Homeಮುಖಪುಟಟಿಎಂಸಿ ಅಭ್ಯರ್ಥಿಗಳ ಪಟ್ಟಿ: ಮಹಿಳೆಯರಿಗೆ ಆದ್ಯತೆ, 114 ಹೊಸಮುಖಗಳು, ಎಸ್‌ಸಿ-ಎಸ್‌ಟಿಗೆ ಒತ್ತು

ಟಿಎಂಸಿ ಅಭ್ಯರ್ಥಿಗಳ ಪಟ್ಟಿ: ಮಹಿಳೆಯರಿಗೆ ಆದ್ಯತೆ, 114 ಹೊಸಮುಖಗಳು, ಎಸ್‌ಸಿ-ಎಸ್‌ಟಿಗೆ ಒತ್ತು

- Advertisement -
- Advertisement -

ಮುಂಬರುವ ಎರಡು ತಿಂಗಳಲ್ಲಿ ಹರಡಿರುವ ವಿಧಾನಸಭಾ ಚುನಾವಣೆಗೆ ತಮ್ಮ ಪಕ್ಷದ ಪೂರ್ಣ ಅಭ್ಯರ್ಥಿಗಳ ಪಟ್ಟಿಯನ್ನು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥ ಮಮತಾ ಬ್ಯಾನರ್ಜಿ ಶುಕ್ರವಾರ ಪ್ರಕಟಿಸಿದ್ದಾರೆ. 294 ಸ್ಥಾನಗಳಲ್ಲಿ ಟಿಎಂಸಿ 291 ಸ್ಥಾನಗಳಲ್ಲಿ ಸ್ಪರ್ಧಿಸಲಿದ್ದು, ಮೂರು ಸ್ಥಾನಗಳನ್ನು ಮೈತ್ರಿ ಪಾಲುದಾರ ಗೂರ್ಖಾ ಜನಮುಕ್ತಿ ಮೋರ್ಚಾ (ಜಿಜೆಎಂ) ಗೆ ಬಿಟ್ಟಿದೆ.

ಬ್ಯಾನರ್ಜಿ ನಂದಿಗ್ರಾಮ್ ಕ್ಷೇತ್ರದಿಂದ ಸ್ಪರ್ಧಿಸಲಿದ್ದು, ಈ ಬಾರಿ ಭಬಾನಿಪುರ ಸ್ಥಾನವನ್ನು ಪಕ್ಷದ ಮುಖಂಡ ಶೋಭಂದೇಬ್ ಚಟ್ಟೋಪಾಧ್ಯಾಯ ಅವರಿಗೆ ಬಿಟ್ಟು ಕೊಟ್ಟಿದ್ದಾರೆ.

ಅಭ್ಯರ್ಥಿಗಳ ಪಟ್ಟಿಯಲ್ಲಿ, ಮಹಿಳಾ ಅಭ್ಯರ್ಥಿಗಳ ಮೇಲೆ ವಿಶೇಷ ಗಮನಹರಿಸಿ ಸಮಾಜದ ಎಲ್ಲಾ ವರ್ಗಗಳ ನಡುವೆ ಸಮತೋಲನವನ್ನು ಕಂಡುಕೊಳ್ಳಲು ಬ್ಯಾನರ್ಜಿ ಪ್ರಯತ್ನಿಸಿದ್ದಾರೆ. ಈ ಪಟ್ಟಿಯಲ್ಲಿ 50 ಮಹಿಳಾ ಅಭ್ಯರ್ಥಿಗಳು (ಒಟ್ಟು ಅಭ್ಯರ್ಥಿಗಳಲ್ಲಿ 17%), 79 ಎಸ್‌ಸಿ ಅಭ್ಯರ್ಥಿಗಳು (27%), 42 ಮುಸ್ಲಿಂ ಅಭ್ಯರ್ಥಿಗಳು (14%) ಮತ್ತು 17 ಎಸ್‌ಟಿ ಅಭ್ಯರ್ಥಿಗಳು (5%) ಸೇರಿದ್ದಾರೆ. ಈ ಪಟ್ಟಿಯಲ್ಲಿ ನಟರು, ಗಾಯಕರು, ವೈದ್ಯರು, ಕ್ರೀಡಾ ವ್ಯಕ್ತಿಗಳು, ಬರಹಗಾರರು, ಮಾಜಿ ಐಪಿಎಸ್ ಅಧಿಕಾರಿಗಳು ಮತ್ತು ಪ್ರಭಾವಿ ಮುಖಂಡರು ಸೇರಿದ್ದಾರೆ. 80 ವರ್ಷಕ್ಕಿಂತ ಮೇಲ್ಪಟ್ಟ ನಾಯಕರನ್ನು ಹೊರಗಿಡಲಾಗಿದೆ.

160 ಸ್ಥಾನಗಳಲ್ಲಿ ಹೊಸ ಅಭ್ಯರ್ಥಿಗಳಿದ್ದರೆ, ಪಟ್ಟಿಯಲ್ಲಿ 114 ಹೊಸ ಮುಖಗಳಿವೆ. ಅದೇ ಸಮಯದಲ್ಲಿ, ಐವರು ಮಂತ್ರಿಗಳು (ಅಮಿತ್ ಮಿತ್ರ, ಬಚು ಹನ್ಸ್ಡಾ, ರತ್ನ ಘೋಷ್ ಕಾರ್, ರೆಝಾಕ್ ಮೊಲ್ಲಾ ಮತ್ತು ಪೂರ್ಣೇಂದು ಬೋಸ್) ಸೇರಿದಂತೆ 28 ಹಾಲಿ ಶಾಸಕರಿಗೆ ಟಿಕೆಟ್ ನೀಡಲಾಗಿಲ್ಲ.

ಅಭ್ಯರ್ಥಿಗಳ ಪಟ್ಟಿಯ ಪ್ರಮುಖಾಂಶಗಳು

ಮಹಿಳೆಯರ ಮೇಲೆ ಕೇಂದ್ರೀಕರಣ:

ಪಕ್ಷದ ಚುನಾವಣಾ ಘೋಷಣೆಯಾದ ‘ಬಾಂಗ್ಲಾ ನಿಜರ್ ಮೆಯೆಕೆ ಚಾಯ್’ (ಬಂಗಾಳ ತನ್ನ ಸ್ವಂತ ಮಗಳನ್ನು ಬಯಸಿದೆ) ಅನುಸರಿಸಿ ಟಿಎಂಸಿ ಈ ಬಾರಿ 50 ಮಹಿಳಾ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ, ಇದು 2016 ರ ವಿಧಾನಸಭಾ ಚುನಾವಣೆಗಿಂತ ಐದು ಹೆಚ್ಚು. ಬಿಜೆಪಿಯನ್ನು ಎದುರಿಸಲು ಪಕ್ಷವು ಮಹಿಳಾ ಮತದಾರರನ್ನು ತಲುಪಲು ಪ್ರಯತ್ನಿಸುತ್ತಿದೆ ಎಂಬುದು ಈ ಕ್ರಮದಿಂದ ಸ್ಪಷ್ಟವಾಗಿದೆ. ಟಿಎಂಸಿ ಮಾಜಿ ಮುಖಂಡ ಬಿಜೆಪಿ ಸಂಸದ ಸೌಮಿತ್ರಾ ಖಾನ್ ಅವರ ಪತ್ನಿ ಸುಜಾತಾ ಖಾನ್ ಅವರಿಗೆ ಪಕ್ಷ ಟಿಕೆಟ್ ನೀಡಿದೆ. ಅದೇ ಸಮಯದಲ್ಲಿ, ಮಾಜಿ ರಾಜ್ಯ ಸಚಿವರಾದ ಬಿಜೆಪಿ ಮುಖಂಡ ಸೋವನ್ ಚಟರ್ಜಿಯವರ ಪತ್ನಿ ರತ್ನ ಚಟರ್ಜಿಗೆ ಸೋವನ್ ಅವರ ಕ್ಷೇತ್ರದ ಬೆಹಲಾ ಪುರ್ಬಾದಿಂದ ಸ್ಪರ್ಧಿಸಲು ಟಿಕೆಟ್ ನೀಡಲಾಗಿದೆ.

ಎಸ್‌ಸಿ / ಎಸ್‌ಟಿ ಸಮುದಾಯಗಳಿಗೆ ಒತ್ತು:

ಈ ಬಾರಿ ಟಿಎಂಸಿ ಅಭೂತಪೂರ್ವ 79 ಎಸ್‌ಸಿ ಅಭ್ಯರ್ಥಿಗಳು ಮತ್ತು 17 ಎಸ್‌ಟಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ, ಇದು 2016 ರ ಚುನಾವಣೆಯಲ್ಲಿ 68 ಎಸ್‌ಸಿ ಮತ್ತು 16 ಎಸ್‌ಟಿ ಅಭ್ಯರ್ಥಿಗಳನ್ನು ಗಮನಿಸಿದಾಗ ಇದು ಗಮನಾರ್ಹ ಏರಿಕೆ ಆಗಿದೆ. ಪಶ್ಚಿಮ ಬಂಗಾಳದಲ್ಲಿ ಎಸ್‌ಸಿಗೆ 68 ಕ್ಷೇತ್ರಗಳು ಮತ್ತು ಎಸ್‌ಟಿಗಳಿಗೆ 16 ಕ್ಷೇತ್ರಗಳನ್ನು ಕಾಯ್ದಿರಿಸಲಾಗಿದೆ. ಈ ಕ್ರಮವು ಬಾಂಗ್ಲಾದೇಶದಲ್ಲಿ ತನ್ನ ಮೂಲವನ್ನು ಗುರುತಿಸುವ ಮತ್ತು 2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ನಿಷ್ಠೆಯನ್ನು ಬದಲಾಯಿಸಿದ ನಿರಾಶ್ರಿತರ ಸಮುದಾಯವಾದ ಮಾಟುವಾಸ್ ಸೇರಿದಂತೆ ಎಸ್‌ಸಿ / ಎಸ್‌ಟಿ ಸಮುದಾಯಗಳನ್ನು ಆಕರ್ಷಿಸುವ ಗುರಿಯನ್ನು ಹೊಂದಿದೆ. ಈ ಸಮುದಾಯಗಳ ಸದಸ್ಯರಿಗೆ ಹೆಚ್ಚಿನ ಟಿಕೆಟ್ ನೀಡುವ ಮೂಲಕ, ಮಮತಾ ಬ್ಯಾನರ್ಜಿ ತಮ್ಮ ಪಕ್ಷವನ್ನು ಒಳಗೊಂಡಿದ್ದಾರೆ ಎಂಬ ಸಂದೇಶವನ್ನು ಆ ಸಮುದಾಯಗಳಿಗೆ ಕಳುಹಿಸಲು ಪ್ರಯತ್ನಿಸುತ್ತಿದ್ದಾರೆ.

ಮುಸ್ಲಿಂ ತುಚ್ಛಿಕರಣದ ಟ್ಯಾಗ್ ಕಳಚುವ ಯತ್ನ:

ಟಿಎಂಸಿ ಈ ಬಾರಿ ಕಡಿಮೆ ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. 2016 ರಲ್ಲಿ, ಪಕ್ಷವು 57 ಮುಸ್ಲಿಂ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿತ್ತು, ಆದರೆ ಈ ಬಾರಿ ಅದು 42 ಕ್ಕೆ ಇಳಿದಿದೆ. ಪಕ್ಷದ ಒಳಗಿನವರ ಪ್ರಕಾರ, ಇದು ಮುಸ್ಲಿಂ ತುಚ್ಛಿಕರಣದ ಟ್ಯಾಗ್ ಅನ್ನು ಕಳಚುವ ಪ್ರಯತ್ನವಾಗಿದೆ, ವಿರೋಧ ಪಕ್ಷಗಳು ಈ ಟ್ಯಾಗ್ ಬಳಸಿ ಅಪಾದನೆ ಮಾಡುತ್ತ ಬಂದಿದ್ದವು. ಮತ್ತೊಂದೆಡೆ, ಹೆಚ್ಚಿನ ಶೇಕಡಾವಾರು ಹಿಂದಿ ಮಾತನಾಡುವ ಮತದಾರರನ್ನು ಹೊಂದಿರುವ ಕ್ಷೇತ್ರಗಳಲ್ಲಿ ಪ್ರತಿಪಕ್ಷಗಳ ಪರವಾಗಿ ಹಿಂದೂ ಮತಗಳ ಧ್ರುವೀಕರಣವನ್ನು ನಿಲ್ಲಿಸಲು ಇದು ಸಹಾಯ ಮಾಡುತ್ತದೆ.

ಆಡಳಿತ ವಿರೋಧವನ್ನು ಎದುರಿಸುವುದು:

ಕುತೂಹಲಕಾರಿಯಾಗಿ, ಟಿಎಂಸಿಯು ಚುನಾವಣೆಯಲ್ಲಿ ಸ್ಪರ್ಧಿಸಲು 114 ಹೊಸ ಮುಖಗಳನ್ನು ಹೊಂದಿದೆ. ಇದಲ್ಲದೆ, 160 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಬದಲಾಯಿಸಲಾಗಿದೆ. ಇದು ಆಡಳಿತ ವಿರೋಧಿ ಅಲೆಯ ಭಯದಿಂದ ತೆಗೆದುಕೊಂಡ ಕ್ರಮವಾಗಿದ್ದು, ಮತದಾರರಿಗೆ ಉತ್ತಮ ಅಭ್ಯರ್ಥಿಗಳನ್ನು ನೀಡಲು ಕಾರಣವಾಗಿದೆ. 2006 ರಲ್ಲಿ, ಹಿಂದಿನ ಎಡಪಂಥೀಯ ಸರ್ಕಾರವು ತನ್ನ ಅಭ್ಯರ್ಥಿಗಳನ್ನು 150 ಸ್ಥಾನಗಳಲ್ಲಿ ಬದಲಾಯಿಸಿತ್ತು, ಇದು ರಾಜ್ಯದ 230 ಸ್ಥಾನಗಳನ್ನು ಗೆಲ್ಲಲು ಎಡಪಂಥಿಯ ಕೂಟಕ್ಕೆ ಸಹಾಯ ಮಾಡಿತ್ತು. ಈಗ ಟಿಎಂಸಿ ಹಳೆಯ ಮತ್ತು ಹೊಸ ನಾಯಕರ ನಡುವೆ ಸಮತೋಲನ ಹೊಂದಲು ಯುವ ಮುಖಗಳನ್ನು ಪಕ್ಷಕ್ಕೆ ತರಲು ಒತ್ತು ನೀಡಿದೆ..

ಸೆಲೆಬ್ರಿಟಿಗಳನ್ನು ಅವಲಂಬಿಸಿ:

2011 ರಲ್ಲಿ ಅಧಿಕಾರಕ್ಕೆ ಬಂದಾಗಿನಿಂದ ಮಮತಾ ಬ್ಯಾನರ್ಜಿ ಯಾವಾಗಲೂ ಬಂಗಾಳಿ ಚಲನಚಿತ್ರೋದ್ಯಮದ ಸದಸ್ಯರಿಗೆ ಟಿಕೆಟ್ ನೀಡಿದ್ದಾರೆ. ಹಿಂದಿನ ಹೆಚ್ಚಿನ ಸಂದರ್ಭಗಳಲ್ಲಿ, ಟಿಎಂಸಿಗೆ ಹೆಚ್ಚಿನ ಸಂಖ್ಯೆಯ ಸ್ಥಾನಗಳನ್ನು ಗೆಲ್ಲಲು ಸ್ಟಾರ್‌ಗಳು ಸಹಾಯ ಮಾಡಿದ್ದಾರೆ. ನಟರಾದ ದೇವ್, ಮೂನ್ ಮೂನ್ ಸೇನ್, ದಿವಂಗತ ನಟ ತಪಸ್ ಪಾಲ್, ಶತಾಬ್ದಿ ರಾಯ್, ಮಿಮಿ ಚಕ್ರವರ್ತಿ, ನುಸ್ರತ್ ಜಹಾನ್, ದೇಬಶ್ರೀ ರಾಯ್ ಮತ್ತು ಇತರರು ಟಿಎಂಸಿ ಟಿಕೆಟ್‌ನಲ್ಲಿ ಚುನಾವಣೆಯಲ್ಲಿ ಜಯ ಗಳಿಸಿದ್ದರು. ಈ ಬಾರಿ ಕೂಡ ಪಕ್ಷವು ನಟರಾದ ಸೋಹಮ್ ಚಕ್ರವರ್ತಿ, ಸಯಾಂತಿಕಾ ಬ್ಯಾನರ್ಜಿ, ಸಯಾನಿ ಘೋಷ್, ಜೂನ್ ಮಾಲಿಯಾ, ಕೌಶಾನಿ ಬ್ಯಾನರ್ಜಿ, ಕಾಂಚನ್ ಮಲ್ಲಿಕ್, ನಿರ್ದೇಶಕ ರಾಜ್ ಚಕ್ರವರ್ತಿ ಮತ್ತು ಗಾಯಕಿ ಅದಿತಿ ಮುನ್ಶಿ ಅವರನ್ನು ಇದೇ ರೀತಿಯ ಫಲಿತಾಂಶವನ್ನು ನೀಡಲು ಕಣಕ್ಕಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...