Homeಮುಖಪುಟಟಿಎಂಸಿ ಅಭ್ಯರ್ಥಿಗಳ ಪಟ್ಟಿ: ಮಹಿಳೆಯರಿಗೆ ಆದ್ಯತೆ, 114 ಹೊಸಮುಖಗಳು, ಎಸ್‌ಸಿ-ಎಸ್‌ಟಿಗೆ ಒತ್ತು

ಟಿಎಂಸಿ ಅಭ್ಯರ್ಥಿಗಳ ಪಟ್ಟಿ: ಮಹಿಳೆಯರಿಗೆ ಆದ್ಯತೆ, 114 ಹೊಸಮುಖಗಳು, ಎಸ್‌ಸಿ-ಎಸ್‌ಟಿಗೆ ಒತ್ತು

- Advertisement -
- Advertisement -

ಮುಂಬರುವ ಎರಡು ತಿಂಗಳಲ್ಲಿ ಹರಡಿರುವ ವಿಧಾನಸಭಾ ಚುನಾವಣೆಗೆ ತಮ್ಮ ಪಕ್ಷದ ಪೂರ್ಣ ಅಭ್ಯರ್ಥಿಗಳ ಪಟ್ಟಿಯನ್ನು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥ ಮಮತಾ ಬ್ಯಾನರ್ಜಿ ಶುಕ್ರವಾರ ಪ್ರಕಟಿಸಿದ್ದಾರೆ. 294 ಸ್ಥಾನಗಳಲ್ಲಿ ಟಿಎಂಸಿ 291 ಸ್ಥಾನಗಳಲ್ಲಿ ಸ್ಪರ್ಧಿಸಲಿದ್ದು, ಮೂರು ಸ್ಥಾನಗಳನ್ನು ಮೈತ್ರಿ ಪಾಲುದಾರ ಗೂರ್ಖಾ ಜನಮುಕ್ತಿ ಮೋರ್ಚಾ (ಜಿಜೆಎಂ) ಗೆ ಬಿಟ್ಟಿದೆ.

ಬ್ಯಾನರ್ಜಿ ನಂದಿಗ್ರಾಮ್ ಕ್ಷೇತ್ರದಿಂದ ಸ್ಪರ್ಧಿಸಲಿದ್ದು, ಈ ಬಾರಿ ಭಬಾನಿಪುರ ಸ್ಥಾನವನ್ನು ಪಕ್ಷದ ಮುಖಂಡ ಶೋಭಂದೇಬ್ ಚಟ್ಟೋಪಾಧ್ಯಾಯ ಅವರಿಗೆ ಬಿಟ್ಟು ಕೊಟ್ಟಿದ್ದಾರೆ.

ಅಭ್ಯರ್ಥಿಗಳ ಪಟ್ಟಿಯಲ್ಲಿ, ಮಹಿಳಾ ಅಭ್ಯರ್ಥಿಗಳ ಮೇಲೆ ವಿಶೇಷ ಗಮನಹರಿಸಿ ಸಮಾಜದ ಎಲ್ಲಾ ವರ್ಗಗಳ ನಡುವೆ ಸಮತೋಲನವನ್ನು ಕಂಡುಕೊಳ್ಳಲು ಬ್ಯಾನರ್ಜಿ ಪ್ರಯತ್ನಿಸಿದ್ದಾರೆ. ಈ ಪಟ್ಟಿಯಲ್ಲಿ 50 ಮಹಿಳಾ ಅಭ್ಯರ್ಥಿಗಳು (ಒಟ್ಟು ಅಭ್ಯರ್ಥಿಗಳಲ್ಲಿ 17%), 79 ಎಸ್‌ಸಿ ಅಭ್ಯರ್ಥಿಗಳು (27%), 42 ಮುಸ್ಲಿಂ ಅಭ್ಯರ್ಥಿಗಳು (14%) ಮತ್ತು 17 ಎಸ್‌ಟಿ ಅಭ್ಯರ್ಥಿಗಳು (5%) ಸೇರಿದ್ದಾರೆ. ಈ ಪಟ್ಟಿಯಲ್ಲಿ ನಟರು, ಗಾಯಕರು, ವೈದ್ಯರು, ಕ್ರೀಡಾ ವ್ಯಕ್ತಿಗಳು, ಬರಹಗಾರರು, ಮಾಜಿ ಐಪಿಎಸ್ ಅಧಿಕಾರಿಗಳು ಮತ್ತು ಪ್ರಭಾವಿ ಮುಖಂಡರು ಸೇರಿದ್ದಾರೆ. 80 ವರ್ಷಕ್ಕಿಂತ ಮೇಲ್ಪಟ್ಟ ನಾಯಕರನ್ನು ಹೊರಗಿಡಲಾಗಿದೆ.

160 ಸ್ಥಾನಗಳಲ್ಲಿ ಹೊಸ ಅಭ್ಯರ್ಥಿಗಳಿದ್ದರೆ, ಪಟ್ಟಿಯಲ್ಲಿ 114 ಹೊಸ ಮುಖಗಳಿವೆ. ಅದೇ ಸಮಯದಲ್ಲಿ, ಐವರು ಮಂತ್ರಿಗಳು (ಅಮಿತ್ ಮಿತ್ರ, ಬಚು ಹನ್ಸ್ಡಾ, ರತ್ನ ಘೋಷ್ ಕಾರ್, ರೆಝಾಕ್ ಮೊಲ್ಲಾ ಮತ್ತು ಪೂರ್ಣೇಂದು ಬೋಸ್) ಸೇರಿದಂತೆ 28 ಹಾಲಿ ಶಾಸಕರಿಗೆ ಟಿಕೆಟ್ ನೀಡಲಾಗಿಲ್ಲ.

ಅಭ್ಯರ್ಥಿಗಳ ಪಟ್ಟಿಯ ಪ್ರಮುಖಾಂಶಗಳು

ಮಹಿಳೆಯರ ಮೇಲೆ ಕೇಂದ್ರೀಕರಣ:

ಪಕ್ಷದ ಚುನಾವಣಾ ಘೋಷಣೆಯಾದ ‘ಬಾಂಗ್ಲಾ ನಿಜರ್ ಮೆಯೆಕೆ ಚಾಯ್’ (ಬಂಗಾಳ ತನ್ನ ಸ್ವಂತ ಮಗಳನ್ನು ಬಯಸಿದೆ) ಅನುಸರಿಸಿ ಟಿಎಂಸಿ ಈ ಬಾರಿ 50 ಮಹಿಳಾ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ, ಇದು 2016 ರ ವಿಧಾನಸಭಾ ಚುನಾವಣೆಗಿಂತ ಐದು ಹೆಚ್ಚು. ಬಿಜೆಪಿಯನ್ನು ಎದುರಿಸಲು ಪಕ್ಷವು ಮಹಿಳಾ ಮತದಾರರನ್ನು ತಲುಪಲು ಪ್ರಯತ್ನಿಸುತ್ತಿದೆ ಎಂಬುದು ಈ ಕ್ರಮದಿಂದ ಸ್ಪಷ್ಟವಾಗಿದೆ. ಟಿಎಂಸಿ ಮಾಜಿ ಮುಖಂಡ ಬಿಜೆಪಿ ಸಂಸದ ಸೌಮಿತ್ರಾ ಖಾನ್ ಅವರ ಪತ್ನಿ ಸುಜಾತಾ ಖಾನ್ ಅವರಿಗೆ ಪಕ್ಷ ಟಿಕೆಟ್ ನೀಡಿದೆ. ಅದೇ ಸಮಯದಲ್ಲಿ, ಮಾಜಿ ರಾಜ್ಯ ಸಚಿವರಾದ ಬಿಜೆಪಿ ಮುಖಂಡ ಸೋವನ್ ಚಟರ್ಜಿಯವರ ಪತ್ನಿ ರತ್ನ ಚಟರ್ಜಿಗೆ ಸೋವನ್ ಅವರ ಕ್ಷೇತ್ರದ ಬೆಹಲಾ ಪುರ್ಬಾದಿಂದ ಸ್ಪರ್ಧಿಸಲು ಟಿಕೆಟ್ ನೀಡಲಾಗಿದೆ.

ಎಸ್‌ಸಿ / ಎಸ್‌ಟಿ ಸಮುದಾಯಗಳಿಗೆ ಒತ್ತು:

ಈ ಬಾರಿ ಟಿಎಂಸಿ ಅಭೂತಪೂರ್ವ 79 ಎಸ್‌ಸಿ ಅಭ್ಯರ್ಥಿಗಳು ಮತ್ತು 17 ಎಸ್‌ಟಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ, ಇದು 2016 ರ ಚುನಾವಣೆಯಲ್ಲಿ 68 ಎಸ್‌ಸಿ ಮತ್ತು 16 ಎಸ್‌ಟಿ ಅಭ್ಯರ್ಥಿಗಳನ್ನು ಗಮನಿಸಿದಾಗ ಇದು ಗಮನಾರ್ಹ ಏರಿಕೆ ಆಗಿದೆ. ಪಶ್ಚಿಮ ಬಂಗಾಳದಲ್ಲಿ ಎಸ್‌ಸಿಗೆ 68 ಕ್ಷೇತ್ರಗಳು ಮತ್ತು ಎಸ್‌ಟಿಗಳಿಗೆ 16 ಕ್ಷೇತ್ರಗಳನ್ನು ಕಾಯ್ದಿರಿಸಲಾಗಿದೆ. ಈ ಕ್ರಮವು ಬಾಂಗ್ಲಾದೇಶದಲ್ಲಿ ತನ್ನ ಮೂಲವನ್ನು ಗುರುತಿಸುವ ಮತ್ತು 2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ನಿಷ್ಠೆಯನ್ನು ಬದಲಾಯಿಸಿದ ನಿರಾಶ್ರಿತರ ಸಮುದಾಯವಾದ ಮಾಟುವಾಸ್ ಸೇರಿದಂತೆ ಎಸ್‌ಸಿ / ಎಸ್‌ಟಿ ಸಮುದಾಯಗಳನ್ನು ಆಕರ್ಷಿಸುವ ಗುರಿಯನ್ನು ಹೊಂದಿದೆ. ಈ ಸಮುದಾಯಗಳ ಸದಸ್ಯರಿಗೆ ಹೆಚ್ಚಿನ ಟಿಕೆಟ್ ನೀಡುವ ಮೂಲಕ, ಮಮತಾ ಬ್ಯಾನರ್ಜಿ ತಮ್ಮ ಪಕ್ಷವನ್ನು ಒಳಗೊಂಡಿದ್ದಾರೆ ಎಂಬ ಸಂದೇಶವನ್ನು ಆ ಸಮುದಾಯಗಳಿಗೆ ಕಳುಹಿಸಲು ಪ್ರಯತ್ನಿಸುತ್ತಿದ್ದಾರೆ.

ಮುಸ್ಲಿಂ ತುಚ್ಛಿಕರಣದ ಟ್ಯಾಗ್ ಕಳಚುವ ಯತ್ನ:

ಟಿಎಂಸಿ ಈ ಬಾರಿ ಕಡಿಮೆ ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. 2016 ರಲ್ಲಿ, ಪಕ್ಷವು 57 ಮುಸ್ಲಿಂ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿತ್ತು, ಆದರೆ ಈ ಬಾರಿ ಅದು 42 ಕ್ಕೆ ಇಳಿದಿದೆ. ಪಕ್ಷದ ಒಳಗಿನವರ ಪ್ರಕಾರ, ಇದು ಮುಸ್ಲಿಂ ತುಚ್ಛಿಕರಣದ ಟ್ಯಾಗ್ ಅನ್ನು ಕಳಚುವ ಪ್ರಯತ್ನವಾಗಿದೆ, ವಿರೋಧ ಪಕ್ಷಗಳು ಈ ಟ್ಯಾಗ್ ಬಳಸಿ ಅಪಾದನೆ ಮಾಡುತ್ತ ಬಂದಿದ್ದವು. ಮತ್ತೊಂದೆಡೆ, ಹೆಚ್ಚಿನ ಶೇಕಡಾವಾರು ಹಿಂದಿ ಮಾತನಾಡುವ ಮತದಾರರನ್ನು ಹೊಂದಿರುವ ಕ್ಷೇತ್ರಗಳಲ್ಲಿ ಪ್ರತಿಪಕ್ಷಗಳ ಪರವಾಗಿ ಹಿಂದೂ ಮತಗಳ ಧ್ರುವೀಕರಣವನ್ನು ನಿಲ್ಲಿಸಲು ಇದು ಸಹಾಯ ಮಾಡುತ್ತದೆ.

ಆಡಳಿತ ವಿರೋಧವನ್ನು ಎದುರಿಸುವುದು:

ಕುತೂಹಲಕಾರಿಯಾಗಿ, ಟಿಎಂಸಿಯು ಚುನಾವಣೆಯಲ್ಲಿ ಸ್ಪರ್ಧಿಸಲು 114 ಹೊಸ ಮುಖಗಳನ್ನು ಹೊಂದಿದೆ. ಇದಲ್ಲದೆ, 160 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಬದಲಾಯಿಸಲಾಗಿದೆ. ಇದು ಆಡಳಿತ ವಿರೋಧಿ ಅಲೆಯ ಭಯದಿಂದ ತೆಗೆದುಕೊಂಡ ಕ್ರಮವಾಗಿದ್ದು, ಮತದಾರರಿಗೆ ಉತ್ತಮ ಅಭ್ಯರ್ಥಿಗಳನ್ನು ನೀಡಲು ಕಾರಣವಾಗಿದೆ. 2006 ರಲ್ಲಿ, ಹಿಂದಿನ ಎಡಪಂಥೀಯ ಸರ್ಕಾರವು ತನ್ನ ಅಭ್ಯರ್ಥಿಗಳನ್ನು 150 ಸ್ಥಾನಗಳಲ್ಲಿ ಬದಲಾಯಿಸಿತ್ತು, ಇದು ರಾಜ್ಯದ 230 ಸ್ಥಾನಗಳನ್ನು ಗೆಲ್ಲಲು ಎಡಪಂಥಿಯ ಕೂಟಕ್ಕೆ ಸಹಾಯ ಮಾಡಿತ್ತು. ಈಗ ಟಿಎಂಸಿ ಹಳೆಯ ಮತ್ತು ಹೊಸ ನಾಯಕರ ನಡುವೆ ಸಮತೋಲನ ಹೊಂದಲು ಯುವ ಮುಖಗಳನ್ನು ಪಕ್ಷಕ್ಕೆ ತರಲು ಒತ್ತು ನೀಡಿದೆ..

ಸೆಲೆಬ್ರಿಟಿಗಳನ್ನು ಅವಲಂಬಿಸಿ:

2011 ರಲ್ಲಿ ಅಧಿಕಾರಕ್ಕೆ ಬಂದಾಗಿನಿಂದ ಮಮತಾ ಬ್ಯಾನರ್ಜಿ ಯಾವಾಗಲೂ ಬಂಗಾಳಿ ಚಲನಚಿತ್ರೋದ್ಯಮದ ಸದಸ್ಯರಿಗೆ ಟಿಕೆಟ್ ನೀಡಿದ್ದಾರೆ. ಹಿಂದಿನ ಹೆಚ್ಚಿನ ಸಂದರ್ಭಗಳಲ್ಲಿ, ಟಿಎಂಸಿಗೆ ಹೆಚ್ಚಿನ ಸಂಖ್ಯೆಯ ಸ್ಥಾನಗಳನ್ನು ಗೆಲ್ಲಲು ಸ್ಟಾರ್‌ಗಳು ಸಹಾಯ ಮಾಡಿದ್ದಾರೆ. ನಟರಾದ ದೇವ್, ಮೂನ್ ಮೂನ್ ಸೇನ್, ದಿವಂಗತ ನಟ ತಪಸ್ ಪಾಲ್, ಶತಾಬ್ದಿ ರಾಯ್, ಮಿಮಿ ಚಕ್ರವರ್ತಿ, ನುಸ್ರತ್ ಜಹಾನ್, ದೇಬಶ್ರೀ ರಾಯ್ ಮತ್ತು ಇತರರು ಟಿಎಂಸಿ ಟಿಕೆಟ್‌ನಲ್ಲಿ ಚುನಾವಣೆಯಲ್ಲಿ ಜಯ ಗಳಿಸಿದ್ದರು. ಈ ಬಾರಿ ಕೂಡ ಪಕ್ಷವು ನಟರಾದ ಸೋಹಮ್ ಚಕ್ರವರ್ತಿ, ಸಯಾಂತಿಕಾ ಬ್ಯಾನರ್ಜಿ, ಸಯಾನಿ ಘೋಷ್, ಜೂನ್ ಮಾಲಿಯಾ, ಕೌಶಾನಿ ಬ್ಯಾನರ್ಜಿ, ಕಾಂಚನ್ ಮಲ್ಲಿಕ್, ನಿರ್ದೇಶಕ ರಾಜ್ ಚಕ್ರವರ್ತಿ ಮತ್ತು ಗಾಯಕಿ ಅದಿತಿ ಮುನ್ಶಿ ಅವರನ್ನು ಇದೇ ರೀತಿಯ ಫಲಿತಾಂಶವನ್ನು ನೀಡಲು ಕಣಕ್ಕಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...