HomeಮುಖಪುಟTMC ದೂರು: ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ತೆಗೆಯಲು ಚುನಾವಣಾ ಆಯೋಗದ ನಿರ್ದೇಶನ

TMC ದೂರು: ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ತೆಗೆಯಲು ಚುನಾವಣಾ ಆಯೋಗದ ನಿರ್ದೇಶನ

ಚುನಾವಣೆಯ ಸಮಯದಲ್ಲಿ "ತೆರಿಗೆದಾರರ ವೆಚ್ಚದಲ್ಲಿ ಅನ್ಯಾಯದ ಲಾಭ ಮತ್ತು ಅನಗತ್ಯ ಪ್ರಚಾರವನ್ನು ತೆಗೆದುಕೊಳ್ಳದಂತೆ ಪ್ರಧಾನಿಯನ್ನು ತಡೆಯಬೇಕು" - ಟಿಎಂಸಿ

- Advertisement -
- Advertisement -

ಮಾದರಿ ನೀತಿ ಸಂಹಿತೆ ಈಗಾಗಲೇ ಜಾರಿಯಲ್ಲಿರುವ ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ಕೊರೋನ ವೈರಸ್ ಲಸಿಕೆ ಪ್ರಮಾಣಪತ್ರಗಳಿಂದ ಪ್ರಧಾನಿ ನರೇಂದ್ರ ಮೋದಿಯವರ ಫೋಟೋವನ್ನು ತೆಗೆದುಹಾಕುವಂತೆ ಚುನಾವಣಾ ಆಯೋಗವು ಸರ್ಕಾರಕ್ಕೆ ನಿರ್ದೇಶಿಸಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಈ ವಾರದ ಆರಂಭದಲ್ಲಿ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ತೃಣಮೂಲ ಕಾಂಗ್ರೆಸ್ ಪಕ್ಷವು ಚುನಾವಣಾ ಆಯೋಗಕ್ಕೆ ನೀಡಿದ ದೂರಿನಲ್ಲಿ ರಾಜ್ಯದಲ್ಲಿ “ಪ್ರಧಾನ ಮಂತ್ರಿ ಆಡಳಿತ ಯಂತ್ರದ ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ” ಎಂದು ಆರೋಪಿಸಿತ್ತು.

ಈ ವಿಷಯದಲ್ಲಿ ಪಶ್ಚಿಮ ಬಂಗಾಳ ಚುನಾವಣಾ ಅಧಿಕಾರಿಯಿಂದ ಮೊದಲು ಚುನಾವಣಾ ಆಯೋಗ ವರದಿಯನ್ನು ಪಡೆಯಿತು. ನಂತರ ಕೇಂದ್ರ ಆರೋಗ್ಯ ಸಚಿವಾಲಯಕ್ಕೆ ಫೋಟೋಗಳನ್ನು ತೆಗೆಯುವಂತೆ ಕೇಳಿದೆ ಎಂದು ಮೂಲಗಳು ತಿಳಿಸಿವೆ. ಮತದಾನದ ವ್ಯಾಪ್ತಿಯ ರಾಜ್ಯಗಳಲ್ಲಿ ಲಸಿಕೆ ಪ್ರಮಾಣಪತ್ರಗಳಲ್ಲಿ ಪಿಎಂ ಮೋದಿಯವರ ಫೋಟೋ ಕಾಣಿಸದಂತೆ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಲು ಸರ್ಕಾರಕ್ಕೆ ತಿಳಿಸಲಾಗಿದೆ.

ಮತದಾನ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ, ಬಂಗಾಳದ ಆಡಳಿತ ಪಕ್ಷವು ಕೇಂದ್ರ ಆರೋಗ್ಯ ಸಚಿವಾಲಯ ವಿತರಿಸಿದ ವ್ಯಾಕ್ಸಿನೇಷನ್ ಪ್ರಮಾಣಪತ್ರಗಳಲ್ಲಿನ ಪ್ರಧಾನಿ ನರೇಂದ್ರ ಮೋದಿಯವರ ಫೋಟೋಗಳನ್ನು ಉಲ್ಲೇಖಿಸಿದೆ. ವೈದ್ಯರು, ದಾದಿಯರು ಮತ್ತು ಆರೋಗ್ಯ ಕಾರ್ಯಕರ್ತರ ಶ್ರಮ-ಸಾಧನೆಯನ್ನು ಪ್ರಧಾನಿ ತಮ್ಮ ಹೆಸರಿಗೆ ವರ್ಗಾಯಿಸಿ ಕೊಳ್ಳುತ್ತಿದ್ದಾರೆ. ಅವರಿಗೆ ಸಿಗಬೇಕಾದ ಗೌರವವನ್ನು ಪ್ರಧಾನಿ ಕದಿಯುತ್ತಿದ್ದಾರೆ ಎಂದು ಟಿಎಂಸಿ ಆರೋಪಿಸಿದೆ.

“ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ನೀಡಿದ ತಾತ್ಕಾಲಿಕ ಪ್ರಮಾಣಪತ್ರಗಳಲ್ಲಿ ಪಿಎಂ ಛಾಯಾಚಿತ್ರ, ಹೆಸರು ಮತ್ತು ಸಂದೇಶವನ್ನು ಇರಿಸುವ ಮೂಲಕ, ಅವರು ತಮ್ಮ ಹುದ್ದೆ ಮತ್ತು ಅಧಿಕಾರವನ್ನು ದುರುಪಯೋಗ ಮಾಡಿಕೊಂಡಿದ್ದಲ್ಲದೇ, ಕೋವಿಡ್ ಲಸಿಕೆಗಳ ಉತ್ಪಾದಕರ ಶ್ಲಾಘನೀಯ ಕಾರ್ಯಕ್ಕೆ ಸಿಗಬೇಕಾದ ಮನ್ನಣೆಯನ್ನು ಪ್ರಧಾನಿ ಪಡೆದುಕೊಳ್ಳುತ್ತಿದ್ದಾರೆ. ನಿಸ್ವಾರ್ಥ ವೈದ್ಯರು, ದಾದಿಯರು ಮತ್ತು ಆರೋಗ್ಯ ಸೇವಾ ಕಾರ್ಯಕರ್ತರ ವಿಶಾಲ ಸೈನ್ಯದ ಗೌರವ-ಸಾಧನೆಯನ್ನು ಪ್ರಧಾನಿ ತಮ್ಮ ಹೆಸರಿಗೆ ವರ್ಗಾಯಿಸಿಕೊಂಡಿದ್ದಾರೆ” ಎಂದು ತೃಣಮೂಲ ಕಾಂಗ್ರೆಸ್ ನಾಯಕ ಡೆರೆಕ್ ಒ’ಬ್ರಿಯೆನ್ ಚುನಾವಣಾ ಸಂಸ್ಥೆಗೆ ಬರೆದ ಪತ್ರದಲ್ಲಿ ವಿವರಿಸಿದ್ದಾರೆ.

ಚುನಾವಣಾ ಆಯೋಗವು ಪ್ರಧಾನ ಮಂತ್ರಿಯನ್ನು ತಡೆಯಬೇಕು. ಚುನಾವಣೆಯ ಸಮಯದಲ್ಲಿ “ತೆರಿಗೆದಾರರ ವೆಚ್ಚದಲ್ಲಿ ಅನ್ಯಾಯದ ಲಾಭ ಮತ್ತು ಅನಗತ್ಯ ಪ್ರಚಾರವನ್ನು ತೆಗೆದುಕೊಳ್ಳದಂತೆ ಪ್ರಧಾನಿಯನ್ನು ತಡೆಯಬೇಕು” ಎಂದು ಟಿಎಂಸಿ ಸಂಸದ ಒತ್ತಾಯಿಸಿದ್ದರು.

ಆದರೂ ಪ್ರಮಾಣಪತ್ರಗಳು ಇತರ ರಾಜ್ಯಗಳಲ್ಲಿ ಪ್ರಧಾನ ಮಂತ್ರಿಯ ಫೋಟೋಗಳನ್ನು ಹೊಂದಿರಬಹುದು.. 60 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಎರಡನೇ ಹಂತದ ವ್ಯಾಕ್ಸಿನೇಷನ್ ಸೋಮವಾರ ಪ್ರಾರಂಭವಾಯಿತು; ಗಂಭೀರ ಕಾಯಿಲೆಗಳಿಂದ 45 ವರ್ಷಕ್ಕಿಂತ ಮೇಲ್ಪಟ್ಟ ಜನರು ಕೋವಿಡ್ ಶಾಟ್‌ಗಳನ್ನು ತೆಗೆದುಕೊಳ್ಳಲು ನೋಂದಾಯಿಸಿಕೊಳ್ಳಬಹುದು.

ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ಮತ್ತು ಪುದುಚೇರಿ ಮುಂದಿನ ಕೆಲವು ವಾರಗಳಲ್ಲಿ ಚುನಾವಣೆ ಎದುರಿಸಲಿವೆ. ಈ ರಾಜ್ಯಗಳ ಚುನಾವಣೆ ಮಾರ್ಚ್ 27 ರಿಂದ ಪ್ರಾರಂಭವಾಗಲಿದೆ. ಬಂಗಾಳ ಎಂಟು ಹಂತಗಳಲ್ಲಿ ಮತ ಚಲಾಯಿಸಲಿದೆ. ಏಪ್ರಿಲ್ 6 ರಂದು ತಮಿಳುನಾಡು ಮತ್ತು ಕೇರಳ ಒಂದೇ ಸುತ್ತಿನಲ್ಲಿ ಮತ ಚಲಾಯಿಸಲಿವೆ. ಪುದುಚೇರಿಯೂ ಒಂದೇ ದಿನ ಮತ ಚಲಾಯಿಸಲಿದೆ. ಅಸ್ಸಾಂ ಮಾರ್ಚ್ 27, ಏಪ್ರಿಲ್ 1 ಮತ್ತು ಏಪ್ರಿಲ್ 6 ರಂದು ಮತ ಚಲಾಯಿಸಲಿದೆ.


ಇದನ್ನೂ ಓದಿ: ರೈತ ಹೋರಾಟ: ಬಿಜೆಪಿಗೆ ಮತ ನೀಡದಂತೆ ಪಶ್ಚಿಮ ಬಂಗಾಳದಲ್ಲಿ ಪ್ರಚಾರ ಮಾಡಲಿರುವ ಟಿಕಾಯತ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...