Homeಮುಖಪುಟಇಂಡಿಯಾ ಮೈತ್ರಿಕೂಟ ತೊರೆಯಲು ಅಧೀರ್ ರಂಜನ್ ಚೌಧರಿ ಕಾರಣ: ಟಿಎಂಸಿ ಸಂಸದ ಓಬ್ರಿಯಾನ್

ಇಂಡಿಯಾ ಮೈತ್ರಿಕೂಟ ತೊರೆಯಲು ಅಧೀರ್ ರಂಜನ್ ಚೌಧರಿ ಕಾರಣ: ಟಿಎಂಸಿ ಸಂಸದ ಓಬ್ರಿಯಾನ್

- Advertisement -
- Advertisement -

ರಾಜ್ಯದಲ್ಲಿ ಉಭಯ ಪಕ್ಷಗಳ ನಡುವೆ ಮೈತ್ರಿ ಏರ್ಪಡದಿದ್ದಕ್ಕೆ ಪಶ್ಚಿಮ ಬಂಗಾಳ ಕಾಂಗ್ರೆಸ್ ಮುಖ್ಯಸ್ಥ ಅಧೀರ್ ರಂಜನ್ ಚೌಧರಿ ಮಾತ್ರ ಹೊಣೆ ಎಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕ ಡೆರೆಕ್ ಓಬ್ರಿಯಾನ್ ಗಂಭೀರ ಆರೋಪ ಮಾಡಿದ್ದಾರೆ.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮತ್ತು ತೃಣಮೂಲ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ತಮ್ಮ ಪಕ್ಷವು ಲೋಕಸಭೆ ಚುನಾವಣೆ ಚುನಾವಣೆಯಲ್ಲಿ ‘ಏಕಾಂಗಿಯಾಗಿ’ ಹೋರಾಡಲಿದೆ ಎಂದು ಘೋಷಿಸಿದ ಒಂದು ದಿನದ ನಂತರ ಓಬ್ರಿಯಾನ್ ಪ್ರತಿಕ್ರಿಯೆ ನೀಡಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಮೈತ್ರಿ ಕಾರ್ಯರೂಪಕ್ಕೆ ಬರದಿರಲು ಅಧೀರ್ ರಂಜನ್ ಚೌಧರಿ “ಕಾರಣ” ಎಂದು ಪ್ರತಿಪಾದಿಸಿದ ಓಬ್ರಿಯಾನ್, ಭಾರತೀಯ ರಾಷ್ಟ್ರೀಯ ಅಭಿವೃದ್ಧಿ ಅಂತರ್ಗತ ಮೈತ್ರಿಕೂಟವು (ಇಂಡಿಯಾ) ಅನೇಕ ವಿರೋಧಿಗಳನ್ನು ಹೊಂದಿದೆ. ಆದರೆ, ಬಿಜೆಪಿ ಮತ್ತು ಅಧೀರ್ ರಂಜನ್ ಚೌಧರಿ ಮಾತ್ರ ಮೈತ್ರಿಕೂಟದ ವಿರುದ್ಧ ಪದೇ ಪದೇ ಮಾತನಾಡಿದರು’ ಎಂದು ಹೇಳಿದರು.

‘ಸಾರ್ವತ್ರಿಕ ಚುನಾವಣೆಯ ನಂತರ, ಕಾಂಗ್ರೆಸ್ ತನ್ನ ಕೆಲಸವನ್ನು ನಿರ್ವಹಿಸಿ, ಗಣನೀಯ ಸಂಖ್ಯೆಯ ಸ್ಥಾನಗಳಲ್ಲಿ ಬಿಜೆಪಿಯನ್ನು ಸೋಲಿಸಿದರೆ, ತೃಣಮೂಲ ಕಾಂಗ್ರೆಸ್ ಸಂವಿಧಾನವನ್ನು ನಂಬುವ ಮತ್ತು ಹೋರಾಡುವರ ಭಾಗವಾಗಲಿದೆ’ ಎಂದು ಓಬ್ರಿಯಾನ್ ಸುದ್ದಿಗಾರರಿಗೆ ತಿಳಿಸಿದರು.

‘ಚೌಧರಿ ಅವರು ಬಂಗಾಳದಲ್ಲಿ ಇಂಡಿಯಾ ಮೈತ್ರಿಯ ಸಮಾಧಿಗಾರ. ಅವರ ದೈನಂದಿನ ಗದ್ದಲದಿಂದಾಗಿ ವಿಷಯಗಳು ನೆಲಕಚ್ಚಿವೆ. ನಿನ್ನೆ ಮುಖ್ಯಮಂತ್ರಿಯ ಹೇಳಿಕೆ ನೀಡಿದ ನಂತರ, ಕಾಂಗ್ರೆಸ್ ನಾಯಕರು ಡ್ಯಾಮೇಜ್ ಕಂಟ್ರೋಲ್‌ಗೆ ಬರುತ್ತಿದ್ದಾರೆ. ಆದರೆ, ಈಗ ತಡವಾಗಿದೆ’ ಎಂದು ತೃಣಮೂಲ ಮೂಲಗಳು ತಿಳಿಸಿವೆ.

ಸೀಟು ಹಂಚಿಕೆಯ ಮಾತುಕತೆಯ ಸಂದರ್ಭದಲ್ಲಿ ತೃಣಮೂಲ ಬಹಳ ತಾಳ್ಮೆಯಿಂದಿತ್ತು. ನಾವು ಸಾಕಷ್ಟು ತಾಳ್ಮೆ ಹೊಂದಿದ್ದೇವೆ. ಆದರೆ ನಾವು ಈವರೆಗೆ ನೋಡಿದ್ದು ವಿಳಂಬ, ವಿಳಂಬ ಮತ್ತು ವಿಳಂಬ ಮಾತ್ರ’ ಎಂದು ಮೂಲಗಳು ತಿಳಿಸಿವೆ.

‘ತೃಣಮೂಲ ಬಂಗಾಳದಲ್ಲಿ ಏಕಾಂಗಿಯಾಗಿ ಹೋರಾಡುತ್ತದೆ ಮತ್ತು ಲೋಕಸಭೆ ಚುನಾವಣೆಯ ನಂತರವೇ ಕಾಂಗ್ರೆಸ್‌ನೊಂದಿಗೆ ಯಾವುದೇ ಮೈತ್ರಿ ಮಾಡಿಕೊಳ್ಳುವ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತದೆ’ ಎಂದು ಬ್ಯಾನರ್ಜಿ ನಿನ್ನೆ ಘೋಷಿಸಿದರು.

ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾಗಿರುವ ಕಾಂಗ್ರೆಸ್, ಹದಗೆಟ್ಟ ಸಂಬಂಧಗಳನ್ನು ಸರಿಪಡಿಸಲಾಗುವುದು ಎಂದು ಭರವಸೆ ನೀಡಿದೆ. ಬಿಕ್ಕಟ್ಟಿಗೆ ಪರಿಹಾರ ಕಂಡುಕೊಳ್ಳುತ್ತೇವೆ ಎಂದು ಪಕ್ಷದ ಹಿರಿಯ ನಾಯಕ ಜೈರಾಮ್ ರಮೇಶ್ ಹೇಳಿದ್ದಾರೆ. “ಮಮತಾಜಿ ಇಲ್ಲದ ಇಂಡಿಯಾ ಬಣವನ್ನು ಕಾಂಗ್ರೆಸ್ ಊಹಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ರಮೇಶ್ ನಿನ್ನೆ ಹೇಳಿದ್ದರು.

ಭಾರತ್ ಜೋಡೋ ನ್ಯಾಯ್ ಯಾತ್ರೆ ಇಂದು ಬಂಗಾಳವನ್ನು ಪ್ರವೇಶಿಸಿದ್ದು, ಇಂಡಿಯಾ ಬ್ಲಾಕ್ ಅನ್ಯಾಯದ ವಿರುದ್ಧ ಹೋರಾಡುತ್ತದೆ ಎಂದು ರಾಹುಲ್ ಗಾಂಧಿ ಹೇಳಿದರು. ‘ಪಶ್ಚಿಮ ಬಂಗಾಳಕ್ಕೆ ಬಂದಿದ್ದಕ್ಕೆ ನನಗೆ ಸಂತೋಷವಾಗಿದೆ. ನಿಮ್ಮ ಮಾತನ್ನು ಕೇಳಲು ಮತ್ತು ನಿಮ್ಮೊಂದಿಗೆ ನಿಲ್ಲಲು ನಾವು ಇಲ್ಲಿಗೆ ಬಂದಿದ್ದೇವೆ. ಬಿಜೆಪಿ-ಆರ್‌ಎಸ್‌ಎಸ್‌ ದ್ವೇಷ, ಹಿಂಸಾಚಾರ ಮತ್ತು ಅನ್ಯಾಯವನ್ನು ಹರಡುತ್ತಿವೆ. ಆದ್ದರಿಂದ, ಇಂಡಿಯಾ ಕೂಟವು ಹೇಗಾದರೂ ಒಟ್ಟಾಗಿ ಹೋರಾಡಲಿದೆ’ ಎಂದು ಅವರು ಭರವಸೆ ವ್ಯಕ್ತಪಡಿಸಿದರು.

ಸೀಟು ಹಂಚಿಕೆ ಕುರಿತ ಮಾತುಕತೆಗಳು ವಿಫಲವಾದ ನಂತರ ಮೈತ್ರಿ ಕುರಿತು ಬ್ಯಾನರ್ಜಿ ಅವರ ಹೇಳಿಕೆಗಳು ಬಂದಿವೆ. ವರದಿಗಳ ಪ್ರಕಾರ, ಬಂಗಾಳದಲ್ಲಿ ತೃಣಮೂಲ ಪಕ್ಷವು ಕಾಂಗ್ರೆಸ್‌ಗೆ ಎರಡು ಸ್ಥಾನಗಳನ್ನು ನೀಡಲು ನಿರ್ಧರಿಸಿತ್ತು. ಅವರು ಕನಿಷ್ಠ 10 ಸ್ಥಾನಗಳಲ್ಲಿ ಸ್ಪರ್ಧಿಸಲು ಬಯಸಿದ್ದರು ಎನ್ನಲಾಗಿದೆ.

ಲೋಕಸಭೆಯಲ್ಲಿ ಕಾಂಗ್ರೆಸ್‌ನ ನಾಯಕರಾಗಿರುವ ಚೌಧರಿ ಅವರು ತೃಣಮೂಲ ಮುಖ್ಯಸ್ಥರನ್ನು “ಅವಕಾಶವಾದಿ” ನಾಯಕ ಎಂದು ಕರೆದರು. ಕಾಂಗ್ರೆಸ್ ಸ್ವತಂತ್ರವಾಗಿ ಚುನಾವಣೆಗಳನ್ನು ಎದುರಿಸಲು ಸಮರ್ಥವಾಗಿದೆ’ ಎಂದು ಹೇಳಿದಾಗ ವಿವಾದ ಭುಗಿಲೆದ್ದಿತು.

ಇದನ್ನೂ ಓದು; ರಾಹುಲ್ ಗಾಂಧಿ ‘ಕಲ್ಲಿದ್ದಲು ಒಲೆ’ ಹೇಳಿಕೆಯನ್ನು ಲೇವಡಿ ಮಾಡಿದ ಬಿಜೆಪಿಗರು; ವಾಸ್ತವ ಏನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ನಿಯೋಗದಿಂದ ಕರ್ನಾಟಕ ರಾಜ್ಯಪಾಲರ ಭೇಟಿ: ‘ದ್ವೇಷ ಭಾಷಣ ತಡೆ’ ಮಸೂದೆಗೆ ಒಪ್ಪಿಗೆ ನೀಡದಂತೆ ಮನವಿ

ಬೆಂಗಳೂರು: ದ್ವೇಷ ಭಾಷಣ ಮಸೂದೆಯನ್ನು"ವಾಕ್ ಸ್ವಾತಂತ್ರ್ಯದ ಮೇಲಿನ ನೇರ ದಾಳಿ" ಮತ್ತು "ರಾಜಕೀಯ ಸೇಡಿನ ಸಾಧನ" ಎಂದು ಕರೆದಿರುವ ಬಿಜೆಪಿ ನಾಯಕರ ನಿಯೋಗವು ಸೋಮವಾರ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ...

ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯಲ್ಲಿ 2026ರ ಜನವರಿ 3ರಂದು ರಾತ್ರಿ ನಡೆದ ಮಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಶರ್ಮಿಳಾ ಕುಶಾಲಪ್ಪ (34) ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆರಂಭದಲ್ಲಿ, ಫ್ಲ್ಯಾಟ್‌ಗೆ ಬೆಂಕಿ...

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...