Homeಮುಖಪುಟಇಂಡಿಯಾ ಮೈತ್ರಿಕೂಟ ತೊರೆಯಲು ಅಧೀರ್ ರಂಜನ್ ಚೌಧರಿ ಕಾರಣ: ಟಿಎಂಸಿ ಸಂಸದ ಓಬ್ರಿಯಾನ್

ಇಂಡಿಯಾ ಮೈತ್ರಿಕೂಟ ತೊರೆಯಲು ಅಧೀರ್ ರಂಜನ್ ಚೌಧರಿ ಕಾರಣ: ಟಿಎಂಸಿ ಸಂಸದ ಓಬ್ರಿಯಾನ್

- Advertisement -
- Advertisement -

ರಾಜ್ಯದಲ್ಲಿ ಉಭಯ ಪಕ್ಷಗಳ ನಡುವೆ ಮೈತ್ರಿ ಏರ್ಪಡದಿದ್ದಕ್ಕೆ ಪಶ್ಚಿಮ ಬಂಗಾಳ ಕಾಂಗ್ರೆಸ್ ಮುಖ್ಯಸ್ಥ ಅಧೀರ್ ರಂಜನ್ ಚೌಧರಿ ಮಾತ್ರ ಹೊಣೆ ಎಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕ ಡೆರೆಕ್ ಓಬ್ರಿಯಾನ್ ಗಂಭೀರ ಆರೋಪ ಮಾಡಿದ್ದಾರೆ.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮತ್ತು ತೃಣಮೂಲ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ತಮ್ಮ ಪಕ್ಷವು ಲೋಕಸಭೆ ಚುನಾವಣೆ ಚುನಾವಣೆಯಲ್ಲಿ ‘ಏಕಾಂಗಿಯಾಗಿ’ ಹೋರಾಡಲಿದೆ ಎಂದು ಘೋಷಿಸಿದ ಒಂದು ದಿನದ ನಂತರ ಓಬ್ರಿಯಾನ್ ಪ್ರತಿಕ್ರಿಯೆ ನೀಡಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಮೈತ್ರಿ ಕಾರ್ಯರೂಪಕ್ಕೆ ಬರದಿರಲು ಅಧೀರ್ ರಂಜನ್ ಚೌಧರಿ “ಕಾರಣ” ಎಂದು ಪ್ರತಿಪಾದಿಸಿದ ಓಬ್ರಿಯಾನ್, ಭಾರತೀಯ ರಾಷ್ಟ್ರೀಯ ಅಭಿವೃದ್ಧಿ ಅಂತರ್ಗತ ಮೈತ್ರಿಕೂಟವು (ಇಂಡಿಯಾ) ಅನೇಕ ವಿರೋಧಿಗಳನ್ನು ಹೊಂದಿದೆ. ಆದರೆ, ಬಿಜೆಪಿ ಮತ್ತು ಅಧೀರ್ ರಂಜನ್ ಚೌಧರಿ ಮಾತ್ರ ಮೈತ್ರಿಕೂಟದ ವಿರುದ್ಧ ಪದೇ ಪದೇ ಮಾತನಾಡಿದರು’ ಎಂದು ಹೇಳಿದರು.

‘ಸಾರ್ವತ್ರಿಕ ಚುನಾವಣೆಯ ನಂತರ, ಕಾಂಗ್ರೆಸ್ ತನ್ನ ಕೆಲಸವನ್ನು ನಿರ್ವಹಿಸಿ, ಗಣನೀಯ ಸಂಖ್ಯೆಯ ಸ್ಥಾನಗಳಲ್ಲಿ ಬಿಜೆಪಿಯನ್ನು ಸೋಲಿಸಿದರೆ, ತೃಣಮೂಲ ಕಾಂಗ್ರೆಸ್ ಸಂವಿಧಾನವನ್ನು ನಂಬುವ ಮತ್ತು ಹೋರಾಡುವರ ಭಾಗವಾಗಲಿದೆ’ ಎಂದು ಓಬ್ರಿಯಾನ್ ಸುದ್ದಿಗಾರರಿಗೆ ತಿಳಿಸಿದರು.

‘ಚೌಧರಿ ಅವರು ಬಂಗಾಳದಲ್ಲಿ ಇಂಡಿಯಾ ಮೈತ್ರಿಯ ಸಮಾಧಿಗಾರ. ಅವರ ದೈನಂದಿನ ಗದ್ದಲದಿಂದಾಗಿ ವಿಷಯಗಳು ನೆಲಕಚ್ಚಿವೆ. ನಿನ್ನೆ ಮುಖ್ಯಮಂತ್ರಿಯ ಹೇಳಿಕೆ ನೀಡಿದ ನಂತರ, ಕಾಂಗ್ರೆಸ್ ನಾಯಕರು ಡ್ಯಾಮೇಜ್ ಕಂಟ್ರೋಲ್‌ಗೆ ಬರುತ್ತಿದ್ದಾರೆ. ಆದರೆ, ಈಗ ತಡವಾಗಿದೆ’ ಎಂದು ತೃಣಮೂಲ ಮೂಲಗಳು ತಿಳಿಸಿವೆ.

ಸೀಟು ಹಂಚಿಕೆಯ ಮಾತುಕತೆಯ ಸಂದರ್ಭದಲ್ಲಿ ತೃಣಮೂಲ ಬಹಳ ತಾಳ್ಮೆಯಿಂದಿತ್ತು. ನಾವು ಸಾಕಷ್ಟು ತಾಳ್ಮೆ ಹೊಂದಿದ್ದೇವೆ. ಆದರೆ ನಾವು ಈವರೆಗೆ ನೋಡಿದ್ದು ವಿಳಂಬ, ವಿಳಂಬ ಮತ್ತು ವಿಳಂಬ ಮಾತ್ರ’ ಎಂದು ಮೂಲಗಳು ತಿಳಿಸಿವೆ.

‘ತೃಣಮೂಲ ಬಂಗಾಳದಲ್ಲಿ ಏಕಾಂಗಿಯಾಗಿ ಹೋರಾಡುತ್ತದೆ ಮತ್ತು ಲೋಕಸಭೆ ಚುನಾವಣೆಯ ನಂತರವೇ ಕಾಂಗ್ರೆಸ್‌ನೊಂದಿಗೆ ಯಾವುದೇ ಮೈತ್ರಿ ಮಾಡಿಕೊಳ್ಳುವ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತದೆ’ ಎಂದು ಬ್ಯಾನರ್ಜಿ ನಿನ್ನೆ ಘೋಷಿಸಿದರು.

ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾಗಿರುವ ಕಾಂಗ್ರೆಸ್, ಹದಗೆಟ್ಟ ಸಂಬಂಧಗಳನ್ನು ಸರಿಪಡಿಸಲಾಗುವುದು ಎಂದು ಭರವಸೆ ನೀಡಿದೆ. ಬಿಕ್ಕಟ್ಟಿಗೆ ಪರಿಹಾರ ಕಂಡುಕೊಳ್ಳುತ್ತೇವೆ ಎಂದು ಪಕ್ಷದ ಹಿರಿಯ ನಾಯಕ ಜೈರಾಮ್ ರಮೇಶ್ ಹೇಳಿದ್ದಾರೆ. “ಮಮತಾಜಿ ಇಲ್ಲದ ಇಂಡಿಯಾ ಬಣವನ್ನು ಕಾಂಗ್ರೆಸ್ ಊಹಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ರಮೇಶ್ ನಿನ್ನೆ ಹೇಳಿದ್ದರು.

ಭಾರತ್ ಜೋಡೋ ನ್ಯಾಯ್ ಯಾತ್ರೆ ಇಂದು ಬಂಗಾಳವನ್ನು ಪ್ರವೇಶಿಸಿದ್ದು, ಇಂಡಿಯಾ ಬ್ಲಾಕ್ ಅನ್ಯಾಯದ ವಿರುದ್ಧ ಹೋರಾಡುತ್ತದೆ ಎಂದು ರಾಹುಲ್ ಗಾಂಧಿ ಹೇಳಿದರು. ‘ಪಶ್ಚಿಮ ಬಂಗಾಳಕ್ಕೆ ಬಂದಿದ್ದಕ್ಕೆ ನನಗೆ ಸಂತೋಷವಾಗಿದೆ. ನಿಮ್ಮ ಮಾತನ್ನು ಕೇಳಲು ಮತ್ತು ನಿಮ್ಮೊಂದಿಗೆ ನಿಲ್ಲಲು ನಾವು ಇಲ್ಲಿಗೆ ಬಂದಿದ್ದೇವೆ. ಬಿಜೆಪಿ-ಆರ್‌ಎಸ್‌ಎಸ್‌ ದ್ವೇಷ, ಹಿಂಸಾಚಾರ ಮತ್ತು ಅನ್ಯಾಯವನ್ನು ಹರಡುತ್ತಿವೆ. ಆದ್ದರಿಂದ, ಇಂಡಿಯಾ ಕೂಟವು ಹೇಗಾದರೂ ಒಟ್ಟಾಗಿ ಹೋರಾಡಲಿದೆ’ ಎಂದು ಅವರು ಭರವಸೆ ವ್ಯಕ್ತಪಡಿಸಿದರು.

ಸೀಟು ಹಂಚಿಕೆ ಕುರಿತ ಮಾತುಕತೆಗಳು ವಿಫಲವಾದ ನಂತರ ಮೈತ್ರಿ ಕುರಿತು ಬ್ಯಾನರ್ಜಿ ಅವರ ಹೇಳಿಕೆಗಳು ಬಂದಿವೆ. ವರದಿಗಳ ಪ್ರಕಾರ, ಬಂಗಾಳದಲ್ಲಿ ತೃಣಮೂಲ ಪಕ್ಷವು ಕಾಂಗ್ರೆಸ್‌ಗೆ ಎರಡು ಸ್ಥಾನಗಳನ್ನು ನೀಡಲು ನಿರ್ಧರಿಸಿತ್ತು. ಅವರು ಕನಿಷ್ಠ 10 ಸ್ಥಾನಗಳಲ್ಲಿ ಸ್ಪರ್ಧಿಸಲು ಬಯಸಿದ್ದರು ಎನ್ನಲಾಗಿದೆ.

ಲೋಕಸಭೆಯಲ್ಲಿ ಕಾಂಗ್ರೆಸ್‌ನ ನಾಯಕರಾಗಿರುವ ಚೌಧರಿ ಅವರು ತೃಣಮೂಲ ಮುಖ್ಯಸ್ಥರನ್ನು “ಅವಕಾಶವಾದಿ” ನಾಯಕ ಎಂದು ಕರೆದರು. ಕಾಂಗ್ರೆಸ್ ಸ್ವತಂತ್ರವಾಗಿ ಚುನಾವಣೆಗಳನ್ನು ಎದುರಿಸಲು ಸಮರ್ಥವಾಗಿದೆ’ ಎಂದು ಹೇಳಿದಾಗ ವಿವಾದ ಭುಗಿಲೆದ್ದಿತು.

ಇದನ್ನೂ ಓದು; ರಾಹುಲ್ ಗಾಂಧಿ ‘ಕಲ್ಲಿದ್ದಲು ಒಲೆ’ ಹೇಳಿಕೆಯನ್ನು ಲೇವಡಿ ಮಾಡಿದ ಬಿಜೆಪಿಗರು; ವಾಸ್ತವ ಏನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...