Homeಮುಖಪುಟಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳ ಸಭೆಯಲ್ಲಿ ಟಿಎಂಸಿ ನಾಯಕರು ಪ್ರತ್ಯಕ್ಷ; ಕೇಂದ್ರದ ವಿರುದ್ಧ "ಕಪ್ಪು" ಬಟ್ಟೆ ಧರಿಸಿ...

ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳ ಸಭೆಯಲ್ಲಿ ಟಿಎಂಸಿ ನಾಯಕರು ಪ್ರತ್ಯಕ್ಷ; ಕೇಂದ್ರದ ವಿರುದ್ಧ “ಕಪ್ಪು” ಬಟ್ಟೆ ಧರಿಸಿ ಪ್ರತಿಭಟನೆ

- Advertisement -
- Advertisement -

ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳ ಕಾರ್ಯತಂತ್ರದ ಸಭೆಯಲ್ಲಿ ಇಂದು (ಸೋಮವಾರ) ಮೊದಲ ಬಾರಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾಣಿಸಿಕೊಂಡಿದೆ. ಪ್ರತಿಪಕ್ಷಗಳ ಒಗ್ಗಟ್ಟಿನಲ್ಲಿ ಇದು ಅಪರೂಪದ ಬೆಳವಣಿಗೆಯಾಗಿದೆ.

ಈ ಸಭೆಯಲ್ಲಿ ಪ್ರಮುಖವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಲೋಕಸಭೆ ಸದಸ್ಯತ್ವದಿಂದ ಅನರ್ಹಗೊಳಿಸಿರುವುದು ಮತ್ತು ಅದಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಮುಂದಿನ ಕಾರ್ಯತಂತ್ರದ ಬಗ್ಗೆ ಚರ್ಚೆ ನಡೆಸಲಾಗಿದೆ. ರಾಹುಲ್ ಗಾಂಧಿಯ ಸಂಸದರಾಗಿ ಅನರ್ಹಗೊಳಿಸುವಿಕೆಯ ವಿರುದ್ಧ “ಕಪ್ಪು” ಬಟ್ಟೆ ಧರಿಸಿ ಪ್ರತಿಭಟನೆಯನ್ನು ನಡೆಸುವ ಬಗ್ಗೆ ಸಭೆಯಲ್ಲಿ ಚರ್ಚೆಯಾಯಿತು.

ಸಭೆ ಬಳಿಕ ರಾಹುಲ್ ಗಾಂಧಿ ಅನರ್ಹತೆಯನ್ನು ವಿರೋಧಿಸಿ ಪ್ರತಿಪಕ್ಷದ ಸಂಸದರು ಕಪ್ಪು ಬಟ್ಟೆ, ಕಪ್ಪು ಪಟ್ಟಿ ಧರಿಸಿ ಸಂಸತ್ತಿಗೆ ಆಗಮಿಸಿದ್ದಾರೆ. ಬಳಿಕ ಗಾಂಧಿ ಪ್ರತಿಮೆ ಭಿತ್ತಿಪತ್ರ ಪ್ರದರ್ಶಿಸಿ ಪ್ರತಿಭಟಿಸಿದ್ದಾರೆ.

ಸೋಮವಾರ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ ಕಚೇರಿಯಲ್ಲಿ ನಡೆದ ಕಾರ್ಯತಂತ್ರದ ಸಭೆಯಲ್ಲಿ ತೃಣಮೂಲದ ಪ್ರಸೂನ್ ಬ್ಯಾನರ್ಜಿ ಮತ್ತು ಜವಾಹರ್ ಸಿರ್ಕಾರ್ ಭಾಗಿಯಾದರು. ಮಮತಾ ಬ್ಯಾನರ್ಜಿಯವರ ಟಿಎಂಸಿ ಪಕ್ಷವು ಕಾಂಗ್ರೆಸ್ ಮತ್ತು ಬಿಜೆಪಿ ಎರಡರಿಂದಲೂ ಸಮಾನವಾಗಿ ಉಳಿಯುವುದಾಗಿ ಘೋಷಿಸಿದ ನಂತರ ಇದು ಪ್ರಮುಖ ಬದಲಾವಣೆಯನ್ನು ಸೂಚಿಸುತ್ತದೆ.

ರಾಹುಲ್ ಗಾಂಧಿ ಅನರ್ಹತೆ ವಿಚಾರದ ವಿರುದ್ಧ ಪ್ರತಿಪಕ್ಷಗಳು ಒಂದಾಗಬೇಕು ಎಂದು ನಂಬಿರುವುದರಿಂದ ಈ ಪ್ರತಿಭಟನೆಗೆ ಮಾತ್ರ ತಮ್ಮ ಬೆಂಬಲವನ್ನು ಸೀಮಿತಗೊಳಿಸಲಾಗಿದೆ ಎಂದು ತೃಣಮೂಲ ಕಾಂಗ್ರೆಸ್ ಪ್ರತಿಪಾದಿಸಿದೆ.

ಇದನ್ನೂ ಓದಿ: ‘ಕಳ್ಳರನ್ನು ಕಳ್ಳ ಎನ್ನದೆ ಸಾಧು-ಸಂತರು, ಸಮಾಜ ಸುಧಾರಕರೆಂದು ಕರೆಯಬೇಕೇ?’: ಸಿದ್ದರಾಮಯ್ಯ ಪ್ರಶ್ನೆ

ತೃಣಮೂಲದ ಕಾಂಗ್ರೆಸ್‌ನ ಅಚ್ಚರಿಯ ಈ ನಡೆಗೆ ಪ್ರತಿಕ್ರಿಯಿಸಿದ ಖರ್ಗೆ, ”ಪ್ರಜಾಪ್ರಭುತ್ವವನ್ನು ರಕ್ಷಿಸಲು” ಯಾರೇ ಮುಂದೆ ಬಂದರೂ ಕಾಂಗ್ರೆಸ್ ಸ್ವಾಗತಿಸುತ್ತದೆ ಎಂದು ಹೇಳಿದ್ದಾರೆ.

“ಇದನ್ನು ಬೆಂಬಲಿಸಿದ ಎಲ್ಲರಿಗೂ ನಾನು ಧನ್ಯವಾದ ಹೇಳುತ್ತೇನೆ. ಅದಕ್ಕಾಗಿಯೇ ನಾನು ನಿನ್ನೆ ಎಲ್ಲರಿಗೂ ಧನ್ಯವಾದ ಹೇಳಿದ್ದೇನೆ ಮತ್ತು ಇಂದು ಕೂಡ ನಾನು ಅವರಿಗೆ ಧನ್ಯವಾದ ಹೇಳುತ್ತೇನೆ. ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ರಕ್ಷಿಸಲು ಮತ್ತು ಜನರನ್ನು ರಕ್ಷಿಸಲು ಯಾರಾದರೂ ಮುಂದೆ ಬಂದರೆ ನಾವು ಸ್ವಾಗತಿಸುತ್ತೇವೆ. ನಮ್ಮನ್ನು ಬೆಂಬಲಿಸುವ ಜನರಿಗೆ ನಾವು ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇವೆ” ಎಂದು ಕಾಂಗ್ರೆಸ್ ಅಧ್ಯಕ್ಷ ಖರ್ಗೆ ಹೇಳಿದರು.

”ಸತ್ಯ ಹೊರಬೇಕೆಂದು ನಾವು ಬಯಸುತ್ತೇವೆ. ಅದಾನಿ ಆಸ್ತಿ ಎರಡೂವರೆ ವರ್ಷಗಳಲ್ಲಿ ಹೆಚ್ಚಾಗಲು ಕಾರಣ ಏನಿರಬಹುದು? ಅವರಲ್ಲಿ ಮಾಟ ಮಂತ್ರವಿದ್ದರೆ ಅದನ್ನು ನಾಗರಿಕರೂ ತಿಳಿಸಲು ಬಯಸುತ್ತೇವೆ. ಜಂಟಿ ಸಂಸದೀಯ ಸಮಿತಿ (ಜೆಪಿಸಿ) ತನಿಖೆಯಾದ್ದಲ್ಲಿ ಆ ಮ್ಯಾಜಿಕ್ ಬಗ್ಗೆ ನಮಗೆ ಮತ್ತು ಜನರಿಗೆ ತಿಳಿಯುತ್ತದೆ” ಎಂದು ಹೇಳಿದರು.

ರಾಹುಲ್ ಗಾಂಧಿ ಅವರ ಅನರ್ಹತೆಯ ವಿರುದ್ಧ ಪ್ರತಿಭಟನೆಯ ಸಂಕೇತವಾಗಿ ಕಾಂಗ್ರೆಸ್ ಸಂಸದರು ಕಪ್ಪು ಶರ್ಟ್ ಧರಿಸಿದ್ದರು.

ತೆಲಂಗಾಣದಲ್ಲಿ ಕಾಂಗ್ರೆಸ್‌ನ ಪ್ರತಿಸ್ಪರ್ಧಿಯಾಗಿರುವ ಕೆ ಚಂದ್ರಶೇಖರ್ ರಾವ್ ಅವರ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಸಹ ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ಜೊತೆಗೆ “”ಕಪ್ಪು ಬಟ್ಟೆ ಧರಿಸಿ” ಪ್ರತಿಭಟನೆಯಲ್ಲಿ ಸೇರಿಕೊಂಡಿತು.

ಹದಿನೇಳು ವಿರೋಧ ಪಕ್ಷಗಳು – ಕಾಂಗ್ರೆಸ್, ಸಿಎಂಕೆ, ಸಮಾಜವಾದಿ ಪಾರ್ಟಿ, ಜೆಡಿಯು, ಬಿಆರ್‌ಎಸ್, ಸಿಪಿಎಂ, ಆರ್‌ಜೆಡಿ, ನ್ಯಾಷನಲ್ ಕಾಂಗ್ರೆಸ್ ಪಕ್ಷ, ಸಿಪಿಐ, ಇಂಡೀಯನ್ ಯುನಿಯನ್ ಮುಸ್ಲಿಂ ಲೀಗ್, ಎಮ್‌ಡಿಎಮ್‌ಕೆ, ಕೆಸಿ, ಟಿಎಂಸಿ, ಶಿವಸೇನಾ (ಉದ್ಧವ್ ಠಾಕ್ರೆ ಬಣ) ಹಾಗೂ ಜಮ್ಮು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್ ಪಕ್ಷಗಳು ಸಭೆಯಲ್ಲಿ ಭಾಗವಹಿಸಿದ್ದವು.

2019ರ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿಯ ಅನರ್ಹತೆಯ ಬಗ್ಗೆ ತೃಣಮೂಲ ಕಾಂಗ್ರೆಸ್ ಪಕ್ಷವು ಆರಂಭದಲ್ಲಿ ಲೆಕ್ಕಾಚಾರದ ಮೌನವನ್ನು ವಹಿಸಿತ್ತು. ಬಿಜೆಪಿಯು ವಿರೋಧ ಪಕ್ಷದ ನಾಯಕರನ್ನು ಗುರಿಯಾಗಿಸಿಕೊಂಡಿರುವುದರ ವಿರುದ್ಧ ಪ್ರತಿಪಕ್ಷಗಳು ಒಂದಾಗಬೇಕು ಎನ್ನುವ ವ್ಯಾಪಕ ಕರೆಗಳು ಬಂದಾಗಲೂ ತೃಣಮೂಲ ಸದಸ್ಯರು ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳ ಕಾರ್ಯತಂತ್ರದ ಸಭೆಗಳಿಂದ ದೂರ ಉಳಿದಿದ್ದರು.

ಇದೀಗ ಬಿಜೆಪಿಯ ತೀವ್ರ ಟೀಕಾಕಾರರಾಗಿರುವ ತೃಣಮೂಲ ಮುಖ್ಯಸ್ಥೆ ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಹುಲ್ ಗಾಂಧಿ ಅವರನ್ನು ಬೆಂಬಲಿಸಿದ್ದಾರೆ.

”ಪ್ರಧಾನಿ ಮೋದಿಯವರ ನವಭಾರತದಲ್ಲಿ, ವಿರೋಧ ಪಕ್ಷದ ನಾಯಕರು ಬಿಜೆಪಿಯ ಪ್ರಧಾನ ಗುರಿಯಾಗಿದ್ದಾರೆ! ಕ್ರಿಮಿನಲ್ ಹಿನ್ನಲೆ ಹೊಂದಿರುವ ಬಿಜೆಪಿ ನಾಯಕರನ್ನು ಸಂಪುಟಕ್ಕೆ ಸೇರಿಸಿಕೊಳ್ಳುತ್ತಾರೆ ಅದೇ, ವಿರೋಧ ಪಕ್ಷದ ನಾಯಕರನ್ನು ಅವರ ಭಾಷಣದ ಕಾರಣಕ್ಕಾಗಿ ಅನರ್ಹಗೊಳಿಸಲಾಗಿದೆ. ಇಂದು, ನಮ್ಮ ಸಾಂವಿಧಾನಿಕ ಪ್ರಜಾಪ್ರಭುತ್ವದ ಹೊಸ ಕುಸಿತಕ್ಕೆ ನಾವು ಸಾಕ್ಷಿಯಾಗಿದ್ದೇವೆ” ಎಂದು ಬ್ಯಾನರ್ಜಿ ಹೇಳಿದಳು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...