HomeಮುಖಪುಟTMC ದೂರು: ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ತೆಗೆಯಲು ಚುನಾವಣಾ ಆಯೋಗದ ನಿರ್ದೇಶನ

TMC ದೂರು: ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ತೆಗೆಯಲು ಚುನಾವಣಾ ಆಯೋಗದ ನಿರ್ದೇಶನ

ಚುನಾವಣೆಯ ಸಮಯದಲ್ಲಿ "ತೆರಿಗೆದಾರರ ವೆಚ್ಚದಲ್ಲಿ ಅನ್ಯಾಯದ ಲಾಭ ಮತ್ತು ಅನಗತ್ಯ ಪ್ರಚಾರವನ್ನು ತೆಗೆದುಕೊಳ್ಳದಂತೆ ಪ್ರಧಾನಿಯನ್ನು ತಡೆಯಬೇಕು" - ಟಿಎಂಸಿ

- Advertisement -
- Advertisement -

ಮಾದರಿ ನೀತಿ ಸಂಹಿತೆ ಈಗಾಗಲೇ ಜಾರಿಯಲ್ಲಿರುವ ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ಕೊರೋನ ವೈರಸ್ ಲಸಿಕೆ ಪ್ರಮಾಣಪತ್ರಗಳಿಂದ ಪ್ರಧಾನಿ ನರೇಂದ್ರ ಮೋದಿಯವರ ಫೋಟೋವನ್ನು ತೆಗೆದುಹಾಕುವಂತೆ ಚುನಾವಣಾ ಆಯೋಗವು ಸರ್ಕಾರಕ್ಕೆ ನಿರ್ದೇಶಿಸಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಈ ವಾರದ ಆರಂಭದಲ್ಲಿ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ತೃಣಮೂಲ ಕಾಂಗ್ರೆಸ್ ಪಕ್ಷವು ಚುನಾವಣಾ ಆಯೋಗಕ್ಕೆ ನೀಡಿದ ದೂರಿನಲ್ಲಿ ರಾಜ್ಯದಲ್ಲಿ “ಪ್ರಧಾನ ಮಂತ್ರಿ ಆಡಳಿತ ಯಂತ್ರದ ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ” ಎಂದು ಆರೋಪಿಸಿತ್ತು.

ಈ ವಿಷಯದಲ್ಲಿ ಪಶ್ಚಿಮ ಬಂಗಾಳ ಚುನಾವಣಾ ಅಧಿಕಾರಿಯಿಂದ ಮೊದಲು ಚುನಾವಣಾ ಆಯೋಗ ವರದಿಯನ್ನು ಪಡೆಯಿತು. ನಂತರ ಕೇಂದ್ರ ಆರೋಗ್ಯ ಸಚಿವಾಲಯಕ್ಕೆ ಫೋಟೋಗಳನ್ನು ತೆಗೆಯುವಂತೆ ಕೇಳಿದೆ ಎಂದು ಮೂಲಗಳು ತಿಳಿಸಿವೆ. ಮತದಾನದ ವ್ಯಾಪ್ತಿಯ ರಾಜ್ಯಗಳಲ್ಲಿ ಲಸಿಕೆ ಪ್ರಮಾಣಪತ್ರಗಳಲ್ಲಿ ಪಿಎಂ ಮೋದಿಯವರ ಫೋಟೋ ಕಾಣಿಸದಂತೆ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಲು ಸರ್ಕಾರಕ್ಕೆ ತಿಳಿಸಲಾಗಿದೆ.

ಮತದಾನ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ, ಬಂಗಾಳದ ಆಡಳಿತ ಪಕ್ಷವು ಕೇಂದ್ರ ಆರೋಗ್ಯ ಸಚಿವಾಲಯ ವಿತರಿಸಿದ ವ್ಯಾಕ್ಸಿನೇಷನ್ ಪ್ರಮಾಣಪತ್ರಗಳಲ್ಲಿನ ಪ್ರಧಾನಿ ನರೇಂದ್ರ ಮೋದಿಯವರ ಫೋಟೋಗಳನ್ನು ಉಲ್ಲೇಖಿಸಿದೆ. ವೈದ್ಯರು, ದಾದಿಯರು ಮತ್ತು ಆರೋಗ್ಯ ಕಾರ್ಯಕರ್ತರ ಶ್ರಮ-ಸಾಧನೆಯನ್ನು ಪ್ರಧಾನಿ ತಮ್ಮ ಹೆಸರಿಗೆ ವರ್ಗಾಯಿಸಿ ಕೊಳ್ಳುತ್ತಿದ್ದಾರೆ. ಅವರಿಗೆ ಸಿಗಬೇಕಾದ ಗೌರವವನ್ನು ಪ್ರಧಾನಿ ಕದಿಯುತ್ತಿದ್ದಾರೆ ಎಂದು ಟಿಎಂಸಿ ಆರೋಪಿಸಿದೆ.

“ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ನೀಡಿದ ತಾತ್ಕಾಲಿಕ ಪ್ರಮಾಣಪತ್ರಗಳಲ್ಲಿ ಪಿಎಂ ಛಾಯಾಚಿತ್ರ, ಹೆಸರು ಮತ್ತು ಸಂದೇಶವನ್ನು ಇರಿಸುವ ಮೂಲಕ, ಅವರು ತಮ್ಮ ಹುದ್ದೆ ಮತ್ತು ಅಧಿಕಾರವನ್ನು ದುರುಪಯೋಗ ಮಾಡಿಕೊಂಡಿದ್ದಲ್ಲದೇ, ಕೋವಿಡ್ ಲಸಿಕೆಗಳ ಉತ್ಪಾದಕರ ಶ್ಲಾಘನೀಯ ಕಾರ್ಯಕ್ಕೆ ಸಿಗಬೇಕಾದ ಮನ್ನಣೆಯನ್ನು ಪ್ರಧಾನಿ ಪಡೆದುಕೊಳ್ಳುತ್ತಿದ್ದಾರೆ. ನಿಸ್ವಾರ್ಥ ವೈದ್ಯರು, ದಾದಿಯರು ಮತ್ತು ಆರೋಗ್ಯ ಸೇವಾ ಕಾರ್ಯಕರ್ತರ ವಿಶಾಲ ಸೈನ್ಯದ ಗೌರವ-ಸಾಧನೆಯನ್ನು ಪ್ರಧಾನಿ ತಮ್ಮ ಹೆಸರಿಗೆ ವರ್ಗಾಯಿಸಿಕೊಂಡಿದ್ದಾರೆ” ಎಂದು ತೃಣಮೂಲ ಕಾಂಗ್ರೆಸ್ ನಾಯಕ ಡೆರೆಕ್ ಒ’ಬ್ರಿಯೆನ್ ಚುನಾವಣಾ ಸಂಸ್ಥೆಗೆ ಬರೆದ ಪತ್ರದಲ್ಲಿ ವಿವರಿಸಿದ್ದಾರೆ.

ಚುನಾವಣಾ ಆಯೋಗವು ಪ್ರಧಾನ ಮಂತ್ರಿಯನ್ನು ತಡೆಯಬೇಕು. ಚುನಾವಣೆಯ ಸಮಯದಲ್ಲಿ “ತೆರಿಗೆದಾರರ ವೆಚ್ಚದಲ್ಲಿ ಅನ್ಯಾಯದ ಲಾಭ ಮತ್ತು ಅನಗತ್ಯ ಪ್ರಚಾರವನ್ನು ತೆಗೆದುಕೊಳ್ಳದಂತೆ ಪ್ರಧಾನಿಯನ್ನು ತಡೆಯಬೇಕು” ಎಂದು ಟಿಎಂಸಿ ಸಂಸದ ಒತ್ತಾಯಿಸಿದ್ದರು.

ಆದರೂ ಪ್ರಮಾಣಪತ್ರಗಳು ಇತರ ರಾಜ್ಯಗಳಲ್ಲಿ ಪ್ರಧಾನ ಮಂತ್ರಿಯ ಫೋಟೋಗಳನ್ನು ಹೊಂದಿರಬಹುದು.. 60 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಎರಡನೇ ಹಂತದ ವ್ಯಾಕ್ಸಿನೇಷನ್ ಸೋಮವಾರ ಪ್ರಾರಂಭವಾಯಿತು; ಗಂಭೀರ ಕಾಯಿಲೆಗಳಿಂದ 45 ವರ್ಷಕ್ಕಿಂತ ಮೇಲ್ಪಟ್ಟ ಜನರು ಕೋವಿಡ್ ಶಾಟ್‌ಗಳನ್ನು ತೆಗೆದುಕೊಳ್ಳಲು ನೋಂದಾಯಿಸಿಕೊಳ್ಳಬಹುದು.

ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ಮತ್ತು ಪುದುಚೇರಿ ಮುಂದಿನ ಕೆಲವು ವಾರಗಳಲ್ಲಿ ಚುನಾವಣೆ ಎದುರಿಸಲಿವೆ. ಈ ರಾಜ್ಯಗಳ ಚುನಾವಣೆ ಮಾರ್ಚ್ 27 ರಿಂದ ಪ್ರಾರಂಭವಾಗಲಿದೆ. ಬಂಗಾಳ ಎಂಟು ಹಂತಗಳಲ್ಲಿ ಮತ ಚಲಾಯಿಸಲಿದೆ. ಏಪ್ರಿಲ್ 6 ರಂದು ತಮಿಳುನಾಡು ಮತ್ತು ಕೇರಳ ಒಂದೇ ಸುತ್ತಿನಲ್ಲಿ ಮತ ಚಲಾಯಿಸಲಿವೆ. ಪುದುಚೇರಿಯೂ ಒಂದೇ ದಿನ ಮತ ಚಲಾಯಿಸಲಿದೆ. ಅಸ್ಸಾಂ ಮಾರ್ಚ್ 27, ಏಪ್ರಿಲ್ 1 ಮತ್ತು ಏಪ್ರಿಲ್ 6 ರಂದು ಮತ ಚಲಾಯಿಸಲಿದೆ.


ಇದನ್ನೂ ಓದಿ: ರೈತ ಹೋರಾಟ: ಬಿಜೆಪಿಗೆ ಮತ ನೀಡದಂತೆ ಪಶ್ಚಿಮ ಬಂಗಾಳದಲ್ಲಿ ಪ್ರಚಾರ ಮಾಡಲಿರುವ ಟಿಕಾಯತ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...