Homeಮುಖಪುಟಸೆಬಿ ಅಧ್ಯಕ್ಷೆ ವಿರುದ್ಧ ಲೋಕಪಾಲ್‌ಗೆ ದೂರು ನೀಡಿದ ಸಂಸದೆ ಮಹುವಾ ಮೊಯಿತ್ರಾ

ಸೆಬಿ ಅಧ್ಯಕ್ಷೆ ವಿರುದ್ಧ ಲೋಕಪಾಲ್‌ಗೆ ದೂರು ನೀಡಿದ ಸಂಸದೆ ಮಹುವಾ ಮೊಯಿತ್ರಾ

- Advertisement -
- Advertisement -

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ (ಸೆಬಿ) ಅಧ್ಯಕ್ಷೆ ಮಾಧಬಿ ಪುರಿ ಬುಚ್ ವಿರುದ್ಧ ಲೋಕಪಾಲ್‌ಗೆ ದೂರು ಸಲ್ಲಿಸಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಮೊಯಿತ್ರಾ ಪೋಸ್ಟ್ ಮಾಡಿದ್ದಾರೆ. “ಪುರಿ ಬುಚ್ ವಿರುದ್ಧ ನಾನು ಎಲೆಕ್ಟ್ರಾನಿಕ್ ಮತ್ತು ಭೌತಿಕ ರೂಪದಲ್ಲಿ ಲೋಕಪಾಲ್‌ಗೆ ದೂರು ಸಲ್ಲಿಸಿದ್ದೇನೆ” ಎಂದು ತಿಳಿಸಿದ್ದಾರೆ.

“ಲೋಕಪಾಲ್ ಪ್ರಾಥಮಿಕ ತನಿಖೆಗಾಗಿ ಮತ್ತು ನಂತರ ಪೂರ್ಣ ಎಫ್‌ಐಆರ್ ವಿಚಾರಣೆಗಾಗಿ 30 ದಿನಗಳ ಒಳಗೆ ಪ್ರಕರಣವನ್ನು ಸಿಬಿಐ/ಇಡಿಗೆ ನೀಡಬೇಕು. ಈ ಪ್ರಕರಣದಲ್ಲಿ ಒಳಗೊಂಡಿರುವ ಪ್ರತಿಯೊಂದು ಘಟಕದ, ಪ್ರತಿ ಮೂಲದ ತನಿಖೆಯಾಗಬೇಕು” ಎಂದು ಮಹುವಾ ಒತ್ತಾಯಿಸಿದ್ದಾರೆ.

ತನ್ನ ದೂರಿನಲ್ಲಿ ಮೊಯಿತ್ರಾ, ಸೆಬಿ ಅಧ್ಯಕ್ಷೆ ಬುಚ್ ಅವರನ್ನು ಸರಣಿ ಅಪರಾಧಿ ಎಂದು ಉಲ್ಲೇಖಿಸಿದ್ದಾರೆ. ಏಪ್ರಿಲ್ 2017ರಿಂದ ಅಕ್ಟೋಬರ್ 2021ರವರೆಗೆ ಸೆಬಿಯ ಸದಸ್ಯರಾಗಿ ನೇಮಕ ಮಾಡಿರುವುದನ್ನು ಮತ್ತು ಮಾರ್ಚ್ 2022ರಲ್ಲಿ ಅಧ್ಯಕ್ಷರಾಗಿ ಮಾಡಿರುವುದನ್ನೂ ವಿವರಿಸಿದ್ದಾರೆ.

ಭಾರತದ ಶ್ರೀಮಂತ ವ್ಯಕ್ತಿ ಗೌತಮ್ ಅದಾನಿ ಗ್ರೂಪ್‌ನ ವಂಚನೆಯನ್ನು ಕಳೆದ ವರ್ಷ ಬಹಿರಂಗಪಡಿಸಿದ್ದ ಅಮೆರಿಕ ಮೂಲದ ಶಾರ್ಟ್‌ ಸೆಲ್ಲರ್‌ ಕಂಪನಿ ಹಿಂಡನ್‌ಬರ್ಗ್‌ 2024ರ ಆಗಸ್ಟ್ 10ರಂದು ಭಾರತಕ್ಕೆ ಸಂಬಂಧಿಸಿದ ಮತ್ತೊಂದು ಸ್ಪೋಟಕ ವರದಿಯನ್ನು ಬಹಿರಂಗಪಡಿಸಿದೆ.

ಭಾರತೀಯ ಷೇರು ಪೇಟೆ ನಿಯಂತ್ರಣ ಮಂಡಳಿ (ಸೆಬಿ) ಅಧ್ಯಕ್ಷೆ ಮಾಧವಿ ಬುಚ್ ಮತ್ತು ಅವರ ಪತಿ ಧವಲ್ ಬುಚ್ ಅದಾನಿ ಮನಿ ಸೈಫನಿಂಗ್ ಹಗರಣದಲ್ಲಿ ಬಳಸಲಾದ ಆಫ್‌ಶೋರ್ ಫಂಡ್‌ನಲ್ಲಿ ಪಾಲನ್ನು ಹೊಂದಿದ್ದರು ಎಂದು ಹಿಂಡನ್‌ಬರ್ಗ್ ಆರೋಪಿಸಿದೆ.

ಆದರೆ ಈ ಆರೋಪವನ್ನು ಸೆಬಿ ಅಧ್ಯಕ್ಷೆ ಮತ್ತು ಅವರ ಪತಿ ಅಲ್ಲಗಳೆದಿದ್ದಾರೆ. ಈ ಆರೋಪಗಳು ಆಧಾರರಹಿತವಾಗಿದೆ. ನಮ್ಮ ಹಣಕಾಸು ವ್ಯವಹಾರಗಳು ತೆರೆದ ಪುಸ್ತಕವಿದ್ದಂತೆ. ಸೆಬಿಯಿಂದ ಶೋಕಾಸ್ ನೋಟಿಸ್ ಪಡೆದಿರುವ ಹಿಂಡನ್‌ಬರ್ಗ್ ಈಗ ಚಾರಿತ್ರ್ಯ ಹರಣಕ್ಕೆ ಮುಂದಾಗಿದೆ ಎಂದು ದಂಪತಿ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ : ಕೋಲ್ಕತ್ತಾ ಪ್ರಕರಣ | ಚಾರ್ಜ್ ಶೀಟ್ ಸಲ್ಲಿಕೆಗೆ ಸಿಬಿಐ ವಿಳಂಬ: TCM ನಾಯಕ ಡೆರೆಕ್ ಒ’ಬ್ರಿಯಾನ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...