Homeಮುಖಪುಟ'ನಾಚಿಕೆಗೇಡು': ತನ್ನ ಅಣಕಿಸಿದ ಟಿಎಂಸಿ ಸಂಸದನ ವಿರುದ್ಧ ರಾಜ್ಯಸಭೆ ಅಧ್ಯಕ್ಷ ಕಿಡಿ

‘ನಾಚಿಕೆಗೇಡು’: ತನ್ನ ಅಣಕಿಸಿದ ಟಿಎಂಸಿ ಸಂಸದನ ವಿರುದ್ಧ ರಾಜ್ಯಸಭೆ ಅಧ್ಯಕ್ಷ ಕಿಡಿ

- Advertisement -
- Advertisement -

ಸಂಸತ್‌ನಿಂದ ಅಮಾನತು ಮಾಡಿರುವುದನ್ನು ಖಂಡಿಸಿ ಪ್ರತಿಭಟಿಸುವ ವೇಳೆ ತೃಣಮೂಲ ಕಾಂಗ್ರೆಸ್ ಪಕ್ಷ(ಟಿಎಂಸಿ)ದ ಸಂಸದರೊಬ್ಬರು ಉಪ ರಾಷ್ಟ್ರಪತಿ ಹಾಗೂ ರಾಜ್ಯಸಭೆ ಅಧ್ಯಕ್ಷ ಜಗದೀಪ್ ಧನ್ಕರ್ ಅವರನ್ನು ಅಣಕಿಸಿದ ಆರೋಪ ಕೇಳಿ ಬಂದಿದೆ.

ಇಂದು (ಡಿ.19) ಸಂಸತ್‌ನಿಂದ ಅಮಾನತುಗೊಂಡಿರುವ 49 ಸಂಸದರು ಹೊಸ ಸಂಸತ್‌ ಕಟ್ಟಡದ ‘ಮಕರ ದ್ವಾರ’ದ ಬಳಿ ಕುಳಿತು ಪ್ರತಿಭಟಿಸುತ್ತಿದ್ದರು. ಈ ವೇಳೆ ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ ರಾಜ್ಯಸಭೆ ಅಧ್ಯಕ್ಷ ಜಗದೀಪ್ ಧನ್ಕರ್ ಅವರನ್ನು ಅಣಕಿಸಿದ್ದಾರೆ ಎನ್ನಲಾಗಿದೆ.

ಈ ಕುರಿತ ವಿಡಿಯೋ ವೈರಲ್ ಆಗಿದ್ದು, ಅದರಲ್ಲಿ ಕಲ್ಯಾಣ್ ಬ್ಯಾನರ್ಜಿ ಜಗದೀಪ್ ಧನ್ಕರ್‌ ಅವರನ್ನುಅಣುಕರಣೆ ಮಾಡಿರುವುದು ಮತ್ತು ಇತರ ಸಂಸದರು ನಕ್ಕಿರುವುದನ್ನು ನೋಡಬಹುದು. ಗಮನಾರ್ಹ ಸಂಗತಿಯೆಂದರೆ, ಕಲ್ಯಾಣ್ ಬ್ಯಾನರ್ಜಿ ಅಣುಕರಣೆ ಮಾಡುವಾಗ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅದನ್ನು ಮೊಬೈಲ್ ಮೂಲಕ ಚಿತ್ರೀಕರಿಸಿದ್ದಾರೆ. “ನನ್ನ ಬೆನ್ನುಮೂಳೆ ನೇರವಾಗಿದೆ. ನಾನು ತುಂಬಾ ಉದ್ದ ಇದ್ದೀನಿ” ಎಂದು ಕಲ್ಯಾಣ್ ಬ್ಯಾನರ್ಜಿ ಹೇಳಿರುವುದು ಕೂಡ ವಿಡಿಯೋದಲ್ಲಿ ದಾಖಲಾಗಿದೆ.

ಅಪರಾಹ್ನ ರಾಜ್ಯಸಭೆ ಕಲಾಪ ಮತ್ತೆ ಆರಂಭವಾದಾಗ ಈ ಸಂಬಂಧ ರಾಹುಲ್‌ ಗಾಂಧಿಯವರನ್ನು ಗುರಿಯಾಗಿಸಿ ಮಾತನಾಡಿದ ಜಗದೀಪ್ ಧನ್ಕರ್, ” ಒಬ್ಬರು ಸಂಸದರು ಸಭಾಧ್ಯಕ್ಷರನ್ನು ಅಣಕಿಸಿರುವುದು ಮತ್ತು ಪಕ್ಷದ ನಾಯಕರೊಬ್ಬರು ಅದನ್ನು ಚಿತ್ರೀಕರಿಸಿರುವುದು ಹಾಸ್ಯಾಸ್ಪದ, ನಾಚಿಕೆಗೇಡಿನ ಸಂಗತಿ. ದೇವರು ಅವರಿಗೆ ಸದ್ಬುದ್ದಿ ಕೊಡಲಿ” ಎಂದಿದ್ದಾರೆ.

ವೈರಲ್ ವಿಡಿಯೋವನ್ನು ಹಂಚಿಕೊಂಡಿರುವ ಬಿಜೆಪಿ, “ವಿರೋಧ ಪಕ್ಷದ ಸಂಸದರನ್ನು ಯಾಕೆ ಅಮಾನತು ಮಾಡಲಾಗ್ತಿದೆ? ಎಂದು ದೇಶ ಆಶ್ಚರ್ಯ ಪಡುತ್ತಿದೆ. ಅದಕ್ಕೆ ಕಾರಣ ಇಲ್ಲಿದೆ ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದೆ.

ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಗೌರವಾನ್ವಿತ ಉಪ ರಾಷ್ಟ್ರಪತಿಗಳನ್ನು ಅಪಹಾಸ್ಯ ಮಾಡಿದರೆ, ರಾಹುಲ್ ಗಾಂಧಿ ಅವರನ್ನು ಹುರಿದುಂಬಿಸಿದ್ದಾರೆ. ಹಾಗಾದರೆ, ಅವರು ಸದನದಲ್ಲಿ ಎಷ್ಟು ಅಜಾಗರೂಕರಾಗಿರಬಹುದು ಮತ್ತು ನಿಯಮ ಉಲ್ಲಂಘಿಸಿರಬಹುದು ಎಂದು ಯಾರು ಬೇಕಾದರು ಊಹಿಸಬಹುದು ಎಂದು ಬಿಜೆಪಿ ಎಕ್ಸ್ ಪೋಸ್ಟ್‌ನಲ್ಲಿ ಹೇಳಿದೆ.

ಇದನ್ನೂ ಓದಿ: ಸಂಸತ್‌ನಿಂದ ಮತ್ತೆ 49 ಸಂಸದರ ಅಮಾನತು: ಒಟ್ಟು ಸಂಖ್ಯೆ 141ಕ್ಕೆ ಏರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...