೋರಿಸುತ್ತಿದ್ದಾರೆ” ಎಂದಿರುವ ಟಿಎಂಸಿ, ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯನ್ನು ಆಹ್ವಾನಿಸಿಲ್ಲ ಎಂದು ಆರೋಪಿಸಿದೆ.

ವಿಶ್ವ-ಭಾರತಿಯನ್ನು 1951 ರಲ್ಲಿ ಸಂಸತ್ತಿನ ಕಾಯಿದೆಯ ಮೂಲಕ ಕೇಂದ್ರ ವಿಶ್ವವಿದ್ಯಾಲಯ ಮತ್ತು ರಾಷ್ಟ್ರೀಯ ಪ್ರಾಮುಖ್ಯತೆಯ ಸಂಸ್ಥೆ ಎಂದು ಘೋಷಿಸಲಾಯಿತು. ರವೀಂದ್ರನಾಥ ಟಾಗೋರ್ ಇದನ್ನು 1921 ರಲ್ಲಿ ಸ್ಥಾಪಿಸಿದ್ದರು.

ಇದನ್ನೂ ಓದಿ: ಪ.ಬಂಗಾಳ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿಗೆ ಬೆಂಬಲ: ಗೂರ್ಖಾ ಜನಮುಕ್ತಿ ಮೋರ್ಚಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...