Homeಮುಖಪುಟಇಂಡಿಯಾ ಮೈತ್ರಿಕೂಟ ತೊರೆಯಲು ಅಧೀರ್ ರಂಜನ್ ಚೌಧರಿ ಕಾರಣ: ಟಿಎಂಸಿ ಸಂಸದ ಓಬ್ರಿಯಾನ್

ಇಂಡಿಯಾ ಮೈತ್ರಿಕೂಟ ತೊರೆಯಲು ಅಧೀರ್ ರಂಜನ್ ಚೌಧರಿ ಕಾರಣ: ಟಿಎಂಸಿ ಸಂಸದ ಓಬ್ರಿಯಾನ್

- Advertisement -
- Advertisement -

ರಾಜ್ಯದಲ್ಲಿ ಉಭಯ ಪಕ್ಷಗಳ ನಡುವೆ ಮೈತ್ರಿ ಏರ್ಪಡದಿದ್ದಕ್ಕೆ ಪಶ್ಚಿಮ ಬಂಗಾಳ ಕಾಂಗ್ರೆಸ್ ಮುಖ್ಯಸ್ಥ ಅಧೀರ್ ರಂಜನ್ ಚೌಧರಿ ಮಾತ್ರ ಹೊಣೆ ಎಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕ ಡೆರೆಕ್ ಓಬ್ರಿಯಾನ್ ಗಂಭೀರ ಆರೋಪ ಮಾಡಿದ್ದಾರೆ.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮತ್ತು ತೃಣಮೂಲ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ತಮ್ಮ ಪಕ್ಷವು ಲೋಕಸಭೆ ಚುನಾವಣೆ ಚುನಾವಣೆಯಲ್ಲಿ ‘ಏಕಾಂಗಿಯಾಗಿ’ ಹೋರಾಡಲಿದೆ ಎಂದು ಘೋಷಿಸಿದ ಒಂದು ದಿನದ ನಂತರ ಓಬ್ರಿಯಾನ್ ಪ್ರತಿಕ್ರಿಯೆ ನೀಡಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಮೈತ್ರಿ ಕಾರ್ಯರೂಪಕ್ಕೆ ಬರದಿರಲು ಅಧೀರ್ ರಂಜನ್ ಚೌಧರಿ “ಕಾರಣ” ಎಂದು ಪ್ರತಿಪಾದಿಸಿದ ಓಬ್ರಿಯಾನ್, ಭಾರತೀಯ ರಾಷ್ಟ್ರೀಯ ಅಭಿವೃದ್ಧಿ ಅಂತರ್ಗತ ಮೈತ್ರಿಕೂಟವು (ಇಂಡಿಯಾ) ಅನೇಕ ವಿರೋಧಿಗಳನ್ನು ಹೊಂದಿದೆ. ಆದರೆ, ಬಿಜೆಪಿ ಮತ್ತು ಅಧೀರ್ ರಂಜನ್ ಚೌಧರಿ ಮಾತ್ರ ಮೈತ್ರಿಕೂಟದ ವಿರುದ್ಧ ಪದೇ ಪದೇ ಮಾತನಾಡಿದರು’ ಎಂದು ಹೇಳಿದರು.

‘ಸಾರ್ವತ್ರಿಕ ಚುನಾವಣೆಯ ನಂತರ, ಕಾಂಗ್ರೆಸ್ ತನ್ನ ಕೆಲಸವನ್ನು ನಿರ್ವಹಿಸಿ, ಗಣನೀಯ ಸಂಖ್ಯೆಯ ಸ್ಥಾನಗಳಲ್ಲಿ ಬಿಜೆಪಿಯನ್ನು ಸೋಲಿಸಿದರೆ, ತೃಣಮೂಲ ಕಾಂಗ್ರೆಸ್ ಸಂವಿಧಾನವನ್ನು ನಂಬುವ ಮತ್ತು ಹೋರಾಡುವರ ಭಾಗವಾಗಲಿದೆ’ ಎಂದು ಓಬ್ರಿಯಾನ್ ಸುದ್ದಿಗಾರರಿಗೆ ತಿಳಿಸಿದರು.

‘ಚೌಧರಿ ಅವರು ಬಂಗಾಳದಲ್ಲಿ ಇಂಡಿಯಾ ಮೈತ್ರಿಯ ಸಮಾಧಿಗಾರ. ಅವರ ದೈನಂದಿನ ಗದ್ದಲದಿಂದಾಗಿ ವಿಷಯಗಳು ನೆಲಕಚ್ಚಿವೆ. ನಿನ್ನೆ ಮುಖ್ಯಮಂತ್ರಿಯ ಹೇಳಿಕೆ ನೀಡಿದ ನಂತರ, ಕಾಂಗ್ರೆಸ್ ನಾಯಕರು ಡ್ಯಾಮೇಜ್ ಕಂಟ್ರೋಲ್‌ಗೆ ಬರುತ್ತಿದ್ದಾರೆ. ಆದರೆ, ಈಗ ತಡವಾಗಿದೆ’ ಎಂದು ತೃಣಮೂಲ ಮೂಲಗಳು ತಿಳಿಸಿವೆ.

ಸೀಟು ಹಂಚಿಕೆಯ ಮಾತುಕತೆಯ ಸಂದರ್ಭದಲ್ಲಿ ತೃಣಮೂಲ ಬಹಳ ತಾಳ್ಮೆಯಿಂದಿತ್ತು. ನಾವು ಸಾಕಷ್ಟು ತಾಳ್ಮೆ ಹೊಂದಿದ್ದೇವೆ. ಆದರೆ ನಾವು ಈವರೆಗೆ ನೋಡಿದ್ದು ವಿಳಂಬ, ವಿಳಂಬ ಮತ್ತು ವಿಳಂಬ ಮಾತ್ರ’ ಎಂದು ಮೂಲಗಳು ತಿಳಿಸಿವೆ.

‘ತೃಣಮೂಲ ಬಂಗಾಳದಲ್ಲಿ ಏಕಾಂಗಿಯಾಗಿ ಹೋರಾಡುತ್ತದೆ ಮತ್ತು ಲೋಕಸಭೆ ಚುನಾವಣೆಯ ನಂತರವೇ ಕಾಂಗ್ರೆಸ್‌ನೊಂದಿಗೆ ಯಾವುದೇ ಮೈತ್ರಿ ಮಾಡಿಕೊಳ್ಳುವ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತದೆ’ ಎಂದು ಬ್ಯಾನರ್ಜಿ ನಿನ್ನೆ ಘೋಷಿಸಿದರು.

ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾಗಿರುವ ಕಾಂಗ್ರೆಸ್, ಹದಗೆಟ್ಟ ಸಂಬಂಧಗಳನ್ನು ಸರಿಪಡಿಸಲಾಗುವುದು ಎಂದು ಭರವಸೆ ನೀಡಿದೆ. ಬಿಕ್ಕಟ್ಟಿಗೆ ಪರಿಹಾರ ಕಂಡುಕೊಳ್ಳುತ್ತೇವೆ ಎಂದು ಪಕ್ಷದ ಹಿರಿಯ ನಾಯಕ ಜೈರಾಮ್ ರಮೇಶ್ ಹೇಳಿದ್ದಾರೆ. “ಮಮತಾಜಿ ಇಲ್ಲದ ಇಂಡಿಯಾ ಬಣವನ್ನು ಕಾಂಗ್ರೆಸ್ ಊಹಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ರಮೇಶ್ ನಿನ್ನೆ ಹೇಳಿದ್ದರು.

ಭಾರತ್ ಜೋಡೋ ನ್ಯಾಯ್ ಯಾತ್ರೆ ಇಂದು ಬಂಗಾಳವನ್ನು ಪ್ರವೇಶಿಸಿದ್ದು, ಇಂಡಿಯಾ ಬ್ಲಾಕ್ ಅನ್ಯಾಯದ ವಿರುದ್ಧ ಹೋರಾಡುತ್ತದೆ ಎಂದು ರಾಹುಲ್ ಗಾಂಧಿ ಹೇಳಿದರು. ‘ಪಶ್ಚಿಮ ಬಂಗಾಳಕ್ಕೆ ಬಂದಿದ್ದಕ್ಕೆ ನನಗೆ ಸಂತೋಷವಾಗಿದೆ. ನಿಮ್ಮ ಮಾತನ್ನು ಕೇಳಲು ಮತ್ತು ನಿಮ್ಮೊಂದಿಗೆ ನಿಲ್ಲಲು ನಾವು ಇಲ್ಲಿಗೆ ಬಂದಿದ್ದೇವೆ. ಬಿಜೆಪಿ-ಆರ್‌ಎಸ್‌ಎಸ್‌ ದ್ವೇಷ, ಹಿಂಸಾಚಾರ ಮತ್ತು ಅನ್ಯಾಯವನ್ನು ಹರಡುತ್ತಿವೆ. ಆದ್ದರಿಂದ, ಇಂಡಿಯಾ ಕೂಟವು ಹೇಗಾದರೂ ಒಟ್ಟಾಗಿ ಹೋರಾಡಲಿದೆ’ ಎಂದು ಅವರು ಭರವಸೆ ವ್ಯಕ್ತಪಡಿಸಿದರು.

ಸೀಟು ಹಂಚಿಕೆ ಕುರಿತ ಮಾತುಕತೆಗಳು ವಿಫಲವಾದ ನಂತರ ಮೈತ್ರಿ ಕುರಿತು ಬ್ಯಾನರ್ಜಿ ಅವರ ಹೇಳಿಕೆಗಳು ಬಂದಿವೆ. ವರದಿಗಳ ಪ್ರಕಾರ, ಬಂಗಾಳದಲ್ಲಿ ತೃಣಮೂಲ ಪಕ್ಷವು ಕಾಂಗ್ರೆಸ್‌ಗೆ ಎರಡು ಸ್ಥಾನಗಳನ್ನು ನೀಡಲು ನಿರ್ಧರಿಸಿತ್ತು. ಅವರು ಕನಿಷ್ಠ 10 ಸ್ಥಾನಗಳಲ್ಲಿ ಸ್ಪರ್ಧಿಸಲು ಬಯಸಿದ್ದರು ಎನ್ನಲಾಗಿದೆ.

ಲೋಕಸಭೆಯಲ್ಲಿ ಕಾಂಗ್ರೆಸ್‌ನ ನಾಯಕರಾಗಿರುವ ಚೌಧರಿ ಅವರು ತೃಣಮೂಲ ಮುಖ್ಯಸ್ಥರನ್ನು “ಅವಕಾಶವಾದಿ” ನಾಯಕ ಎಂದು ಕರೆದರು. ಕಾಂಗ್ರೆಸ್ ಸ್ವತಂತ್ರವಾಗಿ ಚುನಾವಣೆಗಳನ್ನು ಎದುರಿಸಲು ಸಮರ್ಥವಾಗಿದೆ’ ಎಂದು ಹೇಳಿದಾಗ ವಿವಾದ ಭುಗಿಲೆದ್ದಿತು.

ಇದನ್ನೂ ಓದು; ರಾಹುಲ್ ಗಾಂಧಿ ‘ಕಲ್ಲಿದ್ದಲು ಒಲೆ’ ಹೇಳಿಕೆಯನ್ನು ಲೇವಡಿ ಮಾಡಿದ ಬಿಜೆಪಿಗರು; ವಾಸ್ತವ ಏನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂ : 15 ಮಂದಿಗೆ 24 ಗಂಟೆಯೊಳಗೆ ದೇಶ ತೊರೆಯಲು ಆದೇಶ : ಮಾಧ್ಯಮಗಳ ಮೂಲಕ ವಿಷಯ ತಿಳಿದುಕೊಂಡ ಕುಟುಂಬಸ್ಥರು

ಅಸ್ಸಾಂನ ನಾಗಾಂವ್ ಜಿಲ್ಲಾಡಳಿತವು 15 ಘೋಷಿತ ವಿದೇಶಿಯರಿಗೆ 24 ಗಂಟೆಗಳ ಒಳಗೆ ರಾಜ್ಯ ತೊರೆಯುವಂತೆ ಆದೇಶಿಸಿದ ಬಗ್ಗೆ ವರದಿಯಾಗಿದೆ. ಬುಧವಾರ (ಡಿ.17) ಜಿಲ್ಲಾಡಳಿತ ಈ ಆದೇಶ ನೀಡಿತ್ತು. ಆದರೆ, ಇದುವರೆಗೆ (ಡಿ.20) ಈ 15...

ಸಿರಿಯಾದ ಐಸಿಸ್ ಅಡಗುತಾಣಗಳ ಮೇಲೆ ಅಮೆರಿಕ ವಾಯುದಾಳಿ

ಕಳೆದ ವಾರ ಅಮೆರಿಕದ ಸಿಬ್ಬಂದಿ ಮೇಲೆ ನಡೆದ ಮಾರಕ ದಾಳಿಗೆ ಪ್ರತೀಕಾರವಾಗಿ ಅಮೆರಿಕವು ಮಧ್ಯ ಸಿರಿಯಾದಾದ್ಯಂತ ಡಜನ್‌ಗಟ್ಟಲೆ ಇಸ್ಲಾಮಿಕ್ ಸ್ಟೇಟ್ (ಐಎಸ್) ನೆಲೆಗಳ ಮೇಲೆ ವಾಯುದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 'ಆಪರೇಷನ್ ಹಾಕೈ...

16 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ‘ಮನರೇಗಾ’ ಪಟ್ಟಿಯಿಂದ ಕೈಬಿಟ್ಟ ಕೇಂದ್ರ ಸರ್ಕಾರ: ವರದಿ

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಹೆಸರನ್ನು ಬದಲಿಸಲು ಪ್ರಯತ್ನಿಸುವ 'ವಿಕ್ಷಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ–ಜಿ...

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...