Homeಮುಖಪುಟಅನರ್ಹಗೊಳಿಸಲು ಟಿಎಂಸಿ ಒತ್ತಾಯ: ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ ಸ್ವಪನ್ ದಾಸ್​ಗುಪ್ತಾ

ಅನರ್ಹಗೊಳಿಸಲು ಟಿಎಂಸಿ ಒತ್ತಾಯ: ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ ಸ್ವಪನ್ ದಾಸ್​ಗುಪ್ತಾ

- Advertisement -
- Advertisement -

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ದಿನೇ ದಿನೇ ಕಾವೇರುತ್ತಿದೆ. ಅಂಕಣಕಾರ ಸ್ವಪನ್ ದಾಸ್​ಗುಪ್ತಾ ಬಿಜೆಪಿಯಿಂದ ತಾರಕೇಶ್ವರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ಹಿನ್ನೆಲೆಯಲ್ಲಿ ಸಂವಿಧಾನದ ನಿಯಮಗಳನ್ನು ಉಲ್ಲೇಖಿಸಿ ಅವರನ್ನು ರಾಜ್ಯಸಭಾ ಸ್ಥಾನದಿಂದ ಅನರ್ಹಗೊಳಿಸುವಂತೆ ಟಿಎಂಸಿ ಆಗ್ರಹಿಸಿದ ಕೆಲವೇ ಗಂಟೆಗಳಲ್ಲಿ ದಾಸ್‌ಗುಪ್ತಾರವರು ತಮ್ಮ ರಾಜ್ಯಸಭಾ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದಾರೆ.

ರಾಜ್ಯಸಭೆಗೆ ನಾಮ ನಿರ್ದೇಶನಗೊಂಡಿರುವ ವ್ಯಕ್ತಿ ಯಾವುದೇ ರಾಜಕೀಯ ಪಕ್ಷಕ್ಕೆ ಸೇರ್ಪಡೆಯಾಗುವಂತಿಲ್ಲ. ಆದರೆ ಸ್ವಪನ್ ದಾಸ್‌ಗುಪ್ತಾರವರು ಬಿಜೆಪಿಯಿಂದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವುದರಿಂದ ಅವರನ್ನು ರಾಜ್ಯಸಭಾ ಸ್ಥಾನದಿಂದ ಅನರ್ಹಗೊಳಿಸುವಂತೆ ಟಿಎಂಸಿ ಪಕ್ಷ ಒತ್ತಾಯಿಸಿತ್ತು. ಈ ಕುರಿತು ಟಿಎಂಸಿ ಸಂಸದೆ ಮೊಹುವ ಮೊಯಿತ್ರ ಟ್ವೀಟ್ ಮಾಡಿದ್ದರು. ಇದೇ ಸಂದರ್ಭದಲ್ಲಿ ಸ್ವಪನ್ ದಾಸ್​ಗುಪ್ತಾ, “ಉತ್ತಮ ಬಂಗಾಳದ ಹೋರಾಟಕ್ಕೆ ಸಂಪೂರ್ಣವಾಗಿ ಬದ್ಧರಾಗುವ ನಿಟ್ಟಿನಲ್ಲಿ ನಾನು ಇಂದು ರಾಜ್ಯಸಭೆ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಮುಂದಿನ ದಿನಗಳಲ್ಲಿ ತಾರಕೇಶ್ವರ ವಿಧಾನಸಭಾ ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವ ಭರವಸೆ ಇದೆ. ಅಷ್ಟರೊಳಗೆ ಎಲ್ಲಾ ಕಾನೂನು ತೊಡಕುಗಳನ್ನು ಮುಗಿಸುವ ವಿಶ್ವಾಸವೂ ಇದೆ” ಎಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

65 ವರ್ಷದ ಸ್ವಪನ್​ ದಾಸ್​ಗುಪ್ತಾ ಅವರನ್ನು 2016 ರಲ್ಲಿ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಮೇಲ್ಮನೆಗೆ ನಾಮ ನಿರ್ದೇಶನ ಮಾಡಿದ್ದರು. ಅವರ ರಾಜ್ಯಸಭಾ ಅವಧಿ ಏಪ್ರಿಲ್ 2022 ರವರೆಗೆ ಇತ್ತು. ಆದರೆ ಬಿಜೆಪಿ ಅಭ್ಯರ್ಥಿಯಾಗಿ ಅಸೆಂಬ್ಲಿ ಚುನಾವಣೆಯಲ್ಲಿ ಸ್ಪರ್ಧಿಸಲು ಇಂದು ರಾಜೀನಾಮೆ ಸಲ್ಲಿಸಿದ್ದಾರೆ. ನಾಳೆ ಅವರ ರಾಜೀನಾಮೆ ಸ್ವೀಕಾರಗೊಳ್ಳಲಿದೆ ಎನ್ನಲಾಗಿದೆ.

ನಾನು ರಾಜ್ಯಸಭೆಗೆ ರಾಜೀನಾಮೆ ನೀಡಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ. ಈ ಎರಡು ವಿಷಯಗಳಲ್ಲಿ ಕೆಲ ಗೊಂದಲಗಳಿರುವುದು ನಿಜ. ವಿಧಾನಸಭೆಗೆ ನಾಮಪತ್ರ ಸಲ್ಲಿಸುವ ವೇಳೆಗೆ ಈ ಗೊಂದಲಗಳನ್ನು ನಿವಾರಿಸಲಾಗುತ್ತದೆ. ನಾನಿನ್ನು ನಾಮಪತ್ರ ಸಲ್ಲಿಸಿಲ್ಲ. ಈ ಗುರುವಾರ ಅಥವಾ ಶುಕ್ರವಾರ ಸಲ್ಲಿಸುತ್ತೇನೆ. ಅಷ್ಟರಲ್ಲಿ ಎಲ್ಲಾ ಸಮಸ್ಯೆಗಳು ಬಗೆಹರಿಯುತ್ತವೆ ಎಂದು ದಾಸ್‌ಗುಪ್ತಾ ಹೇಳಿದ್ದಾರೆ.

ದಾಸ್‌ಗುಪ್ತಾ ರಾಜೀನಾಮೆ ನಂತರ ಪ್ರತಿಕ್ರಿಯಿಸಿರುವ ಟಿಎಂಸಿ ಸಂಸದೆ ಮೊಹುವ ಮೊಯಿತ್ರ “ರಾಜೀನಾಮೆ ನೀಡಿದ್ದಕ್ಕೆ ಧನ್ಯವಾದಗಳು ಸರ್. ಮುಂಬರುವ ಬಂಗಾಳ ಚುನಾವಣೆಗೆ ನಾವು ಶುಭಕೋರುತ್ತೇವೆ” ಎಂದು ಟ್ವೀಟ್ ಮಾಡುವು ಮೂಲಕ ವ್ಯಂಗ್ಯವಾಡಿದ್ದಾರೆ.


ಇದನ್ನೂ ಓದಿ: ‘ಆರೋಪಿ ನಂಬರ್‌ 1’ – ಆಂಧ್ರ ಮಾಜಿ ಮುಖ್ಯಮಂತ್ರಿಗೆ ನೋಟಿಸ್ ನೀಡಿದ ಸಿಐಡಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...