Homeಮುಖಪುಟ'ನಾಚಿಕೆಗೇಡು': ತನ್ನ ಅಣಕಿಸಿದ ಟಿಎಂಸಿ ಸಂಸದನ ವಿರುದ್ಧ ರಾಜ್ಯಸಭೆ ಅಧ್ಯಕ್ಷ ಕಿಡಿ

‘ನಾಚಿಕೆಗೇಡು’: ತನ್ನ ಅಣಕಿಸಿದ ಟಿಎಂಸಿ ಸಂಸದನ ವಿರುದ್ಧ ರಾಜ್ಯಸಭೆ ಅಧ್ಯಕ್ಷ ಕಿಡಿ

- Advertisement -
- Advertisement -

ಸಂಸತ್‌ನಿಂದ ಅಮಾನತು ಮಾಡಿರುವುದನ್ನು ಖಂಡಿಸಿ ಪ್ರತಿಭಟಿಸುವ ವೇಳೆ ತೃಣಮೂಲ ಕಾಂಗ್ರೆಸ್ ಪಕ್ಷ(ಟಿಎಂಸಿ)ದ ಸಂಸದರೊಬ್ಬರು ಉಪ ರಾಷ್ಟ್ರಪತಿ ಹಾಗೂ ರಾಜ್ಯಸಭೆ ಅಧ್ಯಕ್ಷ ಜಗದೀಪ್ ಧನ್ಕರ್ ಅವರನ್ನು ಅಣಕಿಸಿದ ಆರೋಪ ಕೇಳಿ ಬಂದಿದೆ.

ಇಂದು (ಡಿ.19) ಸಂಸತ್‌ನಿಂದ ಅಮಾನತುಗೊಂಡಿರುವ 49 ಸಂಸದರು ಹೊಸ ಸಂಸತ್‌ ಕಟ್ಟಡದ ‘ಮಕರ ದ್ವಾರ’ದ ಬಳಿ ಕುಳಿತು ಪ್ರತಿಭಟಿಸುತ್ತಿದ್ದರು. ಈ ವೇಳೆ ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ ರಾಜ್ಯಸಭೆ ಅಧ್ಯಕ್ಷ ಜಗದೀಪ್ ಧನ್ಕರ್ ಅವರನ್ನು ಅಣಕಿಸಿದ್ದಾರೆ ಎನ್ನಲಾಗಿದೆ.

ಈ ಕುರಿತ ವಿಡಿಯೋ ವೈರಲ್ ಆಗಿದ್ದು, ಅದರಲ್ಲಿ ಕಲ್ಯಾಣ್ ಬ್ಯಾನರ್ಜಿ ಜಗದೀಪ್ ಧನ್ಕರ್‌ ಅವರನ್ನುಅಣುಕರಣೆ ಮಾಡಿರುವುದು ಮತ್ತು ಇತರ ಸಂಸದರು ನಕ್ಕಿರುವುದನ್ನು ನೋಡಬಹುದು. ಗಮನಾರ್ಹ ಸಂಗತಿಯೆಂದರೆ, ಕಲ್ಯಾಣ್ ಬ್ಯಾನರ್ಜಿ ಅಣುಕರಣೆ ಮಾಡುವಾಗ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅದನ್ನು ಮೊಬೈಲ್ ಮೂಲಕ ಚಿತ್ರೀಕರಿಸಿದ್ದಾರೆ. “ನನ್ನ ಬೆನ್ನುಮೂಳೆ ನೇರವಾಗಿದೆ. ನಾನು ತುಂಬಾ ಉದ್ದ ಇದ್ದೀನಿ” ಎಂದು ಕಲ್ಯಾಣ್ ಬ್ಯಾನರ್ಜಿ ಹೇಳಿರುವುದು ಕೂಡ ವಿಡಿಯೋದಲ್ಲಿ ದಾಖಲಾಗಿದೆ.

ಅಪರಾಹ್ನ ರಾಜ್ಯಸಭೆ ಕಲಾಪ ಮತ್ತೆ ಆರಂಭವಾದಾಗ ಈ ಸಂಬಂಧ ರಾಹುಲ್‌ ಗಾಂಧಿಯವರನ್ನು ಗುರಿಯಾಗಿಸಿ ಮಾತನಾಡಿದ ಜಗದೀಪ್ ಧನ್ಕರ್, ” ಒಬ್ಬರು ಸಂಸದರು ಸಭಾಧ್ಯಕ್ಷರನ್ನು ಅಣಕಿಸಿರುವುದು ಮತ್ತು ಪಕ್ಷದ ನಾಯಕರೊಬ್ಬರು ಅದನ್ನು ಚಿತ್ರೀಕರಿಸಿರುವುದು ಹಾಸ್ಯಾಸ್ಪದ, ನಾಚಿಕೆಗೇಡಿನ ಸಂಗತಿ. ದೇವರು ಅವರಿಗೆ ಸದ್ಬುದ್ದಿ ಕೊಡಲಿ” ಎಂದಿದ್ದಾರೆ.

ವೈರಲ್ ವಿಡಿಯೋವನ್ನು ಹಂಚಿಕೊಂಡಿರುವ ಬಿಜೆಪಿ, “ವಿರೋಧ ಪಕ್ಷದ ಸಂಸದರನ್ನು ಯಾಕೆ ಅಮಾನತು ಮಾಡಲಾಗ್ತಿದೆ? ಎಂದು ದೇಶ ಆಶ್ಚರ್ಯ ಪಡುತ್ತಿದೆ. ಅದಕ್ಕೆ ಕಾರಣ ಇಲ್ಲಿದೆ ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದೆ.

ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಗೌರವಾನ್ವಿತ ಉಪ ರಾಷ್ಟ್ರಪತಿಗಳನ್ನು ಅಪಹಾಸ್ಯ ಮಾಡಿದರೆ, ರಾಹುಲ್ ಗಾಂಧಿ ಅವರನ್ನು ಹುರಿದುಂಬಿಸಿದ್ದಾರೆ. ಹಾಗಾದರೆ, ಅವರು ಸದನದಲ್ಲಿ ಎಷ್ಟು ಅಜಾಗರೂಕರಾಗಿರಬಹುದು ಮತ್ತು ನಿಯಮ ಉಲ್ಲಂಘಿಸಿರಬಹುದು ಎಂದು ಯಾರು ಬೇಕಾದರು ಊಹಿಸಬಹುದು ಎಂದು ಬಿಜೆಪಿ ಎಕ್ಸ್ ಪೋಸ್ಟ್‌ನಲ್ಲಿ ಹೇಳಿದೆ.

ಇದನ್ನೂ ಓದಿ: ಸಂಸತ್‌ನಿಂದ ಮತ್ತೆ 49 ಸಂಸದರ ಅಮಾನತು: ಒಟ್ಟು ಸಂಖ್ಯೆ 141ಕ್ಕೆ ಏರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...