Homeಮುಖಪುಟಟಿಎಂಸಿ ಅಭ್ಯರ್ಥಿಗಳ ಪಟ್ಟಿ: ಮಹಿಳೆಯರಿಗೆ ಆದ್ಯತೆ, 114 ಹೊಸಮುಖಗಳು, ಎಸ್‌ಸಿ-ಎಸ್‌ಟಿಗೆ ಒತ್ತು

ಟಿಎಂಸಿ ಅಭ್ಯರ್ಥಿಗಳ ಪಟ್ಟಿ: ಮಹಿಳೆಯರಿಗೆ ಆದ್ಯತೆ, 114 ಹೊಸಮುಖಗಳು, ಎಸ್‌ಸಿ-ಎಸ್‌ಟಿಗೆ ಒತ್ತು

- Advertisement -
- Advertisement -

ಮುಂಬರುವ ಎರಡು ತಿಂಗಳಲ್ಲಿ ಹರಡಿರುವ ವಿಧಾನಸಭಾ ಚುನಾವಣೆಗೆ ತಮ್ಮ ಪಕ್ಷದ ಪೂರ್ಣ ಅಭ್ಯರ್ಥಿಗಳ ಪಟ್ಟಿಯನ್ನು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥ ಮಮತಾ ಬ್ಯಾನರ್ಜಿ ಶುಕ್ರವಾರ ಪ್ರಕಟಿಸಿದ್ದಾರೆ. 294 ಸ್ಥಾನಗಳಲ್ಲಿ ಟಿಎಂಸಿ 291 ಸ್ಥಾನಗಳಲ್ಲಿ ಸ್ಪರ್ಧಿಸಲಿದ್ದು, ಮೂರು ಸ್ಥಾನಗಳನ್ನು ಮೈತ್ರಿ ಪಾಲುದಾರ ಗೂರ್ಖಾ ಜನಮುಕ್ತಿ ಮೋರ್ಚಾ (ಜಿಜೆಎಂ) ಗೆ ಬಿಟ್ಟಿದೆ.

ಬ್ಯಾನರ್ಜಿ ನಂದಿಗ್ರಾಮ್ ಕ್ಷೇತ್ರದಿಂದ ಸ್ಪರ್ಧಿಸಲಿದ್ದು, ಈ ಬಾರಿ ಭಬಾನಿಪುರ ಸ್ಥಾನವನ್ನು ಪಕ್ಷದ ಮುಖಂಡ ಶೋಭಂದೇಬ್ ಚಟ್ಟೋಪಾಧ್ಯಾಯ ಅವರಿಗೆ ಬಿಟ್ಟು ಕೊಟ್ಟಿದ್ದಾರೆ.

ಅಭ್ಯರ್ಥಿಗಳ ಪಟ್ಟಿಯಲ್ಲಿ, ಮಹಿಳಾ ಅಭ್ಯರ್ಥಿಗಳ ಮೇಲೆ ವಿಶೇಷ ಗಮನಹರಿಸಿ ಸಮಾಜದ ಎಲ್ಲಾ ವರ್ಗಗಳ ನಡುವೆ ಸಮತೋಲನವನ್ನು ಕಂಡುಕೊಳ್ಳಲು ಬ್ಯಾನರ್ಜಿ ಪ್ರಯತ್ನಿಸಿದ್ದಾರೆ. ಈ ಪಟ್ಟಿಯಲ್ಲಿ 50 ಮಹಿಳಾ ಅಭ್ಯರ್ಥಿಗಳು (ಒಟ್ಟು ಅಭ್ಯರ್ಥಿಗಳಲ್ಲಿ 17%), 79 ಎಸ್‌ಸಿ ಅಭ್ಯರ್ಥಿಗಳು (27%), 42 ಮುಸ್ಲಿಂ ಅಭ್ಯರ್ಥಿಗಳು (14%) ಮತ್ತು 17 ಎಸ್‌ಟಿ ಅಭ್ಯರ್ಥಿಗಳು (5%) ಸೇರಿದ್ದಾರೆ. ಈ ಪಟ್ಟಿಯಲ್ಲಿ ನಟರು, ಗಾಯಕರು, ವೈದ್ಯರು, ಕ್ರೀಡಾ ವ್ಯಕ್ತಿಗಳು, ಬರಹಗಾರರು, ಮಾಜಿ ಐಪಿಎಸ್ ಅಧಿಕಾರಿಗಳು ಮತ್ತು ಪ್ರಭಾವಿ ಮುಖಂಡರು ಸೇರಿದ್ದಾರೆ. 80 ವರ್ಷಕ್ಕಿಂತ ಮೇಲ್ಪಟ್ಟ ನಾಯಕರನ್ನು ಹೊರಗಿಡಲಾಗಿದೆ.

160 ಸ್ಥಾನಗಳಲ್ಲಿ ಹೊಸ ಅಭ್ಯರ್ಥಿಗಳಿದ್ದರೆ, ಪಟ್ಟಿಯಲ್ಲಿ 114 ಹೊಸ ಮುಖಗಳಿವೆ. ಅದೇ ಸಮಯದಲ್ಲಿ, ಐವರು ಮಂತ್ರಿಗಳು (ಅಮಿತ್ ಮಿತ್ರ, ಬಚು ಹನ್ಸ್ಡಾ, ರತ್ನ ಘೋಷ್ ಕಾರ್, ರೆಝಾಕ್ ಮೊಲ್ಲಾ ಮತ್ತು ಪೂರ್ಣೇಂದು ಬೋಸ್) ಸೇರಿದಂತೆ 28 ಹಾಲಿ ಶಾಸಕರಿಗೆ ಟಿಕೆಟ್ ನೀಡಲಾಗಿಲ್ಲ.

ಅಭ್ಯರ್ಥಿಗಳ ಪಟ್ಟಿಯ ಪ್ರಮುಖಾಂಶಗಳು

ಮಹಿಳೆಯರ ಮೇಲೆ ಕೇಂದ್ರೀಕರಣ:

ಪಕ್ಷದ ಚುನಾವಣಾ ಘೋಷಣೆಯಾದ ‘ಬಾಂಗ್ಲಾ ನಿಜರ್ ಮೆಯೆಕೆ ಚಾಯ್’ (ಬಂಗಾಳ ತನ್ನ ಸ್ವಂತ ಮಗಳನ್ನು ಬಯಸಿದೆ) ಅನುಸರಿಸಿ ಟಿಎಂಸಿ ಈ ಬಾರಿ 50 ಮಹಿಳಾ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ, ಇದು 2016 ರ ವಿಧಾನಸಭಾ ಚುನಾವಣೆಗಿಂತ ಐದು ಹೆಚ್ಚು. ಬಿಜೆಪಿಯನ್ನು ಎದುರಿಸಲು ಪಕ್ಷವು ಮಹಿಳಾ ಮತದಾರರನ್ನು ತಲುಪಲು ಪ್ರಯತ್ನಿಸುತ್ತಿದೆ ಎಂಬುದು ಈ ಕ್ರಮದಿಂದ ಸ್ಪಷ್ಟವಾಗಿದೆ. ಟಿಎಂಸಿ ಮಾಜಿ ಮುಖಂಡ ಬಿಜೆಪಿ ಸಂಸದ ಸೌಮಿತ್ರಾ ಖಾನ್ ಅವರ ಪತ್ನಿ ಸುಜಾತಾ ಖಾನ್ ಅವರಿಗೆ ಪಕ್ಷ ಟಿಕೆಟ್ ನೀಡಿದೆ. ಅದೇ ಸಮಯದಲ್ಲಿ, ಮಾಜಿ ರಾಜ್ಯ ಸಚಿವರಾದ ಬಿಜೆಪಿ ಮುಖಂಡ ಸೋವನ್ ಚಟರ್ಜಿಯವರ ಪತ್ನಿ ರತ್ನ ಚಟರ್ಜಿಗೆ ಸೋವನ್ ಅವರ ಕ್ಷೇತ್ರದ ಬೆಹಲಾ ಪುರ್ಬಾದಿಂದ ಸ್ಪರ್ಧಿಸಲು ಟಿಕೆಟ್ ನೀಡಲಾಗಿದೆ.

ಎಸ್‌ಸಿ / ಎಸ್‌ಟಿ ಸಮುದಾಯಗಳಿಗೆ ಒತ್ತು:

ಈ ಬಾರಿ ಟಿಎಂಸಿ ಅಭೂತಪೂರ್ವ 79 ಎಸ್‌ಸಿ ಅಭ್ಯರ್ಥಿಗಳು ಮತ್ತು 17 ಎಸ್‌ಟಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ, ಇದು 2016 ರ ಚುನಾವಣೆಯಲ್ಲಿ 68 ಎಸ್‌ಸಿ ಮತ್ತು 16 ಎಸ್‌ಟಿ ಅಭ್ಯರ್ಥಿಗಳನ್ನು ಗಮನಿಸಿದಾಗ ಇದು ಗಮನಾರ್ಹ ಏರಿಕೆ ಆಗಿದೆ. ಪಶ್ಚಿಮ ಬಂಗಾಳದಲ್ಲಿ ಎಸ್‌ಸಿಗೆ 68 ಕ್ಷೇತ್ರಗಳು ಮತ್ತು ಎಸ್‌ಟಿಗಳಿಗೆ 16 ಕ್ಷೇತ್ರಗಳನ್ನು ಕಾಯ್ದಿರಿಸಲಾಗಿದೆ. ಈ ಕ್ರಮವು ಬಾಂಗ್ಲಾದೇಶದಲ್ಲಿ ತನ್ನ ಮೂಲವನ್ನು ಗುರುತಿಸುವ ಮತ್ತು 2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ನಿಷ್ಠೆಯನ್ನು ಬದಲಾಯಿಸಿದ ನಿರಾಶ್ರಿತರ ಸಮುದಾಯವಾದ ಮಾಟುವಾಸ್ ಸೇರಿದಂತೆ ಎಸ್‌ಸಿ / ಎಸ್‌ಟಿ ಸಮುದಾಯಗಳನ್ನು ಆಕರ್ಷಿಸುವ ಗುರಿಯನ್ನು ಹೊಂದಿದೆ. ಈ ಸಮುದಾಯಗಳ ಸದಸ್ಯರಿಗೆ ಹೆಚ್ಚಿನ ಟಿಕೆಟ್ ನೀಡುವ ಮೂಲಕ, ಮಮತಾ ಬ್ಯಾನರ್ಜಿ ತಮ್ಮ ಪಕ್ಷವನ್ನು ಒಳಗೊಂಡಿದ್ದಾರೆ ಎಂಬ ಸಂದೇಶವನ್ನು ಆ ಸಮುದಾಯಗಳಿಗೆ ಕಳುಹಿಸಲು ಪ್ರಯತ್ನಿಸುತ್ತಿದ್ದಾರೆ.

ಮುಸ್ಲಿಂ ತುಚ್ಛಿಕರಣದ ಟ್ಯಾಗ್ ಕಳಚುವ ಯತ್ನ:

ಟಿಎಂಸಿ ಈ ಬಾರಿ ಕಡಿಮೆ ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. 2016 ರಲ್ಲಿ, ಪಕ್ಷವು 57 ಮುಸ್ಲಿಂ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿತ್ತು, ಆದರೆ ಈ ಬಾರಿ ಅದು 42 ಕ್ಕೆ ಇಳಿದಿದೆ. ಪಕ್ಷದ ಒಳಗಿನವರ ಪ್ರಕಾರ, ಇದು ಮುಸ್ಲಿಂ ತುಚ್ಛಿಕರಣದ ಟ್ಯಾಗ್ ಅನ್ನು ಕಳಚುವ ಪ್ರಯತ್ನವಾಗಿದೆ, ವಿರೋಧ ಪಕ್ಷಗಳು ಈ ಟ್ಯಾಗ್ ಬಳಸಿ ಅಪಾದನೆ ಮಾಡುತ್ತ ಬಂದಿದ್ದವು. ಮತ್ತೊಂದೆಡೆ, ಹೆಚ್ಚಿನ ಶೇಕಡಾವಾರು ಹಿಂದಿ ಮಾತನಾಡುವ ಮತದಾರರನ್ನು ಹೊಂದಿರುವ ಕ್ಷೇತ್ರಗಳಲ್ಲಿ ಪ್ರತಿಪಕ್ಷಗಳ ಪರವಾಗಿ ಹಿಂದೂ ಮತಗಳ ಧ್ರುವೀಕರಣವನ್ನು ನಿಲ್ಲಿಸಲು ಇದು ಸಹಾಯ ಮಾಡುತ್ತದೆ.

ಆಡಳಿತ ವಿರೋಧವನ್ನು ಎದುರಿಸುವುದು:

ಕುತೂಹಲಕಾರಿಯಾಗಿ, ಟಿಎಂಸಿಯು ಚುನಾವಣೆಯಲ್ಲಿ ಸ್ಪರ್ಧಿಸಲು 114 ಹೊಸ ಮುಖಗಳನ್ನು ಹೊಂದಿದೆ. ಇದಲ್ಲದೆ, 160 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಬದಲಾಯಿಸಲಾಗಿದೆ. ಇದು ಆಡಳಿತ ವಿರೋಧಿ ಅಲೆಯ ಭಯದಿಂದ ತೆಗೆದುಕೊಂಡ ಕ್ರಮವಾಗಿದ್ದು, ಮತದಾರರಿಗೆ ಉತ್ತಮ ಅಭ್ಯರ್ಥಿಗಳನ್ನು ನೀಡಲು ಕಾರಣವಾಗಿದೆ. 2006 ರಲ್ಲಿ, ಹಿಂದಿನ ಎಡಪಂಥೀಯ ಸರ್ಕಾರವು ತನ್ನ ಅಭ್ಯರ್ಥಿಗಳನ್ನು 150 ಸ್ಥಾನಗಳಲ್ಲಿ ಬದಲಾಯಿಸಿತ್ತು, ಇದು ರಾಜ್ಯದ 230 ಸ್ಥಾನಗಳನ್ನು ಗೆಲ್ಲಲು ಎಡಪಂಥಿಯ ಕೂಟಕ್ಕೆ ಸಹಾಯ ಮಾಡಿತ್ತು. ಈಗ ಟಿಎಂಸಿ ಹಳೆಯ ಮತ್ತು ಹೊಸ ನಾಯಕರ ನಡುವೆ ಸಮತೋಲನ ಹೊಂದಲು ಯುವ ಮುಖಗಳನ್ನು ಪಕ್ಷಕ್ಕೆ ತರಲು ಒತ್ತು ನೀಡಿದೆ..

ಸೆಲೆಬ್ರಿಟಿಗಳನ್ನು ಅವಲಂಬಿಸಿ:

2011 ರಲ್ಲಿ ಅಧಿಕಾರಕ್ಕೆ ಬಂದಾಗಿನಿಂದ ಮಮತಾ ಬ್ಯಾನರ್ಜಿ ಯಾವಾಗಲೂ ಬಂಗಾಳಿ ಚಲನಚಿತ್ರೋದ್ಯಮದ ಸದಸ್ಯರಿಗೆ ಟಿಕೆಟ್ ನೀಡಿದ್ದಾರೆ. ಹಿಂದಿನ ಹೆಚ್ಚಿನ ಸಂದರ್ಭಗಳಲ್ಲಿ, ಟಿಎಂಸಿಗೆ ಹೆಚ್ಚಿನ ಸಂಖ್ಯೆಯ ಸ್ಥಾನಗಳನ್ನು ಗೆಲ್ಲಲು ಸ್ಟಾರ್‌ಗಳು ಸಹಾಯ ಮಾಡಿದ್ದಾರೆ. ನಟರಾದ ದೇವ್, ಮೂನ್ ಮೂನ್ ಸೇನ್, ದಿವಂಗತ ನಟ ತಪಸ್ ಪಾಲ್, ಶತಾಬ್ದಿ ರಾಯ್, ಮಿಮಿ ಚಕ್ರವರ್ತಿ, ನುಸ್ರತ್ ಜಹಾನ್, ದೇಬಶ್ರೀ ರಾಯ್ ಮತ್ತು ಇತರರು ಟಿಎಂಸಿ ಟಿಕೆಟ್‌ನಲ್ಲಿ ಚುನಾವಣೆಯಲ್ಲಿ ಜಯ ಗಳಿಸಿದ್ದರು. ಈ ಬಾರಿ ಕೂಡ ಪಕ್ಷವು ನಟರಾದ ಸೋಹಮ್ ಚಕ್ರವರ್ತಿ, ಸಯಾಂತಿಕಾ ಬ್ಯಾನರ್ಜಿ, ಸಯಾನಿ ಘೋಷ್, ಜೂನ್ ಮಾಲಿಯಾ, ಕೌಶಾನಿ ಬ್ಯಾನರ್ಜಿ, ಕಾಂಚನ್ ಮಲ್ಲಿಕ್, ನಿರ್ದೇಶಕ ರಾಜ್ ಚಕ್ರವರ್ತಿ ಮತ್ತು ಗಾಯಕಿ ಅದಿತಿ ಮುನ್ಶಿ ಅವರನ್ನು ಇದೇ ರೀತಿಯ ಫಲಿತಾಂಶವನ್ನು ನೀಡಲು ಕಣಕ್ಕಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...