Homeಮುಖಪುಟಬಂಗಾಳದಲ್ಲಿ ಕಾಂಗ್ರೆಸ್‌ಗೆ ಕೇವಲ ಎರಡು ಸೀಟಿನ ಆಫರ್ ಕೊಟ್ಟ ಟಿಎಂಸಿ: ವರದಿ

ಬಂಗಾಳದಲ್ಲಿ ಕಾಂಗ್ರೆಸ್‌ಗೆ ಕೇವಲ ಎರಡು ಸೀಟಿನ ಆಫರ್ ಕೊಟ್ಟ ಟಿಎಂಸಿ: ವರದಿ

- Advertisement -
- Advertisement -

ಲೋಕಸಭೆ ಚುನಾವಣೆಗೆ ಸೀಟು ಹಂಚಿಕೆ ಚರ್ಚೆ ಕಾವು ಪಡೆದುಕೊಳ್ಳುತ್ತಿದ್ದಂತೆ ಇಂಡಿಯಾ ಒಕ್ಕೂಟದಲ್ಲಿ ಆಂತರಿಕ ಕಲಹದ ಸೂಚನೆಗಳು ಕಂಡು ಬರುತ್ತಿವೆ. ಒಕ್ಕೂಟದ ಕೆಲ ಪಕ್ಷಗಳ ಬೆಳವಣಿಗೆ ಮತ್ತು ನಾಯಕರ ಹೇಳಿಕೆಗಳು ಇದಕ್ಕೆ ಪುಷ್ಠಿ ನೀಡುತ್ತಿವೆ.

ಇತ್ತೀತ್ತಿನ ವರದಿಗಳ ಪ್ರಕಾರ, ಇಂಡಿಯಾ ಒಕ್ಕೂಟದ ಪ್ರಮುಖ ಪಕ್ಷ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಶ್ಚಿಮ ಬಂಗಾಳದಲ್ಲಿ ಕೇವಲ ಎರಡು ಸೀಟುಗಳನ್ನು ಮಾತ್ರ ಕಾಂಗ್ರೆಸ್‌ಗೆ ಬಿಟ್ಟು ಕೊಡಲು ಉತ್ಸುಕತೆ ತೋರಿದೆ. ಟಿಎಂಸಿ ಎಲ್ಲಾ ಕ್ಷೇತ್ರಗಳಿಂದಲೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ ಎಂದು ಇತ್ತೀಚೆಗೆ ಮಮತಾ ಬ್ಯಾನರ್ಜಿ ಹೇಳಿರುವುದು ಈ ಬೆಳವಣಿಗೆಯನ್ನು ಪುಷ್ಠೀಕರಿಸಿದೆ.

ಟಿಎಂಸಿ ನಡೆಗೆ ಕಾಂಗ್ರೆಸ್ ಕೆಂಡಾಮಂಡಲವಾಗಿದೆ. ಪಶ್ಚಿಮ ಬಂಗಾಳ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಹಾಗೂ ಪಕ್ಷದ ಹಿರಿಯ ನಾಯಕ ಅಧೀರ್ ರಂಜನ್ ಚೌಧರಿ ಅವರು, “ನಾವು ಸೀಟಿನ ಭಿಕ್ಷೆ ಬೇಡುವುದಿಲ್ಲ” ಎಂದು ಖಾರವಾಗಿ ಹೇಳಿದ್ದಾರೆ.

ಟಿಎಂಸಿ ಮತ್ತು ಕಾಂಗ್ರೆಸ್‌ನ ಆರಂಭಿಕ ಕಿತ್ತಾಟ ನೋಡಿದರೆ, ಲೋಕಸಭೆ ಚುನಾವಣೆಗೆ ಎರಡೂ ಪಕ್ಷಗಳು ಎಲ್ಲಾ ಕ್ಷೇತ್ರಗಳಲ್ಲಿ ತಮ್ಮ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಬಿಜೆಪಿಗೆ ಲಾಭ ಮಾಡಿಕೊಡುವ ಲಕ್ಷಣಗಳು ಕಾಣುತ್ತಿದೆ.

“ಪಶ್ಚಿಮ ಬಂಗಾಳದ 42 ಲೋಕಸಭಾ ಕ್ಷೇತ್ರಗಳ ಪೈಕಿ ಎರಡು ಕ್ಷೇತ್ರಗಳಾಧ ಮಾಲ್ಡಾ ದಕ್ಷಿಣ ಮತ್ತು ಬೆಹ್ರಾಂಪೋರ್ ಅನ್ನು ಕಾಂಗ್ರೆಸ್‌ಗೆ ನೀಡುವುದಾಗಿ ಟಿಎಂಸಿ ಹೇಳುತ್ತಿದೆ” ಎಂದು ಬಂಗಾಳದ ಮಾಲ್ಡಾ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಸಂಸದ ಅಬು ಹಶೆಮ್ ಖಾನ್ ಚೌಧರಿ ಇತ್ತೀಚೆಗೆ ಹೇಳಿದ್ದಾರೆ. ಈ ಎರಡೂ ಕ್ಷೇತ್ರಗಳಲ್ಲಿ ಪ್ರಸ್ತುತ ಕಾಂಗ್ರೆಸ್ ಸಂಸದರಿದ್ದಾರೆ. ಹಾಗಾಗಿ, ಗೆಲ್ಲುವ ಎರಡು ಕ್ಷೇತ್ರಗಳನ್ನೂ ಮಾತ್ರ ಬಿಟ್ಟು ಕೊಡಲು ಟಿಎಂಸಿ ನಿರ್ಧರಿಸಿದೆ ಎನ್ನಲಾಗ್ತಿದೆ.

ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಪಕ್ಷ ಬಲಿಷ್ಠವಾಗಿದೆ. ಅಲ್ಲಿನ 42 ಲೋಕಸಭಾ ಕ್ಷೇತ್ರಗಳ ಪೈಕಿ 22 ಕ್ಷೇತ್ರಗಳಲ್ಲಿ ಟಿಎಂಸಿ ಸಂಸದರಿದ್ದಾರೆ. 294 ವಿಧಾನಸಭಾ ಕ್ಷೇತ್ರಗಳ ಪೈಕಿ 220 ಕ್ಷೇತ್ರಗಳಲ್ಲಿ ಟಿಎಂಸಿ ಶಾಸಕರಿದ್ದಾರೆ. ಹಾಗಾಗಿ, ಕಾಂಗ್ರೆಸ್‌ಗಿಂತ ಟಿಎಂಸಿಗೆ ಗೆಲ್ಲುವ ಅವಕಾಶ ಜಾಸ್ತಿ ಇದೆ. ಈ ಕಾರಣಕ್ಕೆ ತಮ್ಮ ರಾಜ್ಯದಲ್ಲಿ ತಮ್ಮದೇ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಗೆಲ್ಲಿಸಿಕೊಲ್ಲುವುದು ಟಿಎಂಸಿ ಲೆಕ್ಕಚಾರ. ಆದರೆ, ಇಂಡಿಯಾ ಒಕ್ಕೂಟದ ದೊಡ್ಡಣ್ಣ ಕಾಂಗ್ರೆಸ್ ನಮಗೆ ಇಂತಿಷ್ಟು ಸೀಟು ಬೇಕೆಂದು ಪಟ್ಟು ಹಿಡಿದಿದೆ. ಇದರಿಂದ ಗೊಂದಲ ಏರ್ಪಟ್ಟಿದೆ. ಆಮ್ ಆದ್ಮಿ ಆಡಳಿತ ದೆಹಲಿಯಲ್ಲೂ ಇದೇ ಪರಿಸ್ಥಿತಿಯಿದೆ.

ಇದನ್ನೂ ಓದಿ: ಸೀಟು ಹಂಚಿಕೆ ಬಿಕ್ಕಟ್ಟು: ಅಗತ್ಯಬಿದ್ದರೆ ಏಕಾಂಗಿಯಾಗಿ ಸ್ಪರ್ಧಿಸಲು ಕೂಡ ಸಿದ್ಧ; ಟಿಎಂಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...