Homeಮುಖಪುಟನರೇಂದ್ರ ಮೋದಿಯನ್ನು 'ವಲಸೆ ರಾಜಕಾರಣಿ' ಎಂದ TMC!

ನರೇಂದ್ರ ಮೋದಿಯನ್ನು ‘ವಲಸೆ ರಾಜಕಾರಣಿ’ ಎಂದ TMC!

ತನ್ನ ಶತಮಾನೋತ್ಸವ ಆಚರಿಸುತ್ತಿರುವ ಪಶ್ಚಿಮ ಬಂಗಾಳದ ವಿಶ್ವ-ಭಾರತಿ ವಿಶ್ವವಿದ್ಯಾಲಯವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದರು.

- Advertisement -
- Advertisement -

ತನ್ನ ಶತಮಾನೋತ್ಸವ ಆಚರಿಸುತ್ತಿರುವ ಪಶ್ಚಿಮ ಬಂಗಾಳದ ವಿಶ್ವ-ಭಾರತಿ ವಿಶ್ವವಿದ್ಯಾಲಯವನ್ನು ಉದ್ದೇಶಿಸಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ, ವಿದ್ಯಾಲಯದ ಸಂಸ್ಥಾಪಕ ಮತ್ತು ನೊಬೆಲ್ ಪ್ರಶಸ್ತಿ ವಿಜೇತ ರವೀಂದ್ರನಾಥ ಟಾಗೋರ್ ಅವರ ದೃಷ್ಟಿಕೋನ “ಆತ್ಮನಿರ್ಭರ ಭಾರತ” ಆಗಿತ್ತು ಎಂಬ ಹೇಳಿಕೆಗೆ, ತೃಣಮೂಲ ಕಾಂಗ್ರೆಸ್ ತಿರುಗೇಟು ನೀಡಿದ್ದು, “ವಲಸೆ ರಾಜಕಾರಣಿಗಳು ಟಾಗೋರ್ ಮತ್ತು ಅವರ ತತ್ವಗಳ ಬಗ್ಗೆ ಮಾತನಾಡುವ ಮೊದಲು ಅವರ ತತ್ತ್ವಶಾಸ್ತ್ರದ ಬಗ್ಗೆ ಆಳವಾದ ತಿಳುವಳಿಕೆಯನ್ನು ಹೊಂದಿರಬೇಕು” ಎಂದು ಹೇಳಿದೆ.

ವಿಶ್ವವಿದ್ಯಾನಿಲಯದ ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಭಾರತದ ಸ್ವಾತಂತ್ರ್ಯ ಚಳವಳಿಯಲ್ಲಿ ವಿಶ್ವ-ಭಾರತಿ ಹೇಗೆ ಪ್ರಮುಖ ಪಾತ್ರ ವಹಿಸಿತು ಎಂಬುದರ ಕುರಿತು ಹೇಳಿದ್ದರು. “ವಿಶ್ವ ಭಾರತಿಗೆ ಟಾಗೋರ್‌ ಅವರ ದೃಷ್ಟಿಕೋನವು ಆತ್ಮನಿರ್ಭರ ಭಾರತವಾಗಿದೆ. ಆತ್ಮನಿರ್ಭರ ಭಾರತ ಕೇವಲ ಭಾರತ ಅಭಿವೃದ್ದಿ ಮಾತ್ರವಲ್ಲ ವಿಶ್ವದ ಅಭಿವೃದ್ಧಿಗೆ ಭಾರತದ ಹಾದಿಯಾಗಿದೆ” ಎಂದ ಮೋದಿ ನವದೆಹಲಿಯಿಂದ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಸಭೆಗೆ ತಿಳಿಸಿದ್ದರು.

ಇದನ್ನೂ ಓದಿ: ಪ.ಬಂಗಾಳದಲ್ಲಿ BJP ಎರಡಂಕಿ ದಾಟುವುದಿಲ್ಲ: ಒಂದು ವೇಳೆ ಗೆದ್ದರೆ ರಾಜಕೀಯ ತ್ಯಜಿಸುತ್ತೇನೆ- ಪ್ರಶಾಂತ್ ಕಿಶೋರ್

ಪ್ರಧಾನಿ ಮೋದಿ ಭಾಷಣ ಮಾಡಿದ ಸ್ವಲ್ಪ ಸಮಯದಲ್ಲೇ ಪ್ರತಿಕ್ರಿಯೆ ನೀಡಿದ ತೃಣಮೂಲ ಕಾಂಗ್ರೆಸ್, “ಸ್ವಾತಂತ್ರ್ಯ ಚಳವಳಿಗೆ ನೀಡಿದ ಕೊಡುಗೆಗಾಗಿ ದೇಶದ ಎಲ್ಲಾ ವಿಶ್ವವಿದ್ಯಾಲಯಗಳನ್ನು ಪ್ರಧಾನಿ ಪ್ರಸ್ತಾಪಿಸಿದ್ದಾರೆ, ಆದರೆ 1857 ರಲ್ಲಿ ಸ್ಥಾಪಿಸಲಾದ ದೇಶದ ಮೊದಲ ವಿಶ್ವವಿದ್ಯಾಲಯವಾದ ಕಲ್ಕತ್ತಾ ವಿಶ್ವವಿದ್ಯಾಲಯವನ್ನು ತೊರೆದರು” ಎಂದು ಹೇಳಿದೆ.

“ಟಾಗೋರ್ ಬಗ್ಗೆ ಮಾತನಾಡುವಾಗ ಪದೇ ಪದೇ ಗುಜರಾತ್‌ ಉಲ್ಲೇಖಗಳು ಯಾಕೆ ಬಂದವು ಎಂದು ಅರ್ಥವಾಗಲಿಲ್ಲ, ಜೊತೆಗೆ ಮೋದಿ ಹೇಳಿದ ಕೆಲವು ವಿಷಯಗಳು ವಾಸ್ತವಿಕವಾಗಿ ತಪ್ಪಾಗಿವೆ. ಅಲ್ಲದೆ ಮೋದಿ ಮತ್ತು ಬಿಜೆಪಿಯು ಪಶ್ಚಿಮ ಬಂಗಾಳ ಮತ್ತು ಬಂಗಾಳಿಗಳನ್ನು ಕೆಳಮಟ್ಟದಲ್ಲಿ ತೋರಿಸುತ್ತಿದ್ದಾರೆ” ಎಂದಿರುವ ಟಿಎಂಸಿ, ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯನ್ನು ಆಹ್ವಾನಿಸಿಲ್ಲ ಎಂದು ಆರೋಪಿಸಿದೆ.

ವಿಶ್ವ-ಭಾರತಿಯನ್ನು 1951 ರಲ್ಲಿ ಸಂಸತ್ತಿನ ಕಾಯಿದೆಯ ಮೂಲಕ ಕೇಂದ್ರ ವಿಶ್ವವಿದ್ಯಾಲಯ ಮತ್ತು ರಾಷ್ಟ್ರೀಯ ಪ್ರಾಮುಖ್ಯತೆಯ ಸಂಸ್ಥೆ ಎಂದು ಘೋಷಿಸಲಾಯಿತು. ರವೀಂದ್ರನಾಥ ಟಾಗೋರ್ ಇದನ್ನು 1921 ರಲ್ಲಿ ಸ್ಥಾಪಿಸಿದ್ದರು.

ಇದನ್ನೂ ಓದಿ: ಪ.ಬಂಗಾಳ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿಗೆ ಬೆಂಬಲ: ಗೂರ್ಖಾ ಜನಮುಕ್ತಿ ಮೋರ್ಚಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...