Homeಮುಖಪುಟಟಿಎಂಸಿ ಅಭ್ಯರ್ಥಿಗಳ ಪಟ್ಟಿ: ಮಹಿಳೆಯರಿಗೆ ಆದ್ಯತೆ, 114 ಹೊಸಮುಖಗಳು, ಎಸ್‌ಸಿ-ಎಸ್‌ಟಿಗೆ ಒತ್ತು

ಟಿಎಂಸಿ ಅಭ್ಯರ್ಥಿಗಳ ಪಟ್ಟಿ: ಮಹಿಳೆಯರಿಗೆ ಆದ್ಯತೆ, 114 ಹೊಸಮುಖಗಳು, ಎಸ್‌ಸಿ-ಎಸ್‌ಟಿಗೆ ಒತ್ತು

- Advertisement -
- Advertisement -

ಮುಂಬರುವ ಎರಡು ತಿಂಗಳಲ್ಲಿ ಹರಡಿರುವ ವಿಧಾನಸಭಾ ಚುನಾವಣೆಗೆ ತಮ್ಮ ಪಕ್ಷದ ಪೂರ್ಣ ಅಭ್ಯರ್ಥಿಗಳ ಪಟ್ಟಿಯನ್ನು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥ ಮಮತಾ ಬ್ಯಾನರ್ಜಿ ಶುಕ್ರವಾರ ಪ್ರಕಟಿಸಿದ್ದಾರೆ. 294 ಸ್ಥಾನಗಳಲ್ಲಿ ಟಿಎಂಸಿ 291 ಸ್ಥಾನಗಳಲ್ಲಿ ಸ್ಪರ್ಧಿಸಲಿದ್ದು, ಮೂರು ಸ್ಥಾನಗಳನ್ನು ಮೈತ್ರಿ ಪಾಲುದಾರ ಗೂರ್ಖಾ ಜನಮುಕ್ತಿ ಮೋರ್ಚಾ (ಜಿಜೆಎಂ) ಗೆ ಬಿಟ್ಟಿದೆ.

ಬ್ಯಾನರ್ಜಿ ನಂದಿಗ್ರಾಮ್ ಕ್ಷೇತ್ರದಿಂದ ಸ್ಪರ್ಧಿಸಲಿದ್ದು, ಈ ಬಾರಿ ಭಬಾನಿಪುರ ಸ್ಥಾನವನ್ನು ಪಕ್ಷದ ಮುಖಂಡ ಶೋಭಂದೇಬ್ ಚಟ್ಟೋಪಾಧ್ಯಾಯ ಅವರಿಗೆ ಬಿಟ್ಟು ಕೊಟ್ಟಿದ್ದಾರೆ.

ಅಭ್ಯರ್ಥಿಗಳ ಪಟ್ಟಿಯಲ್ಲಿ, ಮಹಿಳಾ ಅಭ್ಯರ್ಥಿಗಳ ಮೇಲೆ ವಿಶೇಷ ಗಮನಹರಿಸಿ ಸಮಾಜದ ಎಲ್ಲಾ ವರ್ಗಗಳ ನಡುವೆ ಸಮತೋಲನವನ್ನು ಕಂಡುಕೊಳ್ಳಲು ಬ್ಯಾನರ್ಜಿ ಪ್ರಯತ್ನಿಸಿದ್ದಾರೆ. ಈ ಪಟ್ಟಿಯಲ್ಲಿ 50 ಮಹಿಳಾ ಅಭ್ಯರ್ಥಿಗಳು (ಒಟ್ಟು ಅಭ್ಯರ್ಥಿಗಳಲ್ಲಿ 17%), 79 ಎಸ್‌ಸಿ ಅಭ್ಯರ್ಥಿಗಳು (27%), 42 ಮುಸ್ಲಿಂ ಅಭ್ಯರ್ಥಿಗಳು (14%) ಮತ್ತು 17 ಎಸ್‌ಟಿ ಅಭ್ಯರ್ಥಿಗಳು (5%) ಸೇರಿದ್ದಾರೆ. ಈ ಪಟ್ಟಿಯಲ್ಲಿ ನಟರು, ಗಾಯಕರು, ವೈದ್ಯರು, ಕ್ರೀಡಾ ವ್ಯಕ್ತಿಗಳು, ಬರಹಗಾರರು, ಮಾಜಿ ಐಪಿಎಸ್ ಅಧಿಕಾರಿಗಳು ಮತ್ತು ಪ್ರಭಾವಿ ಮುಖಂಡರು ಸೇರಿದ್ದಾರೆ. 80 ವರ್ಷಕ್ಕಿಂತ ಮೇಲ್ಪಟ್ಟ ನಾಯಕರನ್ನು ಹೊರಗಿಡಲಾಗಿದೆ.

160 ಸ್ಥಾನಗಳಲ್ಲಿ ಹೊಸ ಅಭ್ಯರ್ಥಿಗಳಿದ್ದರೆ, ಪಟ್ಟಿಯಲ್ಲಿ 114 ಹೊಸ ಮುಖಗಳಿವೆ. ಅದೇ ಸಮಯದಲ್ಲಿ, ಐವರು ಮಂತ್ರಿಗಳು (ಅಮಿತ್ ಮಿತ್ರ, ಬಚು ಹನ್ಸ್ಡಾ, ರತ್ನ ಘೋಷ್ ಕಾರ್, ರೆಝಾಕ್ ಮೊಲ್ಲಾ ಮತ್ತು ಪೂರ್ಣೇಂದು ಬೋಸ್) ಸೇರಿದಂತೆ 28 ಹಾಲಿ ಶಾಸಕರಿಗೆ ಟಿಕೆಟ್ ನೀಡಲಾಗಿಲ್ಲ.

ಅಭ್ಯರ್ಥಿಗಳ ಪಟ್ಟಿಯ ಪ್ರಮುಖಾಂಶಗಳು

ಮಹಿಳೆಯರ ಮೇಲೆ ಕೇಂದ್ರೀಕರಣ:

ಪಕ್ಷದ ಚುನಾವಣಾ ಘೋಷಣೆಯಾದ ‘ಬಾಂಗ್ಲಾ ನಿಜರ್ ಮೆಯೆಕೆ ಚಾಯ್’ (ಬಂಗಾಳ ತನ್ನ ಸ್ವಂತ ಮಗಳನ್ನು ಬಯಸಿದೆ) ಅನುಸರಿಸಿ ಟಿಎಂಸಿ ಈ ಬಾರಿ 50 ಮಹಿಳಾ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ, ಇದು 2016 ರ ವಿಧಾನಸಭಾ ಚುನಾವಣೆಗಿಂತ ಐದು ಹೆಚ್ಚು. ಬಿಜೆಪಿಯನ್ನು ಎದುರಿಸಲು ಪಕ್ಷವು ಮಹಿಳಾ ಮತದಾರರನ್ನು ತಲುಪಲು ಪ್ರಯತ್ನಿಸುತ್ತಿದೆ ಎಂಬುದು ಈ ಕ್ರಮದಿಂದ ಸ್ಪಷ್ಟವಾಗಿದೆ. ಟಿಎಂಸಿ ಮಾಜಿ ಮುಖಂಡ ಬಿಜೆಪಿ ಸಂಸದ ಸೌಮಿತ್ರಾ ಖಾನ್ ಅವರ ಪತ್ನಿ ಸುಜಾತಾ ಖಾನ್ ಅವರಿಗೆ ಪಕ್ಷ ಟಿಕೆಟ್ ನೀಡಿದೆ. ಅದೇ ಸಮಯದಲ್ಲಿ, ಮಾಜಿ ರಾಜ್ಯ ಸಚಿವರಾದ ಬಿಜೆಪಿ ಮುಖಂಡ ಸೋವನ್ ಚಟರ್ಜಿಯವರ ಪತ್ನಿ ರತ್ನ ಚಟರ್ಜಿಗೆ ಸೋವನ್ ಅವರ ಕ್ಷೇತ್ರದ ಬೆಹಲಾ ಪುರ್ಬಾದಿಂದ ಸ್ಪರ್ಧಿಸಲು ಟಿಕೆಟ್ ನೀಡಲಾಗಿದೆ.

ಎಸ್‌ಸಿ / ಎಸ್‌ಟಿ ಸಮುದಾಯಗಳಿಗೆ ಒತ್ತು:

ಈ ಬಾರಿ ಟಿಎಂಸಿ ಅಭೂತಪೂರ್ವ 79 ಎಸ್‌ಸಿ ಅಭ್ಯರ್ಥಿಗಳು ಮತ್ತು 17 ಎಸ್‌ಟಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ, ಇದು 2016 ರ ಚುನಾವಣೆಯಲ್ಲಿ 68 ಎಸ್‌ಸಿ ಮತ್ತು 16 ಎಸ್‌ಟಿ ಅಭ್ಯರ್ಥಿಗಳನ್ನು ಗಮನಿಸಿದಾಗ ಇದು ಗಮನಾರ್ಹ ಏರಿಕೆ ಆಗಿದೆ. ಪಶ್ಚಿಮ ಬಂಗಾಳದಲ್ಲಿ ಎಸ್‌ಸಿಗೆ 68 ಕ್ಷೇತ್ರಗಳು ಮತ್ತು ಎಸ್‌ಟಿಗಳಿಗೆ 16 ಕ್ಷೇತ್ರಗಳನ್ನು ಕಾಯ್ದಿರಿಸಲಾಗಿದೆ. ಈ ಕ್ರಮವು ಬಾಂಗ್ಲಾದೇಶದಲ್ಲಿ ತನ್ನ ಮೂಲವನ್ನು ಗುರುತಿಸುವ ಮತ್ತು 2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ನಿಷ್ಠೆಯನ್ನು ಬದಲಾಯಿಸಿದ ನಿರಾಶ್ರಿತರ ಸಮುದಾಯವಾದ ಮಾಟುವಾಸ್ ಸೇರಿದಂತೆ ಎಸ್‌ಸಿ / ಎಸ್‌ಟಿ ಸಮುದಾಯಗಳನ್ನು ಆಕರ್ಷಿಸುವ ಗುರಿಯನ್ನು ಹೊಂದಿದೆ. ಈ ಸಮುದಾಯಗಳ ಸದಸ್ಯರಿಗೆ ಹೆಚ್ಚಿನ ಟಿಕೆಟ್ ನೀಡುವ ಮೂಲಕ, ಮಮತಾ ಬ್ಯಾನರ್ಜಿ ತಮ್ಮ ಪಕ್ಷವನ್ನು ಒಳಗೊಂಡಿದ್ದಾರೆ ಎಂಬ ಸಂದೇಶವನ್ನು ಆ ಸಮುದಾಯಗಳಿಗೆ ಕಳುಹಿಸಲು ಪ್ರಯತ್ನಿಸುತ್ತಿದ್ದಾರೆ.

ಮುಸ್ಲಿಂ ತುಚ್ಛಿಕರಣದ ಟ್ಯಾಗ್ ಕಳಚುವ ಯತ್ನ:

ಟಿಎಂಸಿ ಈ ಬಾರಿ ಕಡಿಮೆ ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. 2016 ರಲ್ಲಿ, ಪಕ್ಷವು 57 ಮುಸ್ಲಿಂ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿತ್ತು, ಆದರೆ ಈ ಬಾರಿ ಅದು 42 ಕ್ಕೆ ಇಳಿದಿದೆ. ಪಕ್ಷದ ಒಳಗಿನವರ ಪ್ರಕಾರ, ಇದು ಮುಸ್ಲಿಂ ತುಚ್ಛಿಕರಣದ ಟ್ಯಾಗ್ ಅನ್ನು ಕಳಚುವ ಪ್ರಯತ್ನವಾಗಿದೆ, ವಿರೋಧ ಪಕ್ಷಗಳು ಈ ಟ್ಯಾಗ್ ಬಳಸಿ ಅಪಾದನೆ ಮಾಡುತ್ತ ಬಂದಿದ್ದವು. ಮತ್ತೊಂದೆಡೆ, ಹೆಚ್ಚಿನ ಶೇಕಡಾವಾರು ಹಿಂದಿ ಮಾತನಾಡುವ ಮತದಾರರನ್ನು ಹೊಂದಿರುವ ಕ್ಷೇತ್ರಗಳಲ್ಲಿ ಪ್ರತಿಪಕ್ಷಗಳ ಪರವಾಗಿ ಹಿಂದೂ ಮತಗಳ ಧ್ರುವೀಕರಣವನ್ನು ನಿಲ್ಲಿಸಲು ಇದು ಸಹಾಯ ಮಾಡುತ್ತದೆ.

ಆಡಳಿತ ವಿರೋಧವನ್ನು ಎದುರಿಸುವುದು:

ಕುತೂಹಲಕಾರಿಯಾಗಿ, ಟಿಎಂಸಿಯು ಚುನಾವಣೆಯಲ್ಲಿ ಸ್ಪರ್ಧಿಸಲು 114 ಹೊಸ ಮುಖಗಳನ್ನು ಹೊಂದಿದೆ. ಇದಲ್ಲದೆ, 160 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಬದಲಾಯಿಸಲಾಗಿದೆ. ಇದು ಆಡಳಿತ ವಿರೋಧಿ ಅಲೆಯ ಭಯದಿಂದ ತೆಗೆದುಕೊಂಡ ಕ್ರಮವಾಗಿದ್ದು, ಮತದಾರರಿಗೆ ಉತ್ತಮ ಅಭ್ಯರ್ಥಿಗಳನ್ನು ನೀಡಲು ಕಾರಣವಾಗಿದೆ. 2006 ರಲ್ಲಿ, ಹಿಂದಿನ ಎಡಪಂಥೀಯ ಸರ್ಕಾರವು ತನ್ನ ಅಭ್ಯರ್ಥಿಗಳನ್ನು 150 ಸ್ಥಾನಗಳಲ್ಲಿ ಬದಲಾಯಿಸಿತ್ತು, ಇದು ರಾಜ್ಯದ 230 ಸ್ಥಾನಗಳನ್ನು ಗೆಲ್ಲಲು ಎಡಪಂಥಿಯ ಕೂಟಕ್ಕೆ ಸಹಾಯ ಮಾಡಿತ್ತು. ಈಗ ಟಿಎಂಸಿ ಹಳೆಯ ಮತ್ತು ಹೊಸ ನಾಯಕರ ನಡುವೆ ಸಮತೋಲನ ಹೊಂದಲು ಯುವ ಮುಖಗಳನ್ನು ಪಕ್ಷಕ್ಕೆ ತರಲು ಒತ್ತು ನೀಡಿದೆ..

ಸೆಲೆಬ್ರಿಟಿಗಳನ್ನು ಅವಲಂಬಿಸಿ:

2011 ರಲ್ಲಿ ಅಧಿಕಾರಕ್ಕೆ ಬಂದಾಗಿನಿಂದ ಮಮತಾ ಬ್ಯಾನರ್ಜಿ ಯಾವಾಗಲೂ ಬಂಗಾಳಿ ಚಲನಚಿತ್ರೋದ್ಯಮದ ಸದಸ್ಯರಿಗೆ ಟಿಕೆಟ್ ನೀಡಿದ್ದಾರೆ. ಹಿಂದಿನ ಹೆಚ್ಚಿನ ಸಂದರ್ಭಗಳಲ್ಲಿ, ಟಿಎಂಸಿಗೆ ಹೆಚ್ಚಿನ ಸಂಖ್ಯೆಯ ಸ್ಥಾನಗಳನ್ನು ಗೆಲ್ಲಲು ಸ್ಟಾರ್‌ಗಳು ಸಹಾಯ ಮಾಡಿದ್ದಾರೆ. ನಟರಾದ ದೇವ್, ಮೂನ್ ಮೂನ್ ಸೇನ್, ದಿವಂಗತ ನಟ ತಪಸ್ ಪಾಲ್, ಶತಾಬ್ದಿ ರಾಯ್, ಮಿಮಿ ಚಕ್ರವರ್ತಿ, ನುಸ್ರತ್ ಜಹಾನ್, ದೇಬಶ್ರೀ ರಾಯ್ ಮತ್ತು ಇತರರು ಟಿಎಂಸಿ ಟಿಕೆಟ್‌ನಲ್ಲಿ ಚುನಾವಣೆಯಲ್ಲಿ ಜಯ ಗಳಿಸಿದ್ದರು. ಈ ಬಾರಿ ಕೂಡ ಪಕ್ಷವು ನಟರಾದ ಸೋಹಮ್ ಚಕ್ರವರ್ತಿ, ಸಯಾಂತಿಕಾ ಬ್ಯಾನರ್ಜಿ, ಸಯಾನಿ ಘೋಷ್, ಜೂನ್ ಮಾಲಿಯಾ, ಕೌಶಾನಿ ಬ್ಯಾನರ್ಜಿ, ಕಾಂಚನ್ ಮಲ್ಲಿಕ್, ನಿರ್ದೇಶಕ ರಾಜ್ ಚಕ್ರವರ್ತಿ ಮತ್ತು ಗಾಯಕಿ ಅದಿತಿ ಮುನ್ಶಿ ಅವರನ್ನು ಇದೇ ರೀತಿಯ ಫಲಿತಾಂಶವನ್ನು ನೀಡಲು ಕಣಕ್ಕಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...