Homeಮುಖಪುಟಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳ ಸಭೆಯಲ್ಲಿ ಟಿಎಂಸಿ ನಾಯಕರು ಪ್ರತ್ಯಕ್ಷ; ಕೇಂದ್ರದ ವಿರುದ್ಧ "ಕಪ್ಪು" ಬಟ್ಟೆ ಧರಿಸಿ...

ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳ ಸಭೆಯಲ್ಲಿ ಟಿಎಂಸಿ ನಾಯಕರು ಪ್ರತ್ಯಕ್ಷ; ಕೇಂದ್ರದ ವಿರುದ್ಧ “ಕಪ್ಪು” ಬಟ್ಟೆ ಧರಿಸಿ ಪ್ರತಿಭಟನೆ

- Advertisement -
- Advertisement -

ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳ ಕಾರ್ಯತಂತ್ರದ ಸಭೆಯಲ್ಲಿ ಇಂದು (ಸೋಮವಾರ) ಮೊದಲ ಬಾರಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾಣಿಸಿಕೊಂಡಿದೆ. ಪ್ರತಿಪಕ್ಷಗಳ ಒಗ್ಗಟ್ಟಿನಲ್ಲಿ ಇದು ಅಪರೂಪದ ಬೆಳವಣಿಗೆಯಾಗಿದೆ.

ಈ ಸಭೆಯಲ್ಲಿ ಪ್ರಮುಖವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಲೋಕಸಭೆ ಸದಸ್ಯತ್ವದಿಂದ ಅನರ್ಹಗೊಳಿಸಿರುವುದು ಮತ್ತು ಅದಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಮುಂದಿನ ಕಾರ್ಯತಂತ್ರದ ಬಗ್ಗೆ ಚರ್ಚೆ ನಡೆಸಲಾಗಿದೆ. ರಾಹುಲ್ ಗಾಂಧಿಯ ಸಂಸದರಾಗಿ ಅನರ್ಹಗೊಳಿಸುವಿಕೆಯ ವಿರುದ್ಧ “ಕಪ್ಪು” ಬಟ್ಟೆ ಧರಿಸಿ ಪ್ರತಿಭಟನೆಯನ್ನು ನಡೆಸುವ ಬಗ್ಗೆ ಸಭೆಯಲ್ಲಿ ಚರ್ಚೆಯಾಯಿತು.

ಸಭೆ ಬಳಿಕ ರಾಹುಲ್ ಗಾಂಧಿ ಅನರ್ಹತೆಯನ್ನು ವಿರೋಧಿಸಿ ಪ್ರತಿಪಕ್ಷದ ಸಂಸದರು ಕಪ್ಪು ಬಟ್ಟೆ, ಕಪ್ಪು ಪಟ್ಟಿ ಧರಿಸಿ ಸಂಸತ್ತಿಗೆ ಆಗಮಿಸಿದ್ದಾರೆ. ಬಳಿಕ ಗಾಂಧಿ ಪ್ರತಿಮೆ ಭಿತ್ತಿಪತ್ರ ಪ್ರದರ್ಶಿಸಿ ಪ್ರತಿಭಟಿಸಿದ್ದಾರೆ.

ಸೋಮವಾರ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ ಕಚೇರಿಯಲ್ಲಿ ನಡೆದ ಕಾರ್ಯತಂತ್ರದ ಸಭೆಯಲ್ಲಿ ತೃಣಮೂಲದ ಪ್ರಸೂನ್ ಬ್ಯಾನರ್ಜಿ ಮತ್ತು ಜವಾಹರ್ ಸಿರ್ಕಾರ್ ಭಾಗಿಯಾದರು. ಮಮತಾ ಬ್ಯಾನರ್ಜಿಯವರ ಟಿಎಂಸಿ ಪಕ್ಷವು ಕಾಂಗ್ರೆಸ್ ಮತ್ತು ಬಿಜೆಪಿ ಎರಡರಿಂದಲೂ ಸಮಾನವಾಗಿ ಉಳಿಯುವುದಾಗಿ ಘೋಷಿಸಿದ ನಂತರ ಇದು ಪ್ರಮುಖ ಬದಲಾವಣೆಯನ್ನು ಸೂಚಿಸುತ್ತದೆ.

ರಾಹುಲ್ ಗಾಂಧಿ ಅನರ್ಹತೆ ವಿಚಾರದ ವಿರುದ್ಧ ಪ್ರತಿಪಕ್ಷಗಳು ಒಂದಾಗಬೇಕು ಎಂದು ನಂಬಿರುವುದರಿಂದ ಈ ಪ್ರತಿಭಟನೆಗೆ ಮಾತ್ರ ತಮ್ಮ ಬೆಂಬಲವನ್ನು ಸೀಮಿತಗೊಳಿಸಲಾಗಿದೆ ಎಂದು ತೃಣಮೂಲ ಕಾಂಗ್ರೆಸ್ ಪ್ರತಿಪಾದಿಸಿದೆ.

ಇದನ್ನೂ ಓದಿ: ‘ಕಳ್ಳರನ್ನು ಕಳ್ಳ ಎನ್ನದೆ ಸಾಧು-ಸಂತರು, ಸಮಾಜ ಸುಧಾರಕರೆಂದು ಕರೆಯಬೇಕೇ?’: ಸಿದ್ದರಾಮಯ್ಯ ಪ್ರಶ್ನೆ

ತೃಣಮೂಲದ ಕಾಂಗ್ರೆಸ್‌ನ ಅಚ್ಚರಿಯ ಈ ನಡೆಗೆ ಪ್ರತಿಕ್ರಿಯಿಸಿದ ಖರ್ಗೆ, ”ಪ್ರಜಾಪ್ರಭುತ್ವವನ್ನು ರಕ್ಷಿಸಲು” ಯಾರೇ ಮುಂದೆ ಬಂದರೂ ಕಾಂಗ್ರೆಸ್ ಸ್ವಾಗತಿಸುತ್ತದೆ ಎಂದು ಹೇಳಿದ್ದಾರೆ.

“ಇದನ್ನು ಬೆಂಬಲಿಸಿದ ಎಲ್ಲರಿಗೂ ನಾನು ಧನ್ಯವಾದ ಹೇಳುತ್ತೇನೆ. ಅದಕ್ಕಾಗಿಯೇ ನಾನು ನಿನ್ನೆ ಎಲ್ಲರಿಗೂ ಧನ್ಯವಾದ ಹೇಳಿದ್ದೇನೆ ಮತ್ತು ಇಂದು ಕೂಡ ನಾನು ಅವರಿಗೆ ಧನ್ಯವಾದ ಹೇಳುತ್ತೇನೆ. ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ರಕ್ಷಿಸಲು ಮತ್ತು ಜನರನ್ನು ರಕ್ಷಿಸಲು ಯಾರಾದರೂ ಮುಂದೆ ಬಂದರೆ ನಾವು ಸ್ವಾಗತಿಸುತ್ತೇವೆ. ನಮ್ಮನ್ನು ಬೆಂಬಲಿಸುವ ಜನರಿಗೆ ನಾವು ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇವೆ” ಎಂದು ಕಾಂಗ್ರೆಸ್ ಅಧ್ಯಕ್ಷ ಖರ್ಗೆ ಹೇಳಿದರು.

”ಸತ್ಯ ಹೊರಬೇಕೆಂದು ನಾವು ಬಯಸುತ್ತೇವೆ. ಅದಾನಿ ಆಸ್ತಿ ಎರಡೂವರೆ ವರ್ಷಗಳಲ್ಲಿ ಹೆಚ್ಚಾಗಲು ಕಾರಣ ಏನಿರಬಹುದು? ಅವರಲ್ಲಿ ಮಾಟ ಮಂತ್ರವಿದ್ದರೆ ಅದನ್ನು ನಾಗರಿಕರೂ ತಿಳಿಸಲು ಬಯಸುತ್ತೇವೆ. ಜಂಟಿ ಸಂಸದೀಯ ಸಮಿತಿ (ಜೆಪಿಸಿ) ತನಿಖೆಯಾದ್ದಲ್ಲಿ ಆ ಮ್ಯಾಜಿಕ್ ಬಗ್ಗೆ ನಮಗೆ ಮತ್ತು ಜನರಿಗೆ ತಿಳಿಯುತ್ತದೆ” ಎಂದು ಹೇಳಿದರು.

ರಾಹುಲ್ ಗಾಂಧಿ ಅವರ ಅನರ್ಹತೆಯ ವಿರುದ್ಧ ಪ್ರತಿಭಟನೆಯ ಸಂಕೇತವಾಗಿ ಕಾಂಗ್ರೆಸ್ ಸಂಸದರು ಕಪ್ಪು ಶರ್ಟ್ ಧರಿಸಿದ್ದರು.

ತೆಲಂಗಾಣದಲ್ಲಿ ಕಾಂಗ್ರೆಸ್‌ನ ಪ್ರತಿಸ್ಪರ್ಧಿಯಾಗಿರುವ ಕೆ ಚಂದ್ರಶೇಖರ್ ರಾವ್ ಅವರ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಸಹ ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ಜೊತೆಗೆ “”ಕಪ್ಪು ಬಟ್ಟೆ ಧರಿಸಿ” ಪ್ರತಿಭಟನೆಯಲ್ಲಿ ಸೇರಿಕೊಂಡಿತು.

ಹದಿನೇಳು ವಿರೋಧ ಪಕ್ಷಗಳು – ಕಾಂಗ್ರೆಸ್, ಸಿಎಂಕೆ, ಸಮಾಜವಾದಿ ಪಾರ್ಟಿ, ಜೆಡಿಯು, ಬಿಆರ್‌ಎಸ್, ಸಿಪಿಎಂ, ಆರ್‌ಜೆಡಿ, ನ್ಯಾಷನಲ್ ಕಾಂಗ್ರೆಸ್ ಪಕ್ಷ, ಸಿಪಿಐ, ಇಂಡೀಯನ್ ಯುನಿಯನ್ ಮುಸ್ಲಿಂ ಲೀಗ್, ಎಮ್‌ಡಿಎಮ್‌ಕೆ, ಕೆಸಿ, ಟಿಎಂಸಿ, ಶಿವಸೇನಾ (ಉದ್ಧವ್ ಠಾಕ್ರೆ ಬಣ) ಹಾಗೂ ಜಮ್ಮು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್ ಪಕ್ಷಗಳು ಸಭೆಯಲ್ಲಿ ಭಾಗವಹಿಸಿದ್ದವು.

2019ರ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿಯ ಅನರ್ಹತೆಯ ಬಗ್ಗೆ ತೃಣಮೂಲ ಕಾಂಗ್ರೆಸ್ ಪಕ್ಷವು ಆರಂಭದಲ್ಲಿ ಲೆಕ್ಕಾಚಾರದ ಮೌನವನ್ನು ವಹಿಸಿತ್ತು. ಬಿಜೆಪಿಯು ವಿರೋಧ ಪಕ್ಷದ ನಾಯಕರನ್ನು ಗುರಿಯಾಗಿಸಿಕೊಂಡಿರುವುದರ ವಿರುದ್ಧ ಪ್ರತಿಪಕ್ಷಗಳು ಒಂದಾಗಬೇಕು ಎನ್ನುವ ವ್ಯಾಪಕ ಕರೆಗಳು ಬಂದಾಗಲೂ ತೃಣಮೂಲ ಸದಸ್ಯರು ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳ ಕಾರ್ಯತಂತ್ರದ ಸಭೆಗಳಿಂದ ದೂರ ಉಳಿದಿದ್ದರು.

ಇದೀಗ ಬಿಜೆಪಿಯ ತೀವ್ರ ಟೀಕಾಕಾರರಾಗಿರುವ ತೃಣಮೂಲ ಮುಖ್ಯಸ್ಥೆ ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಹುಲ್ ಗಾಂಧಿ ಅವರನ್ನು ಬೆಂಬಲಿಸಿದ್ದಾರೆ.

”ಪ್ರಧಾನಿ ಮೋದಿಯವರ ನವಭಾರತದಲ್ಲಿ, ವಿರೋಧ ಪಕ್ಷದ ನಾಯಕರು ಬಿಜೆಪಿಯ ಪ್ರಧಾನ ಗುರಿಯಾಗಿದ್ದಾರೆ! ಕ್ರಿಮಿನಲ್ ಹಿನ್ನಲೆ ಹೊಂದಿರುವ ಬಿಜೆಪಿ ನಾಯಕರನ್ನು ಸಂಪುಟಕ್ಕೆ ಸೇರಿಸಿಕೊಳ್ಳುತ್ತಾರೆ ಅದೇ, ವಿರೋಧ ಪಕ್ಷದ ನಾಯಕರನ್ನು ಅವರ ಭಾಷಣದ ಕಾರಣಕ್ಕಾಗಿ ಅನರ್ಹಗೊಳಿಸಲಾಗಿದೆ. ಇಂದು, ನಮ್ಮ ಸಾಂವಿಧಾನಿಕ ಪ್ರಜಾಪ್ರಭುತ್ವದ ಹೊಸ ಕುಸಿತಕ್ಕೆ ನಾವು ಸಾಕ್ಷಿಯಾಗಿದ್ದೇವೆ” ಎಂದು ಬ್ಯಾನರ್ಜಿ ಹೇಳಿದಳು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....