Homeಮುಖಪುಟನರೇಂದ್ರ ಮೋದಿಯನ್ನು 'ವಲಸೆ ರಾಜಕಾರಣಿ' ಎಂದ TMC!

ನರೇಂದ್ರ ಮೋದಿಯನ್ನು ‘ವಲಸೆ ರಾಜಕಾರಣಿ’ ಎಂದ TMC!

ತನ್ನ ಶತಮಾನೋತ್ಸವ ಆಚರಿಸುತ್ತಿರುವ ಪಶ್ಚಿಮ ಬಂಗಾಳದ ವಿಶ್ವ-ಭಾರತಿ ವಿಶ್ವವಿದ್ಯಾಲಯವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದರು.

- Advertisement -
- Advertisement -

ತನ್ನ ಶತಮಾನೋತ್ಸವ ಆಚರಿಸುತ್ತಿರುವ ಪಶ್ಚಿಮ ಬಂಗಾಳದ ವಿಶ್ವ-ಭಾರತಿ ವಿಶ್ವವಿದ್ಯಾಲಯವನ್ನು ಉದ್ದೇಶಿಸಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ, ವಿದ್ಯಾಲಯದ ಸಂಸ್ಥಾಪಕ ಮತ್ತು ನೊಬೆಲ್ ಪ್ರಶಸ್ತಿ ವಿಜೇತ ರವೀಂದ್ರನಾಥ ಟಾಗೋರ್ ಅವರ ದೃಷ್ಟಿಕೋನ “ಆತ್ಮನಿರ್ಭರ ಭಾರತ” ಆಗಿತ್ತು ಎಂಬ ಹೇಳಿಕೆಗೆ, ತೃಣಮೂಲ ಕಾಂಗ್ರೆಸ್ ತಿರುಗೇಟು ನೀಡಿದ್ದು, “ವಲಸೆ ರಾಜಕಾರಣಿಗಳು ಟಾಗೋರ್ ಮತ್ತು ಅವರ ತತ್ವಗಳ ಬಗ್ಗೆ ಮಾತನಾಡುವ ಮೊದಲು ಅವರ ತತ್ತ್ವಶಾಸ್ತ್ರದ ಬಗ್ಗೆ ಆಳವಾದ ತಿಳುವಳಿಕೆಯನ್ನು ಹೊಂದಿರಬೇಕು” ಎಂದು ಹೇಳಿದೆ.

ವಿಶ್ವವಿದ್ಯಾನಿಲಯದ ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಭಾರತದ ಸ್ವಾತಂತ್ರ್ಯ ಚಳವಳಿಯಲ್ಲಿ ವಿಶ್ವ-ಭಾರತಿ ಹೇಗೆ ಪ್ರಮುಖ ಪಾತ್ರ ವಹಿಸಿತು ಎಂಬುದರ ಕುರಿತು ಹೇಳಿದ್ದರು. “ವಿಶ್ವ ಭಾರತಿಗೆ ಟಾಗೋರ್‌ ಅವರ ದೃಷ್ಟಿಕೋನವು ಆತ್ಮನಿರ್ಭರ ಭಾರತವಾಗಿದೆ. ಆತ್ಮನಿರ್ಭರ ಭಾರತ ಕೇವಲ ಭಾರತ ಅಭಿವೃದ್ದಿ ಮಾತ್ರವಲ್ಲ ವಿಶ್ವದ ಅಭಿವೃದ್ಧಿಗೆ ಭಾರತದ ಹಾದಿಯಾಗಿದೆ” ಎಂದ ಮೋದಿ ನವದೆಹಲಿಯಿಂದ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಸಭೆಗೆ ತಿಳಿಸಿದ್ದರು.

ಇದನ್ನೂ ಓದಿ: ಪ.ಬಂಗಾಳದಲ್ಲಿ BJP ಎರಡಂಕಿ ದಾಟುವುದಿಲ್ಲ: ಒಂದು ವೇಳೆ ಗೆದ್ದರೆ ರಾಜಕೀಯ ತ್ಯಜಿಸುತ್ತೇನೆ- ಪ್ರಶಾಂತ್ ಕಿಶೋರ್

ಪ್ರಧಾನಿ ಮೋದಿ ಭಾಷಣ ಮಾಡಿದ ಸ್ವಲ್ಪ ಸಮಯದಲ್ಲೇ ಪ್ರತಿಕ್ರಿಯೆ ನೀಡಿದ ತೃಣಮೂಲ ಕಾಂಗ್ರೆಸ್, “ಸ್ವಾತಂತ್ರ್ಯ ಚಳವಳಿಗೆ ನೀಡಿದ ಕೊಡುಗೆಗಾಗಿ ದೇಶದ ಎಲ್ಲಾ ವಿಶ್ವವಿದ್ಯಾಲಯಗಳನ್ನು ಪ್ರಧಾನಿ ಪ್ರಸ್ತಾಪಿಸಿದ್ದಾರೆ, ಆದರೆ 1857 ರಲ್ಲಿ ಸ್ಥಾಪಿಸಲಾದ ದೇಶದ ಮೊದಲ ವಿಶ್ವವಿದ್ಯಾಲಯವಾದ ಕಲ್ಕತ್ತಾ ವಿಶ್ವವಿದ್ಯಾಲಯವನ್ನು ತೊರೆದರು” ಎಂದು ಹೇಳಿದೆ.

“ಟಾಗೋರ್ ಬಗ್ಗೆ ಮಾತನಾಡುವಾಗ ಪದೇ ಪದೇ ಗುಜರಾತ್‌ ಉಲ್ಲೇಖಗಳು ಯಾಕೆ ಬಂದವು ಎಂದು ಅರ್ಥವಾಗಲಿಲ್ಲ, ಜೊತೆಗೆ ಮೋದಿ ಹೇಳಿದ ಕೆಲವು ವಿಷಯಗಳು ವಾಸ್ತವಿಕವಾಗಿ ತಪ್ಪಾಗಿವೆ. ಅಲ್ಲದೆ ಮೋದಿ ಮತ್ತು ಬಿಜೆಪಿಯು ಪಶ್ಚಿಮ ಬಂಗಾಳ ಮತ್ತು ಬಂಗಾಳಿಗಳನ್ನು ಕೆಳಮಟ್ಟದಲ್ಲಿ ತೋರಿಸುತ್ತಿದ್ದಾರೆ” ಎಂದಿರುವ ಟಿಎಂಸಿ, ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯನ್ನು ಆಹ್ವಾನಿಸಿಲ್ಲ ಎಂದು ಆರೋಪಿಸಿದೆ.

ವಿಶ್ವ-ಭಾರತಿಯನ್ನು 1951 ರಲ್ಲಿ ಸಂಸತ್ತಿನ ಕಾಯಿದೆಯ ಮೂಲಕ ಕೇಂದ್ರ ವಿಶ್ವವಿದ್ಯಾಲಯ ಮತ್ತು ರಾಷ್ಟ್ರೀಯ ಪ್ರಾಮುಖ್ಯತೆಯ ಸಂಸ್ಥೆ ಎಂದು ಘೋಷಿಸಲಾಯಿತು. ರವೀಂದ್ರನಾಥ ಟಾಗೋರ್ ಇದನ್ನು 1921 ರಲ್ಲಿ ಸ್ಥಾಪಿಸಿದ್ದರು.

ಇದನ್ನೂ ಓದಿ: ಪ.ಬಂಗಾಳ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿಗೆ ಬೆಂಬಲ: ಗೂರ್ಖಾ ಜನಮುಕ್ತಿ ಮೋರ್ಚಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...