HomeಮುಖಪುಟTMC ದೂರು: ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ತೆಗೆಯಲು ಚುನಾವಣಾ ಆಯೋಗದ ನಿರ್ದೇಶನ

TMC ದೂರು: ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ತೆಗೆಯಲು ಚುನಾವಣಾ ಆಯೋಗದ ನಿರ್ದೇಶನ

ಚುನಾವಣೆಯ ಸಮಯದಲ್ಲಿ "ತೆರಿಗೆದಾರರ ವೆಚ್ಚದಲ್ಲಿ ಅನ್ಯಾಯದ ಲಾಭ ಮತ್ತು ಅನಗತ್ಯ ಪ್ರಚಾರವನ್ನು ತೆಗೆದುಕೊಳ್ಳದಂತೆ ಪ್ರಧಾನಿಯನ್ನು ತಡೆಯಬೇಕು" - ಟಿಎಂಸಿ

- Advertisement -
- Advertisement -

ಮಾದರಿ ನೀತಿ ಸಂಹಿತೆ ಈಗಾಗಲೇ ಜಾರಿಯಲ್ಲಿರುವ ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ಕೊರೋನ ವೈರಸ್ ಲಸಿಕೆ ಪ್ರಮಾಣಪತ್ರಗಳಿಂದ ಪ್ರಧಾನಿ ನರೇಂದ್ರ ಮೋದಿಯವರ ಫೋಟೋವನ್ನು ತೆಗೆದುಹಾಕುವಂತೆ ಚುನಾವಣಾ ಆಯೋಗವು ಸರ್ಕಾರಕ್ಕೆ ನಿರ್ದೇಶಿಸಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಈ ವಾರದ ಆರಂಭದಲ್ಲಿ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ತೃಣಮೂಲ ಕಾಂಗ್ರೆಸ್ ಪಕ್ಷವು ಚುನಾವಣಾ ಆಯೋಗಕ್ಕೆ ನೀಡಿದ ದೂರಿನಲ್ಲಿ ರಾಜ್ಯದಲ್ಲಿ “ಪ್ರಧಾನ ಮಂತ್ರಿ ಆಡಳಿತ ಯಂತ್ರದ ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ” ಎಂದು ಆರೋಪಿಸಿತ್ತು.

ಈ ವಿಷಯದಲ್ಲಿ ಪಶ್ಚಿಮ ಬಂಗಾಳ ಚುನಾವಣಾ ಅಧಿಕಾರಿಯಿಂದ ಮೊದಲು ಚುನಾವಣಾ ಆಯೋಗ ವರದಿಯನ್ನು ಪಡೆಯಿತು. ನಂತರ ಕೇಂದ್ರ ಆರೋಗ್ಯ ಸಚಿವಾಲಯಕ್ಕೆ ಫೋಟೋಗಳನ್ನು ತೆಗೆಯುವಂತೆ ಕೇಳಿದೆ ಎಂದು ಮೂಲಗಳು ತಿಳಿಸಿವೆ. ಮತದಾನದ ವ್ಯಾಪ್ತಿಯ ರಾಜ್ಯಗಳಲ್ಲಿ ಲಸಿಕೆ ಪ್ರಮಾಣಪತ್ರಗಳಲ್ಲಿ ಪಿಎಂ ಮೋದಿಯವರ ಫೋಟೋ ಕಾಣಿಸದಂತೆ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಲು ಸರ್ಕಾರಕ್ಕೆ ತಿಳಿಸಲಾಗಿದೆ.

ಮತದಾನ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ, ಬಂಗಾಳದ ಆಡಳಿತ ಪಕ್ಷವು ಕೇಂದ್ರ ಆರೋಗ್ಯ ಸಚಿವಾಲಯ ವಿತರಿಸಿದ ವ್ಯಾಕ್ಸಿನೇಷನ್ ಪ್ರಮಾಣಪತ್ರಗಳಲ್ಲಿನ ಪ್ರಧಾನಿ ನರೇಂದ್ರ ಮೋದಿಯವರ ಫೋಟೋಗಳನ್ನು ಉಲ್ಲೇಖಿಸಿದೆ. ವೈದ್ಯರು, ದಾದಿಯರು ಮತ್ತು ಆರೋಗ್ಯ ಕಾರ್ಯಕರ್ತರ ಶ್ರಮ-ಸಾಧನೆಯನ್ನು ಪ್ರಧಾನಿ ತಮ್ಮ ಹೆಸರಿಗೆ ವರ್ಗಾಯಿಸಿ ಕೊಳ್ಳುತ್ತಿದ್ದಾರೆ. ಅವರಿಗೆ ಸಿಗಬೇಕಾದ ಗೌರವವನ್ನು ಪ್ರಧಾನಿ ಕದಿಯುತ್ತಿದ್ದಾರೆ ಎಂದು ಟಿಎಂಸಿ ಆರೋಪಿಸಿದೆ.

“ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ನೀಡಿದ ತಾತ್ಕಾಲಿಕ ಪ್ರಮಾಣಪತ್ರಗಳಲ್ಲಿ ಪಿಎಂ ಛಾಯಾಚಿತ್ರ, ಹೆಸರು ಮತ್ತು ಸಂದೇಶವನ್ನು ಇರಿಸುವ ಮೂಲಕ, ಅವರು ತಮ್ಮ ಹುದ್ದೆ ಮತ್ತು ಅಧಿಕಾರವನ್ನು ದುರುಪಯೋಗ ಮಾಡಿಕೊಂಡಿದ್ದಲ್ಲದೇ, ಕೋವಿಡ್ ಲಸಿಕೆಗಳ ಉತ್ಪಾದಕರ ಶ್ಲಾಘನೀಯ ಕಾರ್ಯಕ್ಕೆ ಸಿಗಬೇಕಾದ ಮನ್ನಣೆಯನ್ನು ಪ್ರಧಾನಿ ಪಡೆದುಕೊಳ್ಳುತ್ತಿದ್ದಾರೆ. ನಿಸ್ವಾರ್ಥ ವೈದ್ಯರು, ದಾದಿಯರು ಮತ್ತು ಆರೋಗ್ಯ ಸೇವಾ ಕಾರ್ಯಕರ್ತರ ವಿಶಾಲ ಸೈನ್ಯದ ಗೌರವ-ಸಾಧನೆಯನ್ನು ಪ್ರಧಾನಿ ತಮ್ಮ ಹೆಸರಿಗೆ ವರ್ಗಾಯಿಸಿಕೊಂಡಿದ್ದಾರೆ” ಎಂದು ತೃಣಮೂಲ ಕಾಂಗ್ರೆಸ್ ನಾಯಕ ಡೆರೆಕ್ ಒ’ಬ್ರಿಯೆನ್ ಚುನಾವಣಾ ಸಂಸ್ಥೆಗೆ ಬರೆದ ಪತ್ರದಲ್ಲಿ ವಿವರಿಸಿದ್ದಾರೆ.

ಚುನಾವಣಾ ಆಯೋಗವು ಪ್ರಧಾನ ಮಂತ್ರಿಯನ್ನು ತಡೆಯಬೇಕು. ಚುನಾವಣೆಯ ಸಮಯದಲ್ಲಿ “ತೆರಿಗೆದಾರರ ವೆಚ್ಚದಲ್ಲಿ ಅನ್ಯಾಯದ ಲಾಭ ಮತ್ತು ಅನಗತ್ಯ ಪ್ರಚಾರವನ್ನು ತೆಗೆದುಕೊಳ್ಳದಂತೆ ಪ್ರಧಾನಿಯನ್ನು ತಡೆಯಬೇಕು” ಎಂದು ಟಿಎಂಸಿ ಸಂಸದ ಒತ್ತಾಯಿಸಿದ್ದರು.

ಆದರೂ ಪ್ರಮಾಣಪತ್ರಗಳು ಇತರ ರಾಜ್ಯಗಳಲ್ಲಿ ಪ್ರಧಾನ ಮಂತ್ರಿಯ ಫೋಟೋಗಳನ್ನು ಹೊಂದಿರಬಹುದು.. 60 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಎರಡನೇ ಹಂತದ ವ್ಯಾಕ್ಸಿನೇಷನ್ ಸೋಮವಾರ ಪ್ರಾರಂಭವಾಯಿತು; ಗಂಭೀರ ಕಾಯಿಲೆಗಳಿಂದ 45 ವರ್ಷಕ್ಕಿಂತ ಮೇಲ್ಪಟ್ಟ ಜನರು ಕೋವಿಡ್ ಶಾಟ್‌ಗಳನ್ನು ತೆಗೆದುಕೊಳ್ಳಲು ನೋಂದಾಯಿಸಿಕೊಳ್ಳಬಹುದು.

ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ಮತ್ತು ಪುದುಚೇರಿ ಮುಂದಿನ ಕೆಲವು ವಾರಗಳಲ್ಲಿ ಚುನಾವಣೆ ಎದುರಿಸಲಿವೆ. ಈ ರಾಜ್ಯಗಳ ಚುನಾವಣೆ ಮಾರ್ಚ್ 27 ರಿಂದ ಪ್ರಾರಂಭವಾಗಲಿದೆ. ಬಂಗಾಳ ಎಂಟು ಹಂತಗಳಲ್ಲಿ ಮತ ಚಲಾಯಿಸಲಿದೆ. ಏಪ್ರಿಲ್ 6 ರಂದು ತಮಿಳುನಾಡು ಮತ್ತು ಕೇರಳ ಒಂದೇ ಸುತ್ತಿನಲ್ಲಿ ಮತ ಚಲಾಯಿಸಲಿವೆ. ಪುದುಚೇರಿಯೂ ಒಂದೇ ದಿನ ಮತ ಚಲಾಯಿಸಲಿದೆ. ಅಸ್ಸಾಂ ಮಾರ್ಚ್ 27, ಏಪ್ರಿಲ್ 1 ಮತ್ತು ಏಪ್ರಿಲ್ 6 ರಂದು ಮತ ಚಲಾಯಿಸಲಿದೆ.


ಇದನ್ನೂ ಓದಿ: ರೈತ ಹೋರಾಟ: ಬಿಜೆಪಿಗೆ ಮತ ನೀಡದಂತೆ ಪಶ್ಚಿಮ ಬಂಗಾಳದಲ್ಲಿ ಪ್ರಚಾರ ಮಾಡಲಿರುವ ಟಿಕಾಯತ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...