Homeಮುಖಪುಟಇಂಡಿಯಾ ಮೈತ್ರಿಕೂಟ ತೊರೆಯಲು ಅಧೀರ್ ರಂಜನ್ ಚೌಧರಿ ಕಾರಣ: ಟಿಎಂಸಿ ಸಂಸದ ಓಬ್ರಿಯಾನ್

ಇಂಡಿಯಾ ಮೈತ್ರಿಕೂಟ ತೊರೆಯಲು ಅಧೀರ್ ರಂಜನ್ ಚೌಧರಿ ಕಾರಣ: ಟಿಎಂಸಿ ಸಂಸದ ಓಬ್ರಿಯಾನ್

- Advertisement -
- Advertisement -

ರಾಜ್ಯದಲ್ಲಿ ಉಭಯ ಪಕ್ಷಗಳ ನಡುವೆ ಮೈತ್ರಿ ಏರ್ಪಡದಿದ್ದಕ್ಕೆ ಪಶ್ಚಿಮ ಬಂಗಾಳ ಕಾಂಗ್ರೆಸ್ ಮುಖ್ಯಸ್ಥ ಅಧೀರ್ ರಂಜನ್ ಚೌಧರಿ ಮಾತ್ರ ಹೊಣೆ ಎಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕ ಡೆರೆಕ್ ಓಬ್ರಿಯಾನ್ ಗಂಭೀರ ಆರೋಪ ಮಾಡಿದ್ದಾರೆ.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮತ್ತು ತೃಣಮೂಲ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ತಮ್ಮ ಪಕ್ಷವು ಲೋಕಸಭೆ ಚುನಾವಣೆ ಚುನಾವಣೆಯಲ್ಲಿ ‘ಏಕಾಂಗಿಯಾಗಿ’ ಹೋರಾಡಲಿದೆ ಎಂದು ಘೋಷಿಸಿದ ಒಂದು ದಿನದ ನಂತರ ಓಬ್ರಿಯಾನ್ ಪ್ರತಿಕ್ರಿಯೆ ನೀಡಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಮೈತ್ರಿ ಕಾರ್ಯರೂಪಕ್ಕೆ ಬರದಿರಲು ಅಧೀರ್ ರಂಜನ್ ಚೌಧರಿ “ಕಾರಣ” ಎಂದು ಪ್ರತಿಪಾದಿಸಿದ ಓಬ್ರಿಯಾನ್, ಭಾರತೀಯ ರಾಷ್ಟ್ರೀಯ ಅಭಿವೃದ್ಧಿ ಅಂತರ್ಗತ ಮೈತ್ರಿಕೂಟವು (ಇಂಡಿಯಾ) ಅನೇಕ ವಿರೋಧಿಗಳನ್ನು ಹೊಂದಿದೆ. ಆದರೆ, ಬಿಜೆಪಿ ಮತ್ತು ಅಧೀರ್ ರಂಜನ್ ಚೌಧರಿ ಮಾತ್ರ ಮೈತ್ರಿಕೂಟದ ವಿರುದ್ಧ ಪದೇ ಪದೇ ಮಾತನಾಡಿದರು’ ಎಂದು ಹೇಳಿದರು.

‘ಸಾರ್ವತ್ರಿಕ ಚುನಾವಣೆಯ ನಂತರ, ಕಾಂಗ್ರೆಸ್ ತನ್ನ ಕೆಲಸವನ್ನು ನಿರ್ವಹಿಸಿ, ಗಣನೀಯ ಸಂಖ್ಯೆಯ ಸ್ಥಾನಗಳಲ್ಲಿ ಬಿಜೆಪಿಯನ್ನು ಸೋಲಿಸಿದರೆ, ತೃಣಮೂಲ ಕಾಂಗ್ರೆಸ್ ಸಂವಿಧಾನವನ್ನು ನಂಬುವ ಮತ್ತು ಹೋರಾಡುವರ ಭಾಗವಾಗಲಿದೆ’ ಎಂದು ಓಬ್ರಿಯಾನ್ ಸುದ್ದಿಗಾರರಿಗೆ ತಿಳಿಸಿದರು.

‘ಚೌಧರಿ ಅವರು ಬಂಗಾಳದಲ್ಲಿ ಇಂಡಿಯಾ ಮೈತ್ರಿಯ ಸಮಾಧಿಗಾರ. ಅವರ ದೈನಂದಿನ ಗದ್ದಲದಿಂದಾಗಿ ವಿಷಯಗಳು ನೆಲಕಚ್ಚಿವೆ. ನಿನ್ನೆ ಮುಖ್ಯಮಂತ್ರಿಯ ಹೇಳಿಕೆ ನೀಡಿದ ನಂತರ, ಕಾಂಗ್ರೆಸ್ ನಾಯಕರು ಡ್ಯಾಮೇಜ್ ಕಂಟ್ರೋಲ್‌ಗೆ ಬರುತ್ತಿದ್ದಾರೆ. ಆದರೆ, ಈಗ ತಡವಾಗಿದೆ’ ಎಂದು ತೃಣಮೂಲ ಮೂಲಗಳು ತಿಳಿಸಿವೆ.

ಸೀಟು ಹಂಚಿಕೆಯ ಮಾತುಕತೆಯ ಸಂದರ್ಭದಲ್ಲಿ ತೃಣಮೂಲ ಬಹಳ ತಾಳ್ಮೆಯಿಂದಿತ್ತು. ನಾವು ಸಾಕಷ್ಟು ತಾಳ್ಮೆ ಹೊಂದಿದ್ದೇವೆ. ಆದರೆ ನಾವು ಈವರೆಗೆ ನೋಡಿದ್ದು ವಿಳಂಬ, ವಿಳಂಬ ಮತ್ತು ವಿಳಂಬ ಮಾತ್ರ’ ಎಂದು ಮೂಲಗಳು ತಿಳಿಸಿವೆ.

‘ತೃಣಮೂಲ ಬಂಗಾಳದಲ್ಲಿ ಏಕಾಂಗಿಯಾಗಿ ಹೋರಾಡುತ್ತದೆ ಮತ್ತು ಲೋಕಸಭೆ ಚುನಾವಣೆಯ ನಂತರವೇ ಕಾಂಗ್ರೆಸ್‌ನೊಂದಿಗೆ ಯಾವುದೇ ಮೈತ್ರಿ ಮಾಡಿಕೊಳ್ಳುವ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತದೆ’ ಎಂದು ಬ್ಯಾನರ್ಜಿ ನಿನ್ನೆ ಘೋಷಿಸಿದರು.

ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾಗಿರುವ ಕಾಂಗ್ರೆಸ್, ಹದಗೆಟ್ಟ ಸಂಬಂಧಗಳನ್ನು ಸರಿಪಡಿಸಲಾಗುವುದು ಎಂದು ಭರವಸೆ ನೀಡಿದೆ. ಬಿಕ್ಕಟ್ಟಿಗೆ ಪರಿಹಾರ ಕಂಡುಕೊಳ್ಳುತ್ತೇವೆ ಎಂದು ಪಕ್ಷದ ಹಿರಿಯ ನಾಯಕ ಜೈರಾಮ್ ರಮೇಶ್ ಹೇಳಿದ್ದಾರೆ. “ಮಮತಾಜಿ ಇಲ್ಲದ ಇಂಡಿಯಾ ಬಣವನ್ನು ಕಾಂಗ್ರೆಸ್ ಊಹಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ರಮೇಶ್ ನಿನ್ನೆ ಹೇಳಿದ್ದರು.

ಭಾರತ್ ಜೋಡೋ ನ್ಯಾಯ್ ಯಾತ್ರೆ ಇಂದು ಬಂಗಾಳವನ್ನು ಪ್ರವೇಶಿಸಿದ್ದು, ಇಂಡಿಯಾ ಬ್ಲಾಕ್ ಅನ್ಯಾಯದ ವಿರುದ್ಧ ಹೋರಾಡುತ್ತದೆ ಎಂದು ರಾಹುಲ್ ಗಾಂಧಿ ಹೇಳಿದರು. ‘ಪಶ್ಚಿಮ ಬಂಗಾಳಕ್ಕೆ ಬಂದಿದ್ದಕ್ಕೆ ನನಗೆ ಸಂತೋಷವಾಗಿದೆ. ನಿಮ್ಮ ಮಾತನ್ನು ಕೇಳಲು ಮತ್ತು ನಿಮ್ಮೊಂದಿಗೆ ನಿಲ್ಲಲು ನಾವು ಇಲ್ಲಿಗೆ ಬಂದಿದ್ದೇವೆ. ಬಿಜೆಪಿ-ಆರ್‌ಎಸ್‌ಎಸ್‌ ದ್ವೇಷ, ಹಿಂಸಾಚಾರ ಮತ್ತು ಅನ್ಯಾಯವನ್ನು ಹರಡುತ್ತಿವೆ. ಆದ್ದರಿಂದ, ಇಂಡಿಯಾ ಕೂಟವು ಹೇಗಾದರೂ ಒಟ್ಟಾಗಿ ಹೋರಾಡಲಿದೆ’ ಎಂದು ಅವರು ಭರವಸೆ ವ್ಯಕ್ತಪಡಿಸಿದರು.

ಸೀಟು ಹಂಚಿಕೆ ಕುರಿತ ಮಾತುಕತೆಗಳು ವಿಫಲವಾದ ನಂತರ ಮೈತ್ರಿ ಕುರಿತು ಬ್ಯಾನರ್ಜಿ ಅವರ ಹೇಳಿಕೆಗಳು ಬಂದಿವೆ. ವರದಿಗಳ ಪ್ರಕಾರ, ಬಂಗಾಳದಲ್ಲಿ ತೃಣಮೂಲ ಪಕ್ಷವು ಕಾಂಗ್ರೆಸ್‌ಗೆ ಎರಡು ಸ್ಥಾನಗಳನ್ನು ನೀಡಲು ನಿರ್ಧರಿಸಿತ್ತು. ಅವರು ಕನಿಷ್ಠ 10 ಸ್ಥಾನಗಳಲ್ಲಿ ಸ್ಪರ್ಧಿಸಲು ಬಯಸಿದ್ದರು ಎನ್ನಲಾಗಿದೆ.

ಲೋಕಸಭೆಯಲ್ಲಿ ಕಾಂಗ್ರೆಸ್‌ನ ನಾಯಕರಾಗಿರುವ ಚೌಧರಿ ಅವರು ತೃಣಮೂಲ ಮುಖ್ಯಸ್ಥರನ್ನು “ಅವಕಾಶವಾದಿ” ನಾಯಕ ಎಂದು ಕರೆದರು. ಕಾಂಗ್ರೆಸ್ ಸ್ವತಂತ್ರವಾಗಿ ಚುನಾವಣೆಗಳನ್ನು ಎದುರಿಸಲು ಸಮರ್ಥವಾಗಿದೆ’ ಎಂದು ಹೇಳಿದಾಗ ವಿವಾದ ಭುಗಿಲೆದ್ದಿತು.

ಇದನ್ನೂ ಓದು; ರಾಹುಲ್ ಗಾಂಧಿ ‘ಕಲ್ಲಿದ್ದಲು ಒಲೆ’ ಹೇಳಿಕೆಯನ್ನು ಲೇವಡಿ ಮಾಡಿದ ಬಿಜೆಪಿಗರು; ವಾಸ್ತವ ಏನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...