Homeಮುಖಪುಟಟಿಎಂಸಿ ಇಂಡಿಯಾ ಬಣದ ಭಾಗವಾಗಿದೆ; ಮುಂದೆಯೂ ಇರುತ್ತದೆ: ಡೆರೆಕ್ ಒ'ಬ್ರಿಯಾನ್

ಟಿಎಂಸಿ ಇಂಡಿಯಾ ಬಣದ ಭಾಗವಾಗಿದೆ; ಮುಂದೆಯೂ ಇರುತ್ತದೆ: ಡೆರೆಕ್ ಒ’ಬ್ರಿಯಾನ್

- Advertisement -
- Advertisement -

ಕೇಂದ್ರ ಸರ್ಕಾರದ ತನಿಖಾ ಸಂಸ್ಥೆಗಳಿಂದ ಪ್ರತಿಪಕ್ಷಗಳ ನಾಯಕರ ಮೇಲಿನ ದಾಳಿ ಮತ್ತು ಬಂಧನ ಖಂಡಿಸಿ ಇಂಡಿಯಾ ಬ್ಲಾಕ್ ನಾಯಕರು ಇಂದು ಪ್ರತಿಭಟನಡೆ ನಡೆಸುತ್ತಿದ್ದು, ವಿರೋಧ ಪಕ್ಷದ ಕೂಟದಿಂದ ಅಂತರ ಕಾಯ್ದುಕೊಂಡಿರುವ ತೃಣಮೂಲ ಕಾಂಗ್ರೆಸ್ ಅಚ್ಚರಿಯ ಹೇಳಿಕೆ ನೀಡಿದೆ.

ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿಯು ಪಶ್ಚಿಮ ಬಂಗಾಳದ ಎಲ್ಲಾ 42 ಲೋಕಸಭಾ ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿ, ಮೈತ್ರಿಕೂಟದೊಳಗಿನ ಕಿತ್ತಾಟದ ವರದಿಗಳ ಮಧ್ಯೆಯೇ “ತೃಣಮೂಲ ಕಾಂಗ್ರೆಸ್ ಪ್ರತಿಪಕ್ಷಗಳ ಇಂಡಿಯಾ ಬಣದ ಭಾಗವಾಗಿದೆ” ಎಂದು ರಾಜ್ಯಸಭಾ ಸಂಸದ ಡೆರೆಕ್ ಒ’ಬ್ರಿಯಾನ್ ಭಾನುವಾರ ಘೋಷಿಸಿದ್ದಾರೆ.

“ಅಖಿಲ ಭಾರತ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಇಂಡಿಯಾ ಮೈತ್ರಿಕೂಟದ ಭಾಗವಾಗಿದೆ, ಇದೆ ಮತ್ತು ಇರುತ್ತದೆ; ಇದು ಬಿಜೆಪಿ ವಿರುದ್ಧ ಪ್ರಜಾಪ್ರಭುತ್ವದ ಹೋರಾಟ” ಎಂದು ಡೆರೆಕ್ ಒ’ಬ್ರೇನ್ ನವದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆದ ಇಂಡಿಯಾ ಬ್ಲಾಕ್ ‘ಪ್ರಜಾಪ್ರಭುತ್ವ ಉಳಿಸಿ’ ರ್ಯಾಲಿಯಲ್ಲಿ ಹೇಳಿದರು.

ಪಕ್ಷವು ತನ್ನ ಐದು ಹಾಲಿ ಲೋಕಸಭಾ ಸದಸ್ಯರನ್ನು ಕೈಬಿಟ್ಟಿದ್ದು, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮತ್ತು ಪಕ್ಷದ ಅಧ್ಯಕ್ಷೆ ಮಮತಾ ಬ್ಯಾನರ್ಜಿ ಅವರು ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್ ಸೇರಿದಂತೆ ಹೊಸ ಅಭ್ಯರ್ಥಿಗಳ ಪಟ್ಟಿಗೆ ಹೆಸರಿಸಿದ್ದಾರೆ. ಯೂಸಫ್ ಅವರು ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಮತ್ತು ಐದು ಬಾರಿ ಬಹರಂಪುರ ಕ್ಷೇತ್ರದಿಂದ ಸಂಸದರಾಗಿರುವ ಅಧೀರ್ ರಂಜನ್ ಚೌಧರಿ ವಿರುದ್ಧ ಸ್ಪರ್ಧಿಸಲಿದ್ದಾರೆ.

ಅಧೀರ್ ರಂಜನ್ ಚೌಧರಿ ಟಿಎಂಸಿ ಮುಖ್ಯಸ್ಥ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿಯನ್ನು ಟೀಕಿಸಿದ್ದು, “ಪಶ್ಚಿಮ ಬಂಗಾಳದ ಎಲ್ಲಾ ಅಭ್ಯರ್ಥಿಗಳನ್ನು ಘೋಷಿಸುವ ಮೂಲಕ ಮಮತಾ ಬ್ಯಾನರ್ಜಿ ಯಾವುದೇ ರಾಜಕೀಯ ನಾಯಕ ಅಥವಾ ಪಕ್ಷವು ತನ್ನನ್ನು ನಂಬಬಾರದು ಎಂದು ಸಾಬೀತುಪಡಿಸಿದ್ದಾರೆ. ಅವರು ಇಂಡಿಯಾ ಬಣದಲ್ಲಿ ಇಲ್ಲ ಎಂಬ ಸಂದೇಶವನ್ನು ಪ್ರಧಾನಿ ಕಚೇರಿಗೆ ಕಳುಹಿಸುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

ಭಾನುವಾರದ ರ್ಯಾಲಿಯಲ್ಲಿ, ಡೆರೆಕ್ ಒ’ಬ್ರಿಯಾನ್ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರವನ್ನು ಟೀಕಿಸಿದರು, ಪ್ರಧಾನಿ ನೀಡುವ ಖಾತರಿಗಳು “ಶೂನ್ಯ ವಾರಂಟಿ” ಎಂದು ಹೇಳಿದರು.

“ಮೋದಿಯವರ ಗ್ಯಾರಂಟಿ ಶೂನ್ಯ ವಾರಂಟಿಯನ್ನು ಹೊಂದಿದೆ! ಬೆಲೆ ಏರಿಕೆ, ಉದ್ಯೋಗಗಳು ಮತ್ತು ಭಾರತದ ಸಂಸ್ಥೆಗಳನ್ನು ರಕ್ಷಿಸುವ ವಿಚಾರದಲ್ಲಿ ಶೂನ್ಯ ವಾರಂಟಿ” ಎಂದು ಅವರು ಹೇಳಿದರು.

2019 ರ ಪುಲ್ವಾಮಾ ದಾಳಿಯನ್ನು ಪ್ರಸ್ತಾಪಿಸಿದ ಅವರು, ಜಮ್ಮು ಮತ್ತು ಕಾಶ್ಮೀರದ ಮಾಜಿ ಗವರ್ನರ್ ಸತ್ಯಪಾಲ್ ಮಲಿಕ್ ಅವರು “ನರೇಂದ್ರ ಮೋದಿ ಸತ್ಯ ಹೊರಬರಲು ಬಯಸುವುದಿಲ್ಲ” ಎಂದು ಸಾರ್ವಜನಿಕವಾಗಿ ಹೇಳಿದ್ದಾರೆ ಎಂದು ಹೇಳಿದರು.

“ನರೇಂದ್ರ ಮೋದಿ ಏನು ಮರೆಮಾಡಲು ಬಯಸಿದ್ದರು? ನಮ್ಮ ಯೋಧರು ಪ್ರಾಣ ತ್ಯಾಗ ಮಾಡಿದಾಗ ನರೇಂದ್ರ ಮೋದಿಯವರು ಹತಾಶವಾಗಿ ಮತ ಕೇಳುವ ಅಗ್ಗದ ರಾಜಕಾರಣವನ್ನು ಏಕೆ ಮಾಡಿದರು” ಎಂದು ಪ್ರಶ್ನಿಸಿದರು.

“ನಮ್ಮ ಯೋಧರನ್ನು ಗೌರವಿಸಲು ಸತ್ಯವನ್ನು ಹೊರತರಬೇಕೆಂದು ನಾವು ಒತ್ತಾಯಿಸುತ್ತೇವೆ. ನಾವು ಶ್ವೇತಪತ್ರವನ್ನು ಕೇಳುತ್ತೇವೆ” ಎಂದು ಹೇಳಿದರು.

ಟಿಎಂಸಿ ಸಂಸದೆ ಸಾಗರಿಕಾ ಘೋಸ್ ಅವರು ಇಂಡಿಯಾ ಬ್ಲಾಕ್‌ಗೆ ಪಕ್ಷದ ಬೆಂಬಲವನ್ನು ಪುನರುಚ್ಚರಿಸಿದರು. “ಟಿಎಂಸಿ ಮತ್ತು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಪರವಾಗಿ, ಟಿಎಂಸಿ ಅರವಿಂದ್ ಕೇಜ್ರಿವಾಲ್ ಮತ್ತು ಎಎಪಿ ಜೊತೆಗಿದೆ ಎಂದು ಹೇಳಲು ನಾನು ಬಯಸುತ್ತೇನೆ. ಟಿಎಂಸಿ ಇಂಡಿಯಾ ಮೈತ್ರಿಯೊಂದಿಗೆ ಇದೆ ಎಂದು ನಾನು ಹೇಳಲು ಬಯಸುತ್ತೇನೆ” ಎಂದು ಅವರು ಹೇಳಿದರು.

ಇಂಡಿಯಾ ಬ್ಲಾಕ್ ಮಹಾ ರ್ಯಾಲಿ

ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿರುವುದನ್ನು ವಿರೋಧಿಸಿ ಪ್ರತಿಪಕ್ಷಗಳ ನಾಯಕರು ಭಾನುವಾರ ದೆಹಲಿಯ ರಾಮಲೀಲಾ ಮೈದಾನದಲ್ಲಿ ಶಕ್ತಿ ಪ್ರದರ್ಶನದಲ್ಲಿ ನಡೆಸಿದರು.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಆರ್‌ಜೆಡಿ ನಾಯಕ ತೇಜಸ್ವಿ ಯಾದವ್, ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎಸ್‌ಸಿಪಿ) ಮುಖ್ಯಸ್ಥ ಶರದ್ ಪವಾರ್, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್ ಮತ್ತು ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೋರೆನ್ ಅವರ ಪತ್ನಿ ಕಲ್ಪನಾ ಸೋರೆನ್ ಕೂಡ ಉಪಸ್ಥಿತರಿದ್ದರು.

ಅರವಿಂದ್ ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ರದ್ದುಪಡಿಸಿದ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದಿಂದ ಬಂಧಿಸಲಾಯಿತು. ಅವರು ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಯಲ್ಲಿರಲಿದ್ದಾರೆ.

ಇದನ್ನೂ ಓದಿ; ‘ದೇಶವನ್ನು ಹಾಳುಗೆಡವುತ್ತಿರುವ ದಬ್ಬಾಳಿಕೆ ಶಕ್ತಿಗಳನ್ನು ಜನ ಸೋಲಿಸುತ್ತಾರೆ..’; ಕಲ್ಪನಾ ಸೊರೇನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...