Homeಮುಖಪುಟಅತ್ಯಾಚಾರ ಸಂತ್ರಸ್ತೆ ಕುರಿತು ವಿವಾದಾತ್ಮಕ ಹೇಳಿಕೆ: ಶಾಸಕನಿಗೆ ಶೋಕಾಸ್ ನೋಟಿಸ್ ಕೊಟ್ಟ ಟಿಎಂಸಿ

ಅತ್ಯಾಚಾರ ಸಂತ್ರಸ್ತೆ ಕುರಿತು ವಿವಾದಾತ್ಮಕ ಹೇಳಿಕೆ: ಶಾಸಕನಿಗೆ ಶೋಕಾಸ್ ನೋಟಿಸ್ ಕೊಟ್ಟ ಟಿಎಂಸಿ

- Advertisement -
- Advertisement -

ಕೋಲ್ಕತ್ತಾದ ಕಸ್ಬಾ ಪ್ರದೇಶದಲ್ಲಿ ನಡೆದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ, ಕಾನೂನು ವಿದ್ಯಾರ್ಥಿನಿ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ಕಮರ್ಹಟಿ ಶಾಸಕ ಮದನ್ ಮಿತ್ರಾ ಅವರಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಭಾನುವಾರ (ಜೂನ್‌.29) ಶೋಕಾಸ್ ನೋಟಿಸ್ ನೀಡಿದೆ.

ಸಂಸದ ಕಲ್ಯಾಣ್ ಬ್ಯಾನರ್ಜಿ ಕೂಡ ಸಂತ್ರಸ್ತೆ ಕುರಿತು ಅಸೂಕ್ಷ್ಮ ಹೇಳಿಕೆ ಕೊಟ್ಟಿದ್ದರು. ಸ್ವಪಕ್ಷದ ಸಂಸದನ ಹೇಳಿಕೆಯನ್ನು ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಬಹಿರಂಗವಾಗಿ ಖಂಡಿಸಿದ್ದರು. ಈ ನಡುವೆ ಮದನ್ ಮಿತ್ರಾ ಹೇಳಿಕೆ ನೀಡಿದ್ದಾರೆ. ಇದು ಟಿಎಂಸಿ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಿದೆ.

ಕಲ್ಯಾಣ್ ಬ್ಯಾನರ್ಜಿ ಹೇಳಿಕೆಯನ್ನು ಖಂಡಿಸಿದ್ದ ಮಹುವಾ ಮೊಯಿತ್ರಾ “ಭಾರತದಲ್ಲಿ ಸ್ತ್ರೀದ್ವೇಷವು ಪಕ್ಷಗಳ ಗಡಿಗಳನ್ನು ಮೀರಿದೆ. ಟಿಎಂಸಿ ಇತರ ಪಕ್ಷಗಳಿಗಿಂತ ಭಿನ್ನ ಹೇಗೆಂದರೆ, ಇಂತಹ ಅಸಹ್ಯಕರ ಹೇಳಿಕೆಗಳನ್ನು ಯಾರು ನೀಡಿದರೂ ನಾವು ಅದನ್ನು ಖಂಡಿಸುತ್ತೇವೆ” ಎಂದು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದರು.

ಈ ನಡುವೆ ಮದನ್‌ ಮಿತ್ರಾ, “ಸಂತ್ರಸ್ತೆ ಅತ್ಯಾಚಾರ ನಡೆದ ಆ ಜಾಗಕ್ಕೆ ಹೋಗಿದ್ದು ಏಕೆ? ಆಕೆ ಅಲ್ಲಿಗೆ ಹೋಗಿರದಿದ್ದರೆ ಈ ಘಟನೆ ಸಂಭವಿಸುತ್ತಿರಲಿಲ್ಲ” ಎಂದು ಹೇಳಿಕೆ ನೀಡಿದ್ದಾರೆ.

ಶಾಸಕನ ಈ ಹೇಳಿಕೆ ಜನರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಅತ್ಯಾಚಾರ ಪ್ರಕರಣವನ್ನು ಮುಂದಿಟ್ಟುಕೊಂಡು ಟಿಎಂಸಿ ಸರ್ಕಾರವನ್ನು ಟೀಕಿಸುತ್ತಿದ್ದ ಪ್ರತಿಪಕ್ಷಗಳು, ಟಿಎಂಸಿ ನಾಯಕರ ಅಸೂಕ್ಷ್ಮ ಹೇಳಿಕೆಗಳ ಬಳಿಕ ಸರ್ಕಾರದ ಮೇಲೆ ಮುಗಿಬಿದ್ದಿವೆ.

ಜೂನ್ 25ರಂದು ದಕ್ಷಿಣ ಕೋಲ್ಕತ್ತಾದ ಕಸ್ಬಾ ಪ್ರದೇಶದ ಕಾನೂನು ಕಾಲೇಜಿನಲ್ಲಿ 24 ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆದಿದೆ. ವಿದ್ಯಾರ್ಥಿನಿ ಮುಂಬರುವ ಪರೀಕ್ಷೆಯ ಫಾರ್ಮ್‌ ತುಂಬಲು ತೆರಳಿದ್ದ ವೇಳೆ ಕಾಲೇಜಿನ ಭದ್ರತಾ ಕೊಠಡಿ ಎಳೆದೊಯ್ದು ದೌರ್ಜನ್ಯ ನಡೆಸಲಾಗಿದೆ.

ಪ್ರಕರಣ ಸಂಬಂಧ ಕಾಲೇಜಿನ ಹಳೆ ವಿದ್ಯಾರ್ಥಿ ಹಾಗೂ ಗುತ್ತಿಗೆ ಸಿಬ್ಬಂದಿ 31 ವರ್ಷದ ಮೊನೊಜಿತ್ ಮಿಶ್ರಾ, ಪ್ರಸ್ತುತ ವಿದ್ಯಾರ್ಥಿಯಾಗಿರುವ 19 ವರ್ಷದ ಝೈಬ್ ಅಹ್ಮದ್, ಮತ್ತೋರ್ವ ವಿದ್ಯಾರ್ಥಿ 20 ವರ್ಷದ ಪ್ರಮಿತ್ ಮುಖೋಪಾಧ್ಯಾಯ ಹಾಗೂ 55 ವರ್ಷದ ಭದ್ರತಾ ಸಿಬ್ಬಂದಿ ಪಿನಾಕಿ ಬ್ಯಾನರ್ಜಿ ಎಂಬವರನ್ನು ಬಂಧಿಸಲಾಗಿದೆ. ಈ ಪೈಕಿ ಮೂವರು ಪ್ರಮುಖ ಆರೋಪಿಗಳು ತೃಣಮೂಲ ಕಾಂಗ್ರೆಸ್ (ಟಿಎಂಸಿ) ನ ವಿದ್ಯಾರ್ಥಿ ವಿಭಾಗವಾದ ತೃಣಮೂಲ ಛಾತ್ರ ಪರಿಷತ್ (ಟಿಎಂಸಿಪಿ) ಸದಸ್ಯರು ಎಂದು ವರದಿಯಾಗಿದೆ.

ಬಾಂಗ್ಲಾದೇಶಿಯರೆಂದು ಪಶ್ಚಿಮ ಬಂಗಾಳದ 100 ವಲಸೆ ಕಾರ್ಮಿಕರನ್ನು ಬಂಧಿಸಿದ ಒಡಿಶಾ ಸರ್ಕಾರ: ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಸ್ರೇಲ್‌ನಾದ್ಯಂತ ಯುದ್ಧ ವಿರೋಧಿ ಪ್ರತಿಭಟನೆ : ನೆತನ್ಯಾಹು ಆಡಳಿತ ವಿರುದ್ಧ ಬೀದಿಗಿಳಿದ ಜನ

ಗಾಝಾದಲ್ಲಿ ಸುಮಾರು 80 ಸಾವಿರದಷ್ಟು ಜನರನ್ನು ಹತ್ಯೆಗೈದ ಬಳಿಕ, ಈಗ ಲೆಬನಾನ್ ಮತ್ತು ಇರಾನ್ ಮೇಲೆ ದಾಳಿ ನಡೆಸುತ್ತಿರುವ ಇಸ್ರೇಲ್‌ನ ಬೆಂಜಮಿನ್ ನೆತನ್ಯಾಹು ಸರ್ಕಾರದ ವಿರುದ್ದ ಅಲ್ಲಿನ ನಾಗರಿಕರು ಬೀದಿಗಿಳಿದಿದ್ದಾರೆ. ನೆತನ್ಯಾಹು ಆಡಳಿತದ...

Islamabad Talks | ಅಮೆರಿಕದ ಷರತ್ತುಗಳನ್ನು ತಿರಸ್ಕರಿಸಿದ ಇರಾನ್‌ : ಯಾವುದೇ ಒಪ್ಪಂದವಿಲ್ಲದೆ ವಾಪಸ್ ಹೋದ ಜೆಡಿ ವ್ಯಾನ್ಸ್ ನಿಯೋಗ

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ಆಯೋಜಿಸಿರುವ ಅಮೆರಿಕ-ಇರಾನ್‌ ನಡುವಿನ ಮಹತ್ವದ ಶಾಂತಿ ಮಾತುಕತೆ ವಿಫಲವಾದಂತೆ ಗೋಚರಿಸುತ್ತಿದೆ. ಅಮೆರಿಕದ ಪರವಾಗಿ ಮಾತುಕತೆಗೆ ಆಗಮಿಸಿದ್ದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ನೇತೃತ್ವದ ನಿಯೋಗ, ಇರಾನ್‌ ಜೊತೆ ಯಾವುದೇ ಒಪ್ಪಂದ ಸಾಧ್ಯವಾಗದೆ...

ಹರಿಯಾಣದ ಮೋಸ್ಟ್ ವಾಂಟೆಡ್ ‘ಗ್ಯಾಂಗ್‌ಸ್ಟರ್’ ಸಾಹಿಲ್ ಚೌಹಾಣ್ ಥೈಲ್ಯಾಂಡ್ ನಿಂದ ಗಡೀಪಾರು; ದೆಹಲಿಯಲ್ಲಿ ವಶಕ್ಕೆ ಪಡೆಯಲಿರುವ ಎಸ್‌ಟಿಎಫ್

ಭಾರತೀಯ ಭದ್ರತಾ ಸಂಸ್ಥೆಗಳಿಗೆ ಒಂದು ಪ್ರಮುಖ ಪ್ರಗತಿಯಲ್ಲಿ, ಮೋಸ್ಟ್ ವಾಂಟೆಡ್ ಗ್ಯಾಂಗ್‌ಸ್ಟರ್ ಸಾಹಿಲ್ ಚೌಹಾಣ್‌ನನ್ನು ಥೈಲ್ಯಾಂಡ್‌ನಿಂದ ಗಡೀಪಾರು ಮಾಡಿದ ನಂತರ ಭಾರತಕ್ಕೆ ಕರೆತರಲಾಗುತ್ತಿದೆ. ಅಧಿಕಾರಿಗಳ ಪ್ರಕಾರ, ಚೌಹಾಣ್ ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ...

ಛತ್ತೀಸ್‌ಗಢ: 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಜೀವಂತ ಇರುವಾಗಲೇ ಗೋಣಿಚೀಲದಲ್ಲಿ ತುಂಬಿ ಬಾವಿ ಬಳಿ ಎಸೆದಿದ್ದ ಆರೋಪಿ ಬಂಧನ

ಛತ್ತೀಸ್‌ಗಢದ ದುರ್ಗ ಜಿಲ್ಲೆಯಲ್ಲಿ ಐದು ವರ್ಷದ ಬಾಲಕಿಯನ್ನು ಅಪಹರಿಸಿ ವ್ಯಕ್ತಿಯೊಬ್ಬ ಅತ್ಯಾಚಾರ ಮಾಡಿ, ನಂತರ ಮಗು ಜೀವಂತ ಇರುವಾಗಲೇ ಗೋಣಿಚೀಲದಲ್ಲಿ ಹಾಕಿ ಬಾವಿಯ ಬಳಿ ಎಸೆದಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ಉತೈ...

ಉತ್ತರಪ್ರದೇಶ: ಪ್ರೇಮ ಪ್ರಸ್ತಾಪ ತಿರಸ್ಕರಿಸಿದ್ದಕ್ಕೆ ಪ್ರತೀಕಾರ: ಮನೆಗೆ ನುಗ್ಗಿ 23ವರ್ಷದ ಯುವತಿ ಮತ್ತು ತಾಯಿಯ ಮೇಲೆ ಆಸಿಡ್ ದಾಳಿ; ಯುವತಿ ಸಾವು

ಉತ್ತರ ಪ್ರದೇಶದ ಕುಶಿನಗರ ಜಿಲ್ಲೆಯಲ್ಲಿ 23 ವರ್ಷದ ಯುವತಿಯೊಬ್ಬಳು ಪ್ರಾಣ ಕಳೆದುಕೊಂಡು ಆಕೆಯ ತಾಯಿ ಗಂಭೀರವಾಗಿ ಗಾಯಗೊಂಡ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುರುವಾರ ರಾತ್ರಿ...

ಬೆಂಗಳೂರಿನ ಪ್ರವಾಹ ಕಾಮಗಾರಿ ಮೇ 30ರೊಳಗೆ ಪೂರ್ಣಗೊಳಿಸಿ, ಇಲ್ಲದಿದ್ದರೆ ಅಮಾನತು ಎದುರಿಸಿ; ಅಧಿಕಾರಿಗಳಿಗೆ ಎಸಿಎಸ್ ತುಷಾರ್ ಗಿರಿನಾಥ್ ಎಚ್ಚರಿಕೆ

ಬೆಂಗಳೂರು: ಮೇ 30 ರೊಳಗೆ ಬಾಕಿ ಇರುವ ಎಲ್ಲಾ ಕೆಲಸಗಳನ್ನು ಪೂರ್ಣಗೊಳಿಸಿ, ಇಲ್ಲದಿದ್ದರೆ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಯಲಹಂಕದ ಕೇಂದ್ರೀಯ ವಿಹಾರ, ಟಾಟಾ...

ಮರ್ಯಾದೆಗೇಡು ಹತ್ಯೆ ತಡೆಯುವ ʼಇವ ನಮ್ಮವ ಇವ ನಮ್ಮವʼ ವಿಧೇಯಕಕ್ಕೆ ರಾಜ್ಯಪಾಲರಿಂದ ಸಹಿ

ರಾಜ್ಯ ವಿಧಾನಮಂಡಲ ಅಂಗೀಕರಿಸಿದ ವಿಧೇಯಕಗಳ ಪೈಕಿ, ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ವಿದ್ಯುನ್ಮಾನ ಮತಯಂತ್ರ ಬದಲಿಗೆ ಮತಪತ್ರ ಬಳಕೆ ಕಡ್ಡಾಯಗೊಳಿಸುವ ‘2026ರ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕ’ ಹೊರತುಪಡಿಸಿ ಉಳಿದವುಗಳಿಗೆ...

ಶಾತವಾಹನ ವಿವಿ ವಿವಾದ: ಬಲಪಂಥೀಯರಿಂದ ದಲಿತ ಪ್ರಾಧ್ಯಾಪಕಿ ಮತ್ತು ವಿದ್ಯಾರ್ಥಿಗೆ ‘ನಗರ ನಕ್ಸಲರು’ ಎಂಬ ಹಣೆಪಟ್ಟಿಯಲ್ಲಿ ನಿರಂತರ ಕಿರುಕುಳ

ತೆಲಂಗಾಣದ ಶಾತವಾಹನ ವಿಶ್ವವಿದ್ಯಾಲಯದಲ್ಲಿ ದಲಿತ ಮಹಿಳಾ ಪ್ರಾಧ್ಯಾಪಕಿ ಮತ್ತು ದಲಿತ ವಿದ್ಯಾರ್ಥಿನಿಯನ್ನು "ನಗರ ನಕ್ಸಲರು" ಎಂದು ಹಣೆಪಟ್ಟಿ ಕಟ್ಟಿ ನಿರಂತರ ಕಿರುಕುಳ ನೀಡಿದ ನಂತರ ವಿವಾದ ಭುಗಿಲೆದ್ದಿದ್ದು, ಇದಕ್ಕೆ ಶಿಕ್ಷಣ ತಜ್ಞರು ಮತ್ತು...

ಕೇಂದ್ರದ ಹೊಸ ಕಾಯ್ದೆಯಿಂದ ಸಂಕಷ್ಟ : ಇಬ್ಬರು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳಿಗೆ ಹಾರ್ಮೋನ್ ಚಿಕಿತ್ಸೆ ಮುಂದುವರಿಸಲು ಕೇರಳ ಹೈಕೋರ್ಟ್ ಅನುಮತಿ

ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026 ಅಂಗೀಕಾರಗೊಂಡ ನಂತರ ಆಸ್ಪತ್ರೆಗಳು ತಮ್ಮ ಚಿಕಿತ್ಸೆಯನ್ನು ಸ್ಥಗಿತಗೊಳಿಸಿವೆ ಎಂದು ಆರೋಪಿಸಿದ್ದ ಇಬ್ಬರು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ ಹಾರ್ಮೋನ್ ಬದಲಿ ಚಿಕಿತ್ಸೆಯನ್ನು ಮುಂದುವರಿಸಲು ಕೇರಳ ಹೈಕೋರ್ಟ್...

ಮಾದಕವಸ್ತು ತನಿಖೆಗೆ ಸಹಾಯಕವಾಗಿ AI ಆಧಾರಿತ ಅಪ್ಲಿಕೇಶನ್ ಆರಂಭಿಸಿದ ಗುಜರಾತ್ ಪೊಲೀಸರು

ಅಹಮದಾಬಾದ್: ಮಾದಕವಸ್ತು ಪ್ರಕರಣಗಳ ತನಿಖೆಯನ್ನು ಸುಲಭವಾಗಿಸಲು ಮತ್ತು ವಿಚಾರಣೆಯ ಸಮಯದಲ್ಲಿ ಅವುಗಳನ್ನು ಬಲಪಡಿಸಲು, ಇದರಿಂದಾಗಿ ಶಿಕ್ಷೆಯ ಪ್ರಮಾಣ ಸುಧಾರಿಸಲು ಗುಜರಾತ್ ಪೊಲೀಸರು ಶುಕ್ರವಾರ ಕೃತಕ ಬುದ್ಧಿಮತ್ತೆ (AI) ಆಧಾರಿತ ಅಪ್ಲಿಕೇಶನ್ "NARIT AI"...