Homeಮುಖಪುಟಅತ್ಯಾಚಾರ ಸಂತ್ರಸ್ತೆ ಕುರಿತು ವಿವಾದಾತ್ಮಕ ಹೇಳಿಕೆ: ಶಾಸಕನಿಗೆ ಶೋಕಾಸ್ ನೋಟಿಸ್ ಕೊಟ್ಟ ಟಿಎಂಸಿ

ಅತ್ಯಾಚಾರ ಸಂತ್ರಸ್ತೆ ಕುರಿತು ವಿವಾದಾತ್ಮಕ ಹೇಳಿಕೆ: ಶಾಸಕನಿಗೆ ಶೋಕಾಸ್ ನೋಟಿಸ್ ಕೊಟ್ಟ ಟಿಎಂಸಿ

- Advertisement -
- Advertisement -

ಕೋಲ್ಕತ್ತಾದ ಕಸ್ಬಾ ಪ್ರದೇಶದಲ್ಲಿ ನಡೆದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ, ಕಾನೂನು ವಿದ್ಯಾರ್ಥಿನಿ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ಕಮರ್ಹಟಿ ಶಾಸಕ ಮದನ್ ಮಿತ್ರಾ ಅವರಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಭಾನುವಾರ (ಜೂನ್‌.29) ಶೋಕಾಸ್ ನೋಟಿಸ್ ನೀಡಿದೆ.

ಸಂಸದ ಕಲ್ಯಾಣ್ ಬ್ಯಾನರ್ಜಿ ಕೂಡ ಸಂತ್ರಸ್ತೆ ಕುರಿತು ಅಸೂಕ್ಷ್ಮ ಹೇಳಿಕೆ ಕೊಟ್ಟಿದ್ದರು. ಸ್ವಪಕ್ಷದ ಸಂಸದನ ಹೇಳಿಕೆಯನ್ನು ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಬಹಿರಂಗವಾಗಿ ಖಂಡಿಸಿದ್ದರು. ಈ ನಡುವೆ ಮದನ್ ಮಿತ್ರಾ ಹೇಳಿಕೆ ನೀಡಿದ್ದಾರೆ. ಇದು ಟಿಎಂಸಿ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಿದೆ.

ಕಲ್ಯಾಣ್ ಬ್ಯಾನರ್ಜಿ ಹೇಳಿಕೆಯನ್ನು ಖಂಡಿಸಿದ್ದ ಮಹುವಾ ಮೊಯಿತ್ರಾ “ಭಾರತದಲ್ಲಿ ಸ್ತ್ರೀದ್ವೇಷವು ಪಕ್ಷಗಳ ಗಡಿಗಳನ್ನು ಮೀರಿದೆ. ಟಿಎಂಸಿ ಇತರ ಪಕ್ಷಗಳಿಗಿಂತ ಭಿನ್ನ ಹೇಗೆಂದರೆ, ಇಂತಹ ಅಸಹ್ಯಕರ ಹೇಳಿಕೆಗಳನ್ನು ಯಾರು ನೀಡಿದರೂ ನಾವು ಅದನ್ನು ಖಂಡಿಸುತ್ತೇವೆ” ಎಂದು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದರು.

ಈ ನಡುವೆ ಮದನ್‌ ಮಿತ್ರಾ, “ಸಂತ್ರಸ್ತೆ ಅತ್ಯಾಚಾರ ನಡೆದ ಆ ಜಾಗಕ್ಕೆ ಹೋಗಿದ್ದು ಏಕೆ? ಆಕೆ ಅಲ್ಲಿಗೆ ಹೋಗಿರದಿದ್ದರೆ ಈ ಘಟನೆ ಸಂಭವಿಸುತ್ತಿರಲಿಲ್ಲ” ಎಂದು ಹೇಳಿಕೆ ನೀಡಿದ್ದಾರೆ.

ಶಾಸಕನ ಈ ಹೇಳಿಕೆ ಜನರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಅತ್ಯಾಚಾರ ಪ್ರಕರಣವನ್ನು ಮುಂದಿಟ್ಟುಕೊಂಡು ಟಿಎಂಸಿ ಸರ್ಕಾರವನ್ನು ಟೀಕಿಸುತ್ತಿದ್ದ ಪ್ರತಿಪಕ್ಷಗಳು, ಟಿಎಂಸಿ ನಾಯಕರ ಅಸೂಕ್ಷ್ಮ ಹೇಳಿಕೆಗಳ ಬಳಿಕ ಸರ್ಕಾರದ ಮೇಲೆ ಮುಗಿಬಿದ್ದಿವೆ.

ಜೂನ್ 25ರಂದು ದಕ್ಷಿಣ ಕೋಲ್ಕತ್ತಾದ ಕಸ್ಬಾ ಪ್ರದೇಶದ ಕಾನೂನು ಕಾಲೇಜಿನಲ್ಲಿ 24 ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆದಿದೆ. ವಿದ್ಯಾರ್ಥಿನಿ ಮುಂಬರುವ ಪರೀಕ್ಷೆಯ ಫಾರ್ಮ್‌ ತುಂಬಲು ತೆರಳಿದ್ದ ವೇಳೆ ಕಾಲೇಜಿನ ಭದ್ರತಾ ಕೊಠಡಿ ಎಳೆದೊಯ್ದು ದೌರ್ಜನ್ಯ ನಡೆಸಲಾಗಿದೆ.

ಪ್ರಕರಣ ಸಂಬಂಧ ಕಾಲೇಜಿನ ಹಳೆ ವಿದ್ಯಾರ್ಥಿ ಹಾಗೂ ಗುತ್ತಿಗೆ ಸಿಬ್ಬಂದಿ 31 ವರ್ಷದ ಮೊನೊಜಿತ್ ಮಿಶ್ರಾ, ಪ್ರಸ್ತುತ ವಿದ್ಯಾರ್ಥಿಯಾಗಿರುವ 19 ವರ್ಷದ ಝೈಬ್ ಅಹ್ಮದ್, ಮತ್ತೋರ್ವ ವಿದ್ಯಾರ್ಥಿ 20 ವರ್ಷದ ಪ್ರಮಿತ್ ಮುಖೋಪಾಧ್ಯಾಯ ಹಾಗೂ 55 ವರ್ಷದ ಭದ್ರತಾ ಸಿಬ್ಬಂದಿ ಪಿನಾಕಿ ಬ್ಯಾನರ್ಜಿ ಎಂಬವರನ್ನು ಬಂಧಿಸಲಾಗಿದೆ. ಈ ಪೈಕಿ ಮೂವರು ಪ್ರಮುಖ ಆರೋಪಿಗಳು ತೃಣಮೂಲ ಕಾಂಗ್ರೆಸ್ (ಟಿಎಂಸಿ) ನ ವಿದ್ಯಾರ್ಥಿ ವಿಭಾಗವಾದ ತೃಣಮೂಲ ಛಾತ್ರ ಪರಿಷತ್ (ಟಿಎಂಸಿಪಿ) ಸದಸ್ಯರು ಎಂದು ವರದಿಯಾಗಿದೆ.

ಬಾಂಗ್ಲಾದೇಶಿಯರೆಂದು ಪಶ್ಚಿಮ ಬಂಗಾಳದ 100 ವಲಸೆ ಕಾರ್ಮಿಕರನ್ನು ಬಂಧಿಸಿದ ಒಡಿಶಾ ಸರ್ಕಾರ: ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...