Homeಮುಖಪುಟಟಿಎಂಸಿ ಅಭ್ಯರ್ಥಿಗಳ ಪಟ್ಟಿ: ಮಹಿಳೆಯರಿಗೆ ಆದ್ಯತೆ, 114 ಹೊಸಮುಖಗಳು, ಎಸ್‌ಸಿ-ಎಸ್‌ಟಿಗೆ ಒತ್ತು

ಟಿಎಂಸಿ ಅಭ್ಯರ್ಥಿಗಳ ಪಟ್ಟಿ: ಮಹಿಳೆಯರಿಗೆ ಆದ್ಯತೆ, 114 ಹೊಸಮುಖಗಳು, ಎಸ್‌ಸಿ-ಎಸ್‌ಟಿಗೆ ಒತ್ತು

- Advertisement -
- Advertisement -

ಮುಂಬರುವ ಎರಡು ತಿಂಗಳಲ್ಲಿ ಹರಡಿರುವ ವಿಧಾನಸಭಾ ಚುನಾವಣೆಗೆ ತಮ್ಮ ಪಕ್ಷದ ಪೂರ್ಣ ಅಭ್ಯರ್ಥಿಗಳ ಪಟ್ಟಿಯನ್ನು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥ ಮಮತಾ ಬ್ಯಾನರ್ಜಿ ಶುಕ್ರವಾರ ಪ್ರಕಟಿಸಿದ್ದಾರೆ. 294 ಸ್ಥಾನಗಳಲ್ಲಿ ಟಿಎಂಸಿ 291 ಸ್ಥಾನಗಳಲ್ಲಿ ಸ್ಪರ್ಧಿಸಲಿದ್ದು, ಮೂರು ಸ್ಥಾನಗಳನ್ನು ಮೈತ್ರಿ ಪಾಲುದಾರ ಗೂರ್ಖಾ ಜನಮುಕ್ತಿ ಮೋರ್ಚಾ (ಜಿಜೆಎಂ) ಗೆ ಬಿಟ್ಟಿದೆ.

ಬ್ಯಾನರ್ಜಿ ನಂದಿಗ್ರಾಮ್ ಕ್ಷೇತ್ರದಿಂದ ಸ್ಪರ್ಧಿಸಲಿದ್ದು, ಈ ಬಾರಿ ಭಬಾನಿಪುರ ಸ್ಥಾನವನ್ನು ಪಕ್ಷದ ಮುಖಂಡ ಶೋಭಂದೇಬ್ ಚಟ್ಟೋಪಾಧ್ಯಾಯ ಅವರಿಗೆ ಬಿಟ್ಟು ಕೊಟ್ಟಿದ್ದಾರೆ.

ಅಭ್ಯರ್ಥಿಗಳ ಪಟ್ಟಿಯಲ್ಲಿ, ಮಹಿಳಾ ಅಭ್ಯರ್ಥಿಗಳ ಮೇಲೆ ವಿಶೇಷ ಗಮನಹರಿಸಿ ಸಮಾಜದ ಎಲ್ಲಾ ವರ್ಗಗಳ ನಡುವೆ ಸಮತೋಲನವನ್ನು ಕಂಡುಕೊಳ್ಳಲು ಬ್ಯಾನರ್ಜಿ ಪ್ರಯತ್ನಿಸಿದ್ದಾರೆ. ಈ ಪಟ್ಟಿಯಲ್ಲಿ 50 ಮಹಿಳಾ ಅಭ್ಯರ್ಥಿಗಳು (ಒಟ್ಟು ಅಭ್ಯರ್ಥಿಗಳಲ್ಲಿ 17%), 79 ಎಸ್‌ಸಿ ಅಭ್ಯರ್ಥಿಗಳು (27%), 42 ಮುಸ್ಲಿಂ ಅಭ್ಯರ್ಥಿಗಳು (14%) ಮತ್ತು 17 ಎಸ್‌ಟಿ ಅಭ್ಯರ್ಥಿಗಳು (5%) ಸೇರಿದ್ದಾರೆ. ಈ ಪಟ್ಟಿಯಲ್ಲಿ ನಟರು, ಗಾಯಕರು, ವೈದ್ಯರು, ಕ್ರೀಡಾ ವ್ಯಕ್ತಿಗಳು, ಬರಹಗಾರರು, ಮಾಜಿ ಐಪಿಎಸ್ ಅಧಿಕಾರಿಗಳು ಮತ್ತು ಪ್ರಭಾವಿ ಮುಖಂಡರು ಸೇರಿದ್ದಾರೆ. 80 ವರ್ಷಕ್ಕಿಂತ ಮೇಲ್ಪಟ್ಟ ನಾಯಕರನ್ನು ಹೊರಗಿಡಲಾಗಿದೆ.

160 ಸ್ಥಾನಗಳಲ್ಲಿ ಹೊಸ ಅಭ್ಯರ್ಥಿಗಳಿದ್ದರೆ, ಪಟ್ಟಿಯಲ್ಲಿ 114 ಹೊಸ ಮುಖಗಳಿವೆ. ಅದೇ ಸಮಯದಲ್ಲಿ, ಐವರು ಮಂತ್ರಿಗಳು (ಅಮಿತ್ ಮಿತ್ರ, ಬಚು ಹನ್ಸ್ಡಾ, ರತ್ನ ಘೋಷ್ ಕಾರ್, ರೆಝಾಕ್ ಮೊಲ್ಲಾ ಮತ್ತು ಪೂರ್ಣೇಂದು ಬೋಸ್) ಸೇರಿದಂತೆ 28 ಹಾಲಿ ಶಾಸಕರಿಗೆ ಟಿಕೆಟ್ ನೀಡಲಾಗಿಲ್ಲ.

ಅಭ್ಯರ್ಥಿಗಳ ಪಟ್ಟಿಯ ಪ್ರಮುಖಾಂಶಗಳು

ಮಹಿಳೆಯರ ಮೇಲೆ ಕೇಂದ್ರೀಕರಣ:

ಪಕ್ಷದ ಚುನಾವಣಾ ಘೋಷಣೆಯಾದ ‘ಬಾಂಗ್ಲಾ ನಿಜರ್ ಮೆಯೆಕೆ ಚಾಯ್’ (ಬಂಗಾಳ ತನ್ನ ಸ್ವಂತ ಮಗಳನ್ನು ಬಯಸಿದೆ) ಅನುಸರಿಸಿ ಟಿಎಂಸಿ ಈ ಬಾರಿ 50 ಮಹಿಳಾ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ, ಇದು 2016 ರ ವಿಧಾನಸಭಾ ಚುನಾವಣೆಗಿಂತ ಐದು ಹೆಚ್ಚು. ಬಿಜೆಪಿಯನ್ನು ಎದುರಿಸಲು ಪಕ್ಷವು ಮಹಿಳಾ ಮತದಾರರನ್ನು ತಲುಪಲು ಪ್ರಯತ್ನಿಸುತ್ತಿದೆ ಎಂಬುದು ಈ ಕ್ರಮದಿಂದ ಸ್ಪಷ್ಟವಾಗಿದೆ. ಟಿಎಂಸಿ ಮಾಜಿ ಮುಖಂಡ ಬಿಜೆಪಿ ಸಂಸದ ಸೌಮಿತ್ರಾ ಖಾನ್ ಅವರ ಪತ್ನಿ ಸುಜಾತಾ ಖಾನ್ ಅವರಿಗೆ ಪಕ್ಷ ಟಿಕೆಟ್ ನೀಡಿದೆ. ಅದೇ ಸಮಯದಲ್ಲಿ, ಮಾಜಿ ರಾಜ್ಯ ಸಚಿವರಾದ ಬಿಜೆಪಿ ಮುಖಂಡ ಸೋವನ್ ಚಟರ್ಜಿಯವರ ಪತ್ನಿ ರತ್ನ ಚಟರ್ಜಿಗೆ ಸೋವನ್ ಅವರ ಕ್ಷೇತ್ರದ ಬೆಹಲಾ ಪುರ್ಬಾದಿಂದ ಸ್ಪರ್ಧಿಸಲು ಟಿಕೆಟ್ ನೀಡಲಾಗಿದೆ.

ಎಸ್‌ಸಿ / ಎಸ್‌ಟಿ ಸಮುದಾಯಗಳಿಗೆ ಒತ್ತು:

ಈ ಬಾರಿ ಟಿಎಂಸಿ ಅಭೂತಪೂರ್ವ 79 ಎಸ್‌ಸಿ ಅಭ್ಯರ್ಥಿಗಳು ಮತ್ತು 17 ಎಸ್‌ಟಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ, ಇದು 2016 ರ ಚುನಾವಣೆಯಲ್ಲಿ 68 ಎಸ್‌ಸಿ ಮತ್ತು 16 ಎಸ್‌ಟಿ ಅಭ್ಯರ್ಥಿಗಳನ್ನು ಗಮನಿಸಿದಾಗ ಇದು ಗಮನಾರ್ಹ ಏರಿಕೆ ಆಗಿದೆ. ಪಶ್ಚಿಮ ಬಂಗಾಳದಲ್ಲಿ ಎಸ್‌ಸಿಗೆ 68 ಕ್ಷೇತ್ರಗಳು ಮತ್ತು ಎಸ್‌ಟಿಗಳಿಗೆ 16 ಕ್ಷೇತ್ರಗಳನ್ನು ಕಾಯ್ದಿರಿಸಲಾಗಿದೆ. ಈ ಕ್ರಮವು ಬಾಂಗ್ಲಾದೇಶದಲ್ಲಿ ತನ್ನ ಮೂಲವನ್ನು ಗುರುತಿಸುವ ಮತ್ತು 2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ನಿಷ್ಠೆಯನ್ನು ಬದಲಾಯಿಸಿದ ನಿರಾಶ್ರಿತರ ಸಮುದಾಯವಾದ ಮಾಟುವಾಸ್ ಸೇರಿದಂತೆ ಎಸ್‌ಸಿ / ಎಸ್‌ಟಿ ಸಮುದಾಯಗಳನ್ನು ಆಕರ್ಷಿಸುವ ಗುರಿಯನ್ನು ಹೊಂದಿದೆ. ಈ ಸಮುದಾಯಗಳ ಸದಸ್ಯರಿಗೆ ಹೆಚ್ಚಿನ ಟಿಕೆಟ್ ನೀಡುವ ಮೂಲಕ, ಮಮತಾ ಬ್ಯಾನರ್ಜಿ ತಮ್ಮ ಪಕ್ಷವನ್ನು ಒಳಗೊಂಡಿದ್ದಾರೆ ಎಂಬ ಸಂದೇಶವನ್ನು ಆ ಸಮುದಾಯಗಳಿಗೆ ಕಳುಹಿಸಲು ಪ್ರಯತ್ನಿಸುತ್ತಿದ್ದಾರೆ.

ಮುಸ್ಲಿಂ ತುಚ್ಛಿಕರಣದ ಟ್ಯಾಗ್ ಕಳಚುವ ಯತ್ನ:

ಟಿಎಂಸಿ ಈ ಬಾರಿ ಕಡಿಮೆ ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. 2016 ರಲ್ಲಿ, ಪಕ್ಷವು 57 ಮುಸ್ಲಿಂ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿತ್ತು, ಆದರೆ ಈ ಬಾರಿ ಅದು 42 ಕ್ಕೆ ಇಳಿದಿದೆ. ಪಕ್ಷದ ಒಳಗಿನವರ ಪ್ರಕಾರ, ಇದು ಮುಸ್ಲಿಂ ತುಚ್ಛಿಕರಣದ ಟ್ಯಾಗ್ ಅನ್ನು ಕಳಚುವ ಪ್ರಯತ್ನವಾಗಿದೆ, ವಿರೋಧ ಪಕ್ಷಗಳು ಈ ಟ್ಯಾಗ್ ಬಳಸಿ ಅಪಾದನೆ ಮಾಡುತ್ತ ಬಂದಿದ್ದವು. ಮತ್ತೊಂದೆಡೆ, ಹೆಚ್ಚಿನ ಶೇಕಡಾವಾರು ಹಿಂದಿ ಮಾತನಾಡುವ ಮತದಾರರನ್ನು ಹೊಂದಿರುವ ಕ್ಷೇತ್ರಗಳಲ್ಲಿ ಪ್ರತಿಪಕ್ಷಗಳ ಪರವಾಗಿ ಹಿಂದೂ ಮತಗಳ ಧ್ರುವೀಕರಣವನ್ನು ನಿಲ್ಲಿಸಲು ಇದು ಸಹಾಯ ಮಾಡುತ್ತದೆ.

ಆಡಳಿತ ವಿರೋಧವನ್ನು ಎದುರಿಸುವುದು:

ಕುತೂಹಲಕಾರಿಯಾಗಿ, ಟಿಎಂಸಿಯು ಚುನಾವಣೆಯಲ್ಲಿ ಸ್ಪರ್ಧಿಸಲು 114 ಹೊಸ ಮುಖಗಳನ್ನು ಹೊಂದಿದೆ. ಇದಲ್ಲದೆ, 160 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಬದಲಾಯಿಸಲಾಗಿದೆ. ಇದು ಆಡಳಿತ ವಿರೋಧಿ ಅಲೆಯ ಭಯದಿಂದ ತೆಗೆದುಕೊಂಡ ಕ್ರಮವಾಗಿದ್ದು, ಮತದಾರರಿಗೆ ಉತ್ತಮ ಅಭ್ಯರ್ಥಿಗಳನ್ನು ನೀಡಲು ಕಾರಣವಾಗಿದೆ. 2006 ರಲ್ಲಿ, ಹಿಂದಿನ ಎಡಪಂಥೀಯ ಸರ್ಕಾರವು ತನ್ನ ಅಭ್ಯರ್ಥಿಗಳನ್ನು 150 ಸ್ಥಾನಗಳಲ್ಲಿ ಬದಲಾಯಿಸಿತ್ತು, ಇದು ರಾಜ್ಯದ 230 ಸ್ಥಾನಗಳನ್ನು ಗೆಲ್ಲಲು ಎಡಪಂಥಿಯ ಕೂಟಕ್ಕೆ ಸಹಾಯ ಮಾಡಿತ್ತು. ಈಗ ಟಿಎಂಸಿ ಹಳೆಯ ಮತ್ತು ಹೊಸ ನಾಯಕರ ನಡುವೆ ಸಮತೋಲನ ಹೊಂದಲು ಯುವ ಮುಖಗಳನ್ನು ಪಕ್ಷಕ್ಕೆ ತರಲು ಒತ್ತು ನೀಡಿದೆ..

ಸೆಲೆಬ್ರಿಟಿಗಳನ್ನು ಅವಲಂಬಿಸಿ:

2011 ರಲ್ಲಿ ಅಧಿಕಾರಕ್ಕೆ ಬಂದಾಗಿನಿಂದ ಮಮತಾ ಬ್ಯಾನರ್ಜಿ ಯಾವಾಗಲೂ ಬಂಗಾಳಿ ಚಲನಚಿತ್ರೋದ್ಯಮದ ಸದಸ್ಯರಿಗೆ ಟಿಕೆಟ್ ನೀಡಿದ್ದಾರೆ. ಹಿಂದಿನ ಹೆಚ್ಚಿನ ಸಂದರ್ಭಗಳಲ್ಲಿ, ಟಿಎಂಸಿಗೆ ಹೆಚ್ಚಿನ ಸಂಖ್ಯೆಯ ಸ್ಥಾನಗಳನ್ನು ಗೆಲ್ಲಲು ಸ್ಟಾರ್‌ಗಳು ಸಹಾಯ ಮಾಡಿದ್ದಾರೆ. ನಟರಾದ ದೇವ್, ಮೂನ್ ಮೂನ್ ಸೇನ್, ದಿವಂಗತ ನಟ ತಪಸ್ ಪಾಲ್, ಶತಾಬ್ದಿ ರಾಯ್, ಮಿಮಿ ಚಕ್ರವರ್ತಿ, ನುಸ್ರತ್ ಜಹಾನ್, ದೇಬಶ್ರೀ ರಾಯ್ ಮತ್ತು ಇತರರು ಟಿಎಂಸಿ ಟಿಕೆಟ್‌ನಲ್ಲಿ ಚುನಾವಣೆಯಲ್ಲಿ ಜಯ ಗಳಿಸಿದ್ದರು. ಈ ಬಾರಿ ಕೂಡ ಪಕ್ಷವು ನಟರಾದ ಸೋಹಮ್ ಚಕ್ರವರ್ತಿ, ಸಯಾಂತಿಕಾ ಬ್ಯಾನರ್ಜಿ, ಸಯಾನಿ ಘೋಷ್, ಜೂನ್ ಮಾಲಿಯಾ, ಕೌಶಾನಿ ಬ್ಯಾನರ್ಜಿ, ಕಾಂಚನ್ ಮಲ್ಲಿಕ್, ನಿರ್ದೇಶಕ ರಾಜ್ ಚಕ್ರವರ್ತಿ ಮತ್ತು ಗಾಯಕಿ ಅದಿತಿ ಮುನ್ಶಿ ಅವರನ್ನು ಇದೇ ರೀತಿಯ ಫಲಿತಾಂಶವನ್ನು ನೀಡಲು ಕಣಕ್ಕಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...