Homeಮುಖಪುಟಟಿಎಂಸಿ ಇಂಡಿಯಾ ಬಣದ ಭಾಗವಾಗಿದೆ; ಮುಂದೆಯೂ ಇರುತ್ತದೆ: ಡೆರೆಕ್ ಒ'ಬ್ರಿಯಾನ್

ಟಿಎಂಸಿ ಇಂಡಿಯಾ ಬಣದ ಭಾಗವಾಗಿದೆ; ಮುಂದೆಯೂ ಇರುತ್ತದೆ: ಡೆರೆಕ್ ಒ’ಬ್ರಿಯಾನ್

- Advertisement -
- Advertisement -

ಕೇಂದ್ರ ಸರ್ಕಾರದ ತನಿಖಾ ಸಂಸ್ಥೆಗಳಿಂದ ಪ್ರತಿಪಕ್ಷಗಳ ನಾಯಕರ ಮೇಲಿನ ದಾಳಿ ಮತ್ತು ಬಂಧನ ಖಂಡಿಸಿ ಇಂಡಿಯಾ ಬ್ಲಾಕ್ ನಾಯಕರು ಇಂದು ಪ್ರತಿಭಟನಡೆ ನಡೆಸುತ್ತಿದ್ದು, ವಿರೋಧ ಪಕ್ಷದ ಕೂಟದಿಂದ ಅಂತರ ಕಾಯ್ದುಕೊಂಡಿರುವ ತೃಣಮೂಲ ಕಾಂಗ್ರೆಸ್ ಅಚ್ಚರಿಯ ಹೇಳಿಕೆ ನೀಡಿದೆ.

ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿಯು ಪಶ್ಚಿಮ ಬಂಗಾಳದ ಎಲ್ಲಾ 42 ಲೋಕಸಭಾ ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿ, ಮೈತ್ರಿಕೂಟದೊಳಗಿನ ಕಿತ್ತಾಟದ ವರದಿಗಳ ಮಧ್ಯೆಯೇ “ತೃಣಮೂಲ ಕಾಂಗ್ರೆಸ್ ಪ್ರತಿಪಕ್ಷಗಳ ಇಂಡಿಯಾ ಬಣದ ಭಾಗವಾಗಿದೆ” ಎಂದು ರಾಜ್ಯಸಭಾ ಸಂಸದ ಡೆರೆಕ್ ಒ’ಬ್ರಿಯಾನ್ ಭಾನುವಾರ ಘೋಷಿಸಿದ್ದಾರೆ.

“ಅಖಿಲ ಭಾರತ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಇಂಡಿಯಾ ಮೈತ್ರಿಕೂಟದ ಭಾಗವಾಗಿದೆ, ಇದೆ ಮತ್ತು ಇರುತ್ತದೆ; ಇದು ಬಿಜೆಪಿ ವಿರುದ್ಧ ಪ್ರಜಾಪ್ರಭುತ್ವದ ಹೋರಾಟ” ಎಂದು ಡೆರೆಕ್ ಒ’ಬ್ರೇನ್ ನವದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆದ ಇಂಡಿಯಾ ಬ್ಲಾಕ್ ‘ಪ್ರಜಾಪ್ರಭುತ್ವ ಉಳಿಸಿ’ ರ್ಯಾಲಿಯಲ್ಲಿ ಹೇಳಿದರು.

ಪಕ್ಷವು ತನ್ನ ಐದು ಹಾಲಿ ಲೋಕಸಭಾ ಸದಸ್ಯರನ್ನು ಕೈಬಿಟ್ಟಿದ್ದು, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮತ್ತು ಪಕ್ಷದ ಅಧ್ಯಕ್ಷೆ ಮಮತಾ ಬ್ಯಾನರ್ಜಿ ಅವರು ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್ ಸೇರಿದಂತೆ ಹೊಸ ಅಭ್ಯರ್ಥಿಗಳ ಪಟ್ಟಿಗೆ ಹೆಸರಿಸಿದ್ದಾರೆ. ಯೂಸಫ್ ಅವರು ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಮತ್ತು ಐದು ಬಾರಿ ಬಹರಂಪುರ ಕ್ಷೇತ್ರದಿಂದ ಸಂಸದರಾಗಿರುವ ಅಧೀರ್ ರಂಜನ್ ಚೌಧರಿ ವಿರುದ್ಧ ಸ್ಪರ್ಧಿಸಲಿದ್ದಾರೆ.

ಅಧೀರ್ ರಂಜನ್ ಚೌಧರಿ ಟಿಎಂಸಿ ಮುಖ್ಯಸ್ಥ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿಯನ್ನು ಟೀಕಿಸಿದ್ದು, “ಪಶ್ಚಿಮ ಬಂಗಾಳದ ಎಲ್ಲಾ ಅಭ್ಯರ್ಥಿಗಳನ್ನು ಘೋಷಿಸುವ ಮೂಲಕ ಮಮತಾ ಬ್ಯಾನರ್ಜಿ ಯಾವುದೇ ರಾಜಕೀಯ ನಾಯಕ ಅಥವಾ ಪಕ್ಷವು ತನ್ನನ್ನು ನಂಬಬಾರದು ಎಂದು ಸಾಬೀತುಪಡಿಸಿದ್ದಾರೆ. ಅವರು ಇಂಡಿಯಾ ಬಣದಲ್ಲಿ ಇಲ್ಲ ಎಂಬ ಸಂದೇಶವನ್ನು ಪ್ರಧಾನಿ ಕಚೇರಿಗೆ ಕಳುಹಿಸುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

ಭಾನುವಾರದ ರ್ಯಾಲಿಯಲ್ಲಿ, ಡೆರೆಕ್ ಒ’ಬ್ರಿಯಾನ್ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರವನ್ನು ಟೀಕಿಸಿದರು, ಪ್ರಧಾನಿ ನೀಡುವ ಖಾತರಿಗಳು “ಶೂನ್ಯ ವಾರಂಟಿ” ಎಂದು ಹೇಳಿದರು.

“ಮೋದಿಯವರ ಗ್ಯಾರಂಟಿ ಶೂನ್ಯ ವಾರಂಟಿಯನ್ನು ಹೊಂದಿದೆ! ಬೆಲೆ ಏರಿಕೆ, ಉದ್ಯೋಗಗಳು ಮತ್ತು ಭಾರತದ ಸಂಸ್ಥೆಗಳನ್ನು ರಕ್ಷಿಸುವ ವಿಚಾರದಲ್ಲಿ ಶೂನ್ಯ ವಾರಂಟಿ” ಎಂದು ಅವರು ಹೇಳಿದರು.

2019 ರ ಪುಲ್ವಾಮಾ ದಾಳಿಯನ್ನು ಪ್ರಸ್ತಾಪಿಸಿದ ಅವರು, ಜಮ್ಮು ಮತ್ತು ಕಾಶ್ಮೀರದ ಮಾಜಿ ಗವರ್ನರ್ ಸತ್ಯಪಾಲ್ ಮಲಿಕ್ ಅವರು “ನರೇಂದ್ರ ಮೋದಿ ಸತ್ಯ ಹೊರಬರಲು ಬಯಸುವುದಿಲ್ಲ” ಎಂದು ಸಾರ್ವಜನಿಕವಾಗಿ ಹೇಳಿದ್ದಾರೆ ಎಂದು ಹೇಳಿದರು.

“ನರೇಂದ್ರ ಮೋದಿ ಏನು ಮರೆಮಾಡಲು ಬಯಸಿದ್ದರು? ನಮ್ಮ ಯೋಧರು ಪ್ರಾಣ ತ್ಯಾಗ ಮಾಡಿದಾಗ ನರೇಂದ್ರ ಮೋದಿಯವರು ಹತಾಶವಾಗಿ ಮತ ಕೇಳುವ ಅಗ್ಗದ ರಾಜಕಾರಣವನ್ನು ಏಕೆ ಮಾಡಿದರು” ಎಂದು ಪ್ರಶ್ನಿಸಿದರು.

“ನಮ್ಮ ಯೋಧರನ್ನು ಗೌರವಿಸಲು ಸತ್ಯವನ್ನು ಹೊರತರಬೇಕೆಂದು ನಾವು ಒತ್ತಾಯಿಸುತ್ತೇವೆ. ನಾವು ಶ್ವೇತಪತ್ರವನ್ನು ಕೇಳುತ್ತೇವೆ” ಎಂದು ಹೇಳಿದರು.

ಟಿಎಂಸಿ ಸಂಸದೆ ಸಾಗರಿಕಾ ಘೋಸ್ ಅವರು ಇಂಡಿಯಾ ಬ್ಲಾಕ್‌ಗೆ ಪಕ್ಷದ ಬೆಂಬಲವನ್ನು ಪುನರುಚ್ಚರಿಸಿದರು. “ಟಿಎಂಸಿ ಮತ್ತು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಪರವಾಗಿ, ಟಿಎಂಸಿ ಅರವಿಂದ್ ಕೇಜ್ರಿವಾಲ್ ಮತ್ತು ಎಎಪಿ ಜೊತೆಗಿದೆ ಎಂದು ಹೇಳಲು ನಾನು ಬಯಸುತ್ತೇನೆ. ಟಿಎಂಸಿ ಇಂಡಿಯಾ ಮೈತ್ರಿಯೊಂದಿಗೆ ಇದೆ ಎಂದು ನಾನು ಹೇಳಲು ಬಯಸುತ್ತೇನೆ” ಎಂದು ಅವರು ಹೇಳಿದರು.

ಇಂಡಿಯಾ ಬ್ಲಾಕ್ ಮಹಾ ರ್ಯಾಲಿ

ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿರುವುದನ್ನು ವಿರೋಧಿಸಿ ಪ್ರತಿಪಕ್ಷಗಳ ನಾಯಕರು ಭಾನುವಾರ ದೆಹಲಿಯ ರಾಮಲೀಲಾ ಮೈದಾನದಲ್ಲಿ ಶಕ್ತಿ ಪ್ರದರ್ಶನದಲ್ಲಿ ನಡೆಸಿದರು.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಆರ್‌ಜೆಡಿ ನಾಯಕ ತೇಜಸ್ವಿ ಯಾದವ್, ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎಸ್‌ಸಿಪಿ) ಮುಖ್ಯಸ್ಥ ಶರದ್ ಪವಾರ್, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್ ಮತ್ತು ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೋರೆನ್ ಅವರ ಪತ್ನಿ ಕಲ್ಪನಾ ಸೋರೆನ್ ಕೂಡ ಉಪಸ್ಥಿತರಿದ್ದರು.

ಅರವಿಂದ್ ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ರದ್ದುಪಡಿಸಿದ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದಿಂದ ಬಂಧಿಸಲಾಯಿತು. ಅವರು ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಯಲ್ಲಿರಲಿದ್ದಾರೆ.

ಇದನ್ನೂ ಓದಿ; ‘ದೇಶವನ್ನು ಹಾಳುಗೆಡವುತ್ತಿರುವ ದಬ್ಬಾಳಿಕೆ ಶಕ್ತಿಗಳನ್ನು ಜನ ಸೋಲಿಸುತ್ತಾರೆ..’; ಕಲ್ಪನಾ ಸೊರೇನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...