Homeಮುಖಪುಟಬಿಜೆಪಿ ಪರ ಪ್ರಚಾರ ಆರೋಪ: ಪಶ್ಚಿಮ ಬಂಗಾಳ ರಾಜ್ಯಪಾಲರ ವಿರುದ್ಧ ಟಿಎಂಸಿ ದೂರು

ಬಿಜೆಪಿ ಪರ ಪ್ರಚಾರ ಆರೋಪ: ಪಶ್ಚಿಮ ಬಂಗಾಳ ರಾಜ್ಯಪಾಲರ ವಿರುದ್ಧ ಟಿಎಂಸಿ ದೂರು

- Advertisement -
- Advertisement -

ಬಿಜೆಪಿ ಪರ ಪ್ರಚಾರ ಮಾಡಿದ್ದಾರೆ ಎಂದು ಆರೋಪಿಸಿ ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ ಆನಂದ್ ಬೋಸ್ ವಿರುದ್ದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಕೊಲ್ಕತ್ತಾದ ರಾಮ ಮಂದಿರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ರಾಜ್ಯಪಾಲ ಆನಂದ್ ಬೋಸ್ ಅವರು ತಮ್ಮ ಎದೆಯ ಮೇಲೆ ಬಿಜೆಪಿ ಚಿಹ್ನೆ ಧರಿಸಿದ್ದಾರೆ ಎಂದು ಮುಖ್ಯ ಚುನಾವಣಾ ಆಯುಕ್ತರಿಗೆ ನೀಡಿದ ದೂರಿನಲ್ಲಿ ಟಿಎಂಸಿ ಆರೋಪಿಸಿದೆ.

“ಪಶ್ಚಿಮ ಬಂಗಾಳದ ರಾಜ್ಯಪಾಲರಾದ ಸಿ.ವಿ ಆನಂದ್ ಬೋಸ್ ಅವರು ಲೋಕಸಭೆಯ ಚುನಾವಣೆಯಲ್ಲಿ ಬಿಜೆಪಿ ಪರ ಪ್ರಚಾರ ನಡೆಸಲು ತಮ್ಮ ಹುದ್ದೆಯನ್ನು ದುರ್ಬಳಕೆ ಮಾಡುತ್ತಿದ್ದಾರೆ ಎಂಬುವುದನ್ನು ನಿಮ್ಮ ಗಮನಕ್ಕೆ ತರಲು ಬಯಸುತ್ತೇವೆ” ಎಂದು ಹೇಳಿದೆ.

“ರಾಜ್ಯಪಾಲರ ನಡವಳಿಕೆಯು ಪ್ರಜಾಸತ್ತಾತ್ಮಕವಲ್ಲ ಮತ್ತು ಅವರ ಹುದ್ದೆಗೆ ಇರುವ ಸಾಂವಿಧಾನಿಕ ಮೌಲ್ಯಗಳ ಉಲ್ಲಂಘನೆಯಾಗಿದೆ. ಇದು ರಾಜ್ಯದಲ್ಲಿ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳನ್ನು ದುರ್ಬಲಗೊಳಿಸುತ್ತದೆ ಎಂದು ದೂರಿನಲ್ಲಿ ಹೇಳಿರುವ ಟಿಎಂಸಿ, ಈ ಹಿಂದೆ ಭಾರತೀಯ ಚುನಾವಣಾ ಆಯೋಗವು ರಾಜಕೀಯ ಪಕ್ಷಗಳ ಪ್ರಚಾರಕ್ಕಾಗಿ ತಮ್ಮ ಅಧಿಕಾರವನ್ನು ಬಳಸಿಕೊಂಡ ರಾಜ್ಯಪಾಲರ ವಿರುದ್ಧ ಕ್ರಮ ಕೈಗೊಂಡಿದೆ ಎಂದು ಗಮನಸೆಳೆದಿದೆ.

“ಉದಾಹರಣೆಗೆ, 1993ರಲ್ಲಿ, ಆಯೋಗವು ಹಿಮಾಚಲ ಪ್ರದೇಶದ ಮಾಜಿ ರಾಜ್ಯಪಾಲ ಗುಲ್ಶರ್ ಅಹ್ಮದ್ ವಿರುದ್ಧ ತನ್ನ ಮಗನ ಚುನಾವಣಾ ಪ್ರಚಾರಕ್ಕಾಗಿ ಅಧಿಕೃತ ಯಂತ್ರೋಪಕರಣಗಳನ್ನು ದುರುಪಯೋಗಪಡಿಸಿಕೊಂಡ ಆರೋಪ ಮೇಲೆ ಕ್ರಮ ಕೈಗೊಂಡಿತ್ತು. ಚುನಾವಣಾ ಆಯೋಗದ ಕ್ರಮದ ನಂತರ, ಅಹ್ಮದ್ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು” ಟಿಎಂಸಿ ತಿಳಿಸಿದೆ.

“2019ರಲ್ಲಿ, ಆಗಿನ ರಾಜಸ್ಥಾನದ ರಾಜ್ಯಪಾಲರಾಗಿದ್ದ ಕಲ್ಯಾಣ್ ಸಿಂಗ್ ಅವರು, ನರೇಂದ್ರ ಮೋದಿ ಅವರನ್ನು ಪ್ರಧಾನಿಯಾಗಿ ಮರು ಆಯ್ಕೆ ಮಾಡಬೇಕು ಎಂದು ಹೇಳಿಕೆ ಕೊಟ್ಟಿದ್ದರು. ಆ ಸಂದರ್ಭದಲ್ಲಿ ಚುನಾವಣಾ ಆಯೋಗವು, ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ರಾಜ್ಯಪಾಲರ ವಿರುದ್ದ ರಾಷ್ಟ್ರಪತಿಗೆ ದೂರು ನೀಡಿತ್ತು. ಅದರಂತೆ, ಪಶ್ಚಿಮ ಬಂಗಾಳದ ರಾಜ್ಯಪಾಲರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಿದೆ” ಎಂದು ಟಿಎಂಸಿ ಹೇಳಿದೆ.

ರಾಜ್ಯಪಾಲರು ರಾಷ್ಟ್ರಪತಿಗಳಿಂದ ನೇಮಕಗೊಂಡವರು. ಅವರು ರಾಜಕೀಯ ಸಿದ್ಧಾಂತ ಅಥವಾ ಕೇಂದ್ರ ಸರ್ಕಾರದ ರಾಜಕೀಯ ದೃಷ್ಟಿಕೋನವನ್ನು ಪ್ರತಿನಿಧಿಸಬೇಕಾಗಿಲ್ಲ. ರಾಜ್ಯಪಾಲರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು ಚುನಾವಣಾ ಪ್ರಕ್ರಿಯೆಯಲ್ಲಿ ಮಧ್ಯಪ್ರವೇಶಿಸುವುದನ್ನು ತಡೆಯಬೇಕು ಎಂದು ಟಿಎಂಸಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ.

ಇದನ್ನೂ ಓದಿ : ವೈದ್ಯೆಗೆ ಕಿರುಕುಳ ನೀಡಿದ ಆರೋಪಿಯ ಬಂಧನಕ್ಕೆ ಏಮ್ಸ್‌ ಆಸ್ಪತ್ರೆಯ ವಾರ್ಡ್‌ನೊಳಗೆ ಕಾರು ನುಗ್ಗಿಸಿದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...